< ಅಪೊಸ್ತಲರ ಕೃತ್ಯಗಳ 4 >

1 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
जब पत्रुस र यूहन्‍ना मानिसहरूसँग बोलिरहेका थिए, पूजाहारीहरू, मन्दिरका मुख्य व्यक्ति र सदूकीहरू तिनीहरूकहाँ आए ।
2 ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
पत्रुस र यूहन्‍नाले मानिसहरूलाई येशूको बारेमा सिकाइरहेका र उहाँको मृत्युबाट पुनरुत्थान हुनुभएको घोषणा गरिरहेका कारण उनीहरूलाई साह्रै गाह्रो भयो ।
3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
उनीहरूले तिनीहरूलाई पक्रे र अर्को बिहानसम्मका लागि झ्यालखानामा हालिदिए, किनभने त्यतिबेला साँझ परिसकेको थियो ।
4 ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.
तर सन्देश सुनेका मानिसहरूमध्ये धेरै जनाले विश्‍वास गरे र विश्‍वास गर्ने मानिसहरूको सङ्ख्या करिब पाँच हजार थियो ।
5 ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.
अर्को दिन तिनीहरूका शासकहरू, एल्डरहरू र शास्‍त्रीहरू यरूशलेममा जम्मा भए ।
6 ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.
प्रधान पूजाहारी हन्‍नास, कैयाफा, यूहन्‍ना, अलेक्जेन्डर र प्रधान पूजाहारीका अरू सबै आफन्तहरू त्यहाँ थिए ।
7 ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,
जब उनीहरूले पत्रुस र यूहन्‍नालाई उनीहरूका माझमा राखे तब उनीहरूले तिनीहरूलाई सोधे, “तिमीहरूले कुन शक्ति वा कुन नाउँमा यसो गरेका हौ?”
8 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ,
अनि पवित्र आत्माले भरिएर पत्रुसले उनीहरूलाई भने, “हे जनताहरूका शासकहरू र एल्डरहरू हो,
9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
यदि यो मानिसलाई कसरी ठिक पारियो भनी यो बिरामी मानिसलाई गरेको असल कामको बारेमा आज हामीलाई नै प्रश्‍न गरिदैँछ भने,
10 ೧೦ ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
तपाईंहरू सबै र इस्राएलका सबै मानिसहरूलाई यो थाहा होस् कि, तपाईंहरूले क्रुसमा टाँग्‍नुभएका र परमेश्‍वरले मृत्युबाट जीवित पार्नुभएका नासरतका येशू ख्रीष्‍टको नाउँद्वारा नै भएको हो कि यो मानिस तपाईंहरूको बिचमा यहाँ स्वस्थ भएर उभिएको छ ।
11 ೧೧ “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.
येशू ख्रीष्‍ट त्यो ढुङ्गा हुनुहुन्छ जसलाई तपाईं घर निर्माणकर्ताहरूले इन्कार गर्नुभयो तर उहाँ नै मुख्य कुनेढुङ्गा हुनुभयो ।
12 ೧೨ ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
अरू कुनै व्यक्तिमा मुक्ति छैन किनभने हामी बचाइनका लागि स्वर्गमुनि मानिसहरूका माझमा अर्को कुनै नाउँ दिइएको छैन ।”
13 ೧೩ ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
जब तिनीहरूले पत्रुस र यूहन्‍नाको साहस देखे र महसुस गरे कि उनीहरू साधारण र आशिक्षित मानिसहरू थिए, तब पत्रुस र यूहन्‍ना येशूसँगै रहने गर्दथे भन्‍ने कुरा थाहा पाएर तिनीहरू छक्‍क परे ।
14 ೧೪ ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
उनीहरूले त्यो निको भएको मानिस तिनीहरूसँगै उभिरहेको देखेको कारण तिनीहरूका विरुद्ध केही बोल्न सकेनन् ।
15 ೧೫ ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,
तर प्रेरितहरूलाई परिषद् बैठक छोड्न आज्ञा दिएपछि उनीहरू एकआपसमा कुरा गर्न थाले ।
16 ೧೬ “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
उनीहरूले भने, “यी मानिसहरूलाई हामी के गरौँ? किनकि तिनीहरूद्वारा गरिएको उल्लेखनीय आश्‍चर्यकर्मको वास्तविकता यरूशलेममा बस्‍ने हरेक मनिसलाई थाहा छ; हामी यसलाई इन्कार गर्न सक्दैनौँ ।
17 ೧೭ ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
तर यो कुरा अझ बढी मानिसहरू बिचमा नफैलियोस् भनेर तिनीहरूलाई यो नाउँमा अब उसो कसैसँग पनि नबोल्नू भनी चेताउनी दिऔँ ।”
18 ೧೮ ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
तिनीहरूले पत्रुस र यूहन्‍नालाई भित्र बोलाए र येशूको नाउँमा बोल्दै नबोल्नू न त शिक्षा नै दिनू भनी आज्ञा दिए ।
19 ೧೯ ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
तर पत्रुस र यूहन्‍नाले उनीहरूलाई जवाफ दिए र भने, “परमेश्‍वरको नजरमा उहाँको भन्दा बढी तपाईंहरूको आज्ञापालन गर्नु उचित हो कि होइन, तपाईंहरू नै न्याय गर्नुहोस् ।
20 ೨೦ ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.
