< ಅಪೊಸ್ತಲರ ಕೃತ್ಯಗಳ 20 >

1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.
इत्थं कलहे निवृत्ते सति पौलः शिष्यगणम् आहूय विसर्जनं प्राप्य माकिदनियादेशं प्रस्थितवान्।
2 ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.
तेन स्थानेन गच्छन् तद्देशीयान् शिष्यान् बहूपदिश्य यूनानीयदेशम् उपस्थितवान्।
3 ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.
तत्र मासत्रयं स्थित्वा तस्मात् सुरियादेशं यातुम् उद्यतः, किन्तु यिहूदीयास्तं हन्तुं गुप्ता अतिष्ठन् तस्मात् स पुनरपि माकिदनियामार्गेण प्रत्यागन्तुं मतिं कृतवान्।
4 ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.
बिरयानगरीयसोपात्रः थिषलनीकीयारिस्तार्खसिकुन्दौ दर्ब्बोनगरीयगायतीमथियौ आशियादेशीयतुखिकत्रफिमौ च तेन सार्द्धं आशियादेशं यावद् गतवन्तः।
5 ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು
एते सर्व्वे ऽग्रसराः सन्तो ऽस्मान् अपेक्ष्य त्रोयानगरे स्थितवन्तः।
6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.
किण्वशून्यपूपोत्सवदिने च गते सति वयं फिलिपीनगरात् तोयपथेन गत्वा पञ्चभि र्दिनैस्त्रोयानगरम् उपस्थाय तत्र सप्तदिनान्यवातिष्ठाम।
7 ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
सप्ताहस्य प्रथमदिने पूपान् भंक्तु शिष्येषु मिलितेषु पौलः परदिने तस्मात् प्रस्थातुम् उद्यतः सन् तदह्नि प्रायेण क्षपाया यामद्वयं यावत् शिष्येभ्यो धर्म्मकथाम् अकथयत्।
8 ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
उपरिस्थे यस्मिन् प्रकोष्ठे सभां कृत्वासन् तत्र बहवः प्रदीपाः प्राज्वलन्।
9 ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
उतुखनामा कश्चन युवा च वातायन उपविशन् घोरतरनिद्राग्रस्तो ऽभूत् तदा पौलेन बहुक्षणं कथायां प्रचारितायां निद्रामग्नः स तस्माद् उपरिस्थतृतीयप्रकोष्ठाद् अपतत्, ततो लोकास्तं मृतकल्पं धृत्वोदतोलयन्।
10 ೧೦ ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.
ततः पौलोऽवरुह्य तस्य गात्रे पतित्वा तं क्रोडे निधाय कथितवान्, यूयं व्याकुला मा भूत नायं प्राणै र्वियुक्तः।
11 ೧೧ ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
पश्चात् स पुनश्चोपरि गत्वा पूपान् भंक्त्वा प्रभातं यावत् कथोपकथने कृत्वा प्रस्थितवान्।
12 ೧೨ ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.
ते च तं जीवन्तं युवानं गृहीत्वा गत्वा परमाप्यायिता जाताः।
13 ೧೩ ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.
अनन्तरं वयं पोतेनाग्रसरा भूत्वास्मनगरम् उत्तीर्य्य पौलं ग्रहीतुं मतिम् अकुर्म्म यतः स तत्र पद्भ्यां व्रजितुं मतिं कृत्वेति निरूपितवान्।
14 ೧೪ ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.
तस्मात् तत्रास्माभिः सार्द्धं तस्मिन् मिलिते सति वयं तं नीत्वा मितुलीन्युपद्वीपं प्राप्तवन्तः।
15 ೧೫ ಅಲ್ಲಿಂದ ಹೊರಟು ಮರುದಿನ ಖೀಯೊಸ್‍ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.
तस्मात् पोतं मोचयित्वा परेऽहनि खीयोपद्वीपस्य सम्मुखं लब्धवन्तस्तस्माद् एकेनाह्ना सामोपद्वीपं गत्वा पोतं लागयित्वा त्रोगुल्लिये स्थित्वा परस्मिन् दिवसेे मिलीतनगरम् उपातिष्ठाम।
16 ೧೬ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
यतः पौल आशियादेशे कालं यापयितुम् नाभिलषन् इफिषनगरं त्यक्त्वा यातुं मन्त्रणां स्थिरीकृतवान्; यस्माद् यदि साध्यं भवति तर्हि निस्तारोत्सवस्य पञ्चाशत्तमदिने स यिरूशालम्युपस्थातुं मतिं कृतवान्।
17 ೧೭ ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
पौलो मिलीताद् इफिषं प्रति लोकं प्रहित्य समाजस्य प्राचीनान् आहूयानीतवान्।
18 ೧೮ ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
तेषु तस्य समीपम् उपस्थितेषु स तेभ्य इमां कथां कथितवान्, अहम् आशियादेशे प्रथमागमनम् आरभ्याद्य यावद् युष्माकं सन्निधौ स्थित्वा सर्व्वसमये यथाचरितवान् तद् यूयं जानीथ;
19 ೧೯ ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.
