< ಸಮುವೇಲನು - ದ್ವಿತೀಯ ಭಾಗ 24 >

1 ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
फेरि इस्राएलको विरुद्धमा परमप्रभुको क्रोध पर्‍यो र उहाँले दाऊदलाई यसो भनेर उत्तेजित गर्नुभयो, “जा, इस्राएल र यहूदाको गणना गर् ।”
2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.
राजाले आफूसँग भएका फौजका कमाण्‍डर योआबलाई भने, “दानदेखि बेर्शेबासम्मका इस्राएलका सबै कुलमा जाऊ र सबै मानिसको गणना गर ताकि युद्धको निम्ति योग्य मानिसहरूका जम्माजम्मी सङ्ख्या मलाई थाहा होस् ।”
3 ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.
योआबले राजालाई भने, “परमप्रभु तपाईंका परमेश्‍वरले मानिसहरूका सङ्ख्‍यामा सय गुणा वृद्धि गर्नुभएको होस् र मेरा मालिक महाराजाले यसो भएको आफ्नै आँखाले देखून् । तर मेरा मालिक महाराजालाई यो किन चाहियो?”
4 ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
तापनि, योआब र फौजका कमाण्‍डरहरूका विरुद्धमा राजाको बोली नै अन्तिम भयो । त्यसैले योआब र कमाण्‍डरहरू इस्राएलका मानिसहरूको सङ्ख्‍या गणना गर्न राजाको उपस्थितिबाट निस्‍केर गए ।
5 ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,
तिनीहरू यर्दन नदी तरे र बेसीमा सहरको दक्षिणतिर अरोएरनेर छाउनी हाले । अनि तिनीहरू गाददेख याजेरसम्म हिंडे ।
6 ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.
तिनीहरू गिलाद र तातीम-हदोशीमा आए अनि दान-यान र सीदोनको सेरोफेरोसम्म पुगे ।
7 ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.
तिनीहरू टुरोस अनि हिव्वीहरू र कनानीहरूका सबै सहरका किल्‍लासम्म पुगे । अनि तिनीहरू यहूदाको बर्शेबामा भएको नेगेवतिर गए ।
8 ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.
जब तिनीहरू देशमा सबैतिर गए, तब तिनीहरू नौ महिना बिस दिनको अन्तमा यरूशलेममा फर्केर आए ।
9 ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
त्यसपछि योआबले लडाकु मानिसका जम्‍मा सङ्ख्या राजालाई बताइदिए । इस्राएलमा तरवार चलाउन सक्‍ने साहसी मानिसहरू ८,००,००० थिए र यहूदामा ५,००,००० मानिसहरू थिए ।
10 ೧೦ ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
दाऊदले गणना गरेपछि तिनको हृदय दुःखी भयो । त्यसैले तिनले परमप्रभुलाई भने, “मैले यसो गरेर ठुलो पाप गरेको छु । अब हे परमप्रभु, आफ्नो सेवकको दोष हटाइदिनुहोस्, किनकि मैले धेरै मूर्ख भएर काम गरेको छु ।”
11 ೧೧ ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,
जब दाऊद बिहान उठे, दाऊदका दर्शी गाद अगमवक्‍ताकहाँ परमेश्‍वरको वचन यसो भनेर आयो,
12 ೧೨ “ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು.
“जा र दाऊदलाई भन्, 'परमप्रभु यसो भन्‍नुहुन्छ, “म तँलाई तीन वटा विकल्प रोज्‍न दिन्छु । तिमध्ये एउटा रोज ।”
13 ೧೩ ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.
त्यसैले गाद दाऊदकहाँ गए र तिनलाई भने, “तपाईंको देशमा तीन वर्षको अनकाल आउने छ? वा तपाईंका शत्रुहरूले तपाईंलाई खेद्दा तीन महिनासम्म तपाईं भाग्‍नुहुने छ? वा तपाईंको देशमा तीन दिन रुढी हुने छ? मलाई पठाउनुहुनेलाई मैले के जवाफ दिऊँ अब निर्णय गर्नुहोस् ।”
14 ೧೪ ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.