किनकि हामीले देखेका र सुनेका कुराहरूको बारेमा हामी नबोली रहन सक्दैनौँ ।”
21 ೨೧ ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
अझ बढी चेताउनी दिएपछि उनीहरूले पत्रुस र यूहन्‍नालाई जान दिए । उनीहरूले तिनीहरूलाई दण्ड दिनको निम्ति कुनै पनि दोष भेट्टाउन सकेनन्, किनभने तिनीहरूले जे गरेका थिए त्यसको निम्ति मानिसहरूले परमेश्‍वरको प्रशंसा गरिरहेका थिए ।
22 ೨೨ ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
यो चंगाइको आश्‍चर्यकर्म अनुभव गर्ने मानिस चालिस वर्षभन्दा माथिका थिए ।
23 ೨೩ ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
तिनीहरूलाई स्वतन्‍त्र छोडेपछि, पत्रुस र यूहन्‍ना आफ्नै मानिसहरूकहाँ आए र प्रधान पूजाहारीहरू र एल्डरहरूले तिनीहरूलाई भनेका सबै कुराको प्रतिवेदन दिए ।
24 ೨೪ ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು; , “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
तिनीहरूले यो सुनेपछि आफ्ना आवाज परमेश्‍वरमा एकसाथ उचाले र भने, “हे प्रभु, तपाईं जसले आकास र पृथ्वी र समुद्र र त्यसमा भएका सबै थोक बनाउनुभयो,
25 ೨೫ ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
तपाईं जो पवित्र आत्माद्वारा तपाईंका सेवक हाम्रा पिता दाऊदको मुखद्वारा बोल्नुभयो, ‘अरू जातिहरू किन क्रोधित भए र मानिसहरूले अर्थहीन कुराहरू कल्पना गरे?
26 ೨೬ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?
परमप्रभु र उहाँका ख्रीष्‍टको विरुद्धमा पृथ्वीका राजाहरू एक मत भए र शासकहरू एकसाथ भेला भए ।
27 ೨೭ ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
वास्तवमा, गैरयहूदीहरू र इस्राएलका मानिसहरूसँगै हेरोद र पन्तियस पिलातस दुवै यो शहरमा तपाईंले अभिषेक गर्नुभएका तपाईंका पवित्र सेवक येशूको विरुद्धमा भेला भए ।
28 ೨೮ ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
तपाईंको बाहुली र इच्छाले यो हुनुभन्दा पहिले नै निर्णय गर्नुभएको सबै कुरा गर्नलाई तिनीहरू सँगसँगै भेला भए ।
29 ೨೯ ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
हे प्रभु, अब तिनीहरूका चेताउनीलाई हेर्नुहोस् र तपाईंका सेवकहरूलाई तपाईंको वचन पुरा साहससित बोल्न दिनुहोस् ।
30 ೩೦ ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.
ताकि जब तपाईंले निको पार्नका लागि आफ्नो हात पसार्नुहुन्छ तपाईंका पवित्र सेवक येशूको नाउँद्वारा चिन्हहरू र आश्‍चर्यहरू होऊन् ।”
31 ೩೧ ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
तिनीहरूले प्रार्थना गरेर सिध्याएपछि तिनीहरू भेला भएको ठाउँ हल्लियो र तिनीहरू सबै पवित्र आत्माले भरिए र तिनीहरूले परमेश्‍वरको वचन साहससित बोले ।
32 ೩೨ ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
विश्‍वास गर्नेहरूको त्यो ठुलो समूह एउटै हृदय र आत्माका थिए; तिनीहरूमध्ये कसैले पनि आफूसँग भएको कुनै पनि थोक वास्तवमा उसको आफ्नो हो भनेनन्, तर तिनीहरूका सबै थोक साझा थिए ।
33 ೩೩ ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
ठुलो शक्तिसाथ प्रेरितहरूले प्रभु येशूको पुनरुत्थानको बारेमा गवाही घोषणा गर्दैथिए र उनीहरू सबैमाथि ठुलो अनुग्रह थियो ।
34 ೩೪ ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
तिनीहरूमध्ये कुनै थोकको अभाव भएको कुनै एक व्यक्ति पनि थिएन किनभने तिनीहरू सबैले आफूसँग भएका जग्गाहरू र घरहरू बेचेर आएका पैसा ल्याउँथे
35 ೩೫ ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.
र प्रेरितहरूका पाउमा राखिदिन्थे र आवश्यकतापरेअनुसार हरेक विश्‍वसीलाई वितरण गरिन्थ्यो ।
36 ೩೬ ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
साइप्रसबाट आएका योसेफ नाउँका एक जना मानिस थिए जो लेवी कुलका थिए जसलाई प्रेरितहरूले बारनाबास (जसको अर्थ उत्साहको पुत्र हुन्छ) नाउँ राखिदिएका थिए ।
37 ೩೭ ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.
उनीसँग भएको जमिन उनले बेचे र त्यसको पैसा ल्याएर प्रेरितहरूको पाउमा राखिदिए ।

< ಅಪೊಸ್ತಲರ ಕೃತ್ಯಗಳ 4 >