< ದಾನಿಯೇಲನು 3 >

1 ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
नबुखद्नेस्सर राजाने सोन्याचा एक पुतळा केला त्याची उंची साठ हात आणि रुंदी सात हात होती, त्याची स्थापना त्याने बाबेल प्रांताच्या दुरा मैदानात केली.
2 ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.
नंतर नबुखद्नेस्सर राजाने स्थापलेल्या त्या पुतळ्याची प्रतिष्ठापना करण्यासाठी एकत्र होण्यास आपले प्रांताचे प्रशासक, प्रादेशिक प्रशासक, स्थानिक प्रशासक, सोबतचे सल्लागार, खजिनदार, न्यायाधीश, दंडाधिकारी आणि प्रांतातले सर्व उच्च मुख्याधिकारी हयांस निरोप पाठवला.
3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.
नंतर प्रांताचे प्रशासक, प्रादेशिक, प्रशासक, स्थानिक प्रशासक, सोबतचे सल्लागार, खजिनदार, न्यायाधीश, दंडाधिकारी आणि प्रांतातले सर्व उच्च मुख्याधिकारी यासाठी एकत्र आले की, नबुखद्नेस्सर राजाने स्थापित केलेल्या पुतळ्याचे समर्पण व्हावे.
4 ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.
तेव्हा दवंडी देणारा ओरडला, “अहो विविध देशाच्या विविध भाषेच्या लोकांनो,
5 ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
ज्यावेळी तुम्ही शिंग, बासरी, सतार, विणा, पुंजी आणि सर्व प्रकारची वाद्ये यांचे संगीत ऐकाल त्यावेळी त्या सुवर्ण पुतळयास दंडवत करा ज्याची स्थापना नबुखद्नेस्सर राजाने केली आहे.
6 ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
जो कोणी पालथा पडून त्यास नमन करणार नाही त्यास लगेच त्या क्षणाला जळत्या अग्नीच्या भट्टीत टाकले जाईल.”
7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
मग शिंग, बासरी, सतार, सारंगी, विणा, पुंगी इत्यादी वाद्यांचा आवाज ऐकताच विविध देशाच्या विविध भाषेच्या लोकांनी त्या सुवर्ण पुतळयास पालथे पडून दंडवत केले जो नबुखद्नेस्सर राजाने स्थापला होता.
8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು
आता यावेळी काही खास्द्यांनी जवळ येऊन यहूद्यांवर दोषारोप केला.
9 ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!
ते नबुखद्नेस्सर राजास म्हणाले, “महाराज चिरायु असा.
10 ೧೦ ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.
१०महाराज तुम्ही असे फर्मान काढले आहे ना, की, जो कोणी शिंग, बासरी, सतार, विणा, पुंगी आणि इतर वाद्याचा आवाज ऐकतो त्याने सुवर्ण् पुतळयास दंडवत करावे.
11 ೧೧ “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
११जो कोणी त्यास पायापडून नमन करणार नाही त्यास लगेच त्या क्षणाला तप्त अग्नीच्या भट्टीत टाकण्यात येईल.
12 ೧೨ ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.
१२आता येथे काही यहूदी आहेत ज्यांची नेमणूक तुम्ही बाबेलाच्या प्रांतात केली, त्यांची नावे शद्रख, मेशख अबेदनगो ही आहेत. हे लोक, राजा, आपली पर्वा करत नाहीत, ते तुमच्या देवास नमन करत नाहीत, त्याची सेवा करत नाही, किंवा तुमच्या पुतळ्यास दंडवत करत नाहीत, ज्याची तुम्ही स्थापना केली आहे.”
13 ೧೩ ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
१३तेव्हा नबुखद्नेस्सर राजाने रागात संतप्त होऊन शद्रख, मेशख, अबेदनगो हयास घेऊन या अशी आज्ञा केली तेव्हा लोकांनी त्यांना राजापुढे सादर केले.
14 ೧೪ ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?
१४नबुखद्नेस्सर त्यांना म्हणाला, “काय तुम्ही शद्रख, मेशख, अबेदनगो आपल्या मनाची तयारी केली? की तुम्ही माझ्या स्थपलेल्या सुवर्ण पुतळयास नमन करून त्यास दंडवत करणार नाही?
15 ೧೫ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
१५आता जर तुम्ही तयार आहात तर, जेव्हा तुम्ही शिंग, बासरी, सतार, सारंगी, विणा, पुंगी आणि इतर वाद्ययांचा आवाज ऐकाल तेव्हा तुम्ही या पुतळयापुढे उपडे पडून दंडवत कराल तर बरे; पण जर तुम्ही नमन करणार नाही, तर तुम्हास त्वरीत तप्त अग्नीच्या भट्टीत टाकण्यात येईल. तुम्हास माझ्या हातातून सोडविणारा असा कोण देव आहे?”
