< ದಾನಿಯೇಲನು 2 >

1 ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.
नबुखद्नेस्सर राजाच्या कारर्कीदीच्या दुसऱ्या वर्षी त्यास स्वप्न पडले तो बेचैन झाला आणि झोपू शकला नाही.
2 ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.
तेव्हा राजाने फर्मान काढला की, जादूगार आणि ज्योतिषी जाणणारे तसेच मांत्रिक आणि ज्ञानी लोक ह्यांनी यावे आणि राजाला ते स्वप्न सांगावे, म्हणून ते राजासमोर हजर झाले.
3 ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.
राजा त्यांना म्हणाला, “मला एक स्वप्न पडले आहे आणि त्याचा अर्थ जाणण्यास माझे मन व्याकूळ झाले आहे.”
4 ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.
तेव्हा ज्ञानी लोक राजाशी आरामी भाषेत बोलले “महाराज चिरायू असा! तुमच्या सेवकांना तुमचे स्वप्न सांगा आणि आम्ही त्याचा अर्थ तुम्हास प्रगट करू!”
5 ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.
राजाने खास्दी लोकांस उत्तर दिले, “हा ठराव होऊन चुकला आहे जर तुम्ही मला स्वप्न आणि त्याचा अर्थ सांगणार नाही तर तुमच्या शरीराचे तुकडे केले जातील आणि तुमच्या घरांचे उकिरडे केले जातील.
6 ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
पण जर तुम्ही मला स्वप्न आणि त्याचा अर्थ सांगाल तर तुम्हास माझ्याकडून भेट, पारितोषिक आणि मोठा मान मिळेल. यास्तव तुम्ही मला स्वप्न व त्याचा अर्थ सांगा.”
7 ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.
ते पुन्हा त्यास म्हणाले, “महाराजांनी आपल्या सेवकांस स्वप्न सांगावे म्हणजे आम्ही त्याचा अर्थ सांगू.”
8 ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.
राजाने उत्तर दिले, “मला ठाऊक आहे तुम्ही वेळ काढत आहात; पाहिजे कारण तुम्हास ठाऊक आहे की, माझा ठराव झालेला आहे.
9 ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
पण जर तुम्ही मला स्वप्न सांगितले नाही तर तुमच्यासाठी एकच शिक्षा आहे. म्हणून माझे मन बदलत नाही तोपर्यंत तुम्ही खोट्या आणि फसव्या गोष्टी सहमत करून मला सांगाव्या असे तुमचे ठरले आहे. म्हणून मला स्वप्न सांगा म्हणजे मला समजेल तुम्ही त्याचा उलगडा करु शकता.”
10 ೧೦ ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
१०खास्दी लोकांनी राजास उत्तर केले, “या जगात असा कोणताच मनुष्य नाही जो राजाची ही मागणी पूर्ण करेल असा कोणताच महान आणि प्रतापी राजा नाही ज्याने असे मागणे ज्योतिषी, भुतविद्या जाणणारे आणि ज्ञानी लोकांस केली असेल.
11 ೧೧ ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.
११महाराज जी गोष्ट मागतात ती कठीण आहे आणि देवाशिवाय कोणीही नाही जो हे सांगेल कारण देव मानवात राहत नाही.”
12 ೧೨ ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.
१२हे ऐकून राजा रागाने संतापला आणि त्याने आज्ञा केली की, बाबेलमध्ये जे ज्ञानाविषयी ओळखले जातात त्यांचा नाश करण्यात यावा.
13 ೧೩ ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.
१३हे फर्मान निघाले म्हणून जे त्यांच्या ज्ञानासाठी ओळखले जात होते त्यास मरणास सामोरे जावे लागणार होते, आणि लोक दानीएल आणि त्यांच्या मित्रांना शोधू लागले यासाठी की, त्यांचा घात करावा.
14 ೧೪ ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,
१४तेव्हा दानीएलाने अंगरक्षकांचा प्रधान अर्योक जो, बाबेलातील ज्ञानांचा घात करायला निघाला होता, त्यास दुरदर्शीपणाने आणि विचारपूर्वक म्हणाला.
15 ೧೫ “ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.
१५दानीएल राजाच्या सेनापतीला म्हणाला, “राजाकडून हा असा तातडीचा हुकूम का निघाला?” तेव्हा अर्योकने दानीएलास काय घडले ते सांगितले.
16 ೧೬ ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು.
१६मग दानीएलाने आत जाऊन राजास विनंती केली की, “त्याला समय द्यावा म्हणजे त्यास महाराजाला त्याच्या स्वप्नाचा उलगडा सांगता येईल.”
17 ೧೭ ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,
१७तेव्हा दानीएललाने आपल्या घरात जाऊन आपले सोबती हनन्या, मीशाएल व अजऱ्या यांना ती गोष्ट कळवली,
18 ೧೮ “ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.
