< ದಾನಿಯೇಲನು 1 >

1 ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
यहूदाचा राजा यहोयाकीम याच्या कारकिर्दीच्या तिसऱ्या वर्षी बाबेलाचा राजा नबुखद्नेस्सर याने यरूशलेमेवर चढाई करून त्यांची रसद बंद करण्यासाठी यरूशलेमेला वेढा दिला.
2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.
परमेश्वराने नबुखद्रेनेस्सर राजास यहूदाचा राजा यहोयाकीमवर विजय दिला आणि त्यास परमेश्वराच्या घरातील काही वस्तू दिल्या त्याने त्या शिनार येथे त्याच्या देवाच्या घरासाठी आणल्या आणि त्या पवित्र वस्तू त्याने त्याच्या देवाच्या भांडारात ठेवल्या.
3 ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ
राजा आपला प्रमुख अधिकारी अश्पनज यास म्हणाला की इस्राएलाचे काही लोक, जे राज कुळातले आणि उच्चकुलीन आहेत त्यास माझ्याकडे घेवून ये.
4 ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.
ज्यांच्या अंगी काही कलंक नाही असे निष्पाप, सुरुप, कौशल्यपुर्णतेने चतुर, ज्ञानाने परिपूर्ण आणि शक्तीवान आणि राजाच्या महलामध्ये सेवा करण्यास पात्र तेथे त्यांना खास्द्यांची शिक्षण व भाषा शिकवायला त्याने त्यास सांगितले.
5 ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.
राज्याच्या मिष्ठान्नातून व तो पीत असे त्या द्राक्षरसातून तो त्यांचा रोज वाटा नेमून दिला. असे त्या तरुणांना तीन वर्षाचे प्रशिक्षण देण्यात यावे. त्यानंतर त्यांनी राजाची सेवा करावी.
6 ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.
त्या लोकांमध्ये दानीएल, हनन्या, मीशाएल व अजऱ्या हे यहूदा वंशाचे होते.
7 ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
प्रमुख अधिकाऱ्याने त्यांना, दानीएलास बेल्टशस्सर, हनन्यास शद्रख, मीशाएलास मेशख, अजऱ्यास अबेदनगो, नावे दिली.
8 ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.
पण दानीएलाने आपल्या मनात ठरवले की, तो स्वत: ला राजाच्या अन्नाने किंवा त्याच्या पिण्याच्या द्राक्षरसानें विटाळविणार नाही; म्हणून त्याने षंढांच्या अधिकाऱ्याला विनंती केली की, मी आपणाला विटाळवू नये.
9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.
आता देवाने दानीएलावर प्रमुख अधिकाऱ्याची कृपा आणि दया व्हावी असे केले.
10 ೧೦ ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು.
१०प्रमुख अधिकारी दानीएलास म्हणाला, “मला माझा स्वामी, राजांचे भय आहे त्याने तुम्ही काय खावे व काय प्यावे ह्याची आज्ञा केली आहे, तुमच्या वयाच्या इतर तरुणांपेक्षा तुम्ही अधिक वाईट का दिसावे? तुमच्यामुळे तो माझे डोके छाटून टाकेल.”
11 ೧೧ ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು
११मग प्रमुख अधिकाऱ्याने दानीएल, हनन्या, मीशाएल व अजऱ्या हयावर नेमून दिलेल्या कारभाऱ्याशी दानीएल बोलला.
12 ೧೨ ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.
१२तो म्हणाला, “आपल्या दासांची दहा दिवस कसोटी पहा, आम्हास फक्त् शाकभोजन व पिण्यास पाणी दे.
13 ೧೩ ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು.
१३नंतर आमचे बाहयरुप व त्या तरुणांचे बाहयरुप व जे राजाचे मिष्ठान्न खात आहेत त्या तरुणांचे बाह्यरुप, त्यांची तुलना कर आणि तुझ्या नजरेस येईल तसे तुझ्या दासास कर.”
14 ೧೪ ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.
१४मग तो कारभारी हे करण्यास मान्य झाला दहा दिवसानी त्याने त्यांची पाहणी केली.
15 ೧೫ ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.
१५दहा दिवसाच्या शेवटी त्यांचे बाह्यरुप जे राजाचे मिष्ठान्न खात अधिक निरोगी आणि धष्टपुष्ट दिसू लागले.
16 ೧೬ ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.
१६मग कारभाऱ्याने त्यांचे मिष्ठान्न आणि त्यांचा द्राक्षरस काढून त्यास फक्त शाकभोजन दिले.
17 ೧೭ ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
१७मग या चार तरुणास देवाने ज्ञान आणि सर्व प्रकारच्या शास्त्रांचा समज आणि शहाणपण दिले, आणि दानीएलास सर्व प्रकारचे स्वप्न व दृष्टांत उलगडत असत.
18 ೧೮ ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.
१८राजाने ठरवून दिलेल्या काळाच्या समाप्तीनंतर प्रमुख अधिकारी त्यांना नबुखद्नेस्सर राजासमोर घेऊन आला.
19 ೧೯ ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.
१९राजा त्यांच्याशी बोलला, त्या सर्व समुदायामध्ये दानीएल हनन्या, मीशाएल, व अजऱ्या यांच्या तोडीचा दुसरा कोणीच नव्हता. ते राजासमोर त्याच्या सेवेस राहू लागले.
20 ೨೦ ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
२०ज्ञानाच्या आणि शहाणपणाच्या बाबतीत राजाने त्यांना जे काही विचारले त्यामध्ये ते, सर्व जादूगार, भूतविद्या करणारे हयांच्यापेक्षा ते दहापट उत्तम असे संपूर्ण राज्यात राजाला आढळून आले.
21 ೨೧ ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.
२१कोरेश राजाच्या कारकिर्दीत पहिल्या वर्षापर्यंत दानीएल तेथे राहीला.

< ದಾನಿಯೇಲನು 1 >