< ಸಮುವೇಲನು - ದ್ವಿತೀಯ ಭಾಗ 18 >

1 ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.
दाऊदले आफूसँग भएका सिपाहरूको गन्ति गरे र तिनीहरूमाथि हजारका कप्‍तानहरू र सयका कप्‍तानहरू नियुक्‍त गरे ।
2 ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.
त्यसपछि दाऊदले एक तिहाइ सिपाहीलाई योआबको अधीनमा, अर्को एक तिहाइलाई सरूयहाहका छोरा योआबका भाइ अबीशैको अधीनमा, र अर्को एक तिहाइलाई गित्ती इत्तैको अधीनमा पठाए । राजाले फौजलाई भने, “म आफै पनि तिमीहरूसँग नै जाने छु ।”
3 ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
तर मानिसहरूले भने, “तपाईं युद्धमा जानु हुँदैन, किनकि भाग्यौं भने, तिनीहरूले हाम्रो वास्‍ता गर्ने छैनन् वा हामी आधा नै मरे पनि तिनीहरूले वास्‍ता गर्ने छैनन् । तर तपाईं त हामीजस्‍ता दश हजार बराबर हुनुहुन्छ! यसकारण तपाईं हामीलाई सहरबाट नै सहायता गर्न तयार हुनुहोस् ।”
4 ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
त्यसैले राजाले तिनीहरूलाई जवाफ दिए, “तिमीहरूलाई जे उत्तम लाग्छ म त्यही गर्ने छु ।” जब सबै फौज सय र हजारको सङ्‍ख्‍यामा निस्‍केर गए, तब राजाचाहिं सहरको ढोकामा खडा भए ।
5 ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
राजाले योआब, अबीशै र इत्तैलाई आज्ञा दिए, “त्यो जवान केटा अब्शालोमसित मेरो खातिर कोमलतासाथ व्यवहार गर ।” राजाले अब्शालोमको बारेमा कप्‍तानहरूलाई यस्तो आज्ञा दिएका छन् भनी सबैले सुने ।
6 ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.
त्यसैले फौज गाउँमा इस्राएलको विरुद्ध लड्न गए । लडाइँ इफ्राइमको जङ्गलमा फैलियो ।
7 ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.
दाऊदका सिपाहीहरूका सामु त्‍यहाँ इस्राएलका फौजलाई परास्‍त भयो । त्यस दिन त्यहाँ यति ठुलो नरसंहार भयो कि बिस हजार मानिसहरू मारिए ।
8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
लडाइँ सारा गाउँभरि नै फैलियो र तरवारले भन्दा पनि धेरै जङ्गलले नै मानिसहरूलाई नाश पार्‍यो ।
9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
अब्शालोमले दाऊदका केही सिपाहीलाई भेटे । अब्शालोम आफ्नो खच्‍चरमा सवार थिए र त्‍यो खच्‍चर बाक्‍लो हाँगा भएको फलाँटको ठुलो रुखमुनिबाट गयो र तिनको टाउको रुखका हाँगाहरूमा नै अड्कियो । तिनले चढेका खच्‍चर हिंडिरहँदा तिनीचाहिं आकाश र जमिनको बिचमा झुण्डिरहे ।
10 ೧೦ ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.
कसैले यो देख्‍यो र योआबलाई भन्‍यो, “हेर्नुहोस्, मैले अब्शालोम फलाँटको रुखमा झुण्डिरहेको देखें!”
11 ೧೧ ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.
योआबले आब्शालोमबारे बताउने ‍‍त्यो मानिसलाई भने, “हेर, तैंले त्यसलाई देखिस्! तैंले किन त्यसलाई जमिनमा ढालिनस्? मैले तँलाई दश शेकेल चाँदी र एउटा पेटी दिने थिएँ ।”
12 ೧೨ ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?