१८त्याने त्यांना विनंती केली की, या रहस्याविषयी स्वर्गीय देवाने दया करावी असे त्यांनी देवाजवळ मागावे म्हणजे बाबेलाच्या इतर ज्ञान्यांसोबत त्याचा आणि त्याच्या सहकाऱ्यांचा घात होऊ नये.
19 ೧೯ ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,
१९त्या रात्री दानीएलास दृष्टांताद्वारे, या रहस्याचा उलगडा झाला. त्यानंतर त्याने स्वर्गीय देवाचे स्तवन केले.
20 ೨೦ “ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.
२०आणि तो म्हणाला, “देवाच्या नामाचे सदासर्वदा स्तवन होवो, कारण ज्ञान आणि सामर्थ्य त्याचे आहे.”
21 ೨೧ ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
२१तो समय आणि ऋतु बदलतो, तो राजास काढतो आणि दुसऱ्यास सिंहासनावर बसवून राजे करतो; तो ज्ञान्यास आणि विवेकवंतास शहाणपण देतो.
22 ೨೨ ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.
२२तो गुढ आणि गहन गोष्टी प्रगट करतो, कारण अंधारात काय आहे हे तो जाणतो, आणि प्रकाश त्यामध्ये वसतो.
23 ೨೩ ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.
२३माझ्या पूर्वजाच्या देवा, मी तुझे आभार मानतो आणि तुझे स्तवन करतो, कारण तू मला ज्ञान आणि सामर्थ्य दिले; आणि जे आम्ही तुझ्याजवळ मागितले ते सर्व तू आता मला कळवले आहे म्हणून मी तुझे उपकार मानतो व तुझी स्तुती करतो, कारण तू राजाची गोष्ट आम्हास कळविली आहे.
24 ೨೪ ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.
२४हे सगळे झाल्यानंतर दानीएल ज्याची नेमणूक राजाने बाबेलाच्या सर्व ज्ञानी लोकांचा वध करण्यास ज्याची नेमणूक केली होती त्या अर्योकाकडे जाऊन म्हणाला, “बाबेलाच्या ज्ञानी लोकांस ठार करु नको, तर मला राजासमोर घेऊन जा म्हणजे मी त्यास स्वप्न आणि त्याचा अर्थ सांगेन.”
25 ೨೫ ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು.
२५नंतर अर्योकाने दानीएलास लवकर राजासमोर नेऊन म्हटले, “यहूदाच्या बंदीवानात मला एक मनुष्य सापडला आहे जो राज्याच्या स्वप्नाचा अर्थ सांगेल.”
26 ೨೬ ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.
२६राजाने बेल्टशस्सर नाव दिलेल्या दानीएलास म्हटले, “माझे स्वप्न आणि त्याचा अर्थ सांगण्यास तू कुशल आहेस काय?”
27 ೨೭ ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.
२७दानीएलाने राजास उत्तर दिले, “राजाचे गुढ प्रकट करण्याची कुशलता, ज्ञानी, व भुतविद्या जाणणारे, जादूगार किंवा ज्योतिषी त्यांच्याकडे नाही.
28 ೨೮ ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
२८तथापी, एक देव आहे जो स्वर्गात राहतो तो रहस्य प्रगट करतो आणि त्याने भविष्यात होणारी घटना राजा नबुखद्नेस्सर आपणास कळविली आहे. तुम्ही आपल्या बिछान्यात पडले असता तुमचे स्वप्न आणि दृष्टांत तो असा.
29 ೨೯ “ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.
२९आपण जसे बिछान्यात पडून विचार करत होता तेव्हा आपल्या मनात हे रहस्य प्रगट करणाऱ्याने आपणास पुढे होणारी घटना कळविली.
30 ೩೦ ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.
३०आता माझी गोष्ट, ती अशी की; हे रहस्य मला उलगडते ते यामुळे नाही की मी इतर मनुष्यांपेक्षा अधिक ज्ञानी आहे, तर हे रहस्य यासाठी उलगडले की, राजा आपण याचा अर्थ समजावा व जो आपल्या मनातील गहन विचार समजावे.
31 ೩೧ “ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.
३१राजा आपण, आपल्या डोळ्यापुढे एक मोठा पुतळा पाहिला हा पुतळा शक्तीशाली आणि तेजोमय असा तुमच्यासमोर उभा राहिला, त्याचे तेज भयावह होते.
32 ೩೨ ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,
३२त्या पुतळ्याचे डोके उत्तम सोन्याचे होते, त्याची छाती व हात चांदीचे होते, त्यांचा मधला भाग आणि मांडया पितळेच्या.
33 ೩೩ ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು.
३३आणि त्याचे पाय लोखंडाचे होते त्याची पावले काही भाग लोखंडाची आणि काही भाग मातीची होती.
34 ೩೪ “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.
