< ಪ್ರಸಂಗಿ 10 >

1 ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.
जसरी मरेका झिँगाहरूले अत्तरलाई दुर्गन्धित तुल्याइदिन्छन्, त्यसै गरी थोरै मूर्खताले बुद्धि र सम्मानलाई दबाइदिन सक्छ ।
2 ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು. ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವುದು.
बुद्धिमान् मानिसको मन ठिक कुरातिर लाग्छ, तर मूर्खको मन बेठिक कुरातिर लाग्छ ।
3 ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.
मूर्ख सडकमा हिँड्दा त्यसको सोचाइ अपूर्ण हुन्छ जसले त्यो मूर्ख हो भनी हरेकलाई प्रमाणित गर्छ ।
4 ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.
तेरो विरुद्धमा शासकको रिस उठ्यो भने तेरो काम नछाड् । चुपचाप बसाइले ठुलो झोँकलाई पनि शान्त पार्न सक्छ ।
5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.
सूर्यमूनि मैले एउटा खराबी देखेको छु, जुन शासकबाट आउने एक किसिमको त्रास होः
6 ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.
मूर्खहरूलाई नेतृत्वका पदहरू दिइन्छ, जब कि सफल मानिसहरूलाई तल्लो स्तरका पदहरू दिइन्छ ।
7 ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.
मैले दासहरूले घोडा चढेको देखेको छु, र सफल मानिसहरू भुइँमा दासहरूजस्तै गरी हिँडेको देखेको छु ।
8 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.
खाडल खन्‍ने कोही पनि त्यसभित्र खस्‍न सक्छ, र कसैले पर्खाल भत्काउँदा सर्पले त्यसलाई डस्‍न सक्छ ।
9 ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.
ढुङ्गा काट्नेलाई ढुङ्गाले नै चोट पुर्‍याउन सक्छ, र दाउरा काट्ने दाउराद्वारा नै खतरामा पर्छ ।
10 ೧೦ ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
बन्चरो बोधो छ र मानिसले त्यसलाई उध्याउँदैन भने त्यसले बढी शक्तिको प्रयोग गर्नुपर्छ, तर बुद्धिले सफलताको लागि मौका उपलब्ध गराउँछ ।
11 ೧೧ ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.
लट्ठ्याइनअगि नै सर्पले डस्यो भने सपेरालाई केही फाइदा हुँदैन ।
12 ೧೨ ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.
बुद्धिमान् मानिसका वचनहरू अनुग्रहमय हुन्छन्, तर मूर्खको ओठले त्यो आफैलाई नष्‍ट पार्छ ।
13 ೧೩ ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.
जसरी मूर्खको मुखबाट वचनहरू प्रवाह हुन थाल्छन्, त्यसै गरी मूर्खता बाहिर आउँछ, र अन्त्यमा त्यसको मुखबाट दुष्‍ट पागलपना बाहिर निस्कन्छ ।
14 ೧೪ ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
मूर्खले कुराहरू बढाउँछ, तर के हुने छ भनी कसैलाई थाहा हुँदैन । त्यसको पछि के हुने छ भनी कसैले जान्दैन ।
15 ೧೫ ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.
मूर्खहरूको परिश्रमले तिनीहरूलाई यसरी थकाउँछ, कि तिनीहरूलाई सहर जाने बाटोसमेत थाहा हुँदैन ।
16 ೧೬ ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!
त्यो देशलाई धिक्‍कार होस्, जुन देशको राजा जवान ठिटो छ, र त्यसका अगुवाहरूले बिहानैदेखि उपवास बस्‍न थाल्छन्!
17 ೧೭ ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!
तर त्यो देश धन्यको हो, जसको राजा कुलीहरूको छोरो हो, र त्यसका अगुवाहरूले मात्‍नको लागि नभई शक्तिको लागि ठिक समयमा खान्छन्!
18 ೧೮ ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.
अल्छेपनको कारण छाना भत्कन्छ, र निष्क्रिय हातको कारण घर चुहुने हुन्छ ।
19 ೧೯ ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.
मानिसहरूले हाँसोको लागि खाना तयार गर्छन्; दाखमद्यले जीवनमा आनन्द ल्याउँछ, र रुपियाँ-पैसाले दैनिक खाँचोलाई पुरा गर्छ ।
20 ೨೦ ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.
राजालाई नसराप्; तेरो मनमा पनि नसराप्, र तेरो सुत्‍ने कोठाभित्र धनी मानिसहरूलाइ नसराप् । किनकि आकाशका चराचुरुङ्गीहरूले तेरा वचनहरू लिएर जालान् । पखेटा भएकाहरूले तेरो विषयलाई फैलाउन सक्छन् ।

< ಪ್ರಸಂಗಿ 10 >