< ಧರ್ಮೋಪದೇಶಕಾಂಡ 26 >

1 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,
जब तिमीहरू परमप्रभु तिमीहरूका परमेश्‍वरले तिमीहरूलाई सम्पत्तिको रूपमा दिनुहुने देशमा आई यसको अधिकार गरेर वसोवास गर्छौ,
2 ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.
तब परमप्रभु तिमीहरूका परमेश्‍वरले तिमीहरूलाई दिनुहुने देशमा भूमिको सबै उब्जनीको पहिलो फल लिनू । त्यसलाई एउटा डालोमा हालेर परमप्रभु तिमीहरूका परमेश्‍वरले आफ्नो पवित्र वासस्थानको रूपमा छान्‍नुहुने ठाउँमा त्यसलाई लिएर जानू ।
3 ನೀವು ಅದನ್ನು ತೆಗೆದುಕೊಂಡುಹೋಗಿ ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, “ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ” ಎಂದು ಹೇಳಬೇಕು.
ती दिनमा सेवा गर्ने पुजारीकहाँ गएर यसो भन्‍नू, 'परमप्रभु तपाईंका परमेश्‍वरले हामीलाई दिन्छु भनी हाम्रा पिता-पुर्खाहरूसित प्रतिज्ञा गर्नुभएको देशमा म आइपुगेको छु भनी म उहाँको अगि स्वीकार गर्दछु ।'
4 ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು.
पुजारीले तिमीहरूका हातबाट डालोलाई लिई परमप्रभु तिमीहरूका परमेश्‍वरको वेदीको सामू राखून् ।
5 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.
तिमीहरूले परमप्रभु तिमीहरूका परमेश्‍वरको सामु भन्‍नू, 'मेरा पुर्खा फिरन्ते अरामी थिए । तिनी मिश्रमा गई त्यहीँ बसोबास गरे, र तिनका मानिसहरू सङ्ख्यामा थोरै थिए । त्यहाँ तिनीबाट एक महान्, शक्तिशाली र असङ्ख्य जाति बन्यो ।
6 ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.
मिश्रीहरूले हामीलाई निष्‍ठुरतापूर्वक व्यवहार गरी हामीलाई दुःख दिए । तिनीहरूले हामीलाई कमाराहरूले गर्ने काम गर्न लगाए ।
7 ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.
हामीले हाम्रा पिता-पुर्खाहरूका परमेश्‍वर परमप्रभुलाई पुकार्‍यौँ, र उहाँले हाम्रो क्रन्दन, हाम्रो पीडा, हाम्रो श्रम र हाम्रो थिचोमिचो सुन्‍नुभयो ।
8 ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.
परमप्रभुले हामीलाई शक्तिशाली हात, फैलिएको पाखुरा, ठुलो आतङ्क, चिन्ह र आश्‍चर्यहरूद्वारा मिश्रबाट ल्याउनुभयो ।
9 ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.
अनि उहाँले हामीलाई यो ठाउँमा ल्याउनुभएको छ र हामीलाई दूध र मह बग्‍ने यो देश दिनुभएको छ ।
10 ೧೦ ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.
अब हेर्नुहोस्, परमप्रभुले मलाई दिनुभएको यस देशको उब्जनीको पहिलो फल मैले तपाईंकहाँ ल्याएको छु ।' तिमीहरूले परमप्रभु तिमीहरूका परमेश्‍वरको सामु त्यस डालोलाई राखेर उहाँको आराधना गर्नू ।
11 ೧೧ ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.
अनि परमप्रभु तिमीहरूका परमेश्‍वरले तिमीहरू, तिमीहरूका बिचमा भएका लेवीसाथै परदेशीका निम्ति उहाँले गर्नुभएका सम्पूर्ण भलाइको कारणले आनन्द मनाओ ।
12 ೧೨ ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
दशांश दिने वर्ष अर्थात् तेस्रो वर्षमा तिमीहरूको उब्जनीको सबै दशांश अलग गरिसकेपछि तिमीहरूले त्यो परदेशी, अनाथ र विधवालाई दिनू ताकि तिमीहरूका सहरभित्र तिनीहरूले खाएर तृप्‍त होऊन् ।
13 ೧೩ ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.
तिमीहरूले परमप्रभु तिमीहरूका परमेश्‍वरको सामु यसो भन्‍नू, 'तपाईंले मलाई दिनुभएका सबै आज्ञामुताबिक जुन थोकहरू परमप्रभुका हुन् ती मैले मेरो घरबाट ल्याएर लेवी, परदेशी, अनाथ र विधवालाई दिएको छु । मैले तपाईंका कुनै पनि आज्ञा उल्लङ्घन गरेको छैनँ न त त्यसलाई बिर्सेको छु ।
14 ೧೪ ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.
मेरो शोकको घडीमा मैले त्यो खाएको छैनँ, न म अशुद्ध हुँदा मैले त्यसलाई कतै राखेको छु, न त मृतकहरूको आदरमा मैले त्यो दिएको छु । मैले परमप्रभु मेरा परमेश्‍वरको आवाज सुनेको छु । तपाईंले मलाई दिनुभएको हरेक आज्ञा मैले पालन गरेको छु ।
15 ೧೫ ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.
पवित्रस्थानबाट हेर्नुहोस् जहाँ तपाईं बस्‍नुहुन्छ जुन स्वर्ग हो । तपाईंको जाति इस्राएल, तपाईंले हाम्रा पिता-पुर्खाहरूसित प्रतिज्ञा गर्नुभएको दूध र मह बग्‍ने देश अर्थात् हामीलाई दिनुभएको देशलाई आशिष् दिनुहोस् ।'
16 ೧೬ ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.
आज परमप्रभु तिमीहरूका परमेश्‍वरले यी विधिविधानहरू पालन गर्न तिमीहरूलाई आज्ञा गर्दै हुनुहुन्छ । त्यसकारण, तिमीहरूका सारा ह्रदय र सारा प्राणले तिनको पालन गर र तिनलाई मान ।
17 ೧೭ ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.
आज तिमीहरूले घोषणा गरेका छौ, कि परमप्रभु नै तिमीहरूका परमेश्‍वर हुनुहुन्छ, र तिमीहरू उहाँका मार्गहरूमा हिँडी उहाँका विधिविधानहरू, आज्ञाहरू मान्‍ने छौ र उहाँको कुरा सुन्‍ने छौ ।
18 ೧೮ ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ
आज परमप्रभुले घोषणा गर्नुभएको छ, कि तिमीहरू एउटा जाति हौ जो उहाँको प्रतिज्ञामुताबिक उहाँको आफ्नै निज सम्पत्ति हो, र तिमीहरूले उहाँका सबै आज्ञा मान्‍ने छौ ।
19 ೧೯ ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.
अनि उहाँले सृजना गर्नुभएका सबै जातिभन्दा तिमीहरूलाई उच्‍चमा राख्‍नु हुनेछ, र तिमीहरूले प्रशंसा, ख्याति र आदर पाउने छौ । तिमीहरू परमप्रभु तिमीहरूका परमेश्‍वरले भन्‍नुभएझैँ उहाँको निम्ति अलग गरिएका जाति हुने छौ ।”

< ಧರ್ಮೋಪದೇಶಕಾಂಡ 26 >