< ಧರ್ಮೋಪದೇಶಕಾಂಡ 19 >

1 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,
तुझा देव परमेश्वर ज्या राष्ट्रांची भूमी तुला देत आहे, त्या राष्ट्रांना नष्ट केल्यावर त्यांच्या प्रदेशाचा तू ताबा घेतल्यानंतर, त्यांच्या जागी त्यांची नगरे आणि घरे तुम्ही ताब्यात घ्याल,
2 ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.
तेव्हा तुझा देव परमेश्वर जो देश तुला देत आहे त्यामध्ये तीन नगरे तुम्ही राखून ठेवा.
3 ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೊಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.
म्हणजे कोणाच्या हातून मनुष्यवध झाल्यास त्यास तेथे पळून जाता यावे म्हणून रस्ते तयार कर, आणि जो प्रदेश तुझा देव परमेश्वर तुला देत आहे त्या देशाचे तू तीन भाग कर.
4 ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
मनुष्यवध करून या तीनपैकी एका नगरात आश्रयाला येणाऱ्याबद्दल नियम असा: पूर्वीचे वैर नसताना जर कोणी चुकून आपल्या शेजाऱ्याला ठार मारले तर त्याने येथे जावे.
5 ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
उदाहरणार्थ, एखादा मनुष्य लाकडे तोडायला त्याच्या शेजाऱ्याबरोबर जंगलात गेला. तेथे झाडावर कुऱ्हाड चालवत असताना चूकून कुऱ्हाडीचे पाते दांड्यापासून निसटले आणि ते नक्की दुसऱ्यावर पडून तो मेला. अशावेळी कुऱ्हाड चालवणाऱ्याने यापैकी एखाद्या नगराच्या आश्रयाला जाऊन आपले प्राण वाचवावे.
6 ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.
हे नगर फार दूर असेल तर त्यास तेथपर्यंत पोचता येणार नाही. मृताचा जवळचा नातेवाईक त्याचा पाठलाग करील व त्यास त्या नगरात पोचण्यापूर्वीच गाठेल. आणि रागाच्या भरात त्याचा वध करील. खरे पाहता त्या मनुष्याच्या हातून वैर नसताना मनुष्य हत्या झाली होती तेव्हा तो प्राणदंडाला पात्र नव्हता.
7 ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.
म्हणून मी तुला ही आज्ञा करतो अशी तीन नगरे स्वत: साठी राखून ठेव.
8 ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ,
तुमच्या प्रदेशाचा विस्तार करण्याचे तुमचा देव परमेश्वर ह्याने तुमच्या वशंजाना शपथ दिल्याप्रमाणे, त्यांना वचन दिलेला सर्व प्रदेश तो तुम्हास देईल.
9 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಈ ಮೂರು ನಗರಗಳನ್ನು ನಿಮಗೆ ಕೊಡುವನು.
तुमचा देव परमेश्वर ह्याजवर प्रीती करा व त्याने दाखवलेल्या मार्गात नियमीत चालत जा. मी दिलेल्या या आज्ञा तुम्ही पूर्णपणे पाळल्यात तर मग परमेश्वराने तुमच्या प्रदेशाचा विस्तार केला की तुम्ही पहिल्या तीन नगरांच्या भरीला आश्रयासाठी आणखी तीन नगरे निवडा.
10 ೧೦ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.
१०म्हणजे तुमचा देव परमेश्वर तुम्हास देणार असलेल्या भूमीवर निर्दोष मनुष्यांचा रक्तपात होणार नाही आणि अशा हत्येचे दोष तुम्हास लागणार नाही.
11 ೧೧ ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ
११पण द्वेषापोटीही एखादा मनुष्य संधीची वाट पाहत लपूनछपून दुसऱ्याच्या जिवावर उठेल, त्याच्यावर प्राणघातक हल्ला करून या नगरात पळून गेला.
12 ೧೨ ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.
१२अशावेळी त्याच्या नगरातील वडिलधाऱ्यांनी माणसे पाठवून त्यास तेथून बाहेर काढावे व मृताच्या नातेवाईकांच्या हवाली करावे. म्हणजे त्यास मृत्यूची शिक्षा झाली पाहिजे.
13 ೧೩ ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು.
१३त्या मनुष्यावर दया दाखवू नका परंतु निरपराध मनुष्याच्या हत्येचा दोष इस्राएलातून पुसून टाक म्हणजे तुझे कल्याण होईल.
14 ೧೪ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.
१४शेजाऱ्याच्या जमिनीची सीमा खूण काढू नको. पूर्वीच्या लोकांनी त्या सीमा आखलेल्या आहेत. हे तुमचा देव परमेश्वर ह्याने तुमच्या वाट्याला जेवढे वतन दिले त्याच्या या खूणा आहेत.
15 ೧೫ ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.
१५एखाद्याने काही गुन्हा किंवा अपराध केला तर, अपराधाचा आरोप कोणावर असेल तर त्यास दोषी ठरवायला एक साक्षीदार पुरेसा नाही. त्याने खरेच गुन्हा केला आहे हे ठरवायला दोन किंवा तीन साक्षीदार तरी हवेतच.
16 ೧೬ ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ,
१६अमक्याच्या हातून अपराध घडला आहे असे एखादा साक्षीदार द्वेषबुद्धीने, मुद्दाम खोटे सांगू शकतो.
17 ೧೭ ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.
१७अशावेळी त्या दोघांना परमेश्वरासमोर म्हणजे तेथे जे याजक व न्यायाधीश त्यावेळी असतील त्यांच्यापुढे उभे करावे.
18 ೧೮ ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ,
१८मग न्यायाधीशांनी त्याबाबत कसून चौकशी केली पाहिजे. त्यातून साक्षीदाराचा आपल्या बंधुविरोधात खोटारडेपणा उघडकीला आला,
19 ೧೯ ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.
१९तर मग तुम्ही त्यास तीच शिक्षा करावी जी त्यास आपल्या बंधूला जे शासन व्हावे असे वाटत होते. अशा रीतीने आपल्यामधून नीच वृत्तीचा नायनाट करा
20 ೨೦ ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.
२०हे ऐकून इतरांना भीती वाटेल आणि तेथून पुढे तुमच्यामध्ये असे वाईट घडणार नाही.
21 ೨೧ ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.
२१तू दया दाखवू नये. कोणी कोणाचा जीव घेतल्यास त्यालाही देहान्ताचे शासन द्यावे. डोळ्याबद्दल डोळा, दाताबद्दल दात, हाताच्या बदल्यात हात आणि पायाच्या बदल्यात पाय असा दंड करावा.

< ಧರ್ಮೋಪದೇಶಕಾಂಡ 19 >