< ಸಮುವೇಲನು - ದ್ವಿತೀಯ ಭಾಗ 19 >

1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.
وَقِيلَ لِيُوآبَ: «هُوَذَا الْمَلِكُ يَبْكِي وَيَنُوحُ عَلَى أَبْشَالُومَ».١
2 ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
فَتَحَوَّلَ النَّصْرُ فِي ذَلِكَ الْيَوْمِ لَدَى جَمِيعِ الْجَيْشِ إِلَى مَنَاحَةٍ، إِذْ شَاعَ بَيْنَهُمْ أَنَّ الْمَلِكَ قَدْ حَزِنَ جِدّاً عَلَى مَصْرَعِ ابْنِهِ.٢
3 ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.
فَتَسَلَّلَ أَفْرَادُ الْجَيْشِ عَائِدِينَ إِلَى الْمَدِينَةِ كَمَا يَتَسَلَّلُ قَوْمٌ لَحِقَ بِهِمْ عَارُ الْهَزِيمَةِ.٣
4 ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
وَأَخْفَى الْمَلِكُ وَجْهَهُ بِيَدَيْهِ صَارِخاً بِصَوْتٍ عَظِيمٍ: «يَا ابْنِي أَبْشَالُومُ، يَا أَبْشَالُومُ ابْنِي، ابْنِي».٤
5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.
فَتَوَجَّهَ يُوآبُ إِلَى الْبَيْتِ وَقَالَ لِلْمَلِكِ: «لَقَدْ أَخْجَلْتَ الْيَوْمَ جَمِيعَ رِجَالِكَ الَّذِينَ أَنْقَذُوكَ أَنْتَ وَأَبْنَاءَكَ وَبَنَاتِكَ وَنِسَاءَكَ وَمَحْظِيَّاتِكَ،٥
6 ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.
بِمَحَبَّتِكَ لِمُبْغِضِيكَ وَبُغْضِكَ لِمُحِبِّيكَ، فَقَدْ أَبْدَيْتَ الْيَوْمَ بِوُضُوحٍ أَنَّهُ لَا اعْتِبَارَ لَدَيْكَ لِلرُّؤَسَاءِ وَلا لِلْعَبِيدِ، لأَنِّي أَدْرَكْتُ الْيَوْمَ أَنَّهُ لَوْ كَانَ أَبْشَالُومُ حَيًّا وَكُلُّنَا هَلَكْنَا، لَطَابَ الأَمْرُ لَكَ.٦
7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.
فَقُمِ الآنَ وَاخْرُجْ وَاشْرَحْ قُلُوبَ رِجَالِكَ، لأَنِّي قَدْ أَقْسَمْتُ بِالرَّبِّ أَنَّهُ إِنْ لَمْ تَخْرُجْ، فَلَنْ يَبْقَى مَعَكَ أَحَدٌ اللَّيْلَةَ، فَيَكُونُ هَذَا الأَمْرُ أَسْوَأَ عَلَيْكَ مِنْ كُلِّ كَارِثَةٍ أَصَابَتْكَ مُنْذُ صِبَاكَ إِلَى الآنَ».٧
8 ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
فَقَامَ الْمَلِكُ وَجَلَسَ عِنْدَ بَوَّابَةِ الْمَدِينَةِ. فَذَاعَ الْخَبَرُ بَيْنَ جَمِيعِ أَوْسَاطِ الْجَيْشِ أَنَّ المَلِكَ جَاِلسٌ عِنْدَ الْبَوَّابَةِ، فَأَقْبَلَ الجَيْشُ إلَيْهِ. أَمَّا الإِسْرَائِيلِيُّونَ فَهَرَبُوا لائِذِينَ بِبُيُوتِهِمْ.٨
9 ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
وَنَشَبَتْ خُصُومَاتٌ بَيْنَ جَمِيعِ أَسْبَاطِ إِسْرَائِيلَ قَائِلِينَ: «إِنَّ الْمَلِكَ قَدْ أَنْقَذَنَا مِنْ قَبْضَةِ أَعْدَائِنَا، وَخَلَّصَنَا مِنْ حُكْمِ الْفِلِسْطِينِيِّينَ، وَهَا هُوَ قَدْ هَرَبَ مِنَ الأَرْضِ لِيَنْجُوَ مِنْ أَبْشَالُومَ.٩
10 ೧೦ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.
