< ಸಮುವೇಲನು - ದ್ವಿತೀಯ ಭಾಗ 19 >
1 ೧ ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.
၁ဒါဝိဒ်မင်းသည်အဗရှလုံအတွက်ငိုကြွေး မြည်တမ်းလျက်နေကြောင်း ယွာဘထံသို့ သတင်းရောက်ရှိလာ၏။-
2 ೨ ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
၂မင်းကြီးသည်သားတော်အတွက်ငိုကြွေး မြည်တမ်းလျက်နေကြောင်းကြားသိရသော အခါ ဒါဝိဒ်၏တပ်သားအပေါင်းတို့အဖို့ ထိုနေ့၌အောင်ပွဲသည်ဝမ်းနည်းပူဆွေးပွဲ ဖြစ်ရလေ၏။-
3 ೩ ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.
၃တိုက်ပွဲမှထွက်ပြေးခဲ့သဖြင့်ရှက်ကြောက် နေသည့်စစ်သားများကဲ့သို့ သူတို့သည်မြို့ ထဲသို့တိတ်တဆိတ်ပြန်လည်ဝင်ရောက် လာကြ၏။-
4 ೪ ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
၄မင်းကြီးသည်မျက်နှာကိုအုပ်၍``အို ငါ့သား၊ ငါ့သားအဗရှလုံ၊ အဗရှလုံငါ့သား'' ဟုကျယ်လောင်စွာငိုကြွေးတော်မူ၏။
5 ೫ ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.
၅ယွာဘသည်ဘုရင့်အိမ်တော်သို့သွား၍``ယနေ့ အရှင်သည်အရှင်၏အသက်ကိုလည်းကောင်း၊ အရှင့်သားသမီး၊ မိဖုရားမောင်းမတို့၏ အသက်ကိုလည်းကောင်းကယ်ဆယ်သော အရှင့်လူတို့အားချီးမြှင့်မည့်အစား ရှုတ်ချတော်မူလေပြီ။-
6 ೬ ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.
၆အရှင်သည်မိမိအားချစ်မြတ်နိုးသူတို့ကို ဆန့်ကျင်ဘက်ပြု၍ အရှင့်အားမုန်းသူတို့ကို ထောက်ခံအားပေးတော်မူပြီ။ မိမိ၏တပ်မှူး များနှင့်တပ်သားများအားမည်သို့မျှပမာဏ မပြုကြောင်းထင်ရှားစေတော်မူပြီ။ ယခု အခါ၌အကျွန်ုပ်တို့အားလုံးသေ၍အဗ ရှလုံအသက်ရှင်လျက်နေမည်ဆိုပါမူ အရှင်အားရဝမ်းမြောက်တော်မူမည် ဖြစ်ကြောင်းအကျွန်ုပ်သိမြင်နိုင်ပါ၏။-
7 ೭ ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.
