< ಧರ್ಮೋಪದೇಶಕಾಂಡ 32 >

1 ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.
कान लगाओ, ऐ आसमानो, और मैं बोलूँगा; और ज़मीन मेरे मुँह की बातें सुने।
2 ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.
मेरी ता'लीम मेंह की तरह बरसेगी, मेरी तक़रीर शबनम की तरह टपकेगी; जैसे नर्म घास पर फुआर पड़ती हो, और सब्ज़ी पर झड़ियाँ।
3 ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು.
क्यूँकि मैं ख़ुदावन्द के नाम का इश्तिहार दूँगा। तुम हमारे ख़ुदा की ता'ज़ीम करो।
4 ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
“वह वही चट्टान है, उसकी सन'अत कामिल है; क्यूँकि उसकी सब राहें इन्साफ़ की हैं, वह वफ़ादार ख़ुदा, और बदी से मुबर्रा है, वह मुन्सिफ़ और बर — हक़ है।
5 ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.
यह लोग उसके साथ बुरी तरह से पेश आए, यह उसके फ़र्ज़न्द नहीं। यह उनका 'ऐब है, यह सब कजरौ और टेढ़ी नसल हैं।
6 ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.
क्या तुम ऐ बेवक़ूफ़ और कम'अक़्ल लोगों, इस तरह ख़ुदावन्द को बदला दोगे? क्या वह तुम्हारा बाप नहीं, जिसने तुमको ख़रीदा है? उस ही ने तुमको बनाया और क़याम बख़्शा।
7 ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.
क़दीम दिनों को याद करो, नसल दर नसल के बरसों पर ग़ौर करो; अपने बाप से पूछो, वह तुमको बताएगा; बुज़ुर्गों से सवाल करो, वह तुमसे बयान करेंगे।
8 ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
जब हक़ त'आला ने क़ौमों को मीरास बाँटी, और बनी आदम को जुदा — जुदा किया, तो उसने क़ौमों की सरहदें, बनी इस्राईल के शुमार के मुताबिक़ ठहराईं।
9 ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.
क्यूँकि ख़ुदावन्द का हिस्सा उसी के लोग हैं। या'क़ूब उसकी मीरास का हिस्सा है।
10 ೧೦ ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.
वह ख़ुदावन्द को वीराने और सूने ख़तरनाक वीराने में मिला; ख़ुदावन्द उसके चारों तरफ़ रहा, उसने उसकी ख़बर ली, और उसे अपनी आँख की पुतली की तरह रख्खा।
11 ೧೧ ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.
जैसे 'उक़ाब अपने घोंसले को हिला हिलाकर अपने बच्चों पर मण्डलाता है, वैसे ही उसने अपने बाज़ूओं को फैलाया, और उनको लेकर अपने परों पर उठा लिया।
12 ೧೨ ಯಾವ ಅನ್ಯದೇವರೂ ಇಲ್ಲ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದನು.
सिर्फ़ ख़ुदावन्द ही ने उनकी रहबरी की, और उसके साथ कोई अजनबी मा'बूद न था।
13 ೧೩ ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.
उसने उसे ज़मीन की ऊँची — ऊँची जगहों पर सवार कराया, और उसने खेत की पैदावार खाई; उसने उसे चट्टान में से शहद, और मुश्किल जगह में से तेल चुसाया।
14 ೧೪ ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”
और गायों का मक्खन और भेड़ — बकरियों का दूध और बर्रों की चर्बी, और बसनी नसल के मेंढे और बकरे, और ख़ालिस गेंहू का आटा भी; और तू अंगूर के ख़ालिस रस की मय पिया करता था।
15 ೧೫ ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
लेकिन यसूरून मोटा हो कर लातें मारने लगा; तू मोटा हो कर सुस्त हो गया है, और तुझ पर चर्बी छा गई है; तब उसने ख़ुदा को जिसने उसे बनाया छोड़ दिया, और अपनी नजात की चट्टान की हिक़ारत की।
16 ೧೬ ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.
उन्होंने अजनबी मा'बूदों के ज़रिए' उसे ग़ैरत, और मकरूहात से उसे ग़ुस्सा दिलाया।
17 ೧೭ ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.
उन्होंने जिन्नात के लिए जो ख़ुदा न थे, बल्कि ऐसे मा'बूदों के लिए जिनसे वह वाक़िफ़ न थे, या'नी नये — नये मा'बूदों के लिए जो हाल ही में ज़ाहिर हुए थे, जिनसे उनके बाप दादा कभी डरे नहीं क़ुर्बानी की।
18 ೧೮ ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.
