< ದಾನಿಯೇಲನು 5 >

1 ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.
बेलसजर राजाले आफ्ना एक हजार भारदारहरूका निम्ति एउटा ठुलो भोजको आयोजना गरे, र ती सबै एक हजार मानिसहरूका सामु तिनले दाखमद्य पिए ।
2 ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.
जब बेलसजरले दाखमद्ये चाखे, तिनले आफ्ना बुबा नबूकदनेसरले यरूशलेमको मन्दिरबाट निकालेर ल्‍याएका सुन वा चाँदीका भाँडाहरू ल्याउन आज्ञा दिए, जसबाट तिनी, तिनका भारदारहरू, तिनकी पत्‍नीहरू र उप-पत्‍नीहरूले पिउन सकून् ।
3 ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
यरूशलेममा भएको परमेश्‍वरको मन्दिरबाट ल्‍याइएका सुनका भाँडाहरूलाई सेवकहरूले ल्याए । राजा, तिनका भारदारहरू, र तिनकी पत्‍नीहरू र उप-पत्‍नीहरूले ती भाँडाहरूबाट पिए ।
4 ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.
तिनीहरूले दाखमद्य पिएपछि सुन र चाँदी, काँसा, फलाम, काठ, र ढुङ्गाले बनेका आफ्‍ना मूर्तिहरूको प्रशंसा गरे ।
5 ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.
त्यही समय पानसको अगाडि एउटा मानिसको हातका औंलाहरू देखा परे र राजाको दरवारका लिपिएका भित्तामा लेख्‍न थाले । त्यो हातले लेख्दै गर्दा, राजाले त्‍यसको केही भाग देख्‍न सक्थे ।
6 ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
तब राजाको अनुहार बद्लियो र तिनका आफ्ना विचारहरूले तिनलाई भयभीत बनाए । तिनका गोडाहरूले तिनलाई धान्‍न सकेनन्, र तिनका घुँडाहरू कामेर ठोक्‍किन थाले ।
7 ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
मृतहरूसँग बोल्न सक्छौं भनेर दावी गर्नेहरू, बुद्धिमान् मानिसहरू, र ज्योतिषीहरूलाई भित्र ल्याउनको निम्ति राजाले आदेश दिए । बेबिलोनमा आफ्ना बुद्धिको निम्ति ख्‍याति पाएकाहरूलाई राजाले यसो भने, “जसले यो लेख र यसको अर्थ बताउन सक्छ उसलाई बैजनी लुगा पहिराइनेछ र उसको घाँटीमा सुनको सिक्री लगाइनेछ । त्यसलाई यस राज्यको तेस्रो उच्‍च शासकको अधिकार दिइनेछ ।”
8 ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.
अनि आफ्नो बुद्धिको निम्‍ति ख्‍याति पाएका राजाका सबै मानिसहरू आए, तर तिनीहरूले त्यो लेख पढ्न अनि राजालाई त्यसको अर्थ बताउन सकेनन् ।
9 ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು.
अनि राजा बेलसजर धेरै डराए र तिनको अनुहारको स्‍वरूप परिवर्तन भयो । तिनका भारदारहरू अलमल्ल भए ।
10 ೧೦ ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!
राजा र तिनका भारदारहरूले भनेका कुरा सुनेर रानी भोजको घरमा आईन् । रानीले भनिन्, “राजा, अमर रहून्! हजुरका विचारहरूले हजुरलाई विचलित नपारोस् । हजुरको अनुहारको स्‍वरूपमा परिवर्तन नहोस् ।
11 ೧೧ “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.
हजुरको राज्यमा एक जना मानिस छन् जसमा पवित्र देवताहरूको आत्मा छ । हजुरका बुबाका समयमा, उनमा देवताहरूका जस्तै प्रकाश र समझ र बुद्धि पाइएको थियो । महाराजा नबूकदनेसर, हजुरका बुबा, महाराजाले उनलाई जादूगरहरू, मृतसँग बोल्नेहरू, बुद्धिमान् मानिसहरू, र ज्योतिषीहरूका प्रमुख बनाउनुभयो ।
12 ೧೨ ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.
यी मानिस, दानिएलमा उत्कृष्‍ट आत्मा, ज्ञान, समझ, सपनाको अर्थ खोल्न सक्‍ने, अड्को फुकाउन सक्‍ने र समस्याहरू हल गर्न सक्‍ने विशेषताहरू थिए, जसलाई राजाले बेलतसजर नाउँ दिनुभयो । अब दानिएललाई बोलाउनुहोस् र लेखिएको कुराको अर्थ तिनले हजुरलाई बताउनेछन् ।”
13 ೧೩ ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?
तब दानिएललाई राजाको सामु ल्याइयो । राजाले तिनलाई भने, “तिमी यहूदाका निर्वासितमध्ये एक जना मानिस, त्यही दानिएल हौ, जसलाई मेरा बुबाले यहूदाबाट ल्याउनुभयो ।
14 ೧೪ ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.
देवताहरूका आत्मा र प्रकाश तथा समझ र उत्कृष्‍ट बुद्धि तिमीमा छन् भनेर मैले तिम्रो विषयमा सुनेको छु ।
15 ೧೫ “ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.
बुद्धिको निम्ति ख्‍याति पाएका मानिसहरू र मृतहरूसँग बोल्न सक्छौं भनेर दावी गर्नेहरूलाई यो लेख पढ्न र त्यसको अर्थ खोल्‍नलाई भित्र मेरो सामु ल्याइएको छ, तर तिनीहरूले त्यसको अर्थ जानकारी गराउन सकेनन् ।
16 ೧೬ ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
तिमीले अर्थहरू खोल्न सक्छौ र समस्याहरू हल गर्न सक्छौ भनी मैले सुनेको छु । अब तिमीले यो लेख पढ्न सक्यौ र मलाई यसको अर्थ बतायौ भने, तिमीलाई बैजनी कपडा पहिराइनेछ र तिम्रो घाँटीमा सुनको सिक्री लगाइनेछ, र यस राज्यमा तिमीलाई तेस्रो उच्‍च शासकको अधिकार हुनेछ ।”
17 ೧೭ ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.