၇ယခုအရှင်ကြွတော်မူ၍အရှင်၏လူတို့ အားမေတ္တာစကားကိုမိန့်တော်မူပါ။ ထိုသို့ အရှင်ပြုတော်မမူပါလျှင်နက်ဖြန်နံနက် ၌ထိုသူတို့အနက်တစ်ဦးတစ်ယောက်မျှ အရှင်နှင့်အတူရှိနေတော့မည်မဟုတ် သဖြင့် အရှင့်တစ်သက်တွင်အဆိုးရွား ဆုံးသောဘေးအန္တရာယ်နှင့်တွေ့ကြုံရမည် ဖြစ်ကြောင်းကို အကျွန်ုပ်သည်ထာဝရ ဘုရား၏နာမတော်ကိုတိုင်တည်၍ကျိန် ဆိုပါ၏'' ဟုလျှောက်လေ၏။-
8 ೮ ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
၈ထိုအခါမင်းကြီးသည်ထပြီးလျှင်မြို့ တံခါးအနီးသို့သွား၍ထိုင်တော်မူ၏။ လူ တို့သည်ထိုအရပ်တွင်မင်းကြီးရှိတော်မူ ကြောင်းကြားသောအခါအထံတော်သို့ ချဉ်းကပ်လာကြ၏။ ဤအတောအတွင်း၌ဣသရေလအမျိုး သားအပေါင်းတို့သည် မိမိတို့နေရပ် အသီးသီးသို့ထွက်ပြေးကြ၏။-
9 ೯ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
၉တစ်ပြည်လုံးတွင်လူတို့က``ဒါဝိဒ်မင်းသည် ငါတို့ကိုရန်သူများလက်မှကယ်တော်မူ၏။ သူသည်ငါတို့အားဖိလိတ္တိအမျိုးသားတို့ လက်မှကယ်ဆယ်ခဲ့၏။ သို့ရာတွင်ယခု အခါအဗရှလုံအတွက်ကြောင့်တိုင်း ပြည်ကိုစွန့်ခွာသွားလေပြီ။-
10 ೧೦ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.
၁၀ငါတို့သည်အဗရှလုံအားငါတို့၏ဘုရင် အဖြစ်ဘိသိက်ပေးခဲ့ကြသော်လည်း သူသည် စစ်ပွဲတွင်ကျဆုံးသွားလေပြီ။ ထို့ကြောင့် ဒါဝိဒ်မင်းအားပြန်လည်ခေါ်ဆောင်ရန် အဘယ်ကြောင့် ငါတို့မကြံစည်ဘဲနေကြ ပါသနည်း'' ဟူ၍အချင်းချင်းငြင်းခုံ ပြောဆိုကြ၏။
11 ೧೧ ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
၁၁ဤသို့ဣသရေလအမျိုးသားတို့ပြောဆို နေကြသည့်သတင်းသည် ဒါဝိဒ်ထံသို့ ရောက်ရှိလာ၏။ ``အဘယ်ကြောင့်သင်တို့ သည်မိမိတို့ဘုရင်အားနန်းတော်သို့ပြန် လည်ခေါ်ဆောင်ရန် ဣသရေလအမျိုး သားတို့ထက်နောက်ကျလျက်နေကြပါ သနည်း။-
12 ೧೨ ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.
၁၂သင်တို့သည်ငါ၏ဆွေမျိုး၊ ငါ၏သွေးသား များဖြစ်ကြ၏။ ငါ့အားပြန်လည်ခေါ်ဆောင် ရန်အဘယ်ကြောင့်နောက်ကျနေရပါသနည်း'' ဟုမေးမြန်းစေရန်ယဇ်ပုရောဟိတ်ဇာဒုတ် နှင့်အဗျာသာတို့ကိုယုဒခေါင်းဆောင် များထံသို့စေလွှတ်တော်မူ၏။-
13 ೧೩ ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
၁၃ထို့ပြင်အာမသအား``သင်သည်ငါ၏ဆွေမျိုး ဖြစ်၏။ ယခုအချိန်မှစ၍သင့်အားယွာဘ ၏နေရာတွင်တပ်မတော်ဗိုလ်ချုပ်အဖြစ်ငါ ခန့်ထားပြီ။ ယင်းသို့ငါမပြုပါမူဘုရားသခင်သည်ငါ့အားအဆုံးစီရင်တော်မူပါ စေသော'' ဟုပြောကြားရန်လည်းမှာတော်မူ လိုက်၏။-
