< ಪ್ರಸಂಗಿ 12 >

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
וּזְכֹר֙ אֶת־בֹּ֣ורְאֶ֔יךָ בִּימֵ֖י בְּחוּרֹתֶ֑יךָ עַ֣ד אֲשֶׁ֤ר לֹא־יָבֹ֙אוּ֙ יְמֵ֣י הָֽרָעָ֔ה וְהִגִּ֣יעוּ שָׁנִ֔ים אֲשֶׁ֣ר תֹּאמַ֔ר אֵֽין־לִ֥י בָהֶ֖ם חֵֽפֶץ׃
2 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
עַ֠ד אֲשֶׁ֨ר לֹֽא־תֶחְשַׁ֤ךְ הַשֶּׁ֙מֶשׁ֙ וְהָאֹ֔ור וְהַיָּרֵ֖חַ וְהַכֹּוכָבִ֑ים וְשָׁ֥בוּ הֶעָבִ֖ים אַחַ֥ר הַגָּֽשֶׁם׃
3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
בַּיֹּ֗ום שֶׁיָּזֻ֙עוּ֙ שֹׁמְרֵ֣י הַבַּ֔יִת וְהִֽתְעַוְּת֖וּ אַנְשֵׁ֣י הֶחָ֑יִל וּבָטְל֤וּ הַטֹּֽחֲנֹות֙ כִּ֣י מִעֵ֔טוּ וְחָשְׁכ֥וּ הָרֹאֹ֖ות בָּאֲרֻבֹּֽות׃
4 ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
וְסֻגְּר֤וּ דְלָתַ֙יִם֙ בַּשּׁ֔וּק בִּשְׁפַ֖ל קֹ֣ול הַֽטַּחֲנָ֑ה וְיָקוּם֙ לְקֹ֣ול הַצִּפֹּ֔ור וְיִשַּׁ֖חוּ כָּל־בְּנֹ֥ות הַשִּֽׁיר׃
5 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
גַּ֣ם מִגָּבֹ֤הַּ יִרָ֙אוּ֙ וְחַתְחַתִּ֣ים בַּדֶּ֔רֶךְ וְיָנֵ֤אץ הַשָּׁקֵד֙ וְיִסְתַּבֵּ֣ל הֶֽחָגָ֔ב וְתָפֵ֖ר הָֽאֲבִיֹּונָ֑ה כִּֽי־הֹלֵ֤ךְ הָאָדָם֙ אֶל־בֵּ֣ית עֹולָמֹ֔ו וְסָבְב֥וּ בַשּׁ֖וּק הַסֹּפְדִֽים׃
6 ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
עַ֣ד אֲשֶׁ֤ר לֹֽא־יִרחַק (יֵרָתֵק֙) חֶ֣בֶל הַכֶּ֔סֶף וְתָרֻ֖ץ גֻּלַּ֣ת הַזָּהָ֑ב וְתִשָּׁ֤בֶר כַּד֙ עַל־הַמַּבּ֔וּעַ וְנָרֹ֥ץ הַגַּלְגַּ֖ל אֶל־הַבֹּֽור׃
7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
וְיָשֹׁ֧ב הֶעָפָ֛ר עַל־הָאָ֖רֶץ כְּשֶׁהָיָ֑ה וְהָר֣וּחַ תָּשׁ֔וּב אֶל־הָאֱלֹהִ֖ים אֲשֶׁ֥ר נְתָנָֽהּ׃
8 “ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
הֲבֵ֧ל הֲבָלִ֛ים אָמַ֥ר הַקֹּוהֶ֖לֶת הַכֹּ֥ל הָֽבֶל׃
9 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
וְיֹתֵ֕ר שֶׁהָיָ֥ה קֹהֶ֖לֶת חָכָ֑ם עֹ֗וד לִמַּד־דַּ֙עַת֙ אֶת־הָעָ֔ם וְאִזֵּ֣ן וְחִקֵּ֔ר תִּקֵּ֖ן מְשָׁלִ֥ים הַרְבֵּֽה׃
10 ೧೦ ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
בִּקֵּ֣שׁ קֹהֶ֔לֶת לִמְצֹ֖א דִּבְרֵי־חֵ֑פֶץ וְכָת֥וּב יֹ֖שֶׁר דִּבְרֵ֥י אֱמֶֽת׃
11 ೧೧ ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
דִּבְרֵ֤י חֲכָמִים֙ כַּדָּ֣רְבֹנֹ֔ות וּֽכְמַשְׂמְרֹ֥ות נְטוּעִ֖ים בַּעֲלֵ֣י אֲסֻפֹּ֑ות נִתְּנ֖וּ מֵרֹעֶ֥ה אֶחָֽד׃
12 ೧೨ ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.
וְיֹתֵ֥ר מֵהֵ֖מָּה בְּנִ֣י הִזָּהֵ֑ר עֲשֹׂ֨ות סְפָרִ֤ים הַרְבֵּה֙ אֵ֣ין קֵ֔ץ וְלַ֥הַג הַרְבֵּ֖ה יְגִעַ֥ת בָּשָֽׂר׃
13 ೧೩ ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
סֹ֥וף דָּבָ֖ר הַכֹּ֣ל נִשְׁמָ֑ע אֶת־הָאֱלֹהִ֤ים יְרָא֙ וְאֶת־מִצְוֹתָ֣יו שְׁמֹ֔ור כִּי־זֶ֖ה כָּל־הָאָדָֽם׃
14 ೧೪ ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
כִּ֤י אֶת־כָּל־מַֽעֲשֶׂ֔ה הָאֱלֹהִ֛ים יָבִ֥א בְמִשְׁפָּ֖ט עַ֣ל כָּל־נֶעְלָ֑ם אִם־טֹ֖וב וְאִם־רָֽע׃

< ಪ್ರಸಂಗಿ 12 >