وَأَبْشَالُومُ الَّذِي نَصَّبْنَاهُ مَلِكاً عَلَيْنَا مَاتَ فِي الْحَرْبِ. فَالآنَ لِمَاذَا أَنْتُمْ مُتَقَاعِسُونَ عَنْ إِرْجَاعِ الْمَلِكِ؟»١٠
11 ೧೧ ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
وَبَعَثَ الْمَلِكُ دَاوُدُ إِلَى صَادُوقَ وَأَبِيَاثَارَ الْكَاهِنَيْنِ قَائِلاً: «اسْأَلا شُيُوخَ إِسْرَائِيلَ لِمَاذَا تَكُونُونَ آخِرَ مَنْ يُطَالِبُ بِعَوْدَةِ الْمَلِكِ إِلَى مَقَرِّهِ، وَقَدْ بَلَغَ مَسَامِعَ الْمَلِكِ فِي بَيْتِهِ كُلُّ مَا قِيلَ فِي إِسْرَائِيلَ؟١١
12 ೧೨ ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.
أَنْتُمْ إِخْوَتِي وَعَظْمِي وَلَحْمِي، فَلِمَاذَا تَكُونُونَ آخِرَ مَنْ يُطَالِبُ بِإِرْجَاعِ الْمَلِكِ.١٢
13 ೧೩ ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
وَقُولا لِعَمَاسَا: أَلَسْتَ أَنْتَ مِنْ لَحْمِي وَعَظْمِي؟ فَلْيُعَاقِبْنِي الرَّبُّ أَشَدَّ عِقَابٍ وَيَزِدْ، إِنْ لَمْ أَجْعَلْكَ طَوَالَ حَيَاتِكَ قَائِداً لِجَيْشِي بَدَلَ يُوآبَ».١٣
14 ೧೪ ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
فَاسْتَمَالَ بِذَلِكَ قُلُوبَ جَمِيعِ رِجَالِ يَهُوذَا كَرَجُلٍ وَاحِدٍ، فَأَرْسَلُوا إِلَيْهِ يُنَاشِدُونَهُ الرُّجُوعَ قَائِلِينَ: «عُدْ أَنْتَ وَجَمِيعُ رِجَالِكَ».١٤
15 ೧೫ ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
فَرَجَعَ الْمَلِكُ حَتَّى بَلَغَ الأُرْدُنَّ، فَتَوَافَدَ رِجَالُ يَهُوذَا إِلَى الْجِلْجَالِ لاِسْتِقْبَالِهِ وَالْعُبُورِ بِهِ نَهْرَ الأُرْدُنِّ.١٥
16 ೧೬ ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
وَأَسْرَعَ شِمْعِي بْنُ جِيرَا الْبَنْيَامِينِيُّ، الَّذِي مِنْ بَحُورِيمَ، وَرَافَقَ رِجَالَ يَهُوذَا لاسْتِقْبَالِ الْمَلِكِ دَاوُدَ،١٦
17 ೧೭ ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
وَمَعَهُ أَلْفُ رَجُلٍ مِنْ سِبْطِ بِنْيَامِينَ، كَمَا جَاءَ صِيبَا خَادِمُ شَاوُلَ وَمَعَهُ أَوْلادُهُ الْخَمْسَةَ عَشَرَ وَعَبِيدُهُ الْعِشْرُونَ، وَخَاضُوا نَهْرَ الأُرْدُنِّ أَمَامَ الْمَلِكِ.١٧
18 ೧೮ ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,
وَإِذِ اجْتَازُوا الْمَخَاضَةَ لِمُوَاكَبَةِ بَيْتِ الْمَلِكِ وَعَمَلِ مَا يَسْتَحْوِذُ عَلَى رِضَاهُ، مَثَلَ شِمْعِي بْنُ جِيرَا أَمَامَ المَلِكِ عِنْدَ عُبُورِهِ الأُرْدُنَّ وَسَجَدَ لَهُ مُتَوَسِّلاً١٨
19 ೧೯ “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
قَائِلاً: «لِيَغْفِرْ لِي سَيِّدِي الْمَلِكُ إِثْمِي وَلا يَذْكُرِ افْتِرَاءَ عَبْدِهِ عَلَيْهِ عِنْدَمَا خَرَجَ المَلِكُ مِنْ أُورُشَلِيمَ، وَلا يَكْتُمْ ذَلِكَ فِي قَلْبِهِ،١٩
20 ೨೦ ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
لأَنَّ عَبْدَكَ قَدْ أَدْرَكَ أَنِّي قَدْ أَخْطَأْتُ، هَا أَنَا قَدْ جِئْتُ الْيَوْمَ فِي طَلِيعَةِ بَيْتِ يُوسُفَ لاسْتِقْبَالِ سَيِّدِي الْمَلِكِ».٢٠
21 ೨೧ ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
فَقَالَ أَبِيشَايُ بْنُ صُرُويَّةَ: «أَلا يَنْبَغِي أَنْ يُقْتَلَ شِمْعِي لأَجْلِ هَذَا؟ لَقَدْ شَتَمَ مُخْتَارَ الرَّبِّ».٢١
22 ೨೨ ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.
