< ಎಸ್ತೇರಳು 9 >

1 ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.
आता बाराव्या महिन्याच्या म्हणजे अदार महिन्याच्या तेराव्या दिवशी लोकांस राजाच्या आज्ञेचे व हुकूमाचे पालन करायचे होते, यहूद्यांच्या शत्रूंनी त्यांच्यावर वरचढ होण्याची आशा धरली होती पण त्याच्या उलट झाले, जे यहूद्यांचा द्वेष करत होते त्या शत्रूंपेक्षा यहूदी आता वरचढ झाले होते.
2 ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.
आपल्याला नेस्तनाबूत करु पाहणाऱ्या लोकांचा जोरदार प्रतिकार करता यावा म्हणून राजा अहश्वेरोशच्या राज्यातील सर्व ठिकाणचे यहूदी आपआपल्या नगरात एकत्र आले. त्यामुळे त्यांच्या विरोधात जायची कोणामध्येच ताकद नव्हती म्हणून यहूद्यांना ते लोक घाबरले.
3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.
शिवाय, सर्व प्रांतामधले अधिकारी, अधिपती, सरदार, आणि राजाचे कारभारी यांनी यहूद्यांना सहाय्य केले, कारण ते सगळे मर्दखयाला घाबरत होते.
4 ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.
मर्दखय राजवाड्यातील मोठा व्यक्ती असून त्याची किर्ती राज्यातील सर्वापर्यंत पोहचली होती, मर्दखयाचे सामर्थ्य उत्तरोत्तर वाढत गेले.
5 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.
यहूद्यांनी आपल्या सर्व शत्रूंचा पाडाव केला. तलवार चालवून त्यांनी शत्रूला ठार केले व शत्रूंचा विध्वंस केला. आपला तिरस्कार करणाऱ्या शत्रूचा आपल्या इच्छेप्रमाणे समाचार घेतला.
6 ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನು ಕೊಂದುಬಿಟ್ಟರು.
शूशन या राजधानीच्या शहरात यहूद्यांनी पाचशेजणांचा वध करून धुव्वा उडवला.
7 ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,
शिवाय त्यांनी पुढील लोकांस ठार केले. पर्शन्दाथा, दलफोन, अस्पाथा,
8 ಪೋರಾತ, ಆದಲ್ಯ, ಅರೀದಾತ,
पोराथा, अदल्या, अरीदाथा,
9 ಪರ್ಮಷ್ಟ, ಅರೀಸೈ, ಅರಿದೈ, ವೈಜಾತ ಎಂಬುವವರಿದ್ದರು.
पर्मश्ता, अरीसई, अरीदय, वैजाथा,
10 ೧೦ ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.
१०हे हामानाचे दहा पुत्र होते. हम्मदाथाचा पुत्र हामान यहूद्यांचा शत्रू होता. यहूद्यांनी या सर्वांना ठार केले खरे, पण त्यांची मालमत्ता लुटली नाही.
11 ೧೧ ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.
११तटबंदी असलेल्या शूशनमध्ये, त्यादिवशी किती जण मारले गेले ते राजाला सांगण्यात आले.
12 ೧೨ ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.
१२तेव्हा राजा एस्तेर राणीला म्हणाला, “हामानाच्या दहा पुत्रासहीत यहूद्यांनी शूशनमध्ये पाचशे लोकांस मारले. आता राजाच्या इतर प्रांतांत काय करावे अशी तुझी इच्छा आहे? तुझी काय विनंती आहे? ती मान्य करण्यात येईल. तुझी काय मागणी आहे? ती तुझ्यासाठी मान्य करण्यात येईल.”
13 ೧೩ ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.
१३एस्तेर म्हणाली, “राजाची मर्जी असेल तर शूशनमध्ये यहूद्यांना आजच्यासारखेच उद्या करु द्यावे आणि हामानाच्या दहा पुत्रांचे देहही खांबावर टांगावे.”
14 ೧೪ ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
१४तेव्हा राजाने तशी आज्ञा दिली. शूशनमध्ये तोच कायदा दुसऱ्या दिवशीही चालू राहिला. हामानाच्या दहा मुलांना टांगले गेले.
15 ೧೫ ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.
१५अदार महिन्याच्या चौदाव्या दिवशी शूशनमधील यहूदी एकत्र जमले आणि त्यांनी शूशनमधल्या तीनशे जणांना जिवे मारले पण त्यांच्या संपत्तीची लूट केली नाही.
16 ೧೬ ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.
१६त्यावेळी राजाच्या प्रांतांमधले यहूदीदेखील आपल्या संरक्षणासाठी एकत्र जमले आणि आपल्या शत्रुपासून त्यांना विसावा मिळाला. जे त्यांचा द्वेष करत होते त्या पंचाहत्तर हजार लोकांस त्यांनी ठार केले, पण त्यांनी ज्यांना ठार केले त्यांच्या मालमत्तेला हात लावला नाही.
17 ೧೭ ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.
१७अदार महिन्याच्या तेराव्या दिवशी हे घडले चौदाव्या दिवशी यहूद्यांनी विश्रांती घेतली आणि तो दिवस त्यांनी आनंदोत्सवाचा व मेजवाणीचा ठरविला.
18 ೧೮ ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.
१८परंतु शूशनमधील यहूदी अदार महिन्याच्या तेराव्या आणि चौदाव्या दिवशी एकत्र आले होते. मग पंधराव्या दिवशी त्यांनी आराम केला. पंधरावा दिवस त्यांनी मेजवाणीचा व आनंदोत्सवाचा ठरविला.