फलतः सर्व्वथा नम्रमनाः सन् बहुश्रुपातेन यिहुदीयानाम् कुमन्त्रणाजातनानापरीक्षाभिः प्रभोः सेवामकरवं।
20 ೨೦ ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ
कामपि हितकथाां न गोपायितवान् तां प्रचार्य्य सप्रकाशं गृहे गृहे समुपदिश्येश्वरं प्रति मनः परावर्त्तनीयं प्रभौ यीशुख्रीष्टे विश्वसनीयं
21 ೨೧ ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
यिहूदीयानाम् अन्यदेशीयलोकानाञ्च समीप एतादृशं साक्ष्यं ददामि।
22 ೨೨ ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.
पश्यत साम्प्रतम् आत्मनाकृष्टः सन् यिरूशालम्नगरे यात्रां करोमि, तत्र माम्प्रति यद्यद् घटिष्यते तान्यहं न जानामि;
23 ೨೩ ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
किन्तु मया बन्धनं क्लेशश्च भोक्तव्य इति पवित्र आत्मा नगरे नगरे प्रमाणं ददाति।
24 ೨೪ ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
तथापि तं क्लेशमहं तृणाय न मन्ये; ईश्वरस्यानुग्रहविषयकस्य सुसंवादस्य प्रमाणं दातुं, प्रभो र्यीशोः सकाशाद यस्याः सेवायाः भारं प्राप्नवं तां सेवां साधयितुं सानन्दं स्वमार्गं समापयितुुञ्च निजप्राणानपि प्रियान् न मन्ये।
25 ೨೫ ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
अधुना पश्यत येषां समीपेऽहम् ईश्वरीयराज्यस्य सुसंवादं प्रचार्य्य भ्रमणं कृतवान् एतादृशा यूयं मम वदनं पुन र्द्रष्टुं न प्राप्स्यथ एतदप्यहं जानामि।
26 ೨೬ ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.
युष्मभ्यम् अहम् ईश्वरस्य सर्व्वान् आदेशान् प्रकाशयितुं न न्यवर्त्ते।
27 ೨೭ ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.
अहं सर्व्वेषां लोकानां रक्तपातदोषाद् यन्निर्दोष आसे तस्याद्य युष्मान् साक्षिणः करोमि।
28 ೨೮ ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
यूयं स्वेषु तथा यस्य व्रजस्याध्यक्षन् आत्मा युष्मान् विधाय न्ययुङ्क्त तत्सर्व्वस्मिन् सावधाना भवत, य समाजञ्च प्रभु र्निजरक्तमूल्येन क्रीतवान तम् अवत,
29 ೨೯ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.
यतो मया गमने कृतएव दुर्जया वृका युष्माकं मध्यं प्रविश्य व्रजं प्रति निर्दयताम् आचरिष्यन्ति,
30 ೩೦ ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
युष्माकमेव मध्यादपि लोका उत्थाय शिष्यगणम् अपहन्तुं विपरीतम् उपदेक्ष्यन्तीत्यहं जानामि।
31 ೩೧ ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
इति हेतो र्यूयं सचैतन्याः सन्तस्तिष्टत, अहञ्च साश्रुपातः सन् वत्सरत्रयं यावद् दिवानिशं प्रतिजनं बोधयितुं न न्यवर्त्ते तदपि स्मरत।
32 ೩೨ ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
इदानीं हे भ्रातरो युष्माकं निष्ठां जनयितुं पवित्रीकृतलोकानां मध्येऽधिकारञ्च दातुं समर्थो य ईश्वरस्तस्यानुग्रहस्य यो वादश्च तयोरुभयो र्युष्मान् समार्पयम्।
33 ೩೩ ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
कस्यापि स्वर्णं रूप्यं वस्त्रं वा प्रति मया लोभो न कृतः।
34 ೩೪ ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.
किन्तु मम मत्सहचरलोकानाञ्चावश्यकव्ययाय मदीयमिदं करद्वयम् अश्राम्यद् एतद् यूयं जानीथ।
35 ೩೫ ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
अनेन प्रकारेण ग्रहणद् दानं भद्रमिति यद्वाक्यं प्रभु र्यीशुः कथितवान् तत् स्मर्त्तुं दरिद्रलोकानामुपकारार्थं श्रमं कर्त्तुञ्च युष्माकम् उचितम् एतत्सर्व्वं युष्मानहम् उपदिष्टवान्।
36 ೩೬ ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.
एतां कथां कथयित्वा स जानुनी पातयित्वा सर्वैः सह प्रार्थयत।
37 ೩೭ ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.
तेन ते क्रन्द्रन्तः
38 ೩೮ ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.
पुन र्मम मुखं न द्रक्ष्यथ विशेषत एषा या कथा तेनाकथि तत्कारणात् शोकं विलापञ्च कृत्वा कण्ठं धृत्वा चुम्बितवन्तः। पश्चात् ते तं पोतं नीतवन्तः।

< ಅಪೊಸ್ತಲರ ಕೃತ್ಯಗಳ 20 >