< ಧರ್ಮೋಪದೇಶಕಾಂಡ 17 >

1 ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.
परमेश्वरास यज्ञात अर्पण करायचा गोऱ्हा किंवा मेंढरू यांच्यात कोणतेही व्यंग असता कामा नये. कारण तुमचा देव परमेश्वर ह्याला त्याचा वीट आहे.
2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,
तुमचा देव परमेश्वर ह्याने दिलेल्या नगरात राहायला लागल्यावर एखादे दृष्कृत्ये घडल्याचे तुमच्या कानावर आले. परमेश्वराच्या कराराचा भंग केल्याचे पाप एखाद्या स्त्रीच्या किंवा पुरुषाच्या हातून झाल्याचे कळले. परमेश्वराच्या आज्ञेविरूद्ध,
3 ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,
म्हणजे आज्ञांचे उल्लघंन करून ते सूर्य, चंद्र, किंवा आकाशातील तांरागण इतर दैवतांची पूजा करू लागले,
4 ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,
अशी बातमी कानावर आली की तुम्ही त्याबाबतीत कसून चौकशी करा. हे भयंकर कृत्ये इस्राएलमध्ये खरोखर घडले आहे याबद्दल तुमची खात्री झाली,
5 ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.
तर ही दुष्कृत्ये करणाऱ्याला स्त्री असो वा पुरुष तुम्ही त्या व्यक्तीला शिक्षा करा. नगराच्या वेशीजवळ भर चौकात त्या व्यक्तीला आणून तिला दगड धोंड्यांनी मरेपर्यंत मारा.
6 ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.
त्या व्यक्तीच्या दुष्कृत्याला दोन किंवा तीन साक्षीदार असले पाहिजेत. एकच साक्षीदार असेल तर मात्र अशी शिक्षा करु नका.
7 ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
प्रथम साक्षीदारांनी मारायला हात उचलावा, मग इतरांनी मारावे. अशाप्रकारे आपल्यामधून अमंगळपणा निपटून काढावा.
8 ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.
एखादे खूनाचे प्रकरण, दोन व्यक्तीमधील वाद, किंवा मारामारीत एखादा जखमी होणे अशा सारख्या काही खटल्यांमध्ये न्यायानिवाडा करणे तुम्हास आवाक्याबाहेरचे वाटेल, या वादांची सुनावणी चाललेली असताना उचित काय ते ठरवणे न्यायाधीशांना जड जाईल, तेव्हा परमेश्वराने निवडलेल्या पवित्र निवासस्थानी जावे.
9 ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
तेथे लेवी वंशातील याजक व त्यावेळी कामावर असलेला न्यायाधीश यांचा सल्ला घ्यावा. या समस्येची सोडवणूक ते करतील.
10 ೧೦ ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.
१०परमेश्वराच्या पवित्र निवासस्थानी ते आपला निर्णय तुम्हास सांगतील. त्यांचे म्हणणे ऐकून तसे करा. ते जे जे करायला सांगतील ते ते सर्व कुचराई न करता अंमलात आणा.
11 ೧೧ ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.
११तुला ज्या सूचना ते देतील व जो निर्णय तुला सांगतील त्याप्रमाणे कर. त्यांनी तुला सांगितलेल्या निर्णयापासुन उजवीडावीकडे वळू नको.
12 ೧೨ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
१२जो मनुष्य उन्मत्त होऊन तुझा देव परमेश्वर ह्याचे तेथे हजर असणाऱ्या याजकाचे व न्यायाधीशाचे ऐकणार नाही त्यास चांगले शासन करा. त्यास मृत्यूदंड द्या. इस्राएलातून या नीच मनुष्याचे उच्चाटन करा.
13 ೧೩ ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.
१३हे ऐकून इतरांना दहशत बसेल व घाबरुन ते पुढे उन्मत्तपणा करणार नाहीत.
14 ೧೪ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,
१४तुमचा देव परमेश्वर देत असलेल्या देशात तुम्ही जात आहात. त्याचा ताबा घेऊन तुम्ही तेथे रहाल. मग इतर राष्ट्राप्रमाणे आपण आपल्यावर राजा नेमावा असे तुम्हास वाटेल.
15 ೧೫ ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.
१५तेव्हा परमेश्वराने निवड केलेल्या व्यक्तीची तुम्ही राजा म्हणून नेमणूक करा. राजा हा तुमच्यापैकीच असला पाहिजे, परदेशी असता कामा नये.
16 ೧೬ ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
१६त्याने स्वत: साठी अधिकाधिक घोडे बाळगता कामा नयेत. घोडदळ वाढवण्यासाठी त्याने मिसरमध्ये माणसे पाठवता कामा नयेत. कारण, तुम्ही पुन्हा माघारी फिरता कामा नये, असे परमेश्वराने बजावले आहे.
17 ೧೭ ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.
१७तसेच त्यास बऱ्याच स्त्रिया असू नयेत. कारण त्याने तो परमेश्वरापासून परावृत्त होईल. सोन्या-रुप्याचाही फार साठा त्याने करु नये.
18 ೧೮ ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.
१८राज्य करायला लागल्यावर त्याने स्वत: साठी नियमशास्त्राची एक नक्कल वहीत लिहून ठेवावी. याजक, लेवी यांनी आपल्याजवळ ठेवलेल्या पुस्तकातून ती करावी व जन्मभर त्याचे अध्ययन करावे.
19 ೧೯ ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.
१९नियमशास्त्रातील सर्व आज्ञांचे त्याने पालन करावे व अशा रीतीने तो परमेश्वर देवाचे भय बाळगायला शिकेल.
20 ೨೦ ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.
२०म्हणजे आपल्या प्रजेपेक्षा, भाऊबंदापेक्षा आपण कोणी उच्च आहोत अशी जाणीव त्यास स्पर्श करणार नाही. तो नियमांपासून विचलीत होणार नाही. अशाप्रकारे वागल्यास तो व त्याचे वंशज इस्राएलावर दीर्घकाळ राज्य करतील.

< ಧರ್ಮೋಪದೇಶಕಾಂಡ 17 >