14 ೧೪ ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
၁၄ဒါဝိဒ်၏စကားကြောင့်ယုဒပြည်သူပြည် သားအပေါင်းတို့၏စိတ်ကိုညွှတ်စေသဖြင့် သူတို့က``မင်းကြီးနှင့်မှူးမတ်အပေါင်းတို့ ပြန်ကြွတော်မူပါ'' ဟုလျှောက်စေကြ၏။
15 ೧೫ ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
၁၅အပြန်ခရီးတွင်မင်းကြီးအားမြစ်တစ်ဘက် ကမ်းသို့ပို့ဆောင်ပေးရန် ဂိလဂါလမြို့သို့ လာရောက်ကြသည့်ယုဒပြည်သားတို့ သည်ယော်ဒန်မြစ်မှနေ၍ခရီးဦးကြို ပြုကြလေသည်။-
16 ೧೬ ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
၁၆ထိုအချိန်၌ပင်လျှင်ဂေရ၏သား၊ ဗာဟု ရိမ်မြို့သားဗင်္ယာမိန်အနွယ်ဝင်ရှိမိသည် လည်း ဒါဝိဒ်မင်းကိုကြိုဆိုရန်ယော်ဒန်မြစ် သို့အလျင်အမြန်လာရောက်၏။-
17 ೧೭ ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
၁၇သူနှင့်အတူဗင်္ယာမိန်အနွယ်ဝင်လူပေါင်း တစ်ထောင်ပါ၏။ ထို့ပြင်ရှောလုမိသားစု ၏အစေခံဇိဘသည်လည်းမိမိ၏သား တစ်ဆယ့်ငါးယောက်၊ အစေခံနှစ်ဆယ်နှင့် အတူလာရောက်လေသည်။ သူတို့သည်မင်း ကြီး၏အလျင်ယော်ဒန်မြစ်သို့ရောက်ရှိ ကြ၏။-
18 ೧೮ ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,
၁၈သူတို့သည်ဘုရင့်အိမ်တော်သားတို့ကို မြစ်တစ်ဘက်သို့ပို့ဆောင်ပေးရန်နှင့် မင်း ကြီးအလိုရှိရာကိုဆောင်ရွက်ပေးရန် မြစ်ကိုကူးကြ၏။ မင်းကြီးသည်မြစ်ကိုကူးရန်အသင့်ပြင် ဆင်နေစဉ်ရှိမိသည်ရှေ့တော်၌ပျပ်ဝပ် ပြီးလျှင်၊-
19 ೧೯ “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
၁၉အရှင်မင်းကြီး၊ အရှင်ယေရုရှလင်မြို့ မှထွက်ကြွတော်မူစဉ်အခါက အရှင့် အားအကျွန်ုပ်ပြစ်မှားခဲ့သည်ကိုခွင့်လွှတ် တော်မူပါ။ ထိုအမှုအတွက်အကျွန်ုပ် အားရန်ငြိုးထားတော်မမူပါနှင့်။ ထို အမှုကိုမေ့ပျောက်တော်မူပါ။-
20 ೨೦ ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
၂၀အရှင်၊ အကျွန်ုပ်သည်ပြစ်မှားမိပါပြီ။ သို့ ဖြစ်၍မြောက်ဘက်အနွယ်ဝင်များထဲမှ အကျွန်ုပ်သည်ဦးစွာပထမအရှင်မင်း ကြီးအား ယနေ့လာရောက်ကြိုဆိုခြင်း ဖြစ်ပါ၏'' ဟုလျှောက်၏။
21 ೨೧ ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
၂၁ဇေရုယာ၏သားအဘိရှဲက``ရှိမိအားသေ ဒဏ်ပေးသင့်ပါသည်။ သူသည်ထာဝရဘုရား ဘိသိက်ပေးတော်မူသောဘုရင်ကိုကျိန်ဆဲ သူဖြစ်ပါ၏'' ဟုလျှောက်၏။
22 ೨೨ ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.