त्यसपछि दाऊदले गादलाई भने, “म ठुलो कष्‍टमा परेको छु । मानिसको हातमा पर्नुभन्दा परमप्रभुको हातमा नै हामी परौं, किनकि उहाँका दयापूर्ण कामहरू धेरै महान् छन् ।”
15 ೧೫ ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
त्यसैले परमप्रभुले बिहानदेखि तोकिएको समयसम्म इस्राएलमा रुढी पठाउनुभयो र दानदेखि बेर्शेबासम्म सत्तरी हजार मानिसहरू मरे ।
16 ೧೬ ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
जब स्वर्गदूतले यरूशलेमलाई नाश गर्न आफ्‍नो हात त्‍यता पसारे, तब त्‍यसले ल्याउने हानिको कारणले परमप्रभुले आफ्‍नो मन बदल्नुभयो र उहाँले मानिसहरूलाई नाश पारिरहेका स्वर्गदूतलाई भन्‍नुभयो, “पुग्यो! अब तिम्रो हात थाम ।” त्यस बेला स्वर्गदूत यबूसी अरौनाको खलामा खडा भएका थिए ।
17 ೧೭ ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.
अनि जब दाऊदले मानिसहरूलाई आक्रमण गर्ने स्वर्गदूत देखे तब तिनले भने, “मैले पाप गरेको छु, र मैले भ्रष्‍ट किसिमले काम गरेको छु । तर यी भेडाहरू, तिनीहरूले के गरेका छन् र? कृपया, तपाईंको हातले मलाई र मेरो बुबाको परिवारलाई दण्ड दिनुहोस् ।”
18 ೧೮ ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
अनि त्यस दिन गाद दाऊदकहाँ आए र तिनलाई भने, “माथि जानुहोस् र यबूसी अरौनाको खलामा परमप्रभुको निम्‍ति एउटा वेदी बनाउनुहोस् ।”
19 ೧೯ ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
जसरी परमप्रभुले गादलाई गर्ने आज्ञा गर्नुभयो, त्‍यसरी नै दाऊद माथि गए ।
20 ೨೦ ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.
अरौनाले बाहिर हेरे र राजा र तिनका सेवकहरू आइरहेको देखे । त्यसैले अरौना बाहिर गएर आफ्‍नो अनुहार भुईंमा घोप्टो पारेर राजालाई दण्डवत् गरे ।
21 ೨೧ ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.
तब अरौनाले भने, “मेरो मालिक महाराजा आफ्नो सेवककहाँ किन आउनुभएको छ?” दाऊदले जवाफ दिए, “तिम्रो खला किन्‍नलाई ताकि म परमप्रभुको निम्ति एउटा वेदी बनाउन सकौं, जसले गर्दा मानिसहरूबाट रुढी हटाइयोस् ।”
22 ೨೨ ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
अरौनाले दाऊदलाई भने, “ए मेरो मालिक महाराजा, त्‍यो आफ्नैझैं लिनुहोस् । तपाईंको दृष्‍टिमा जे असल छ सो त्‍यसमा गर्नुहोस् । हेर्नुहोस्, होमबलिको निम्ति गोरूहरू अनि दाउराको निम्ति दाइँ गर्ने काठहरू र जुवाहरू छन् ।
23 ೨೩ ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.
यी सबै म अरौनाले मेरो महाराजालाई दिने छु ।” तब तिनले राजालाई भने, “परमप्रभु तपाईंका परमेश्‍वरले तपाईंलाई स्वीकार गर्नुभएको होस् ।”
24 ೨೪ ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
राजाले अरौनालाई भने, “होइन, मैले मूल्य दिएर किन्‍नमा नै जोड दिन्छु । मलाई कुनै मूल्य नपर्ने कुनै पनि कुरा म परमप्रभुलाई होमबलि चढाउँदिनँ ।” त्यसैले दाऊदले खला र गोरुहरूलाई चाँदीका पचास सिक्‍कामा किने ।
25 ೨೫ ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.
दाऊदले त्यहाँ परमप्रभुको निम्ति एउटा वेदी बनाए र त्‍यसमा होमबलि र मेलबलि चढाए । त्यसैले परमप्रभुले देशको निम्‍ति गरिएको प्रार्थनाको जवाफ दिनुभयो र इस्राएलमाथिको रुढी थामियो ।

< ಸಮುವೇಲನು - ದ್ವಿತೀಯ ಭಾಗ 24 >