< ದಾನಿಯೇಲನು 3 >

1 ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
नबूकदनज़र बादशाह ने एक सोने की मूरत बनवाई जिसकी लम्बाई साठ हाथ और चौड़ाई छ: हाथ थी, और उसे दूरा के मैदान सूबा — ए — बाबुल में खड़ा किया।
2 ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.
तब नबूकदनज़र बादशाह ने लोगों को भेजा कि नाज़िमों और हाकिमों और सरदारों और क़ाज़ियों और ख़ज़ाँचियों और सलाहकारों और मुफ़्तियों और तमाम सूबों के 'उहदेदारों को जमा' करें, ताकि वह उस मूरत की 'इज़्ज़त को हाज़िर हों जिसको नबूकदनज़र बादशाह ने खड़ा किया था।
3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.
तब नाज़िम, और हाकिम, और सरदार, और क़ाज़ी, और ख़ज़ाँची, और सलाहकार, और मुफ़्ती और सूबों के तमाम 'उहदेदार, उस मूरत की 'इज़्ज़त के लिए जिसे नबूकदनज़र बादशाह ने खड़ा किया था जमा' हुए; और वह उस मूरत के सामने जिसको नबूकदनज़र ने खड़ा किया था, खड़े हुए।
4 ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.
तब एक 'ऐलान करने वाले ने बलन्द आवाज़ से पुकार कर कहा, ऐ लोगों, ऐ उम्मतों, और ऐ मुख़्तलिफ़ ज़बानें बोलने वालों! तुम्हारे लिए यह हुक्म है कि
5 ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
जिस वक़्त क़रना, और ने, और सितार, और रबाब, और बरबत, और चग़ाना, और हर तरह के साज़ की आवाज़ सुनो, तो उस सोने की मूरत के सामने जिसको नबूकदनज़र बादशाह ने खड़ा किया है गिर कर सिज्दा करो।
6 ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
और जो कोई गिर कर सिज्दा न करे, उसी वक़्त आग की जलती भट्टी में डाला जाएगा।
7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
इसलिए जिस वक़्त सब लोगों ने क़रना, और ने, और सितार, और रबाब, और बरबत, और हर तरह के साज़ की आवाज़ सुनी, तो सब लोगों और उम्मतों और मुख़्तलिफ़ ज़बानें बोलने वालों ने उस मूरत के सामने, जिसको नबूकदनज़र बादशाह ने खड़ा किया था, गिर कर सिज्दा किया।
8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು
तब उस वक़्त चन्द कसदियों ने आकर यहूदियों पर इल्ज़ाम लगाया।
9 ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!
उन्होंने नबूकदनज़र बादशाह से कहा, ऐ बादशाह, हमेशा तक जीता रह!
10 ೧೦ ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.
ऐ बादशाह, तूने यह फ़रमान जारी किया है कि जो कोई क़रना, और ने, और सितार, और रबाब, और बरबत, और चुग़ाना, और हर तरह के साज़ की आवाज़ सुने, गिर कर सोने की मूरत को सिज्दा करे।
11 ೧೧ “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
और जो कोई गिर कर सिज्दा न करे, आग की जलती भट्टी में डाला जाएगा।
12 ೧೨ ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.
अब चन्द यहूदी हैं, जिनको तू ने बाबुल के सूबे की ज़िम्मेदारी पर मुक़र्रर किया है, या'नी सदरक और मीसक और 'अबदनजू, इन आदमियों ने, ऐ बादशाह, तेरी ता'ज़ीम नहीं की। वह तेरे मा'बूदों की इबादत नहीं करते, और उस सोने की मूरत को जिसे तू ने खड़ा किया सिज्दा नहीं करते।
13 ೧೩ ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
तब नबूकदनज़र ने क़हर — ओ — ग़ज़ब से हुक्म किया कि सदरक और मीसक और 'अबदनजू को हाज़िर करें। और उन्होंने उन आदमियों को बादशाह के सामने हाज़िर किया।
14 ೧೪ ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?
नबूकदनज़र ने उनसे कहा, ऐ सदरक और मीसक और 'अबदनजू क्या यह सच है कि तुम मेरे मा'बूदों की इबादत नहीं करते हो, और उस सोने की मूरत को जिसे मैने खड़ा किया सिज्दा नहीं करते?
15 ೧೫ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
अब अगर तुम तैयार रहो कि जिस वक़्त क़रना, और ने, और सितार, और रबाब, और बरबत, और चग़ाना, और हर तरह के साज़ की आवाज़ सुनो, तो उस मूरत के सामने जो मैने बनवाई है गिर कर सिज्दा करो तो बेहतर, लेकिन अगर सिज्दा न करोगे, तो उसी वक़्त आग की जलती भट्टी में डाले जाओगे और कौन सा मा'बूद तुम को मेरे हाथ से छुड़ाएगा?