तब दनिएलले राजाको सामु जवाफ दिए, “हजुरका उपहारहरू हजुरकै निम्ति होऊन्, र हजुरका इनामहरू अर्को व्यक्तिलाई दिनुहोस् । तापनि, म यो लेख, महाराजा, हजुरको निम्ति पढिदिनेछु, र हजुरलाई यसको अर्थ बताउनेछु ।
18 ೧೮ ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
हे महाराजाका, सर्वोच्‍च परमेश्‍वरले हजुरका पिता नबूकदनेसरलाई राज्य, महान्‌ता, आदर, र ऐश्‍वर्य दिनुभयो ।
19 ೧೯ ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.
परमेश्‍वरले उहाँलाई दिनुभएको महान्‌ताको कारणले, सबै मानिसहरू, जातिहरू र भाषा बोल्नेहरू थरथर भए र उहाँको भय माने । उहाँले जसको प्राण लिने इच्‍छा गर्नुभयो, त्‍यसको प्राण उहाँले लिनुभयो, र उहाँले जसलाई जीवित राख्‍ने इच्‍छा गर्नुभयो, त्‍यसलाई उहाँले जीवित राख्‍नुभयो । जसलाई उहाँले चाहनुभयो त्‍यसलाई उचाल्‍नुभयो, र जसलाई उहाँले इच्‍छा गर्नुभयो त्‍यसलाई उहाँले होच्‍याउनुभयो ।
20 ೨೦ “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.
तर जब उहाँको हृदयमा अहंकारी र उहाँको आत्मा कठोर भयो, जसको कारण उहाँले हठपूर्ण किसिमले काम गर्नुभयो, तब उहाँको आफ्नो राजकीय सिंहासनबाट उहाँलाई तल खसालियो, र तिनीहरूले उहाँको सबै ऐश्‍वर्य हटाए ।
21 ೨೧ ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.
उहाँ मानिसजातिबाट लखेटिनुभयो । उहाँमा पशुको मन थियो, र उहाँ जङ्गली गधाहरूसँग रहनुभयो । उहाँले गोरुले झैं घाँस खानुभयो । सर्वोच्‍च परमेश्‍वरले मानिसहरूका राज्यमाथि शासन गर्नुहुन्छ र उहाँले आफ्नो इच्छाअनुसार मानिसहरूमाथि शासक नियुक्त गर्नुहुन्छ भनेर उहाँले स्‍वीकार नगरेसम्‍म आकाशका शीतहरूले उहाँको शरीर भिज्यो ।
22 ೨೨ “ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.
हजुर, बेलसजर, उहाँका छोराले यी सबै थाहा भएर पनि आफ्नो हृदयलाई नम्र बनाउनुभएको छैन ।
23 ೨೩ ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.
हजुरले आफैंलाई स्वर्गका परमप्रभुको विरुद्ध खडा गर्नुभएको छ । उहाँको भवनबाट तिनीहरूले ती भाँडाहरू ल्याए, जसबाट हजुर, हजुरका भारदारहरू, हजुरका पत्‍नीहरू, र उप-पत्‍नीहरूले दाखमद्य पिउनुभयो र हजुरले चादी र सुन, काँसा, फलाम, काठ र ढुङ्गाका मूर्तिहरूलाई पुज्नुभयो, ती मूर्तिहरू जसले देख्दैनन्, सुन्दैनन्, र केही पनि जान्दैनन् । हजुरको सास आफ्नो हातमा लिनुहुने र हजुरका सबै मार्ग जान्‍नुहुने परमेश्‍वरलाई हजुरले आदर गर्नुभएको छैन ।
24 ೨೪ ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು.
अनि परमेश्‍वरले आफ्नो उपस्थितिबाट एउटा हात पठाउनुभयो र यो लेख लेखियो ।
25 ೨೫ “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’
त्यो लेखिएको कुरा यस्तो छः ‘मेने, मेने, टेकेल, पर्सिन ।’
26 ೨೬ ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.
यसको अर्थ यो होः ‘मेने,’ ‘परमेश्‍वरले हजुरको राज्यको गन्ती गर्नुभएको छ र त्यसको अन्त्य गर्नुभएको छ ।’
27 ೨೭ ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ.
‘टेकेल,’ ‘तराजुमा हजुरको नाप लिइयो र हजुरमा कमी भेट्टाइयो ।’
28 ೨೮ ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.
‘पेरेस,’ ‘हजुरको राज्य विभाजित भएको छ र त्यो मादी र फारसीहरूलाई दिइएको छ ।’”
29 ೨೯ ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
अनि बेलसजरले आज्ञा दिए, र दानिएललाई बैजनी कपडा पहिराइयो । उनको घाँटीमा सुनको सिक्री लगाइयो, र त्यस राज्यमा उनमा तेस्रो उच्‍च शासकको अधिकार हुनेछ भनेर राजाले घोषणा गरे ।
30 ೩೦ ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.
त्यही रात बेबिलोनका राजा बेलसजर मारिए,
31 ೩೧ ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.
अनि मादी दाराले करीब बैसठ्ठी वर्षको उमेरमा त्यो राज्य प्राप्‍त गरे ।

< ದಾನಿಯೇಲನು 5 >