< ಪ್ರಸಂಗಿ 2 >

1 ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.
मैले मेरो मनमा भनेँ, “अब आइज । म तँलाई खुसीले जाँच गर्ने छु । त्यसैले सुख-विलास गर ।” तर यो पनि अस्थायी मन्द बतासमात्र रहेछ ।
2 “ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು.
मैले हाँसोको विषयमा भनेँ, “यो सन्काहा हो,” र सुख-विलासको विषयमा भनेँ, “यसको के फाइदा छ?”
3 ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.
दाखमद्यले मेरा इच्छाहरूलाई कसरी तृप्‍त पार्ने भनी मैले मेरो मनमा अन्वेषण गरेँ । मैले अझै मूर्खतालाई पक्रिरहेको भए तापनि मैले मेरो मनलाई बुद्धिद्वारा डोर्‍याइन दिएँ । मानिसहरूको जीवन अवधिमा स्वर्गमूनि तिनीहरूको लागि के फाइदा छ भनेर म पत्ता लगाउन चाहन्थेँ ।
4 ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.
मैले ठुला-ठुला कुराहरू सम्पन्‍न गरेँ । मैले आफ्नो लागि घरहरू बनाएँ र दाखबारीहरू लगाएँ ।
5 ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು.
मैले आफ्नो लागि बगैँचाहरू उद्यानहरू बनाएँ । मैले तिनमा हर किसिमका फलफुल लगाएँ ।
6 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು.
जङ्गलमा सिँचाइ गर्न मैले पानीका तलाउहरू बनाएँ अनि रुखहरू लहलह बढे ।
7 ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
मैले कमारा-कमारीहरू किनेँ । मेरो दरबारमा जन्मेका कमराहरू पनि थिए । यरूशलेममा मभन्दा अगि शासन गरेका कुनै पनि राजाको भन्दा मेरो भेडा-बाख्राका बगाल र गाईवस्तुका बथान बढी थिए ।
8 ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.
मैले आफ्नो लागि चाँदी र सुन, राजाहरू र प्रान्तहरूका खजानाहरू थुपारेँ । मैले आफ्नो लागि गायक-गायिकाहरू अर्थात् मानव-जातिको मनोरञ्‍जन र धेरै उपपत्‍नीहरू राखेँ ।
9 ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.
यसरी यरूशलेममा मभन्दा अगि भएका सबैभन्दा म धेरै महान् र धेरै धनी भएँ, अनि बुद्धि मसितै थियो ।
10 ೧೦ ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.
मेरा आँखाले चाहेको कुनै पनि कुरो प्राप्‍त गर्नदेखि मैले रोकिनँ । मैले हृदयलाई कुनै पनि सुख-विलास रोकिनँ, किनकि मेरो हृदय मेरा सबै परिश्रममा आनन्दित हुन्थ्यो, र सुख-विलास मेरा सबै कामको लागि इनाम थियो ।
11 ೧೧ ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
तब मेरा हातले सम्पन्‍न गरेका सबै काम र मैले गरेका कामलाई मैले निरीक्षण गरेँ, तर फेरि पनि हरेक थोक बाफ र बतासलाई खेदेजस्तै मात्र थियो । सूर्यमूनि कुनै लाभ थिएन ।
12 ೧೨ ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ.
तब म बुद्धि, पागलपन र मूर्खताको विषयमा विचार गर्नतिर फर्किएँ । किनकि राजाले पहिले नै गरिसकेको कामभन्दा तिनको पछि आउनेले केचाहिँ बढी गर्न सक्छ र?
13 ೧೩ ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.
जसरी अन्धकारभन्दा ज्योति उत्तम हो, त्यसै गरी मूर्खताभन्दा बुद्धिका फाइदाहरू रहेछन् भनी मैले बुझ्न थालेँ ।
14 ೧೪ ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.