19 ೧೯ ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
१९म्हणून खेडोपाडी राहणारे जे यहूदी गावकूस नसलेल्या गावात राहतात ते अदारच्या चतुर्दशीला पुरीम हा सण साजरा करतात. त्यांचा सण चतुर्दशीला असतो. त्यादिवशी ते मेजवान्या देतात आणि भेटवस्तूंची देवाणघेवाण करतात.
20 ೨೦ ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:
२०मर्दखयाने जे घडले त्याची नोंद केली आणि त्याने राजा अहश्वेरोशच्या प्रांतातील जवळ व दूरच्या सर्व प्रांतातील यहूद्यांना पत्रे पाठवली,
21 ೨೧ ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.
२१दरवर्षी अदार महिन्याचा चौदावा आणि पंधरावा दिवसही अगत्याने पाळावा,
22 ೨೨ ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
२२त्या दिवशी यहूद्यांना आपल्या शत्रूंपासून विसावा मिळाला म्हणून त्या दिवशी आनंदोत्सव साजरा करावा. या महिन्यात त्यांच्या शोकाचे रुपांतर आनंदात झाले. म्हणून हा महिनाही उत्सवासारखा साजरा करावा. या महिन्यात त्यांच्या आक्रोशाचे रुपांतर आनंदोत्सवाच्या दिवसात झाले. मर्दखयाने सर्व यहूद्यांना पत्रे लिहिली. सणासुदीचे दिवस म्हणून त्याने हे दिवस त्यांना साजरे करायला सांगितले. त्या दिवशी त्यांनी मेजवान्या द्याव्यात, भेटवस्तूंची देवाणघेवाण करावी आणि गरिबांना भेटवस्तू द्याव्यात.
23 ೨೩ ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು.
२३मर्दखयाने त्यांना लिहिले होते त्याप्रमाणे यहूद्यांनी सुरवात केली होती तो उत्सव त्यांनी पुढेही चालू ठेवला.
24 ೨೪ ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ.
२४हम्मदाथाचा पुत्र अगागी हामान सर्व यहूद्यांचा शत्रू होता. त्याने यहूद्यांचा नायनाट करण्याचे कपटी कारस्थान रचले होते. यहूद्यांच्या संहारासाठी त्याने चिठ्ठी टाकून दिवस ठरवला होता.
25 ೨೫ ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.
२५परंतु राजासमोर ही गोष्ट आली तेव्हा त्याने अशी लिखीत आज्ञा काढली की, कपटी हामानाने यहूदी लोकांविरूद्ध रचलेल्या कारस्थानाचा दोष त्यांच्या माथी मारावा आणि त्यास व त्याच्या पुत्रांना फाशी देण्यात यावी.
26 ೨೬ ಆ “ಪೂರ್” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು.
२६यास्तव पूर या शब्दावरून “पुरीम” असे म्हणत, म्हणून या दिवसास “पुरीम” नाव पडले. कारण त्या पत्रामध्ये लिहिलेल्या सर्व गोष्टी, त्यांनी पाहिलेले सर्व काही आणि त्याच्याबाबतीत जे घडले होते त्यामुळे यहूद्यांनी ही प्रथा स्विकारली.
27 ೨೭ ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,
२७यहूद्यांनी नवीन रीत व कर्तव्य स्विकारले. ही रीत आपल्यासाठी, आपल्या वंशजासाठी व जो प्रत्येकजन त्यांना जोडलेले आहे तो. आपण हे दोन दिवस प्रत्येक वर्षी साजरे करावेत. ते त्यांच्या नियमानुसार आणि प्रत्येकवर्षी त्याच वेळी साजरे करावे.
28 ೨೮ ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.
२८प्रत्येक पिढी आणि प्रत्येक कुटुंब या दिवसाची आठवण ठेवते. सर्व प्रांतांमध्ये आणि सर्व नगरामध्ये हा दिवस साजरा केला जातो. पुरीमचे हे दिवस साजरे करण्याची प्रथा यहूदी कधीही सोडणार नाहीत. यहूद्यांचे वंशजही हा सण नेहमी लक्षात ठेवतील.
29 ೨೯ ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.
२९मग अबीहाईल ची कन्या राणी एस्तेर आणि यहूदी मर्दखय यांनी पुरीमविषयी एक फर्मान लिहिले. हे दुसरे पत्र ही पूर्णपणे सत्य आहे हे सिध्द करण्यासाठी त्यांनी ते फर्मान राजाच्या पूर्ण अधिकारानिशी काढले.
30 ೩೦ ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.
३०राजा अहश्वेरोशाच्या राज्यातील एकशेसत्तावीस प्रांतांमधील समस्त यहूद्यांना मर्दखयाने पत्रे लिहिली. त्यामध्ये शांतीची सत्य वचने होती.
31 ೩೧ ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು.
३१पुरीम साजरा करायला लोकांस सांगण्यासाठी मर्दखयाने ही पत्रे लिहिली. आणि हा नवीन सण केव्हा साजरा करायचा हे ही त्याने सांगितले. यहूदी मर्दखय आणि राणी एस्तेर यांनी यहूद्यांसाठी आदेश पाठवले होते. यहूद्यांमध्ये आणि त्यांच्या वंशजामध्ये हा दोन दिवसाचा सण पक्का रुजावा म्हणून त्या दोघांनी ही कृती केली. इतर सणांच्या दिवशी जसे ते उपवास करून आणि शोक करून तो सण आठवणीने पाळतात तसा हा सण त्यांनी इथून पुढे पाळावा.
32 ೩೨ ಎಸ್ತೇರಳ ಆ ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಪಟ್ಟಿತು.
३२पुरीमचे नियम एस्तेरच्या आज्ञेने ठरविण्यात आले. आणि या गोष्टींची लेखी नोंद ग्रंथात झाली.

< ಎಸ್ತೇರಳು 9 >