< ಪ್ರಸಂಗಿ 5 >

1 ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.
परमेश्‍वरको भवनमा जाँदा आफ्ना कदमहरूको रखवाली गर् । मूर्खहरूको बलिदान चढाउनुभन्दा सुन्‍नलाई नजिक जा, किनकि के गल्ती गर्दै छन् भनी तिनीहरू बुझ्दैनन् ।
2 ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
बोल्नमा हतार नगर्, र परमेश्‍वरको सामु आफ्नो विषय लैजान तेरो हृदयमा आतुरी नगर् । परमेश्‍वर स्वर्गमा हुनुहुन्छ, तर तँ पृथ्वीमा छस् । त्यसैले तेरा वचनहरू थोरै होऊन् ।
3 ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.
तैँले गर्नुपर्ने र चिन्ता लिनुपर्ने धेरै कुराहरू छन् भने तैँले सम्भवतः खराब सपना देख्‍ने छस् । तैँले जति धेरै बोल्छस्, सम्भवतः त्यति नै धेरै मूर्ख कुराहरू ओकल्छस् ।
4 ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
तैँले परमेश्‍वरमा भाकल गर्दा त्यसलाई पुरा गर्न ढिलो नगर्, किनकि परमेश्‍वर मूर्खहरूसित रमाउनुहुन्‍न । तैँले जे गर्छु भनेर भाकल गरेको छस्, त्यो गरिहाल् ।
5 ನೀನು ಹರಕೆಮಾಡಿದ್ದನ್ನು ನೆರವೇರಿಸದೆ ಇರುವುದಕ್ಕಿಂತ ಹರಕೆಮಾಡದೆ ಇರುವುದು ಒಳ್ಳೆಯದು.
भाकल गरेर पुरा नगर्नु भन्दा भाकलै नगरेको उत्तम हुन्छ ।
6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?
तेरो शरीरलाई पाप गर्न तेरो मुखलाई अनुमति नदे । पुजारीको सन्देशवाहकलाई यसो नभन्, “त्यो भाकल भुल थियो ।” झुटो पाराले भाकल गरी परमेश्‍वरलाई किन रिस उठाउने? तेरा हातको कामलाई नष्‍ट पार्न परमेश्‍वरलाई किन चिढ्याउने?
7 ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.
किनकि धेरै शब्दहरूमा जस्तै धेरै कल्पनामा अर्थहीन बाफ हुन्छ । त्यसैले परमेश्‍वरको भय मान् ।
8 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.
जब तैँले तेरो प्रान्तमा गरिबहरूलाई थिचोमिचो गरिएको र तिनीहरूबाट न्याय र असल व्यवहार खोसिएको देख्छस्, तब कसैलाई थाहै नभएजस्तै गरी चकित नहो, किनकि तिनीहरूको रेखदेख गर्ने मानिसहरू शक्तिमा छन्, र तिनीहरूभन्दा अझै उच्‍च पदमा रहेर तिनीहरूको रेखदेख गर्ने मानिसहरू पनि हुन्छन् ।
9 ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ.
यस बाहेक, खेतबारीको उब्जनी हरेकको लागि हो, र राजा स्वयम्‌ले पनि खेतबारीबाट उब्जनी बटुल्छन् ।
10 ೧೦ ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.
चाँदीलाई प्रेम गर्ने चाँदीबाट सन्तुष्‍ट हुने छैन, र धन-सम्पत्तिलाई प्रेम गर्नेले सधैँ यसको बढी चाह गर्छ । यो पनि बाफ हो ।
11 ೧೧ ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ.
जब समृद्धि बढ्छ, तब यसलाई खाने मुख पनि बढ्छ । मालिकले आफ्ना आँखाले धन-सम्पत्तिलाई हेर्नुभन्दा बाहेक उसलाई केचाहिँ बढी लाभ हुन्छ र?
12 ೧೨ ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು.
धेरै खाए पनि थोरै खाए पनि काम गर्ने मानिसको निद्रा मिठो हुन्छ, तर धनी मानिसको धन-सम्पत्तिले त्यसलाई राम्ररी सुत्‍न दिँदैन ।
13 ೧೩ ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.
सूर्यमूनि मैले एउटा खराबी देखेको छुः मालिकले आफ्नै दुर्दशाको निम्ति धन-सम्पत्ति थुपार्छ ।
14 ೧೪ ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
जब धनी मानिसले दुर्भाग्यबाट आफ्नो धन-सम्पत्ति गुमाउँछ, तब त्यसले पालन-पोषण गरेको त्यसको आफ्नै छोरोको हातमा केही पनि हुँदैन ।
15 ೧೫ ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.
मानिस आफ्नी आमाको कोखबाट नाङ्गै आएजस्तै त्यो पनि नाङ्गै छाडिने छ । त्यसले आफ्नो हातमा आफ्नो परिश्रमको कुनै फल लैजान सक्दैन ।
16 ೧೬ ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?
अर्कोचाहिँ खराबी यही हो, कि मानिस जसरी आउँछ, त्यसरी नै फर्केर जान्छ । त्यसैले बतासको लागि काम गर्ने मानिसलाई केचाहिँ लाभ छ र?
17 ೧೭ ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.
आफ्नो जीवनकालमा त्यसले नैराश्यमा खान्छ, अनि रोग र रिसबाट ज्यादै निराश हुन्छ ।
18 ೧೮ ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.
परमेश्‍वरले हामीलाई दिनुभएको यस जीवनकालमा सूर्यमूनि हामीले परिश्रम गर्दा हाम्रा सारा कामबाट प्राप्‍त कुराहरूको आनन्द मनाउनु, खानु र पिउनु नै ठिक र उचित हो भनी मैले देखेको छु । किनकि यो नै मानिसको जिम्मेवारी हो ।
19 ೧೯ ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
जसलाई परमेश्‍वरले धन-सम्पत्ति र जग्गा-जमिन, अनि त्यसको काममा त्यसको हिस्सा प्राप्‍त गर्ने र आनन्द मनाउने खुबी दिनुभएको छ, त्योचाहिँ परमेश्‍वरको वरदान हो ।
20 ೨೦ ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ.
किनकि त्यसले आफ्नो जीवनका दिनहरूको प्रायः स्मरण गर्दैन, किनकि परमेश्‍वरले त्यसलाई यस्ता कुराहरूमा व्यस्त पारिदिनुहुन्छ जसमा त्यो काम गर्नमा रमाउँछ ।

< ಪ್ರಸಂಗಿ 5 >