16 ೧೬ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
सदरक और मीसक और 'अबदनजू ने बादशाह से 'अर्ज़ किया कि “ऐ नबूकदनज़र, इस हुक्म में हम तुझे जवाब देना ज़रूरी नहीं समझते।
17 ೧೭ ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
देख, हमारा ख़ुदा जिसकी हम इबादत करते हैं, हम को आग की जलती भट्टी से छुड़ाने की क़ुदरत रखता है, और ऐ बादशाह वही हम को तेरे हाथ से छुड़ाएगा।
18 ೧೮ ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.
और नहीं, तो ऐ बादशाह तुझे मा'लूम हो कि हम तेरे मा'बूदों की इबादत नहीं करेंगे, और उस सोने की मूरत को जो तूने खड़ी की है सिज्दा नहीं करेंगे।
19 ೧೯ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
तब नबूकदनज़र ग़ुस्से से भर गया, और उसके चेहरे का रंग सदरक और मीसक और 'अबदनजू पर बदल गया, और उसने हुक्म दिया कि भट्टी की आँच मा'मूल से सात गुना ज़्यादा करें।
20 ೨೦ ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
और उसने अपने लश्कर के चन्द ताक़तवर पहलवानों को हुक्म दिया कि सदरक और मीसक और 'अबदनजू को बाँध कर आग की जलती भट्टी में डाल दें।
21 ೨೧ ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
तब यह मर्द अपने पैजामों — क़मीसों और 'अमामों के साथ बाँधे गए, और आग की जलती भट्टी में फेंक दिए गए।
22 ೨೨ ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
इसलिए चूँकि बादशाह का हुक्म ताकीदी था और भट्टी की ऑच निहायत तेज़ थी, इसलिए सदरक और मीसक और अबदनजू को उठाने वाले आग के शो'लों से हलाक हो गए;
23 ೨೩ ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.
और यह तीन आदमी या'नी सदरक और मीसक और अबदनजू, बँधे हुए आग की जलती भट्टी में जा पड़े।
24 ೨೪ ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.
तब नबूकदनज़र बादशाह सरासीमा होकर जल्द उठा, और अरकान — ए — दौलत से मुख़ातिब होकर कहने लगा, क्या हम ने तीन शख़्सों को बँधवा कर आग में नहीं डलवाया?” उन्होंने जवाब दिया, बादशाह ने सच फ़रमाया है।
25 ೨೫ ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.
उसने कहा, देखो, मैं चार शख़्स आग में खुले फिरते देखता हूँ, और उनको कुछ नुक़सान नहीं पहुँचा; और चौथे की सूरत इलाहज़ादे की तरह है।
26 ೨೬ ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
तब नबूकदनज़र ने आग की जलती भट्टी के दरवाज़े पर आकर कहा, ऐ सदरक और मीसक और अबदनजू, ख़ुदा — त'आला के बन्दो! बाहर निकलो और इधर आओ! इसलिए सदरक और मीसक और अबदनजू आग से निकल आए।
27 ೨೭ ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
तब नाज़िमों और हाकिमों और सरदारों और बादशाह के सलाहकारों ने जमा' होकर उन शख़्सों पर नज़र की, और देखा कि आग ने उनके बदनों पर कुछ असर न किया और उनके सिर का एक बाल भी न जलाया, और उनकी पोशाक में कुछ फ़र्क़ न आया और उनसे आग से जलने की बू भी न आती थी।
28 ೨೮ ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
तब नबूकदनज़र ने पुकार कर कहा, कि “सदरक और मीसक और 'अबदनजू का ख़ुदा मुबारक हो, जिसने अपना फ़रिश्ता भेज कर अपने बन्दों को रिहाई बख़्शी, जिन्होंने उस पर भरोसा करके बादशाह के हुक्म को टाल दिया, और अपने बदनों को निसार किया कि अपने ख़ुदा के अलावा किसी दूसरे मा'बूद की इबादत और बन्दगी न करें।
29 ೨೯ ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
इसलिए मैं यह फ़रमान जारी करता हूँ कि जो क़ौम या उम्मत या अहल — ए — ज़ुबान, सदरक और मीसक और 'अबदनजू के ख़ुदा के हक़ में कोई ना मुनासिब बात कहें उनके टुकड़े — टुकड़े किए जाएँगे और उनके घर मज़बला हो जाएँगे, क्यूँकि कोई दूसरा मा'बूद नहीं जो इस तरह रिहाई दे सके।”
30 ೩೦ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.
फिर बादशाह ने सदरक और मीसक और 'अबदनजू को सूबा — ए — बाबुल में सरफ़राज़ किया।

< ದಾನಿಯೇಲನು 3 >