فَقَالَ دَاوُدُ: «كُفَّا عَنِّي يَاابْنَيْ صُرُويَّةَ، فَلِمَاذَا تُقَاوِمَانِنِي؟ أَيُقْتَلُ الْيَوْمَ أَحَدٌ فِي إِسْرَائِيلَ؟ أَلَسْتُ أَنَا الآنَ مَلِكَ إِسْرَائِيلَ؟»٢٢
23 ೨೩ ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
ثُمَّ قَالَ الْمَلِكُ لِشِمْعِي: «لَنْ تَمُوتَ». وَأَقْسَمَ لَهُ عَلَى ذَلِكَ.٢٣
24 ೨೪ ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
وَكَذَلِكَ جَاءَ مَفِيبُوشَثُ حَفِيدُ شَاوُلَ لِلِقَاءِ الْمَلِكِ، وَكَانَ قَدْ أَهْمَلَ الاعْتِنَاءَ بِرِجْلَيْهِ وَلِحْيَتِهِ، وَلَمْ يَغْسِلْ ثِيَابَهُ مُنْذُ الْيَوْمِ الَّذِي غَادَرَ فِيهِ الْمَلِكُ أُورُشَلِيمَ إِلَى حِينِ رُجُوعِهِ سَالِماً.٢٤
25 ೨೫ ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
وَعِنْدَمَا جَاءَ لِلِقَائِهِ فِي أُورُشَلِيمَ سَأَلَهُ الْمَلِكُ: «لِمَاذَا لَمْ تَأْتِ مَعِي يَا مَفِيبُوشَثُ؟»٢٥
26 ೨೬ ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.
فَأَجَابَ: «إِنَّ عَبْدَكَ يَا سَيِّدِي الْمَلِكُ أَعْرَجُ، فَقُلْتُ لِنَفْسِي. أُسْرِجُ حِمَارِي وَأَرْكَبُ عَلَيْهِ وَأَمْضِي مَعَ المَلِكِ، وَلَكِنَّ صِيبَا وَكِيلَ أَعْمَالِي خَدَعَنِي،٢٦
27 ೨೭ ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
وَوَشَى بِعَبْدِكَ بُهْتَاناً إِلَى سَيِّدِي الْمَلِكِ، وَسَيِّدِي الْمَلِكُ كَمَلاكِ اللهِ. فَافْعَلْ مَا يَرُوقُ لَكَ.٢٧
28 ೨೮ ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
إِنَّ كُلَّ بَيْتِ أَبِي لَا يَسْتَحِقُّونَ مِنْكَ شَيْئاً سِوَى الْمَوْتِ، وَلَكِنَّكَ أَكْرَمْتَنِي، فَجَعَلْتَ عَبْدَكَ بَيْنَ الآكِلِينَ عَلَى مَائِدَتِكَ، فَأَيُّ حَقٍّ لِي بَعْدُ أُطَالِبُ بِهِ الْمَلِكَ؟»٢٨
29 ೨೯ ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
فَأَجَابَهُ الْمَلِكُ: «كَفَاكَ حَدِيثاً عَنْ شُؤُونِكَ، لَقَدْ أَمَرْتُ أَنْ تَقْسِمَ أَنْتَ وَصِيبَا الْحُقُولَ».٢٩
30 ೩೦ ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.
فَقَالَ مَفِيبُوشَثُ: «فَلْيَأْخُذْهَا كُلَّهَا بَعْدَ أَنْ عَادَ سَيِّدِي الْمَلِكُ إِلَى بَيْتِهِ بِسَلامٍ».٣٠
31 ೩೧ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
وَنَزَلَ بَرْزِلايُ الْجِلْعَادِيُّ مِنْ رُوجَلِيمَ وَعَبَرَ الأُرْدُنَّ مَعَ الْمَلِكِ لِيُشَيِّعَهُ مِنْ هُنَاكَ.٣١
32 ೩೨ ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
وَكَانَ بَرْزِلايُ قَدْ طَعَنَ فِي السِّنِّ وَبَلَغَ الثَّمَانِينَ عَاماً، وَكَانَ قَدْ عَالَ الْمَلِكَ عِنْدَ إِقَامَتِهِ فِي مَحَنَايِمَ لأَنَّهُ كَانَ رَجُلاً ثَرِيًّا جِدّاً.٣٢
33 ೩೩ ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು.
فَقَالَ الْمَلِكُ لِبَرْزِلايَ: «تَعَالَ مَعِي لأُورُشَلِيمَ فَأَقُومَ عَلَى إِعَالَتِكَ»٣٣
34 ೩೪ ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
فَأَجَابَ بَرْزِلايُ: «كَمْ بَقِيَ لِي مِنَ الْعُمْرِ حَتَّى أَصْعَدَ مَعَ الْمَلِكِ إِلَى أُورُشَلِيمَ؟٣٤
35 ೩೫ ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?