16 ೧೬ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
१६शद्रख, मेशख, अबेदनगो यांनी राजाला उत्तर दिले की, “हे नबुखद्नेस्सरा, या बाबतीत उत्तर देण्याचे आम्हास प्रयोजन नाही.
17 ೧೭ ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
१७जर काही उत्तर आहे, तर ते हे की, ज्या देवाची आम्ही सेवा करतो तो आम्हास तप्त आग्नीच्या भट्टीतून काढण्यास समर्थ आहे, आणि महाराज तो आम्हास आपल्या हातून सोडवील.
18 ೧೮ ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.
१८पण जर नाही तर महाराज हे आपणास माहित असावे की, आम्ही तुमच्या देवाची उपासना करणार नाही, आणि त्याच्या पुढे आम्ही पालथे पडून त्यास दंडवत करणार नाही.”
19 ೧೯ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
१९नबुखद्नेस्सर रागाने संतप्त झाला, त्याची शद्रख, मेशख, अबेदनगो विरूद्ध त्याची मुद्रा पालटली. त्याने आज्ञा केली की, भट्टी नेहमीपेक्षा सातपटीने तप्त करण्यात यावी.
20 ೨೦ ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
२०नंतर त्याने आपल्या सैनिकातील काही बलवान पुरुषास आज्ञा केली की, शद्रख, मेशख, अबेदनगो यांना बांधा आणि तप्त भट्टीत टाका.
21 ೨೧ ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
२१ते बांधलेले असताना त्यांनी आपले पायमोजे, सदरे झगे आणि इतर वस्त्र घातले होते आणि त्यांना तप्त भट्टीत टाकण्यात आले.
22 ೨೨ ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
२२राजाची आज्ञा सक्त असल्याने ती भट्टी फारच तप्त केलेली होती. शद्रख, मेशख, अबेदनगो यांना ज्यांनी भट्टीत टाकले ते सैनिक तिच्या ज्वालेने मरण पावले.
23 ೨೩ ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.
२३तिथे ते पुरुष शद्रख, मेशख, अबेदनगो हातपाय बांधलेले असे त्या भट्टीत पडले.
24 ೨೪ ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.
२४नंतर नबुखद्नेस्सर चकीत होऊन त्वरीत उभा राहिला त्याने आपल्या सल्लागारास विचारले, “आपण त्या तिघांना बांधून भट्टीत टाकले ना?” त्यांनी उत्तर दिले, निश्चित राजे.
25 ೨೫ ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.
२५तो म्हणाला, मला असे दिसते की, चार माणसे अग्नीत मोकळे फिरत आहेत, त्यांना काही एक दुखापत झालेली नाही, चौथ्याचे तेज हे जणू देवपुत्रासारखे आहे.
26 ೨೬ ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
२६तेव्हा नबुखद्नेस्सराने धगधगत्या भट्टीच्या दाराजवळ येऊन त्यांना हाक मारली “शद्रख, मेशख, अबेदनगो, सर्वोच्च देवाच्या दासांनो बाहेर या.” येथे या, नंतर शद्रख, मेशख, अबेदनगो अग्नीतून बाहेर आले.
27 ೨೭ ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
२७तेथे जमलेले प्रांताधिकारी, प्रशासक, प्रादेशिक प्रशासक, स्थानिक प्रशासक, इतर प्रशासक आणि राजाचे सल्लागार ह्यांनी त्यास पाहिले. त्यांच्या शरीरावर अग्नीच्या जखमा नव्हत्या त्याचा एकही केस होरपळला नाही. त्यांना अग्नीचा वासही लागला नाही.
28 ೨೮ ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
२८नबुखद्नेस्सर म्हणाला या आपण शद्रख, मेशख, अबेदनगो यांच्या देवाचे स्तवन करूया, कारण त्याने आपला दिव्यदूत पाठवला आणि ज्या आपल्या सेवकांनी त्याच्यावर भरवसा ठेवला, आणि राजाची आज्ञा पालटवली, आणि आपल्या देवाशिवाय दुसऱ्या कोणत्याही देवाची सेवा करू नये किंवा दुसऱ्या कोणाला नमन करू नये म्हणून आपली शरीरे अर्पिली त्यांना त्याने सोडवले आहे.
29 ೨೯ ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
२९त्यामुळे मी ठराव करतो की, कुणीही लोक, कुठल्याही देशाचे, कोणतीही भाषा बोलणारे जर शद्रख, मेशख, अबेदनगो, यांच्या देवाच्या विरोधात बोलतील तर त्यांचे तुकडे करण्यात येतील, आणि त्यांच्या घराचे उकिरडे करण्यात येतील. कारण अशा प्रकारे सोडविणारा दुसरा कोणता देव नाही.
30 ೩೦ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.
३०नंतर राजाने शद्रख, मेशख, अबेदनगो यांना बाबेलच्या परगण्यात बढती दिली.

< ದಾನಿಯೇಲನು 3 >