< ಧರ್ಮೋಪದೇಶಕಾಂಡ 9 >

1 ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.
हे इस्राएल हो, सुन । तिमीहरूभन्दा महान् र शक्तिशाली जातिहरू अनि आकाशै छुने पर्खाल लगाएका ठुला-ठुला सहरहरूमाथि अधिकार गर्न आज तिमीहरूले यर्दन पार गर्नै लागेका छौ ।
2 ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
तिनीहरू महान् र अग्ला छन् जो अनाकका छोराहरू हुन् जसको बारेमा तिमीहरूलाई थाहै छ र 'अनाकका छोराहरूको सामु को खडा हुन सक्छ?' भनी तिमीहरूले सुनेकै छौ ।
3 ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.
त्यसकारण, आज यो जानिराख कि परमप्रभु तिमीहरूका परमेश्‍वर नै भस्म गर्ने आगोजस्तै तिमीहरूभन्दा अगिअगि जानुहुन्छ । उहाँले तिनीहरूलाई नष्‍ट पार्नुहुने छ, र तिमीहरूको अधीनमा ल्याउनुहुने छ । त्यसैले परमप्रभुले तिमीहरूलाई भन्‍नुभएझैँ तिमीहरूले तिनीहरूलाई धपाउने छौ, र तिनीहरूलाई चाँडै नै नष्‍ट पार्ने छौ ।
4 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
तिमीहरूकै सामु परमप्रभु तिमीहरूका परमेश्‍वरले तिनीहरूलाई निकाल्नुभएपछि आफ्नो ह्रदयमा यसो नभन, 'मेरो धार्मिकताको कारणले गर्दा परमप्रभुले मलाई यो देश अधिकार गर्न ल्याउनुभएको छ ।' बरु यी जातिहरूको दुष्‍टताको कारणले परमप्रभुले तिनीहरूलाई तिमीहरूकै सामु धपाउँदै हुनुहुन्छ ।
5 ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
तिमीहरूको धार्मिकता वा तिमीहरूको ह्रदयको सोझोपनको कारणले गर्दा तिमीहरूले तिनीहरूको देश अधिकार गर्न लागेका होइनौ, तर यी जातिहरूको दुष्‍टताको कारणले गर्दा तिमीहरूका परमेश्‍वरले तिमीहरूकै सामुन्‍ने तिनीहरूलाई धपाउँदै हुनुहुन्छ ताकि उहाँले तिमीहरूका पुर्खाहरू अब्राहाम, इसहाक र याकूबसित शपथ खानुभएको वचनलाई सत्य साबित गर्न सकून् ।
6 ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ.
त्यसकारण यो जानिराख, कि तिमीहरूको धार्मिकताको कारणले परमप्रभु तिमीहरूका परमेश्‍वरले यो असल देश तिमीहरूलाई अधिकारको लागि दिन लाग्‍नुभएको होइन किनकि तिमीहरू त हठी मानिसहरू हौ ।
7 ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.
उजाड-स्थानमा तिमीहरूले परमप्रभु तिमीहरूका परमेश्‍वरलाई कसरी क्रोधित तुल्यायौ भनी याद राख । तिमीहरूले मिश्र देश छाडेदेखि तिमीहरू यस ठाउँमा नआउञ्‍जेलसम्म तिमीहरू परमप्रभुको विरुद्धमा विद्रोही बनेका छौ ।
8 ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.
साथै, हेब्रोनमा तिमीहरूले परमप्रभुलाई क्रोधित तुल्यायौ, र तिमीहरूलाई नाशै पार्ने गरी उहाँ क्रुद्ध हुनुभयो ।
9 ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
परमप्रभुले तिमीहरूसित बाँध्‍नुभएका करारका शिला-पाटीहरू लिन म पर्वतमा उक्लँदा म चालिस दिन चालिस रातसम्म पर्वतमा बसेँ । मैले न रोटी खाएँ, न पानी पिएँ ।
10 ೧೦ ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.
परमप्रभुले मलाई आफ्नै औँलाले लेख्‍नुभएका दुईवटा शिला-पाटी दिनुभयो । सभाको दिनमा आगोको बिचबाट परमप्रभुले पर्वतमा बोल्नुभएका सबै वचन तिनमा लेखिएका थिए ।
11 ೧೧ ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;
ती चालिस दिन र चालिस रातको अन्त्यमा परमप्रभुले मलाई करारका दुईवटा शिला-पाटी दिनुभयो ।
12 ೧೨ ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
परमप्रभुले मलाई भन्‍नुभयो, 'उठेर छिटो गरी यहाँबाट तल जा किनकि तैँले मिश्रबाट ल्याएका तेरा मानिसहरूले आफैलाई भ्रष्‍ट पारेका छन् । मैले तिनीहरूलाई आज्ञा गरेको मार्गबाट तिनीहरू चाँडै नै तर्केर गएका छन् । तिनीहरूले आफ्नो निम्ति ढलौटे मूर्ति बनाएका छन् ।'
13 ೧೩ ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.
यसबाहेक, परमप्रभुले मलाई भन्‍नुभयो, 'मैले यी मानिसहरूलाई देखेको छु र तिनीहरू हठी छन् ।
14 ೧೪ ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.