أَنَا الْيَوْمَ قَدْ بَلَغْتُ الثَّمَانِيَن، فَهَلْ أَسْتَطِيعُ أَنْ أُمَيِّزَ بَيْنَ الطَّيِّبِ وَالرَّدِيءِ؟ وَهَلْ يَلْتَذُّ عَبْدُكَ بِمَا يَأْكُلُ وَيَشْرَبُ؟ وَهَلْ مَازِلْتُ قَادِراً عَلَى الاسْتِمَاعِ إِلَى أَصْوَاتِ الْمُغَنِّينَ وَالْمُغَنِّيَاتِ؟ فَلِمَاذَا يُصْبِحُ عَبْدُكَ عِبْئاً عَلَى سَيِّدِي الْمَلِكِ؟٣٥
36 ೩೬ ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
لِيُرَافِقْ عَبْدُكَ مَوْكِبَكَ قَلِيلاً بَعْدَ عُبُورِكَ نَهْرَ الأُرْدُنِّ. وَلَكِنْ عَلامَ يُكَافِئُنِي الْمَلِكُ هَذِهِ الْمُكَافَأَةَ؟٣٦
37 ೩೭ ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
دَعْنِي أَرْجِعُ لأَمُوتَ فِي مَدِينَتِي بِجِوَارِ ضَرِيحِ أَبِي وَأُمِّي، وَهَا هُوَ وَلَدِي كِمْهَامُ يَذْهَبُ مَعَ سَيِّدِي الْمَلِكِ فَكَافِئْهُ بِمَا يَحْلُو لَكَ».٣٧
38 ೩೮ ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
فَأَجَابَ الْمَلِكُ: «لِيُرَافِقْنِي كِمْهَامُ فَأُجْزِلَ لَهُ مَا يَرُوقُ لَكَ مِنْ مُكَافَأَةٍ وَكُلُّ مَا تَتَمَنَّاهُ مِنِّي أُلَبِّيهِ لَكَ».٣٨
39 ೩೯ ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
فَاجْتَازَ جَمِيعُ الشَّعْبِ نَهْرَ الأُرْدُنِّ وَكَذَلِكَ فَعَلَ الْمَلِكُ. وَقَبَّلَ الْمَلِكُ بَرْزِلايَ وَبَارَكَهُ، ثُمَّ قَفَلَ هَذَا رَاجِعاً إِلَى مَحَلِّ إِقَامَتِهِ.٣٩
40 ೪೦ ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
وَتَوَجَّهَ الْمَلِكُ إِلَى الْجِلْجَالِ يُرَافِقُهُ كِمْهَامُ وَسَائِرُ شَعْبِ يَهُوذَا الَّذِينَ وَاكَبُوهُ مُجْتَازِينَ بِهِ نَهْرَ الأُردُنِّ، وَكَذَلِكَ نِصْفُ شَعْبِ إِسْرَائِيلَ.٤٠
41 ೪೧ ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
وَاجْتَمَعَ رِجَالُ إِسْرَائِيلَ وَقَالُوا لِلْمَلِكِ: «لِمَاذَا أَخَذَكَ إِخْوَتُنَا رِجَالُ يَهُوذَا خُفْيَةً، وَعَبَرُوا الأُرْدُنَّ بِالْمَلِكِ وَبِأَهْلِ بَيْتِهِ وَبِكُلِّ رِجَالِ دَاوُدَ؟»٤١
42 ೪೨ ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.
فَأَجَابَ رِجَالُ يَهُوذَا رِجَالَ إِسْرَائِيلَ: «لأَنَّ الْمَلِكَ قَرِيبٌ لَنَا، فَمَاذَا يُثِيرُ غَيْظَكُمْ فِي هَذَا الأَمْرِ؟ هَلْ أَكَلْنَا شَيْئاً مِنْ مَؤُونَةِ الْمَلِكِ؟ هَلْ نِلْنَا مُكَافَأَةً عَلَى ذَلِكَ؟»٤٢
43 ೪೩ ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.
فَقَالَ رِجَالُ إِسْرَائِيلَ لِرِجَالِ يَهُوذَا: «إِنَّ لَنَا عَشَرَةَ سِهَامٍ فِي الْمَلِكِ، وَنَحْنُ أَوْلَى مِنْكُمْ بِدَاوُدَ، فَلِمَاذَا اسْتَخْفَفْتُمْ بِنَا؟ أَوَ لَمْ نَكُنْ نَحْنُ أَوَّلَ مَنْ تَحَدَّثَ عَنْ إِرْجَاعِ مَلِكِنَا؟» فَكَانَ رَدُّ رِجَالِ يَهُوذَا أَغْلَظَ مِنْ كَلامِ رِجَالِ إِسْرَائِيلَ.٤٣

< ಸಮುವೇಲನು - ದ್ವಿತೀಯ ಭಾಗ 19 >