၂၂သို့ရာတွင်ဒါဝိဒ်သည် အဘိရှဲနှင့်သူ၏ အစ်ကိုယွာဘအား``သင်တို့ထင်မြင်ချက် ကိုအဘယ်သူတောင်းခံပါသနည်း။ သင် တို့သည်ငါ့ကိုဒုက္ခပေးလိုကြပါသလော။ ငါသည်ကားယခုအခါဣသရေလဘုရင် ဖြစ်လေပြီ။ ထို့ကြောင့်အဘယ်ဣသရေလ အမျိုးသားကိုမျှမသတ်ရကြ'' ဟု ဆိုပြီးလျှင်၊-
23 ೨೩ ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
၂၃ရှိမိအား``သင်သည်သေဒဏ်ခံရမည်မဟုတ် ကြောင်းငါကတိပြု၏'' ဟုမိန့်တော်မူ၏။
24 ೨೪ ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
၂၄ထိုနောက်ရှောလု၏မြေးမေဖိဗောရှက်သည် မင်းကြီးအားခရီးဦးကြိုပြုရန်လာရောက် ၏။ သူသည်မင်းကြီးယေရုရှလင်မြို့ကထွက် ခွာသွားချိန်မှအစပြု၍ အောင်မြင်စွာပြန် လည်ရောက်ရှိလာချိန်အထိ မိမိ၏ခြေတို့ ကိုမဆေး၊ မုတ်ဆိတ်ကိုမညှပ်၊ အဝတ်အစား ကိုလည်းမလျှော်မဖွတ်ဘဲနေ၏။-
25 ೨೫ ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
၂၅မင်းကြီးသည်မေဖိဗောရှက်ယေရုရှလင် မြို့မှရောက်ရှိလာသောအခါ``မေဖိဗောရှက်၊ သင်သည်အဘယ်ကြောင့်ငါနှင့်အတူမ လိုက်ခဲ့ပါသနည်း'' ဟုမေးတော်မူ၏။
26 ೨೬ ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.
၂၆မေဖိဗောရှက်က``အရှင်မင်းကြီး၊ အရှင်သိ တော်မူသည့်အတိုင်းအကျွန်ုပ်သည်ခြေဆွံ့ သူဖြစ်ပါ၏။ အကျွန်ုပ်သည်အရှင်နှင့်အတူ မြည်းစီး၍လိုက်နိုင်ရန်မြည်းကိုကုန်းနှီး အတင်ခိုင်းသော်လည်းအကျွန်ုပ်၏အစေခံ သည်အကျွန်ုပ်အားလှည့်စားပါ၏။-
27 ೨೭ ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
၂၇သူသည်အကျွန်ုပ်အကြောင်းကိုလည်းမင်း ကြီးအားလိမ်လည်လျှောက်ထားပါ၏။ သို့ ရာတွင်အရှင်သည်ထာဝရဘုရား၏ကောင်း ကင်တမန်ကဲ့သို့ဖြစ်သဖြင့် မိမိမှန်ကန် သည်ဟုအရှင်ထင်မြင်တော်မူသည့်အတိုင်း ပြုတော်မူပါ၏။-
28 ೨೮ ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
၂၈အကျွန်ုပ်ခမည်းတော်၏အိမ်ထောင်စုသား အပေါင်းတို့သည် အရှင်၏လက်တွင်ကွပ်မျက် ခြင်းကိုခံထိုက်သူများဖြစ်ပါ၏။ သို့သော် လည်းအရှင်သည်အကျွန်ုပ်အားအရှင့်စား တော်ပွဲတွင်စားသောက်ခွင့်ကိုပေးတော်မူ ပါ၏။ အရှင်မင်းကြီးထံမှအဘယ်အရာ ကိုမျှထပ်မံအသနားခံရန်မရှိတော့ ပါ'' ဟုလျှောက်လေ၏။
29 ೨೯ ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
၂၉မင်းကြီးက``သင်နောက်ထပ်ပြောဆိုရန်မလို တော့ပြီ။ ရှောလု၏ဥစ္စာပစ္စည်းများကိုသင်နှင့် ဇိဘတစ်ဝက်စီယူကြရန်ငါဆုံးဖြတ်ပြီး ဖြစ်သည်'' ဟုမိန့်တော်မူ၏။
30 ೩೦ ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.