मलाई एक्लै छोडिदे ताकि मैले तिनीहरूलाई नष्‍ट गर्नू सकूँ र स्वर्गमूनिबाट तिनीहरूको नाउँ मेटाइदिन सकूँ र तँबाट नै तिनीहरूभन्दा महान् र शक्तिशाली जाति बनाउन सकूँ ।'
15 ೧೫ ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ
त्यसैले म फर्केर पर्वतबाट ओर्ली आएँ, अनि पर्वत जलिरहेको थियो । करारका दुईवटा शिला-पाटी मेरा हातमा थिए ।
16 ೧೬ ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.
मैले हेरेँ र तिमीहरूले परमप्रभु तिमीहरूका परमेश्‍वरको विरुद्धमा पाप गरेका थियौ । तिमीहरूले आफ्नो निम्ति बाछाको ढलौटे मूर्ति बनाएका थियौ । परमप्रभुले तिमीहरूलाई आज्ञा गर्नुभएको मार्गबाट तिमीहरू चाँडै नै तर्केर गएका थियौ ।
17 ೧೭ ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು.
मैले ती दुईवटा शिला-पाटीलाई लिएर मेरा हातबाट फालिदिएँ । मैले तिमीहरूकै सामु तिनलाई टुक्रा-टुक्रा पारिदिएँ ।
18 ೧೮ ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.
फेरि, मैले न रोटी खाएँ न पानी पिएँ । परमप्रभुको दृष्‍टिमा दुष्‍ट काम गरेर उहाँलाई चिढ्याई तिमीहरूका सबै पापको कारणले गर्दा चालिस दिन र चालिस रातसम्म म परमप्रभुको सामु लम्पसार परेँ ।
19 ೧೯ ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.
किनकि तिमीहरूलाई नाशै पार्ने गरी तिमीहरूको विरुद्धमा भएको परमप्रभुको रिस र कडा बेखुसीको कारणले म भयभीत भएँ । तर त्यस बेला पनि परमप्रभुले मेरो कुरा सुन्‍नुभयो ।
20 ೨೦ ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.
हारूनलाई नष्‍ट गर्ने गरी उहाँ तिनीसित ज्यादै रिसाउनुभयो । त्यस बेला मैले हारूनको लागि पनि प्रार्थना गरेँ ।
21 ೨೧ ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.
मैले तिमीहरूको पाप अर्थात् तिमीहरूले बनाएको बाछो लिएर त्यसलाई जलाइदिएँ अनि त्यसलाई चकनाचुर पारेर धूलोपिठो पारिदिएँ । मैले त्यस धूलोलाई पर्वतबाट आउने खोलामा फालिदिएँ ।
22 ೨೨ ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.
तबेरा, मस्साह र किब्रोथ-हत्तावामा तिमीहरूले परमप्रभुलाई क्रोधित तुल्यायौ ।
23 ೨೩ ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.
परमप्रभुले तिमीहरूलाई कादेश-बर्नेमा यसो भनी पठाउनुहुँदा, 'मैले तिमीहरूलाई दिएको देशमा गएर त्यसलाई अधिकार गर' तिमीहरूले परमप्रभु तिमीहरूको परमेश्‍वरको आज्ञाको विरुद्धमा विद्रोह गर्‍यौ, अनि उहाँको कुरा मानेनौ वा सुनेनौ ।
24 ೨೪ ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.
मैले तिमीहरूलाई चिनेको दिनदेखि नै तिमीहरू परमप्रभुको विरुद्धमा बागी भएका छौ ।
25 ೨೫ ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.
परमप्रभुले तिमीहरूलाई नष्‍ट गर्नुहुनेथियो भनी उहाँले भन्‍नुभएकोले म चालिस दिन चालिस रातसम्म उहाँको सामु लम्पसार परेँ ।
26 ೨೬ ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.
मैले परमप्रभुलाई यसो भनी प्रार्थना चढाएँ, 'हे परमप्रभु परमेश्‍वर, तपाईंले आफ्ना मानिसहरू अर्थात् तपाईंको सम्पत्तिलाई नष्‍ट नगर्नुहोस् जसलाई तपाईंले आफ्नो महान्‌ताद्वारा छुटकारा दिनुभएको छ र आफ्नो शक्तिशाली हातले मिश्रबाट ल्याउनुभएको छ ।
27 ೨೭ ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.
तपाईंका दासहरू अब्राहाम, इसहाक र याकूबलाई सम्झनुहोस् । यो जातिको हठलाई नहेर्नुहोस् न त तिनीहरूका दुष्‍टता र पापलाई नै हेर्नुहोस् ।
28 ೨೮ ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
नत्रता तपाईंले हामीलाई जुन देशबाट ल्याउनुभयो त्यसले भन्ला, 'परमप्रभुले प्रतिज्ञा गर्नुभएको देशमा उहाँले तिनीहरूलाई लैजान नसक्‍नुभएकोले र उहाँले तिनीहरूलाई घृणा गर्नुभएकोले तिनीहरूलाई उजाड-स्थानमा मार्न उहाँले तिनीहरूलाई बाहिर ल्याउनुभएको छ ।'
29 ೨೯ ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.
तथापि तिनीहरू तपाईंका मानिसहरू र तपाईंको सम्पत्ति हुन् जसलाई तपाईंले आफ्नो महाशक्ति र तपाईंको शक्तिको प्रदर्शनीद्वारा बाहिर ल्याउनुभयो ।'

< ಧರ್ಮೋಪದೇಶಕಾಂಡ 9 >