< ಆಮೋಸನು 8 >

1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು!
परमप्रभु परमेश्‍वरले मलाई यो कुरा देखाउनुभयो। ग्रीष्‍म ऋतुको फलको एउटा डालो हेर ।
2 ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.
उहाँले भन्‍नुभयो, “आमोस, तँ के देख्‍छस्?” मैले भनें, “ग्रीष्‍म ऋतुको फलको एउटा डालो ।” तब परमप्रभुले मलाई यसो भन्‍नुभयो, “मेरा मानिस, इस्राएलको निम्ति अन्‍त्‍य आएको छ । म तिनीहरूलाई अब बाँकी छोड्नेछैनँ ।
3 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”
यो परमप्रभु परमेश्‍वरको घोषणा हो, त्यो दिनमा मन्दिरका गीतहरू रुवाबासीमा बद्लिनेछन्, धेरै लासहरू जता-ततै फलिनेछन्! शान्‍त हो!”
4 “ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
खाँचोमा परेकाहरूलाई थिचोमिचो गर्नेहरू, र गरीबहरूलाई देशबाट हटाउनेहरू, यो सुन ।
5 ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?
तिनीहरू भन्छन्, “औंसी कहिले समाप्‍त हुन्छ, ताकि हामीहरूले फेरि अन्‍न बेच्‍न सकौं? शबाथ दिन कहिले समाप्‍त हुन्छ, ताकि हामीले गहुँ बेच्‍न सकौं? हामीले झुटो नापले ठगी गर्दा, हामी मानालाई सानो बनाउनेछौं र मुल्यलाई बढाउनेछौं ।
6 ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!
यसरी नै हामीले खराब गहुँ बेच्‍न सक्‍छौं, गरीबलाई चाँदीले, र खाँचोमा परेकाहरूलाई एक जोर जुत्ताले किन्‍न सक्‍छौं ।”
7 ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
परमप्रभुले याकूबको घमण्डमा यसरी शपथ खानुभएको छ, “निश्‍चय नै तिनीहरूका कुनै पनि कामहरू म कदापि बिर्सनेछैनँ ।”
8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.
यसको निम्‍ति जमिन काम्‍नेछैन, अनि त्यसमा बसोबास गर्ने हरेकले विलाप गर्नेछैनन् र? त्यसको सबै थोक नील नदीझैं माथि उठ्नेछ, र मिश्रको नदीझैं त्यो छचल्‍किनेछ र डुब्‍नेछ ।
9 ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.
“यो परमप्रभु परमेश्‍वरको घोषणा हो— त्यो दिन यस्‍तो हुनेछ, सुर्यलाई दिउँसै अस्ताउनेछु म बनाउनेछु, र पृथ्वीलाई मध्यदिनमा नै अँध्यारो म बनाउनेछु ।
10 ೧೦ ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
तिमीहरूका चाडहरूलाई विलापमा, अनि तिमीहरूका सबै गीतलाई रुवाईमा म बद्लिनेछु । तिमीहरू सबैलाई भाङ्‍ग्रा लाउने, र हरेकले कपाल खौरन म बनाउनेछु । एक मात्र छोराको निम्ति विलाप गरेझैं, र त्यसको अन्‍त्‍यमा तीतो म बनाउनेछु ।
11 ೧೧ ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
हेर्, यस्‍ता दिनहरू आउँदैछन्, यो परमप्रभु परमेश्‍वरको घोषणा हो, जति बेला देशमा म अनिकाल पठाउनेछु, त्‍यो रोटीको अनिकाल होइन, न त पानीको तिर्खाको हो, तर त्‍यो परमप्रभुको वचन सुन्‍ने कुराको हो।
12 ೧೨ ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.
परमप्रभुको वचनको खोज्‍नलाई तिनीहरू एक समुद्रदेखि अर्को समुद्रसम्‍म धर्मराउनेछन्, र उत्तरदेखि पूर्वसम्म दौडनेछन्, तर तिनीहरूले त्यो भेट्टाउनेछैनन् ।
13 ೧೩ ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು.
त्यो दिनमा सुन्दरी कुमारीहरू र जवान मानिसहरू तिर्खाले मूर्छा हुनेछन् ।
14 ೧೪ ‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.
सामरियाको पापमा शपथ खानेहरू र ‘ए दान, तेरो देवता जीवित भएझैं,’ र ‘बेर्शेबाको देवता जीवित भएझैं,’ भनेर भन्‍नेहरू, तिनीहरू पतन हुनेछन् र फेरि कहिल्यै उठ्नेछैनन् ।”

< ಆಮೋಸನು 8 >