< ಪ್ರಸಂಗಿ 9 >

1 ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
मैले धर्मात्मा र बुद्धिमान् मानिसहरू र तिनीहरूका कार्यहरूको विषयमा मेरो मनमा यी सबै कुराबारे विचार गरेँ । ती सबै परमेश्‍वरका हातमा छन् । कसैमाथि प्रेम वा घृणा के आइपर्ने छ भनी कसैलाई थाहा छैन ।
2 ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.
सबैको अन्त्य उही किसिमको हुन्छ । धर्मी र दुष्‍ट मानिसहरू, असल, शुद्ध र अशुद्ध अनि बलिदान चढाउने र बलिदान नचढाउने सबैको दशा एउटै हुन्छ । जसरी असल मानिसहरू मर्छन्, त्यसै गरी पापीहरू मर्ने छन् । जसरी वाचा बाँध्‍ने मर्छ, त्यसै गरी शपथ खान डराउने मानिस पनि मर्ने छ ।
3 ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
सूर्यमूनि गरिने हरेक कुराको लागि एउटा खराब दशा छ । तिनीहरू सबैमा उही कुरो आइपर्छ । मानिसको हृदय खराब कुराहरूले भरिएको छ, र तिनीहरू जिउँदा तिनीहरूको हृदयमा पागलपन हुन्छ । त्यसपछि तिनीहरू मरेकाहरूकहाँ जाने छन् ।
4 ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
सबै बाँचेकाहरूसित मिल्न जानेको आशा हुन्छ । मरेको सिंहभन्दा जिउँदो कुकुर असल हो ।
5 ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
किनकि बाँचेकाहरू मर्ने छन् भनी तिनीहरूलाई थाहा छ, तर मरेकाहरूलाई केही पनि थाहा हुँदैन । तिनीहरूको स्मरणशक्ति गइसकेकोले तिनीहरूले कुनै इनाम पाउँदैन ।
6 ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.
तिनीहरूका प्रेम, घृणा र ईर्ष्या धेरै पहिलै नै गाएब भएर गइसकेका छन् । सूर्यमूनि गरिने कुनै पनि कुराको लागि तिनीहरूले फेरि कुनै ठाउँ पाउने छैनन् ।
7 ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
आफ्नो बाटो लाग्; आनन्द भएर आफ्नो रोटी खा, र प्रसन्‍न हृदय लिएर आफ्नो दाखमद्य पि, किनकि असल कामहरूको उत्सवलाई परमेश्‍वरले अनुमोदन गर्नुहुन्छ ।
8 ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.
तेरा लुगाहरू सधैँ सेता होऊन्, र तेरो शिर तेलले अभिषेक गरियोस् ।
9 ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
परमेश्‍वरले सूर्यमूनि दिनुभएको यस व्यर्थ जीवनकालभरि तेरी पत्‍नीसित खुसी भएर बस् । सूर्यमूनि तेरो कामको लागि त्यो नै तेरो इनाम हो ।
10 ೧೦ ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ. (Sheol h7585)
तेरो हातले जे काम पाउँछ, त्यो शक्ति लगाएर गर्, किनकि तँ जान लागिरहेको पातलमा कुनै काम वा व्याख्या वा ज्ञान वा बुद्धि छैन । (Sheol h7585)
11 ೧೧ ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
मैले सूर्यमूनि केही रोचक कुराहरू देखेको छुः तीव्रगतिमा कुद्‍नेहरूले दौड जित्दैनन् । बलिया मानिसहरूले युद्ध जित्दैनन् । बुद्धिमान् मानिसहरूले रोटी पाउँदैनन् । समझशक्ति भएका मानिसहरूले धन-सम्पत्ति पाउँदैनन् । ज्ञान भएका मानिसहरूले निगाह पाउँदैनन् । बरु, समय र अवसरले तिनीहरू सबैलाई प्रभाव पार्छन् ।
12 ೧೨ ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.
निश्‍चय नै त्यसको समय कहिले आउने छ भनी कसैलाई थाहा छैन । माछा घातक जालमा परेझैँ वा चराचुरुङ्गी पासोमा परेझैँ मानव-जाति खराब समयको पासोमा जेलिएका छन्, जुन पासो अकस्मात् तिनीहरूमाथि आइपर्छन् ।
13 ೧೩ ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.
मैले सूर्यमूनि यस्तो बुद्धि पनि देखेको छु, जसले मलाई निकै प्रभावित पार्‍यो ।
14 ೧೪ ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.
एउटा सानो सहर थियो जहाँ थोरै मात्र मानिसहरू थिए । एउटा महान् राजा यसको विरुद्धमा आएर यसलाई घेरा हाले र यसको विरुद्धमा चारैतिर घेरा-मचान लगाए ।
15 ೧೫ ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.
अब त्यस सहरमा एउटा गरिब मानिस फेला पारियो । त्यो बुद्धिमान् थियो, जसले आफ्नो बुद्धिले सहरलाई बचायो । तरै पनि पछि कसैले पनि त्यस गरिब मानिसलाई सम्झेन ।
16 ೧೬ ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
त्यसैले मैले निष्कर्ष निकालेँ, “शक्तिभन्दा बुद्धि उत्तम हो, तर त्यस गरिब मानिसको बुद्धिलाई तुच्छ ठानियो, र त्यसका वचनहरूलाई ध्यानै दिइएन ।”
17 ೧೭ ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.
मूर्खहरूका बिचमा भएको शासकको चर्को सोरभन्दा नम्र भएर बोलिएका बुद्धिमान् मानिसका वचनहरूलाई राम्ररी ध्यान दिइन्छ ।
18 ೧೮ ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.
युद्धका तरवारहरूभन्दा बुद्धि उत्तम हो, तर एउटा पापीले धेरै असल कामलाई विनाश गर्छ ।

< ಪ್ರಸಂಗಿ 9 >