< ಪ್ರಸಂಗಿ 7 >

1 ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
महङ्गो अत्तरभन्दा असल नाउँ उत्तम हुन्छ, र जन्मको दिनभन्दा मृत्युको दिन राम्रो हुन्छ ।
2 ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
भोजको घरमा जानुभन्दा शोकको घरमा जानु उत्तम हुन्छ, किनकि जीवनको अन्त्यमा सबै मानिसका शोक आउँछ । जीवित मानिसहरूले यसलाई मनमा राख्‍नैपर्छ ।
3 ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು.
हाँसोभन्दा अफसोस उत्तम हो, किनकि शोकित अनुहारपछि हृदयको प्रसन्‍नता आउँछ ।
4 ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.
बुद्धिमान्‌को हृदय शोकको घरमा हुन्छ, तर मूर्खहरूको हृदय भोजको घरमा हुन्छ ।
5 ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
मूर्खहरूको गीत सुन्‍नुभन्दा बुद्धिमान्‌को हप्की सुन्‍नु उत्तम हो ।
6 ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.
किनभने मूर्खहरूको हाँसो भाँडामुनि पड्कने काँढाको आगोझैँ हुन्छ । यो पनि बाफ हो ।
7 ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.
करकापले निश्‍चय नै बुद्धिमान् मानिसलाई मूर्ख बनाउँछ, र घुसले हृदयलाई भ्रष्‍ट पार्छ ।
8 ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.
कुनै पनि कुरो सुरुभन्दा अन्त्य राम्रो हो, र हृदयमा घमण्ड हुनुभन्दा हृदयमा धैर्यवान् हुनु उत्तम हुन्छ ।
9 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
आत्मामा क्रोधित हुन हतार नगर्, किनकि क्रोधले मूर्खहरूको हृदयमा बास गर्छ ।
10 ೧೦ ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
यसो नभन्, “यीभन्दा पाकाहरूका दिन किन उत्तम हुन्छ?” किनकि बुद्धिको कारण तैँले यो प्रश्‍न सोधेको होइन ।
11 ೧೧ ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
पैतृक-सम्पत्तिजस्तै बुद्धि राम्रो कुरो हो । यसले सूर्य देख्‍नेहरूलाई लाभ दिन्छ ।
12 ೧೨ ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
किनकि रुपियाँ-पैसाले सुरक्षा दिएजस्तै बुद्धिले पनि सुरक्षा दिन्छ, तर ज्ञानको फाइदा यही हो, कि बुद्धि भएको मानिसलाई यसले जीवन दिन्छ ।
13 ೧೩ ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?
परमेश्‍वरका कामहरूलाई विचार गर्: उहाँले बाङ्गो बनाउनुभएकोलाई कसले सिधा पार्न सक्छ?
14 ೧೪ ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
समय राम्रो हुँदा त्यस राम्रो समयमा खुसी भएर बस्, तर समय नराम्रो हुँदा यो कुरा विचार गर्: परमेश्‍वरले दुवैलाई आमनेसामने रहने अनुमति दिनुभएको छ । यही कारणले गर्दा मानिसको पछि के हुँदै छ भनी कसैले पत्ता लगाउने छैन ।
15 ೧೫ ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
मेरा बेकम्मा दिनहरूमा मैले धेरै कुराहरू देखेको छु । धर्मात्माहरूको धार्मिकताको बाबजुत पनि तिनीहरू नष्‍ट हुन्छ, र दुष्‍टहरूको दुष्‍टताको बाबजुत पनि तिनीहरू धेरै वर्षसम्म बाँच्छन् ।
16 ೧೬ ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?
स्वधर्मी नबन्; तेरो आफ्नै दृष्‍टिमा बुद्धिमान् नबन् । तँ किन आफैलाई नष्‍ट गर्छस्?
17 ೧೭ ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ?
ज्यादै दुष्‍ट र मूर्ख नबन् । तेरो समय आउनुअगि नै तँ किन मर्छस्?
18 ೧೮ ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
यो बुद्धिलाई पक्रेर राख्‍नु र धार्मिकतालाई जान नदिनु तेरो लागि राम्रो हुन्छ । किनकि परमेश्‍वरको भय मान्‍ने मानिसले त्यसका सबै कर्तव्य पुरा गर्ने छ ।
19 ೧೯ ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.
कुनै सहरमा भएको दस जना शासकभन्दा बुद्धिमान् मानिससित भएको बुद्धि शक्तिशाली हुन्छ ।
20 ೨೦ ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
पृथ्वीमा भलाइ गर्ने र कहिल्यै पाप नगर्ने धर्मी मानिस छैन ।
21 ೨೧ ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು.
बोलिएको हरेक वचनलाई नसुन्, किनकि त्यसो गर्दा तैँले तेरो नोकरको श्रापलाई पनि सुन्लास् ।
22 ೨೨ ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.
त्यसै गरी, तेरो हृदयमा तैँले प्रायः धेरैलाई सरापेको छस् भनी तँलाई थाहा छ ।
23 ೨೩ ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
मैले बुद्धिले यी सबै प्रमाणित गरेको छु । मैले भनेँ, “म बुद्धिमान् बन्‍ने छु,” तर यो मैले सक्‍नेभन्दा परको कुरो थियो ।
24 ೨೪ ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?
बुद्धि धेरै टाढा र निकै गहिरो छ । कसले यसलाई पाउन सक्छ र?
25 ೨೫ ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.
बुद्धि र वास्तविकताको विषयमा सिक्‍न, जाँच गर्न र खोज्न अनि खराबी बेवकुफ हो र मूर्खताचाहिँ पागलपन हो भनी बुझ्न मैले मेरो मन लगाएँ ।
26 ೨೬ ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.
पासो र जालहरूले भरिएकी कुनै पनि स्‍त्रीको मृत्यभन्दा त्योचाहिँ बढी तितो भएको मैले पाएँ । परमेश्‍वरलाई खुसी पार्ने जो कोही त्यस स्‍त्रीबाट भाग्‍ने छ, तर पापीलाई भने त्यसले लिएर जान्छे ।
27 ೨೭ ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.
“मैले जे पत्ता लगाएको छु, त्यसलाई विचार गर्,” उपदेशक भन्छन् । “वास्तविकताको व्याख्या पत्ता लगाउन मैले एकपछि अर्को खोज थप्दै आएको छु ।
28 ೨೮ ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.
मैले अझै पनि यसको खोजी गर्दै छु, तर मैले यसलाई भेट्टाएको छैनँ । मैले एक हजार पुरुषका बिचमा एउटा धर्मी मानिस भेट्टाएँ, तर स्‍त्रीहरूका बिचमा एउटै पनि भेट्टाइनँ ।
29 ೨೯ ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.
मैले पत्ता लगाएको कुरो केवल यही होः परमेश्‍वरले मानव-जातिलाई सोझो सृष्‍टि गर्नुभयो, तर धेरै कठिनाइको खोजी गर्दै तिनीहरू तर्केर गएका छन् ।”

< ಪ್ರಸಂಗಿ 7 >