< ಎಸ್ತೇರಳು 4 >

1 ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.
जे झाले ते सर्व मर्दखयाला समजले, तेव्हा त्याने आपली वस्त्रे फाडली आणि गोणताटाची वस्त्रे परिधान करून डोक्याला राख फासली. तो बाहेर नगरामध्ये आणि मोठयाने आक्रोश करत आणि दुःखाने रडत निघाला.
2 ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು.
पण तो फक्त राजाच्या प्रवेश द्वारापर्यंतच पोचू शकला, कारण गोणताटाची वस्त्रे घातलेल्या कोणालाही राजद्वारातून आत जाण्यास मनाई होती.
3 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.
राजाचा हुकूम ज्या ज्या प्रांतात पोचला तेथे तेथे यहूद्यांमध्ये शोककळा पसरली आणि ते आक्रोश करु लागले. उपवास करून आणि मोठयाने ते आकांत करु लागले. डोक्यात राख घालून आणि गोणताटाची वस्त्रे घालून बहुतेक यहूदी राखेत पडून राहिले.
4 ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.
जेव्हा एस्तेरच्या दासी आणि तिचे सेवक खोजे तिच्याकडे आले आणि त्यांनी तिला मर्दखयाविषयी सांगितले, तेव्हा राणी एस्तेर अतिशय दु: खी आणि नाराज झाली. गोणताटाच्या ऐवजी घालायला तिने मर्दखयाकडे वस्रे पाठवली, पण त्याने ती स्विकारली नाहीत.
5 ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.
एस्तेरने मग हथाकाला बोलावले, हा तिच्या सेवेसाठी निवडलेला राजाच्या खोजांपैकी एकजण होता. हे काय व कशासाठी आहे हे समजावे म्हणून मर्दखयाकडे जाऊन चौकशी करण्याची तिने त्यास आज्ञा दिली.
6 ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.
तेव्हा राजद्वारासमोरच्या नगरातल्या मोकळया जागेत मर्दखय होता तिथे हथाक गेला.
7 ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು.
मर्दखयाने मग त्यास जे घडले ते सर्व सांगितले. यहूद्यांचा वध करण्याबद्दल राजाच्या खजिन्यात नेमकी किती चांदी जमा करायचे हामानाने वचन दिले आहे ते ही त्याने हथाकला सांगितले.
8 ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು.
यहूद्यांच्या वधाची आज्ञा शूशन नगरात दिली होती त्या राजाज्ञेची प्रतही तिला दाखवण्यासाठी दिली. एस्तेरने राजाकडे जाऊन आपल्या लोकांसाठी दयेची याचना व विनंती करावी ही जबाबदारी त्याने तिच्यावर सोपवली.
9 ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.
म्हणून हथाकाने एस्तेरकडे येऊन तिला, मर्दखयाने जे सांगितले ते सर्व कळवले.
10 ೧೦ ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ,
१०मग मर्दखयासाठी एस्तेरने हथाकाजवळ निरोप दिलाः
11 ೧೧ “ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.
११ती म्हणाली, “मर्दखय, राजाचे सर्व अधिकारी आणि राजाच्या प्रदेशातील सर्व लोक हे जाणून आहेत की न बोलावता जो राजाकडे जाईल त्या व्यक्तीसाठी मग तो पुरुष असो की स्त्री, राजाचा एकच कायदा आहेः तो म्हणजे मृत्यूदंड. मात्र राजाने आपला सुवर्ण राजदंड त्या व्यक्तीपुढे केल्यास हा कायदा अंमलात आणला जात नाही. राजाच्या तेवढ्या कृतीने त्या मनुष्यास जीवदान मिळते. आणि मला तर राजाकडून गेल्या तीस दिवसात बोलावणे आलेले नाही.”
12 ೧೨ ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.
१२मग एस्तेरचा हा निरोप मर्दखयाला मिळाला.
13 ೧೩ ಅವನು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ.
१३मर्दखयाला तिचा निरोप मिळाल्यावर त्याने एस्तेरला आपले उत्तर पाठवले. “राजमहालात राहतेस म्हणून तू यहूदी लोकांतून सुरक्षित सुटशील असे समजू नकोस.
14 ೧೪ ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.
१४तू आत्ता गप्प बसलीस तर यहूद्यांना दुसऱ्या ठिकाणाहून सुटका आणि मुक्ती मिळेल, पण तुझा आणि तुझ्या पित्याच्या घराण्याचा मात्र नाश होईल. कोणी सांगावे, या अशा काळासाठीच कदाचित तुझी राणी म्हणून निवड झाली असेल.”
15 ೧೫ ಆಗ ಎಸ್ತೇರಳು ಮೊರ್ದೆಕೈಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು;
१५तेव्हा एस्तेरने मर्दखयाला हे उत्तर पाठवले:
16 ೧೬ ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.
१६“जा, शूशनमधल्या सर्व यहूद्यांना एकत्र घेऊन ये आणि माझ्यासाठी सर्वजण उपास करा. तीन दिवस आणि तीन रात्र काहीही खाऊ पिऊ नका. मी तुमच्यासारखाच उपास करीन, तसेच माझ्या दासीदेखील करतील. आत जाणे नियमाप्रमाणे नसतानाही मी तशीच राजाकडे जाईन. मग मी मरण पावले तर मरण पावले.”
17 ೧೭ ಮೊರ್ದೆಕೈ ಹಿಂದಿರುಗಿ ಹೋಗಿ ಎಸ್ತೇರಳು ಹೇಳಿದಂತೆಯೇ ಮಾಡಿದನು.
१७तेव्हा मर्दखय निघून गेला आणि एस्तेरने त्यास जे करायला सांगितले तसे त्याने केले.

< ಎಸ್ತೇರಳು 4 >