< ಸಮುವೇಲನು - ದ್ವಿತೀಯ ಭಾಗ 21 >

1 ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.
दाऊदको समयमा तीन वर्षसम्म अनकाल पर्‍यो र दाऊदले परमप्रभुको मुहारको खोजी गरे । त्यसैले परमप्रभुले भन्‍नुभयो, “यो अनिकाल शाऊल र तिनका हत्यारा परिवारको कारणले भएको हो, किनभने त्‍यसले गोबोनीहरूलाई मार्‍यो ।”
2 ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.
अब गिबोनीहरूचाहिं इस्राएलका मानिसहरू थिएनन् । तिनीहरू बाँकी रहेका एमोरीमध्येका थिए । इस्राएलका मानिसहरूले तिनीहरूलाई नमार्ने शपथ खाएका थिए, तर शाऊलले इस्राएल र यहूदाको मानिसहरूको निम्तिको जोशले गर्दा तिनीहरू सबैलाई मार्ने कोसिस गरे ।
3 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.
त्यसैले दाऊदले गिबोनीहरूलाई एकसाथ बोलाए र तिनीहरूलाई भने, “मैले तिमीहरूको निम्ति के गर्नुपर्छ? मैले कसरी प्रायश्‍चित गर्न सक्छु, ताकि परमप्रभुको भलाइ र प्रतिज्ञा पाएका उहाँका मानिसहरूलाई तिमीहरूले आशिष् दिन सक्‍छौ?”
4 ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ” ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, “ಏನು ಮಾಡಬೇಕು ಹೇಳಿರಿ ಮಾಡುತ್ತೇನೆ” ಅಂದನು.
गिबोनीहरूले तिनलाई जवाफ दिए, “हामी र शाऊल वा तिनका परिवारका बिचमा सुन वा चाँदीका कुरा होइन । यसै गरी हामीले इस्राएलका कुनै मानिसलाई मार्ने होइन ।” दाऊदले जवाफ दिए, “मैले तिमीहरूको निम्ति के गर्नुपर्छ, तिमीहरू के भन्छौ?”
5 ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.
तिनीहरूले राजालाई जवाफ दिए, “हामी सबैलाई मार्न खोज्‍ने मानिस जसले हाम्रो विरुद्ध षड्यान्त्र गरे, ताकि हामी अहिले नाश भएका छौं र इस्राएलको सिमानाभित्र हाम्रो स्थान छैन,
6 ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.
तिनको सन्‍तानबाट सात जना मानिसलाई हामीकहाँ सुम्‍पियोस् र हामीले तिनीहरूलाई परमप्रभुद्वारा चुनिएको शाऊलको गिबामा परमप्रभुको सामु झुन्ड्याउने छौं ।” त्यसैले राजाले भने, “म तिमीहरूलाई ती दिने छु ।”
7 ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
तर दाऊद र शाऊलका छोरा जोनाथन, तिनीहरूका बिचमा भएको परमप्रभुको शपथको कारणले गर्दा राजाले जोनाथनका छोरा मपीबोशेतलाई छोडिदिए ।
8 ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.
तर राजाले अय्याकी छोरी रिश्‍पाका दुई जना छोराला जसलाई त्‍यसले शाऊलबाट जन्माएकी थिई उनीहरूको नाउँ आरमोनी र मपीबोशेत थियो । अनि दाऊदले महिलोती बर्जिल्लैका छोरा अद्रीएलबाट शाऊलकी छोरी मेराबले जन्माएकी पाँच जना छोरालाई लिए ।
9 ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು
तिनले उनीहरूलाई गिबोनीहरूको हातमा सुम्‍पे । तिनीहरूले उनीहरूलाई परमप्रभुको सामु पहाडमा झुण्डाए र उनीहरू सातै जना एकसाथ मरे । उनीहरूलाई जौको कटनीको सुरुमा कटनी गर्ने सुरुका दिनहरूमा मारिएका थिए ।
10 ೧೦ ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
अय्याकी छोरी रिश्‍पाले भाङ्ग्रा लिइन् र ती लाशहरूको छेउमा आफ्‍नो निम्‍ति त्‍यो ओछ्‍याएर कटनीको सुरुदेखि आकाशबाट तिनीहरूमाथि पानी नपरेसम्म नै बसिराखिन् । तिनले ती लाशहरूलाई दिनमा आकाशमा उड्ने चराहरूलाई र रातमा जङ्‍गली पशुहरूलाई खान दिइनन् ।
11 ೧೧ ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.