၃၀မေဖိဗောရှက်ကလည်း``အားလုံးသူ့ကိုပင် ပေးတော်မူပါ။ အရှင်မင်းကြီးကောင်းမွန် ချောမောစွာပြန်လည်ရောက်ရှိခြင်းနှင့်ပင် လျှင်အကျွန်ုပ်ကျေနပ်လျက်နေပါ၏'' ဟု လျှောက်၏။
31 ೩೧ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
၃၁ဂိလဒ်ပြည်သားဗာဇိလဲသည်လည်းမင်း ကြီးအား ယော်ဒန်မြစ်တစ်ဘက်သို့ပို့ဆောင် ရန်ရောဂေလိမ်မြို့မှလာ၏။-
32 ೩೨ ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
၃၂ဗာဇိလဲသည်အသက်ရှစ်ဆယ်ရှိ၍အလွန် အိုမင်းနေလေပြီ။ သူသည်အလွန်ကြွယ်ဝ ချမ်းသာသူဖြစ်သဖြင့် မဟာနိမ်မြို့တွင် မင်းကြီးစခန်းချနေစဉ်အခါကစားနပ် ရိက္ခာထောက်ပံ့ခဲ့သူဖြစ်၏။-
33 ೩೩ ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು.
၃၃မင်းကြီးကသူ့အား``ငါနှင့်အတူယေရု ရှလင်မြို့သို့လိုက်ခဲ့လော့။ သင့်အားငါ ကြည့်ရှုစောင့်ရှောက်မည်'' ဟုဆို၏။
34 ೩೪ ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
၃၄သို့ရာတွင်ဗာဇိလဲက``အကျွန်ုပ်သည်ကြာ ကြာအသက်ရှင်ရတော့မည်မဟုတ်ပါ။ အ ဘယ်ကြောင့်အရှင်မင်းကြီးနှင့်ယေရုရှလင် မြို့သို့လိုက်ရပါမည်နည်း။-
35 ೩೫ ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?
၃၅အကျွန်ုပ်သည်အသက်ရှစ်ဆယ်ရှိပါပြီ။ အဘယ်အမှုတွင်မျှပျော်မွေ့နှစ်သက် ခြင်းမရှိတော့ပါ။ စားသောက်သည့်အစား အစာ၏အရသာကိုလည်းမသိနိုင်တော့ ပါ။ သီချင်းသံကိုလည်းမကြားနိုင်ပါ။ အ ကျွန်ုပ်သည်အရှင်မင်းကြီးအတွက်ဝန်လေး မည်သာဖြစ်ပါ၏။-
36 ೩೬ ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
၃၆ဤသို့ကြီးမြတ်သည့်ဆုလာဘ်တော်နှင့်လည်း မထိုက်မတန်ပါ။ သို့သော်အကျွန်ုပ်သည် ယော်ဒန်မြစ်ကိုဖြတ်ကူးပြီးလျှင် အရှင် နှင့်အတူအနည်းငယ်လိုက်ပါမည်။-
37 ೩೭ ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
၃၇မိဘတို့၏သင်္ချိုင်းအနီးတွင်သေနိုင်ရန် အကျွန်ုပ်အားအိမ်သို့ပြန်ခွင့်ပြုတော်မူပါ။ ဤသူသည်အကျွန်ုပ်၏သားခိမဟံဖြစ် ပါ၏။ အရှင်မင်းကြီး၊ သူ့အားခေါ်ဆောင် သွားပြီးနောက်သူ့အတွက်အရှင်အလိုတော် ရှိသည့်အတိုင်းပြုတော်မူပါ'' ဟုလျှောက်၏။
38 ೩೮ ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
