< ಸಮುವೇಲನು - ದ್ವಿತೀಯ ಭಾಗ 19 >

1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.
तब योआब को यह समाचार मिला, “राजा अबशालोम के लिये रो रहा है और विलाप कर रहा है।”
2 ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
इसलिए उस दिन की विजय सब लोगों की समझ में विलाप ही का कारण बन गई; क्योंकि लोगों ने उस दिन सुना, कि राजा अपने बेटे के लिये खेदित है।
3 ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.
इसलिए उस दिन लोग ऐसा मुँह चुराकर नगर में घुसे, जैसा लोग युद्ध से भाग आने से लज्जित होकर मुँह चुराते हैं।
4 ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
और राजा मुँह ढाँपे हुए चिल्ला चिल्लाकर पुकारता रहा, “हाय मेरे बेटे अबशालोम! हाय अबशालोम, मेरे बेटे, मेरे बेटे!”
5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.
तब योआब घर में राजा के पास जाकर कहने लगा, “तेरे कर्मचारियों ने आज के दिन तेरा, और तेरे बेटे-बेटियों का और तेरी पत्नियों और रखैलों का प्राण तो बचाया है, परन्तु तूने आज के दिन उन सभी का मुँह काला किया है;
6 ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.
इसलिए कि तू अपने बैरियों से प्रेम और अपने प्रेमियों से बैर रखता है। तूने आज यह प्रगट किया कि तुझे हाकिमों और कर्मचारियों की कुछ चिन्ता नहीं; वरन् मैंने आज जान लिया, कि यदि हम सब आज मारे जाते और अबशालोम जीवित रहता, तो तू बहुत प्रसन्न होता।
7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.
इसलिए अब उठकर बाहर जा, और अपने कर्मचारियों को शान्ति दे; नहीं तो मैं यहोवा की शपथ खाकर कहता हूँ, कि यदि तू बाहर न जाएगा, तो आज रात को एक मनुष्य भी तेरे संग न रहेगा; और तेरे बचपन से लेकर अब तक जितनी विपत्तियाँ तुझ पर पड़ी हैं उन सबसे यह विपत्ति बड़ी होगी।”
8 ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
तब राजा उठकर फाटक में जा बैठा। जब सब लोगों को यह बताया गया, कि राजा फाटक में बैठा है; तब सब लोग राजा के सामने आए। इस बीच इस्राएली अपने-अपने डेरे को भाग गए थे।
9 ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
इस्राएल के सब गोत्रों के सब लोग आपस में यह कहकर झगड़ते थे, “राजा ने हमें हमारे शत्रुओं के हाथ से बचाया था, और पलिश्तियों के हाथ से उसी ने हमें छुड़ाया; परन्तु अब वह अबशालोम के डर के मारे देश छोड़कर भाग गया।
10 ೧೦ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.
१०अबशालोम जिसको हमने अपना राजा होने को अभिषेक किया था, वह युद्ध में मर गया है। तो अब तुम क्यों चुप रहते? और राजा को लौटा ले आने की चर्चा क्यों नहीं करते?”
11 ೧೧ ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
११तब राजा दाऊद ने सादोक और एब्यातार याजकों के पास कहला भेजा, “यहूदी पुरनियों से कहो, ‘तुम लोग राजा को भवन पहुँचाने के लिये सबसे पीछे क्यों होते हो जबकि समस्त इस्राएल की बातचीत राजा के सुनने में आई है, कि उसको भवन में पहुँचाए
12 ೧೨ ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.
१२तुम लोग तो मेरे भाई, वरन् मेरी ही हड्डी और माँस हो; तो तुम राजा को लौटाने में सब के पीछे क्यों होते हो?’