तू उस चट्टान से ग़ाफ़िल हो गया, जिसने तुझे पैदा किया था; तू ख़ुदा को भूल गया, जिसने तुझे पैदा किया।
19 ೧೯ ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು.
“ख़ुदावन्द ने यह देख कर उनसे नफ़रत की, क्यूँकि उसके बेटों और बेटियों ने उसे ग़ुस्सा दिलाया।
20 ೨೦ ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.
तब उसने कहा, 'मैं अपना मुँह उनसे छिपा लूँगा, और देखूँगा कि उनका अन्जाम कैसा होगा; क्यूँकि वह बाग़ी नसल और बेवफ़ा औलाद हैं।
21 ೨೧ ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.
उन्होंने उस चीज़ के ज़रिए' जो ख़ुदा नहीं, मुझे ग़ैरत और अपनी बातिल बातों से मुझे ग़ुस्सा दिलाया; इसलिए मैं भी उनके ज़रिए' से जो कोई उम्मत नहीं उनको ग़ैरत और एक नादान क़ौम के ज़रिए' से उनको ग़ुस्सा दिलाऊँगा।
22 ೨೨ ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು. (Sheol h7585)
इसलिए कि मेरे ग़ुस्से के मारे आग भड़क उठी है, जो पाताल की तह तक जलती जाएगी, और ज़मीन को उसकी पैदावार समेत भसम कर देगी, और पहाड़ों की बुनियादों में आग लगा देगी। (Sheol h7585)
23 ೨೩ ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು.
'मैं उन पर आफ़तों का ढेर लगाऊँगा, और अपने तीरों को उन पर ख़त्म करूँगा।
24 ೨೪ ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.
वह भूक के मारे घुल जाएँगे, और शदीद हरारत और सख़्त हलाकत का लुक़्मा हो जाएँगे; और मैं उन पर दरिन्दों के दाँत और ज़मीन पर के सरकने वाले कीड़ों का ज़हर छोड़ दूँगा।
25 ೨೫ ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.
बाहर वह तलवार से मरेंगे, और कोठरियों के अन्दर ख़ौफ़ से, जवान मर्द और कुँवारियों, दूध पीते बच्चे और पक्के बाल वाले सब यूँ ही हलाक होंगे।
26 ೨೬ ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.
मैंने कहा, मैं उनको दूर — दूर तितर — बितर करूँगा, और उनका तज़किरा नौ' — ए — बशर में से मिटा डालूँगा।
27 ೨೭ ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
लेकिन मुझे दुश्मन की छेड़ छाड़ का अन्देशा था, कि कहीं मुख़ालिफ़ उल्टा समझ कर, यूँ न कहने लगें, कि हमारे ही हाथ बाला हैं और यह सब ख़ुदावन्द से नहीं हुआ।”
28 ೨೮ ಅವರು ವಿವೇಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ.
“वह एक ऐसी क़ौम हैं जो मसलहत से ख़ाली हो उनमें कुछ समझ नहीं।
29 ೨೯ ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!
काश वह 'अक़्लमन्द होते कि इसको समझते, और अपनी 'आक़बत पर ग़ौर करते।
30 ೩೦ ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?
क्यूँ कर एक आदमी हज़ार का पीछा करता, और दो आदमी दस हज़ार को भगा देते, अगर उनकी चट्टान ही उनको बेच न देती, और ख़ुदावन्द ही उनको हवाले न कर देता?
31 ೩೧ ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ.
क्यूँकि उनकी चट्टान ऐसी नहीं जैसी हमारी चट्टान है, चाहे हमारे दुश्मन ही क्यूँ न मुन्सिफ़ हों।
32 ೩೨ ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ.
क्यूँकि उनकी ताक सदूम की ताकों में से और 'अमूरा के खेतों की है; उनके अंगूर हलाहल के बने हुए हैं, और उनके गुच्छे कड़वे हैं।
33 ೩೩ ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು.
उनकी मय अज़दहाओं का बिस, और काले नागों का ज़हर — ए — क़ातिल है
34 ೩೪ ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ?
क्या यह मेरे ख़ज़ानों में सर — ब — मुहर होकर भरा नहीं पड़ा है?
35 ೩೫ ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.
उस वक़्त जब उनके पाँव फिसलें, तो इन्तक़ाम लेना और बदला देना मेरा काम होगाः क्यूँकि उनकी आफ़त का दिन नज़दीक है, और जो हादिसे उन पर गुज़रने वाले हैं वह जल्द आएँगे।
36 ೩೬ ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
क्यूँकि ख़ुदावन्द अपने लोगों का इन्साफ़ करेगा, और अपने बन्दों पर तरस खाएगा; जब वह देखेगा कि उनकी क़ुव्वत जाती रही, और कोई भी, न क़ैदी और न आज़ाद बाक़ी बचा।
37 ೩೭ ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?