၃၈မင်းကြီးကလည်း``ငါသည်သူ့ကိုခေါ်သွား ပြီးလျှင်သင်အလိုရှိသည့်အတိုင်းသူ့အတွက် ဆောင်ရွက်ပေးမည်။ သင်၏အတွက်သင်တောင်း လျှောက်သည့်အတိုင်းငါပြုမည်'' ဟုပြန်လည် မိန့်ကြားတော်မူ၏။-
39 ೩೯ ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
၃၉ထိုနောက်ဒါဝိဒ်နှင့်သူ၏လူအပေါင်းတို့သည် ယော်ဒန်မြစ်ကိုဖြတ်ကူးကြ၏။ မင်းကြီးသည် ဗာဇိလဲအားနမ်းရှုပ်ပြီးလျှင်ကောင်းချီးပေး တော်မူ၏။ ထိုနောက်ဗာဇိလဲသည်မိမိနေရပ် သို့ပြန်လေ၏။
40 ೪೦ ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
၄၀မင်းကြီးသည်ယော်ဒန်မြစ်ကိုကူးသောအခါ ယုဒပြည်တစ်ပြည်လုံးမှလူတို့နှင့် ဣသရေလ ပြည်တစ်ဝက်မှလူတို့သည်မင်းကြီးအားလိုက် ပါပို့ဆောင်ကြ၏။ ထိုနောက်မင်းကြီးသည် ဂိလဂါလမြို့သို့ဆက်လက်၍ကြွတော်မူ ၏။ ခိမဟံသည်လည်းလိုက်ပါသွားလေသည်။-
41 ೪೧ ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
၄၁ထိုအခါဣသရေလအမျိုးသားအပေါင်းတို့ သည် မင်းကြီးထံလာ၍``အကျွန်ုပ်တို့၏ညီ အစ်ကိုများဖြစ်ကြသောယုဒပြည်သား တို့သည်အရှင်နှင့်တကွအရှင့်မိသားစု၊ အရှင့်လူတို့ကိုယော်ဒန်မြစ်တစ်ဘက်သို့ ပို့ဆောင်ခွင့်ရှိသည်ဟုအဘယ်ကြောင့်ထင် မှတ်ကြပါသနည်း'' ဟုလျှောက်ထားကြ၏။
42 ೪೨ ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.
၄၂ယုဒပြည်သားတို့က``မင်းကြီးသည်ငါတို့ အနွယ်ဝင်ဖြစ်သဖြင့် ငါတို့ထိုသို့ပြုကြ ခြင်းဖြစ်၏။ သို့ဖြစ်၍သင်တို့သည်အဘယ် ကြောင့်အမျက်ထွက်ရကြပါသနည်း။ ငါ တို့သည်မင်းကြီး၏ရိက္ခာတော်ကိုစား၍ ဆုလာဘ်တော်ကိုခံယူပါသလော'' ဟု ပြန်ပြောကြ၏။
43 ೪೩ ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.
၄၃ဣသရေလပြည်သားအပေါင်းတို့က``ဒါဝိဒ် မင်းသည်သင်တို့ပြောသည့်အတိုင်းသင်တို့ အနွယ်ဝင်ပင်ဖြစ်စေကာမူ ငါတို့သည်သင် တို့ထက်ဆယ်ဆပို၍သူ့အားပိုင်ဆိုင်ခွင့်ရှိ ပါ၏။ သင်တို့သည်အဘယ်ကြောင့်ငါတို့ အားအထင်သေးကြပါသနည်း။ အမှန် စင်စစ်မင်းကြီးအားပြန်လည်ဖိတ်ခေါ်ရန် ဦးစွာပထမပြောဆိုကြသူများကား ငါတို့ပင်ဖြစ်ပါ၏'' ဟုဆို၏။ သို့ရာတွင်ဤသို့အရေးဆိုရာတွင်ယုဒ ပြည်သားတို့ကဣသရေလပြည်သားတို့ ထက်ပို၍ပြင်းထန်ကြ၏။