< ಆಮೋಸನು 9 >

1 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
رَأَيْتُ ٱلسَّيِّدَ قَائِمًا عَلَى ٱلْمَذْبَحِ، فَقَالَ: «اِضْرِبْ تَاجَ ٱلْعَمُودِ حَتَّى تَرْجُفَ ٱلْأَعْتَابُ، وَكَسِّرْهَا عَلَى رُؤُوسِ جَمِيعِهِمْ، فَأَقْتُلَ آخِرَهُمْ بِٱلسَّيْفِ. لَا يَهْرُبُ مِنْهُمْ هَارِبٌ وَلَا يُفْلِتُ مِنْهُمْ نَاجٍ.١
2 ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. (Sheol h7585)
إِنْ نَقَبُوا إِلَى ٱلْهَاوِيَةِ فَمِنْ هُنَاكَ تَأْخُذُهُمْ يَدِي، وَإِنْ صَعِدُوا إِلَى ٱلسَّمَاءِ فَمِنْ هُنَاكَ أُنْزِلُهُمْ. (Sheol h7585)٢
3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.
وَإِنِ ٱخْتَبَأُوا فِي رَأْسِ ٱلْكَرْمَلِ فَمِنْ هُنَاكَ أُفَتِّشُ وَآخُذُهُمْ، وَإِنِ ٱخْتَفَوْا مِنْ أَمَامِ عَيْنَيَّ فِي قَعْرِ ٱلْبَحْرِ فَمِنْ هُنَاكَ آمُرُ ٱلْحَيَّةَ فَتَلْدَغُهُمْ.٣
4 ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”
وَإِنْ مَضَوْا فِي ٱلسَّبْيِ أَمَامَ أَعْدَائِهِمْ فَمِنْ هُنَاكَ آمُرُ ٱلسَّيْفَ فَيَقْتُلُهُمْ، وَأَجْعَلُ عَيْنَيَّ عَلَيْهِمْ لِلشَّرِّ لَا لِلْخَيْرِ».٤
5 ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.
وَٱلسَّيِّدُ رَبُّ ٱلْجُنُودِ ٱلَّذِي يَمَسُّ ٱلْأَرْضَ فَتَذُوبُ، وَيَنُوحُ ٱلسَّاكِنُونَ فِيهَا، وَتَطْمُو كُلُّهَا كَنَهْرٍ وَتَنْضُبُ كَنِيلِ مِصْرَ.٥
6 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.
ٱلَّذِي بَنَى فِي ٱلسَّمَاءِ عَلَالِيَهُ وَأَسَّسَ عَلَى ٱلْأَرْضِ قُبَّتَهُ، ٱلَّذِي يَدْعُو مِيَاهَ ٱلْبَحْرِ وَيَصُبُّهَا عَلَى وَجْهِ ٱلْأَرْضِ، يَهْوَهُ ٱسْمُهُ.٦
7 ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?
«أَلَسْتُمْ لِي كَبَنِي ٱلْكُوشِيِّينَ يَا بَنِي إِسْرَائِيلَ، يَقُولُ ٱلرَّبُّ؟ أَلَمْ أُصْعِدْ إِسْرَائِيلَ مِنْ أَرْضِ مِصْرَ، وَٱلْفِلِسْطِينِيِّينَ مِنْ كَفْتُورَ، وَٱلْأَرَامِيِّينَ مِنْ قِيرٍ؟٧
8 ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.
هُوَذَا عَيْنَا ٱلسَّيِّدِ ٱلرَّبِّ عَلَى ٱلْمَمْلَكَةِ ٱلْخَاطِئَةِ، وَأُبِيدُهَا عَنْ وَجْهِ ٱلْأَرْضِ. غَيْرَ أَنِّي لَا أُبِيدُ بَيْتَ يَعْقُوبَ تَمَامًا، يَقُولُ ٱلرَّبُّ.٨
9 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.
لِأَنَّهُ هَأَنَذَا آمُرُ فَأُغَرْبِلُ بَيْتَ إِسْرَائِيلَ بَيْنَ جَمِيعِ ٱلْأُمَمِ كَمَا يُغَرْبَلُ فِي ٱلْغُرْبَالِ، وَحَبَّةٌ لَا تَقَعُ إِلَى ٱلْأَرْضِ.٩
10 ೧೦ ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.
بِٱلسَّيْفِ يَمُوتُ كُلُّ خَاطِئِي شَعْبِي ٱلْقَائِلِينَ: لَا يَقْتَرِبُ ٱلشَّرُّ، وَلَا يَأْتِي بَيْنَنَا.١٠
11 ೧೧ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
«فِي ذَلِكَ ٱلْيَوْمِ أُقِيمُ مِظَلَّةَ دَاوُدَ ٱلسَّاقِطَةَ، وَأُحَصِّنُ شُقُوقَهَا، وَأُقِيمُ رَدْمَهَا، وَأَبْنِيهَا كَأَيَّامِ ٱلدَّهْرِ.١١
12 ೧೨ ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ.
لِكَيْ يَرِثُوا بَقِيَّةَ أَدُومَ وَجَمِيعَ ٱلْأُمَمِ ٱلَّذِينَ دُعِيَ ٱسْمِي عَلَيْهِمْ، يَقُولُ ٱلرَّبُّ، ٱلصَّانِعُ هَذَا.١٢
13 ೧೩ ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.
هَا أَيَّامٌ تَأْتِي، يَقُولُ ٱلرَّبُّ، يُدْرِكُ ٱلْحَارِثُ ٱلْحَاصِدَ، وَدَائِسُ ٱلْعِنَبِ بَاذِرَ ٱلزَّرْعِ، وَتَقْطُرُ ٱلْجِبَالُ عَصِيرًا، وَتَسِيلُ جَمِيعُ ٱلتِّلَالِ.١٣
14 ೧೪ ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.
وَأَرُدُّ سَبْيَ شَعْبِي إِسْرَائِيلَ فَيَبْنُونَ مُدُنًا خَرِبَةً وَيَسْكُنُونَ، وَيَغْرِسُونَ كُرُومًا وَيَشْرَبُونَ خَمْرَهَا، وَيَصْنَعُونَ جَنَّاتٍ وَيَأْكُلُونَ أَثْمَارَهَا.١٤
15 ೧೫ ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.
وَأَغْرِسُهُمْ فِي أَرْضِهِمْ، وَلَنْ يُقْلَعُوا بَعْدُ مِنْ أَرْضِهِمِ ٱلَّتِي أَعْطَيْتُهُمْ، قَالَ ٱلرَّبُّ إِلَهُكَ».١٥

< ಆಮೋಸನು 9 >