और वह कहेगा, उन के मा'बूद कहाँ हैं? वह चट्टान कहाँ, जिस पर उनका भरोसा था;
38 ೩೮ ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.
जो उनके क़ुर्बानियों की चर्बी खाते, और उनके तपावन की मय पीते थे? वही उठ कर तुम्हारी मदद करें, वही तुम्हारी पनाह हों।
39 ೩೯ ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.
'इसलिए अब तुम देख लो, कि मैं ही वह हूँ। और मेरे साथ कोई मा'बूद नहीं। मैं ही मार डालता और मैं ही जिलाता हूँ। मैं ही ज़ख़्मी करता और मैं ही चंगा करता हूँ, और कोई नहीं जो मेरे हाथ से छुड़ाए।
40 ೪೦ ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು,
क्यूँकि मैं अपना हाथ आसमान की तरफ़ उठाकर कहता हूँ, कि चूँकि मैं हमेशा हमेश ज़िन्दा हूँ,
41 ೪೧ ‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;
इसलिए अगर मैं अपनी झलकती तलवार को, तेज़ करूँ, और 'अदालत को अपने हाथ में ले लूँ, तो अपने मुख़ालिफ़ों से इन्तक़ाम लूँगा, और अपने कीना रखने वालों को बदला दूँगा।
42 ೪೨ ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.
मैं अपने तीरों को ख़ून पिला — पिलाकर मस्त कर दूंगा, और मेरी तलवार गोश्त खाएगी — वह ख़ून मक़्तूलों और ग़ुलामों का, और वह गोश्त दुश्मन के सरदारों के सिर का होगा।
43 ೪೩ ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.
'ऐ क़ौमों, उसके लोगों के साथ ख़ुशी मनाओ क्यूँकि वह अपने बन्दों के ख़ून का बदला लेगा, और अपने मुख़ालिफ़ों को बदला देगा, और अपने मुल्क और लोगों के लिए कफ़्फ़ारा देगा।”
44 ೪೪ ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.”
तब मूसा और नून के बेटे होसे'अ ने आ कर इस गीत की सारी बातें लोगों को कह सुनाईं।
45 ೪೫ ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ಹೇಳಿ ಮುಗಿಸಿದ ನಂತರ,
और जब मूसा यह सब बातें सब इस्राईलियों को सुना चुका,
46 ೪೬ ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.
तो उसने उनसे कहा, “जो बातें मैंने तुमसे आज के दिन बयान की हैं, उन सब से तुम दिल लगाना और अपने लड़कों को हुक्म देना कि वह एहतियात रखकर इस शरी'अत की सब बातों पर 'अमल करें।
47 ೪೭ ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.
क्यूँकि यह तुम्हारे लिए कोई बे फ़ायदा बात नहीं, बल्कि यह तुम्हारी ज़िन्दगानी है; और इसी से उस मुल्क में, जहाँ तुम यरदन पार जा रहे हो कि उस पर क़ब्ज़ा करो, तुम्हारी 'उम्र दराज़ होगी।”
48 ೪೮ ಆದೇ ದಿನ ಯೆಹೋವನು ಮೋಶೆಗೆ,
और उसी दिन ख़ुदावन्द ने मूसा से कहा कि,
49 ೪೯ “ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.
“तू इस कोह — ए — 'अबारीम पर चढ़ कर नबू की चोटी को जा, जो यरीहू के सामने मुल्क — ए — मोआब में है; और कनान के मुल्क की जिसे मैं मीरास के तौर पर बनी — इस्राईल को देता हूँ देख ले।
50 ೫೦ ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.
और उसी पहाड़ पर जहाँ तू जाए वफ़ात पाकर अपने लोगों में शामिल हो, जैसे तेरा भाई हारून होर के पहाड़ पर मरा और अपने लोगों में जा मिला।
51 ೫೧ ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.
इसलिए कि तुम दोनों ने बनी — इस्राईल के बीच सीन के जंगल के क़ादिस में मरीबा के चश्मे पर मेरा गुनाह किया, क्यूँकि तुमने बनी — इस्राईल के बीच मेरी बड़ाई न की।
52 ೫೨ ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು.
इसलिए तू उस मुल्क को अपने आगे देख लेगा, लेकिन तू वहाँ उस मुल्क में जो मैं बनी — इस्राईल को देता हूँ जाने न पाएगा।”

< ಧರ್ಮೋಪದೇಶಕಾಂಡ 32 >