त्यो मानिसले योआबलाई भन्यो, “मैले हजार शेकेल चाँदी पाएको भए पनि म राजाको छोराको विरुद्ध आफ्‍नो हात उठाने थिइनँ, किनभने तपाईं, अबीशै र इत्तैलाई राजाले यसो भनेर आज्ञा दिनुभएको कुरा हामी सबैले सुनेका थियौं, 'जवान मानिस अब्शालोमलाई कसैले नछोओस् ।'
13 ೧೩ ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.
मैले झुट बोलेर मेरो जीवनलाई खतरामा पारेको भए (र राजाबाट कुनै कुरा लुक्‍दैन ), तपाईंले मलाई त्यग्‍नुहुने थियो ।”
14 ೧೪ ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ
तब योआबले भने, “म तेरो लागि पर्खने छैनँ ।” त्यसैले योआबले आफ्नो हातमा तिन वटा भालाहरू लिए र अब्शालोम अझै जीवित नै फलाँटको रुखमा झुण्डिरहँदा तिनको मुटुमा रोपिदिए ।
15 ೧೫ ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.
त्यसपछि योआबको हतियार बोक्‍ने दश जना मानिसले अब्शालोमलाई घेरा हाले, तिनलाई आक्रमण गरे र तिनलाई मारे ।
16 ೧೬ ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.
तब योआबले तुरही फुके र इस्राएललाई खेद्‍न छोडेर फौज फर्कियो, किनकि योआबले फौजलाई रोके ।
17 ೧೭ ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
तिनीहरूले अब्शालोमलाई लिए र तिनलाई जङ्गलको एउटा ठुलो खल्डोमा फालिदिए । सबै इस्राएल हरेक मानिस आफ्नो घरतिर भागरे जाँदा तिनीहरूले अब्शालोमलाई ढुङ्गाको ठुलो थुप्रोमुनि गाडे ।
18 ೧೮ ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.
अब्शालोम आफू जीवित नै हुँदा राजाको बेसीमा ठुलो ढुङ्गाको एउटा स्मारक निर्माण गरेका थिए, किनकि तिनले भने, “मेरो नाउँलाई निरन्‍तरता दिन मेरो कुनै छोरा छैन ।” तिनले स्तम्भलाई आफ्नै नाउँबाट नाम दिए, त्यसैले आजको दिनसम्म पनि त्‍यसलाई अब्शालोमको स्मारक भनिन्छ ।
19 ೧೯ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.
त्यसपछि सादोकका छोरा अहीमासले भने, “परमप्रभुले राजालाई कसरी उहाँका शत्रुहरूका हातबाट छुटकारा दिनुभएको छ भन्‍ने शुभखबर लिएर मलाई राजाकहाँ दौडेर जान दिनुहोस् ।”
20 ೨೦ ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
योआबले तिनलाई भने, “आज तिमी खबर लाने छैनौ । तिमीले यो काम अर्को दिन गर्नुपर्छ । आज तिमीले कुनै समाचार लाने छैनौ किनभने राजाको छोरा मरेको छ ।”
21 ೨೧ ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
त्यसपछि योआबले कूशीलाई भने, “जा, तैंले जे देखेको छस् त्‍यो राजालाई भन् ।” कूशीले योआबलाई दण्डवत गरे र दौडे ।
22 ೨೨ ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು.
तब सादोकका छोरा अहीमासले योआबलाई फेरि पनि भने, “जेसुकै भए पनि, कृपया मलाई दौडेर जान र कूशीको पछि-पछि लाग्‍न दिनुहोस् ।” योआबले जवाफ दिए, “हे मेरो छोरो, तिमीले यो खबरको निम्ति कुनै इनाम पाउने छैनौ भन्‍ने देखेर पनि तिमी किन दौडिन चाहन्छौ?”
23 ೨೩ ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.