बुद्धिमान् मानिसले आफ्नो शिरमा भएका आँखा त्यो कहाँ जाँदै छ भनी हेर्न प्रयोग गर्छ, तर मूर्खचाहिँ अन्धकारमा हिँड्छ । तर यी सबैमाथि उही दशा आइपर्छ भनी मलाई थाहा छ ।
15 ೧೫ ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
तब मैले मेरो मनमा भनेँ, “मूर्खलाई जे हुन्छ, मलाई पनि त्यही हुने छ । त्यसैले म ज्यादै बुद्धिमान् भएकोमा केचाहिँ फरक पर्छ त?” मैले मेरो मनमा निष्कर्ष निकालेँ, “यो पनि केवल बाफ हो ।”
16 ೧೬ ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.
किनकि मूर्खलाई झैँ बुद्धिमान् मानिसलाई पनि धेरै लामो समयसम्म सम्झँदैन । आउँदा दिनहरूमा हरेक कुरा बिर्सिएको हुने छ । बुद्धिमान् मानिस मूर्खझैँ मर्छ ।
17 ೧೭ ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
सूर्यमूनि गरिएका सबै काम मेरो लागि खराबै मात्र भएकाले मैले जीवनको जाँच गरेँ । यसो हुनुको कारणचाहिँ हरेक कुरो बाफजस्तै हो र बतासलाई खेद्‍ने कोसिस मात्र हो ।
18 ೧೮ ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.
सूर्यमूनि मैले काम गरेर हासिल गरेका मेरा सबै प्राप्‍तिहरूलाई मैले घृणा गरेँ, किनकि मैले ती मपछि आउनेको लागि छोड्नैपर्छ ।
19 ೧೯ ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
किनकि त्यो बुद्धिमान् वा मूर्ख मानिस कुनचाहिँ हुने छ भनी कसलाई थाहा छ र? तापनि सूर्यमूनि मेरो काम र बुद्धिले बनाएको हरेक कुरोमाथि त्यो मालिक हुने छ । यो पनि बाफ हो ।
20 ೨೦ ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು.
त्यसकारण सूर्यमूनि मैले गरेका सबै कामको विषयमा मेरो मन निराश हुन थाल्यो ।
21 ೨೧ ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.
किनकि बुद्धि, ज्ञान र सिपले काम गर्ने कुनै मानिस होला, तर त्यसले आफूसित भएका सबै थोक अर्को मानिसलाई छाडिदिने छ । यो पनि बाफ र ठुलो दुर्भाग्य हो ।
22 ೨೨ ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?
किनकि सूर्यमूनि कडा मेहनतसाथ काम गर्ने र आफ्नो परिश्रमलाई पुरा गर्न कोसिस गर्ने मानिसले के लाभ पाउँछ र?
23 ೨೩ ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ.
हरेक दिन त्यसको काम दर्दनाक र तनावग्रस्त हुन्छ । त्यसैले रातमा त्यसको प्राणले विश्राम पाउने छैन । यो पनि बाफजस्तै हो ।
24 ೨೪ ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
खानु, पिउनु र आफ्नो काममा भएको असल कुरोदेखि सन्तुष्‍ट हुनुभन्दा मानिसको लागि कुनै उत्तम कुरो छैन । यो सत्यताचाहिँ परमेश्‍वरको हातबाट आउँछ भनी मैले देखेँ ।
25 ೨೫ ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು?
किनकि परमेश्‍वरविना कसले खान र कुनै पनि किसिमको सुख-विलासमा रमाउन सक्छ?
26 ೨೬ ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
परमेश्‍वरलाई खुसी पार्ने जो कसैलाई उहाँले बुद्धि, ज्ञान र आनन्द दिनुहुन्छ । तथापि पापीलाई चाहिँ परमेश्‍वरले उहाँलाई खुसी तुल्याउने मानिसको निम्ति जम्मा गर्ने र थुपार्ने काम दिनुहुन्छ । यो पनि बाफ र बतासलाई खेद्‍ने कोसिस मात्र हो ।

< ಪ್ರಸಂಗಿ 2 >