अय्याकी छोरी, शाऊलकी उपपत्‍नी रिश्‍पाले जे गरेकी थिइन् त्‍यसको बारेमा दाऊदलाई भनियो ।
12 ೧೨ ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
त्यसैले दाऊद गए र शाऊल र तिनका छोरा जोनाथनका हाड्‍डीहरू याबेश-गिलादका मानिसहरूबाट लिएर आए, जसले बेथ-शानको चोकबाट ती चोरेका थिए, जहाँ पलिश्‍तीहरूले शाऊललाई गिल्बोमा मरेपछि ती पलिश्‍तीहरूले उनीहरूलाई झुण्ड्याएका थिए ।
13 ೧೩ ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.
दाऊदले त्‍यहाँबाट शाऊल र तिनका छोरा जोनाथनका हड्‍डीहरू लिएर गए र तिनीहरूले झुण्ड्याइएका ती सात जना मानिसका हड्‍डीहरू पनि जम्‍मा गरे ।
14 ೧೪ ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.
तिनीहरूले शाऊल र तिनका छोरा जोनाथनका हड्‍डीहरू बेन्यामीनको गाउँमा सलामा भएको तिनका बुबा कीशको चिहानमा गाडे । राजाले आज्ञा गरेका सबै कुरा तिनीहरूले गरे । त्यसपछि देशको निम्ति तिनीहरूका प्रार्थनाहरूका जवाफ परमेश्‍वरले दिनुभयो ।
15 ೧೫ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.
त्यसपछि पलिश्‍तीहरू फेरि इस्राएलको विरुद्धमा युद्ध गर्न गए । त्यसैले दाऊद आफ्नो फौजका साथमा तल गए र पलिश्‍तीहरूको विरुद्ध लडे । दाऊद युद्धको थकानले लखतरान भएका थिए ।
16 ೧೬ ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
दैत्यका सन्तान इश्बी-बनिबले दाऊदलाई मार्न खोजे, जसको काँसाको भालाको तौल साँढे तीन किलो थियो र नयाँ तरवार भिरेको थियो ।
17 ೧೭ ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.
तर सरूयाहका छोरा अबीशैले दाऊदलाई बचाए, त्यो पलिश्‍तीलाई आक्रमण गरे र त्‍यसलाई मारे । तब दाऊदका मानिसहरूले तिनीसँग यसो भनेर शपथ खाए, “तपाईं अबदेखि हामीसित लडाइँमा जानुहुने छैन, ताकि तपाईंले इस्राएलको बत्ती निबाउनुहन्‍न ।”
18 ೧೮ ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.
यसपछि फेरि पनि गोबमा पलिश्‍तीहरूसँग युद्ध भयो, त्यस बेला हूशाती सिब्‍बकैले सफलाई मारे जो रफाको सन्तानमध्ये एक थिए ।
19 ೧೯ ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
गोबमा फेरि पनि पलिश्‍तीहरूसँग लडाइँ भयो, त्यस बेला बेथलेहेमवासी यारे-ओरगिमका छोरा गोल्यातलाई मारे, जसको भालाको बिंड जुलाहाको डण्डाजस्तै थियो ।
20 ೨೦ ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.
गातमा फेरि अर्को लडाइँ भयो, त्यहाँ हरेक हातमा छ-छ वटा औंला र हरेक खुट्टामा पनि छ-छ वटा औंला गरी चौबिस वटा औंला भएका निकै अग्लो मानिस थियो । त्यो पनि रफाको सन्तान नै थियो ।
21 ೨೧ ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.
त्यसले इस्राएलको अपमान गर्दा दाऊदका दाजु शिमाहका छोरा जोनाथनले त्यसलाई मार्‍यो ।
22 ೨೨ ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
गातको रफाका सन्तानहरू यी नै थिए, र तिनीहरू दाऊदका हातद्वारा र तिनका सिपाहरूका हातद्वारा मारिए ।

< ಸಮುವೇಲನು - ದ್ವಿತೀಯ ಭಾಗ 21 >