३४तुम्ही वर पाहत होता तेव्हा कोणा मनुष्याचा हात लागल्यावाचून एक दगड छेदला गेला आणि त्याने त्या पुतळ्याच्या लोखंडाच्या व मातीच्या पावलांवर आदळून त्यांचे तुकडे तुकडे केले.
35 ೩೫ ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
३५त्यानंतर लोखंड, माती, पितळ, चांदी आणि सोने यांचे एकाच वेळी तुकडे झाले आणि ते उन्हाळ्यातील खेळ्यातल्या भुश्याप्रमाणे झाले. वारा त्यांना घेऊन गेला आणि त्यांचा मागमूस राहिला नाही. पण तो दगड जो पुतळयावर आदळला होता त्यांचा मोठा पर्वत होऊन त्याने सर्व पृथ्वी व्यापली.
36 ೩೬ “ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.
३६हे आपले स्वप्न आहे राजा, आता आम्ही त्याचा उलगडा सांगतो.
37 ೩೭ ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
३७राजा आपण, राजाधिराज आहात ज्यास स्वर्गाच्या देवाने राज्य, सामर्थ्य, बल आणि सन्मान दिला आहे.
38 ೩೮ ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.
३८त्याने तुम्हास त्या जागा दिल्या जिथे माणसे राहतात. त्याने तुमच्या आधीन वनपशू आणि आकाशातील पक्षी केले आहेत आणि तुम्हास त्याचा शासक बनविले आहे, तुम्ही त्या पुतळ्याचे सुवर्ण मस्तक आहात.
39 ೩೯ “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.
३९आपल्यानंतर आपणापेक्षा कनिष्ठ असे राज्य उदयास येईल, आणि पितळेचे असे तिसरे राज्य सर्व पृथ्वीवर सत्ता करतील.
40 ೪೦ “ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.
४०तेथे चौथे राज्य असेल जे लोखंडासारखे मजबूत लोखंड तुकडे करतो हे त्यांचे तुकडे करून त्यांचा भुगा करील.
41 ೪೧ “ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.
४१जसे आपण पाहिले की, पावले आणि बोटे काही भाग भाजलेल्या मातीचा आणि काही भाग लोखंडाचा होता, म्हणून हे राज्य विभागलेले राहील, काही भागात लोखंडाची मजबुती राहील तसेच जसे आपण लोखंड मातीत मिसळलेला पाहिले.
42 ೪೨ ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.
४२जशी पायांची बोटे अंशत: लोखंडाची आणि अंशत: मातीची बनली होती तसे ते राज्य असेल अंशत: बळकट आणि अंशत: ठिसूळ असे होईल.
43 ೪೩ ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.
४३जसे आपण पाहिले लोखंड मऊ माती सोबत मिसळले होते, तसे लोक मिसळलेले राहतील, जसे लोखंड व माती एक होत नाही तसे हे लोकही एकत्र राहणार नाही.
44 ೪೪ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
४४त्या राजाच्या दिवसात स्वर्गीय देव एका राज्याची स्थापना करील, त्याचा कधीही नाश होणार नाही, त्यास कोणी जिंकणार नाही ते तर सर्व राज्याचे तुकडे करून त्या सर्वांचा नाश करील व ते सर्व काळ टिकेल.
45 ೪೫ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
४५आपण जसे पाहिले कोणी मनुष्याचा हात न लागता एक दगड पर्वतांवरून तुटून पडला त्याने लोखंड, पितळे, माती, चांदी आणि सोने यांचे तुकडे केले, त्या महान परमेश्वराने राजा पुढे होणाऱ्या घटना कळविल्या आहेत. हे स्वप्न सत्य असून त्याचा हा विश्वसनीय उलगडा आहे.”
46 ೪೬ ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.
४६राजा नबुखद्नेस्सराने पालथे पडून दानीएलास साष्टांग दंडवत घातले आणि आज्ञा केली की त्यास अर्पण करून धूप दाखवा.
47 ೪೭ ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.
४७राजा दानीएलास म्हणाला, “खरोखर तुझा देव सर्व देवांचा देव आहे, राजांचा राजा आहे, तो जो रहस्यांचा उलगडा करतो, म्हणून तुला हे रहस्या प्रगट करता आले आहे.”
48 ೪೮ ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.
४८नंतर राजाने दानीएलास मोठा सन्मान आणि अद्भुत भेटवस्तू दिल्या. त्यास अवघ्या बाबेलातील परगण्याची सत्ता दिली आणि दानीएल बाबेलाच्या सर्व ज्ञानी लोकांचा मुख्य प्रशासक झाला.
49 ೪೯ ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.
४९दानीएलाने राजास केलेल्या विनंतीवरुन, राजाने शद्रुख, मेशख आणि अबेदनगो ह्यास बाबेलाच्या प्रांताचे प्रशासक नेमले पण दानीएल राजदरबारीच राहिला.

< ದಾನಿಯೇಲನು 2 >