13 ೧೩ ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
१३फिर अमासा से यह कहो, ‘क्या तू मेरी हड्डी और माँस नहीं है? और यदि तू योआब के स्थान पर सदा के लिये सेनापति न ठहरे, तो परमेश्वर मुझसे वैसा ही वरन् उससे भी अधिक करे।’”
14 ೧೪ ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
१४इस प्रकार उसने सब यहूदी पुरुषों के मन ऐसे अपनी ओर खींच लिया कि मानो एक ही पुरुष था; और उन्होंने राजा के पास कहला भेजा, “तू अपने सब कर्मचारियों को संग लेकर लौट आ।”
15 ೧೫ ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
१५तब राजा लौटकर यरदन तक आ गया; और यहूदी लोग गिलगाल तक गए कि उससे मिलकर उसे यरदन पार ले आएँ।
16 ೧೬ ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
१६यहूदियों के संग गेरा का पुत्र बिन्यामीनी शिमी भी जो बहूरीम का निवासी था फुर्ती करके राजा दाऊद से भेंट करने को गया;
17 ೧೭ ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
१७उसके संग हजार बिन्यामीनी पुरुष थे और शाऊल के घराने का कर्मचारी सीबा अपने पन्द्रह पुत्रों और बीस दासों समेत था, और वे राजा के सामने यरदन के पार पैदल उतर गए।
18 ೧೮ ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,
१८और एक बेड़ा राजा के परिवार को पार ले आने, और जिस काम में वह उसे लगाना चाहे उसी में लगने के लिये पार गया। जब राजा यरदन पार जाने पर था, तब गेरा का पुत्र शिमी उसके पाँवों पर गिरकर,
19 ೧೯ “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
१९राजा से कहने लगा, “मेरा प्रभु मेरे दोष का लेखा न ले, और जिस दिन मेरा प्रभु राजा यरूशलेम को छोड़ आया, उस दिन तेरे दास ने जो कुटिल काम किया, उसे स्मरण न करे और न राजा उसे अपने ध्यान में रखे।
20 ೨೦ ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
२०क्योंकि तेरा दास जानता है कि मैंने पाप किया; देख, आज अपने प्रभु राजा से भेंट करने के लिये यूसुफ के समस्त घराने में से मैं ही पहले आया हूँ।”
21 ೨೧ ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
२१तब सरूयाह के पुत्र अबीशै ने कहा, “शिमी ने जो यहोवा के अभिषिक्त को श्राप दिया था, इस कारण क्या उसका वध करना न चाहिये?”
22 ೨೨ ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.
२२दाऊद ने कहा, “हे सरूयाह के बेटों, मुझे तुम से क्या काम, कि तुम आज मेरे विरोधी ठहरे हो? आज क्या इस्राएल में किसी को प्राणदण्ड मिलेगा? क्या मैं नहीं जानता कि आज मैं इस्राएल का राजा हुआ हूँ?”
23 ೨೩ ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
२३फिर राजा ने शिमी से कहा, “तुझे प्राणदण्ड न मिलेगा।” और राजा ने उससे शपथ भी खाई।
24 ೨೪ ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
२४तब शाऊल का पोता मपीबोशेत राजा से भेंट करने को आया; उसने राजा के चले जाने के दिन से उसके कुशल क्षेम से फिर आने के दिन तक न अपने पाँवों के नाखून काटे, और न अपनी दाढ़ी बनवाई, और न अपने कपड़े धुलवाए थे।
25 ೨೫ ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
२५जब यरूशलेमी राजा से मिलने को गए, तब राजा ने उससे पूछा, “हे मपीबोशेत, तू मेरे संग क्यों नहीं गया था?”
26 ೨೬ ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.
२६उसने कहा, “हे मेरे प्रभु, हे राजा, मेरे कर्मचारी ने मुझे धोखा दिया था; तेरा दास जो विकलांग है; इसलिए तेरे दास ने सोचा, ‘मैं गदहे पर काठी कसवाकर उस पर चढ़ राजा के साथ चला जाऊँगा।’
27 ೨೭ ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
२७और मेरे कर्मचारी ने मेरे प्रभु राजा के सामने मेरी चुगली की है। परन्तु मेरा प्रभु राजा परमेश्वर के दूत के समान है; और जो कुछ तुझे भाए वही कर।
28 ೨೮ ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
२८मेरे पिता का समस्त घराना तेरी ओर से प्राणदण्ड के योग्य था; परन्तु तूने अपने दास को अपनी मेज पर खानेवालों में गिना है। मुझे क्या हक़ है कि मैं राजा की दुहाई दूँ?”
29 ೨೯ ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
२९राजा ने उससे कहा, “तू अपनी बात की चर्चा क्यों करता रहता है? मेरी आज्ञा यह है, कि उस भूमि को तुम और सीबा दोनों आपस में बाँट लो।”
30 ೩೦ ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.