अहीमासले भने, “जेसुकै होस्, म दौडने छु ।” त्यसैले योआबले तिनलाई जवाफ दिए, “दौड ।” अनि अहीमास मैदानको बाटो हुँदै दौडे र कूशीलाई उछिने ।
24 ೨೪ ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
यति बेला दाऊद भित्री र बाहिरी ढोकाको बिचमा बसिरहेका थिए । रक्षा बस्‍ने मानिस पर्खालको छतमा गए र आफ्‍ना आँखाले हेरे । जसै तिनले हेरे, एक जना मानिस एक्‍लै दौडेर नजिक आइरहेको तिनले देखे ।
25 ೨೫ ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
रक्षकले ठुलो सोरले कराए र राजालाई भने । तब राजाले भने, “त्यो एकलै छ भने, त्यसको मुखमा खबर हुनुपर्छ ।” त्‍यो धावक नजिक आइपुगे र सहरको नजिकै आए ।
26 ೨೬ ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.
त्यसपछि ती रक्षकले अर्को मानिस पनि दौडेर आइरहेको देखे र ती रक्षकले ढोकाको पालेलाई भने, “हेर, अर्को मानिस पनि एक्लै दौडेर आइरहेको छ ।” राजाले भने, “त्यसले पनि खबर ल्याउँदै छ ।”
27 ೨೭ ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.
त्यसैले ती रक्षकले भने, “अगिल्लो मानिसको दौडाइ सादोकका छोरा अहीमासको जस्तो छ ।” राजाले भने, “तिनी असल मानिस हुन् र राम्रो खबर लिएर आउँदै छन् ।”
28 ೨೮ ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
त्यसपछि अहीमासले कराए र राजालाई भने, “सबै ठिक छ ।” तिनले आफ्‍नो अनुहार भुईंमा धोप्टो पारेर राजालाई दण्डवत् गरे र भने, “परमप्रभु तपाईंको परमेश्‍वर धन्यको होऊन्! मेरो मलिक महाराजाको विरुद्धमा खडा हुने मानिसहरूलाई उहाँले हजुरको हातमा सुम्पनुभएको छ ।
29 ೨೯ ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.
त्यसैले राजाले जवाफ दिए, “त्‍यो जवान अब्शालोम ठिकै छ?” अहीमासले जवाफ दिए, “जब योबले म महाराजाको सेवकलाई हजुरकहाँ पठाए, तब मैले ठुलो खेलाबैल देखें, तर यो के हो भनी मलाई थाहा भएन ।”
30 ೩೦ ಆಗ ಅರಸನು ಅವನಿಗೆ, “ನೀನು ಇತ್ತ ನಿಲ್ಲು” ಎಂದು ಆಜ್ಞಾಪಿಸಿದನು. ಅವನು ನಿಂತನು.
त्यसपछि राजाले भने, “हटिजाऊ र यहाँ खडा होऊ ।” त्यसैले अहीमास छेउतिर लागे र खडा भए ।
31 ೩೧ ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.
कूशी पनि तुरुन्तै आइपुगे र भने, “मेरो मालिक महाराजालाई असल खबर छ, किनकि परमप्रभुले आज तपाईंको विरुद्ध खडा हुने सबैलाई बदला लिनुभएको छ ।”
32 ೩೨ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.
त्यसपछि राजाले कूशीलाई भने, “त्‍यो जवान अब्शालोम ठिकै छ?” ती कूशीले जवाफ दिए, “मेरो मालिक महाराजाका शत्रुहरू र हजूरलाई हानि गर्न खडा हुने सबैलाई त्यो जवान मानिसलाई जस्तै हुनुपर्छ ।”
33 ೩೩ ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.
अनि राजा गहिरो शोकमा परे र तिनी ढोकामाथिको कोठामा गए र रोए । जसै तिनी हिंडे, तिनले विलाप गरे, “ए मेरो छोरा ए अब्शालोम, ए मेरो छोरा अब्शालोम! बरु म तिम्रो सट्टामा मरेको भए हुन्थ्यो नि, ए अब्शालोम, ए मेरो छोरा, ए मेरो छोरा!”

< ಸಮುವೇಲನು - ದ್ವಿತೀಯ ಭಾಗ 18 >