३०मपीबोशेत ने राजा से कहा, “मेरे प्रभु राजा जो कुशल क्षेम से अपने घर आया है, इसलिए सीबा ही सब कुछ ले ले।”
31 ೩೧ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
३१तब गिलादी बर्जिल्लै रोगलीम से आया, और राजा के साथ यरदन पार गया, कि उसको यरदन के पार पहुँचाए।
32 ೩೨ ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
३२बर्जिल्लै तो वृद्ध पुरुष था, अर्थात् अस्सी वर्ष की आयु का था जब तक राजा महनैम में रहता था तब तक वह उसका पालन-पोषण करता रहा; क्योंकि वह बहुत धनी था।
33 ೩೩ ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು.
३३तब राजा ने बर्जिल्लै से कहा, “मेरे संग पार चल, और मैं तुझे यरूशलेम में अपने पास रखकर तेरा पालन-पोषण करूँगा।”
34 ೩೪ ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
३४बर्जिल्लै ने राजा से कहा, “मुझे कितने दिन जीवित रहना है, कि मैं राजा के संग यरूशलेम को जाऊँ?
35 ೩೫ ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?
३५आज मैं अस्सी वर्ष का हूँ; क्या मैं भले बुरे का विवेक कर सकता हूँ? क्या तेरा दास जो कुछ खाता पीता है उसका स्वाद पहचान सकता है? क्या मुझे गायकों या गायिकाओं का शब्द अब सुन पड़ता है? तेरा दास अब अपने स्वामी राजा के लिये क्यों बोझ का कारण हो?
36 ೩೬ ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
३६तेरा दास राजा के संग यरदन पार ही तक जाएगा। राजा इसका ऐसा बड़ा बदला मुझे क्यों दे?
37 ೩೭ ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
३७अपने दास को लौटने दे, कि मैं अपने ही नगर में अपने माता पिता के कब्रिस्तान के पास मरूँ। परन्तु तेरा दास किम्हाम उपस्थित है; मेरे प्रभु राजा के संग वह पार जाए; और जैसा तुझे भाए वैसा ही उससे व्यवहार करना।”
38 ೩೮ ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
३८राजा ने कहा, “हाँ, किम्हाम मेरे संग पार चलेगा, और जैसा तुझे भाए वैसा ही मैं उससे व्यवहार करूँगा वरन् जो कुछ तू मुझसे चाहेगा वह मैं तेरे लिये करूँगा।”
39 ೩೯ ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
३९तब सब लोग यरदन पार गए, और राजा भी पार हुआ; तब राजा ने बर्जिल्लै को चूमकर आशीर्वाद दिया, और वह अपने स्थान को लौट गया।
40 ೪೦ ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
४०तब राजा गिलगाल की ओर पार गया, और उसके संग किम्हाम पार हुआ; और सब यहूदी लोगों ने और आधे इस्राएली लोगों ने राजा को पार पहुँचाया।
41 ೪೧ ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
४१तब सब इस्राएली पुरुष राजा के पास आए, और राजा से कहने लगे, “क्या कारण है कि हमारे यहूदी भाई तुझे चोरी से ले आए, और परिवार समेत राजा को और उसके सब जनों को भी यरदन पार ले आए हैं।”
42 ೪೨ ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.
४२सब यहूदी पुरुषों ने इस्राएली पुरुषों को उत्तर दिया, “कारण यह है कि राजा हमारे गोत्र का है। तो तुम लोग इस बात से क्यों रूठ गए हो? क्या हमने राजा का दिया हुआ कुछ खाया है? या उसने हमें कुछ दान दिया है?”
43 ೪೩ ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.
४३इस्राएली पुरुषों ने यहूदी पुरुषों को उत्तर दिया, “राजा में दस अंश हमारे हैं; और दाऊद में हमारा भाग तुम्हारे भाग से बड़ा है। तो फिर तुम ने हमें क्यों तुच्छ जाना? क्या अपने राजा के लौटा ले आने की चर्चा पहले हम ही ने न की थी?” और यहूदी पुरुषों ने इस्राएली पुरुषों से अधिक कड़ी बातें कहीं।

< ಸಮುವೇಲನು - ದ್ವಿತೀಯ ಭಾಗ 19 >