< ವಿಮೋಚನಕಾಂಡ 1 >

1 ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:
وَهَذِهِ أَسْمَاءُ بَنِي إِسْرَائِيلَ ٱلَّذِينَ جَاءُوا إِلَى مِصْرَ. مَعَ يَعْقُوبَ جَاءَ كُلُّ إِنْسَانٍ وَبَيْتُهُ:١
2 ರೂಬೇನ್, ಸಿಮೆಯೋನ್, ಲೇವಿ, ಯೆಹೂದ,
رَأُوبَيْنُ وَشِمْعُونُ وَلَاوِي وَيَهُوذَا٢
3 ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್,
وَيَسَّاكَرُ وَزَبُولُونُ وَبَنْيَامِينُ٣
4 ದಾನ್, ಗಾದ್, ನಫ್ತಾಲಿ ಮತ್ತು ಆಶೇರ್.
وَدَانُ وَنَفْتَالِي وَجَادُ وَأَشِيرُ.٤
5 ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.
وَكَانَتْ جَمِيعُ نُفُوسِ ٱلْخَارِجِينَ مِنْ صُلْبِ يَعْقُوبَ سَبْعِينَ نَفْسًا. وَلَكِنْ يُوسُفُ كَانَ فِي مِصْرَ.٥
6 ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.
وَمَاتَ يُوسُفُ وَكُلُّ إِخْوَتِهِ وَجَمِيعُ ذَلِكَ ٱلْجِيلِ.٦
7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.
وَأَمَّا بَنُو إِسْرَائِيلَ فَأَثْمَرُوا وَتَوَالَدُوا وَنَمَوْا وَكَثُرُوا كَثِيرًا جِدًّا، وَٱمْتَلَأَتِ ٱلْأَرْضُ مِنْهُمْ.٧
8 ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
ثُمَّ قَامَ مَلِكٌ جَدِيدٌ عَلَى مِصْرَ لَمْ يَكُنْ يَعْرِفُ يُوسُفَ.٨
9 ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ.
فَقَالَ لِشَعْبِهِ: «هُوَذَا بَنُو إِسْرَائِيلَ شَعْبٌ أَكْثَرُ وَأَعْظَمُ مِنَّا.٩
10 ೧೦ ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ
هَلُمَّ نَحْتَالُ لَهُمْ لِئَلَّا يَنْمُوا، فَيَكُونَ إِذَا حَدَثَتْ حَرْبٌ أَنَّهُمْ يَنْضَمُّونَ إِلَى أَعْدَائِنَا وَيُحَارِبُونَنَا وَيَصْعَدُونَ مِنَ ٱلْأَرْضِ».١٠
11 ೧೧ ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.
فَجَعَلُوا عَلَيْهِمْ رُؤَسَاءَ تَسْخِيرٍ لِكَيْ يُذِلُّوهُمْ بِأَثْقَالِهِمْ، فَبَنَوْا لِفِرْعَوْنَ مَدِينَتَيْ مَخَازِنَ: فِيثُومَ، وَرَعَمْسِيسَ.١١
12 ೧೨ ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.
وَلَكِنْ بِحَسْبِمَا أَذَلُّوهُمْ هَكَذَا نَمَوْا وَٱمْتَدُّوا. فَٱخْتَشَوْا مِنْ بَنِي إِسْرَائِيلَ.١٢
13 ೧೩ ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.
فَٱسْتَعْبَدَ ٱلْمِصْرِيُّونَ بَنِي إِسْرَائِيلَ بِعُنْفٍ،١٣
14 ೧೪ ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.
وَمَرَّرُوا حَيَاتَهُمْ بِعُبُودِيَّةٍ قَاسِيَةٍ فِي ٱلطِّينِ وَٱللِّبْنِ وَفِي كُلِّ عَمَلٍ فِي ٱلْحَقْلِ. كُلِّ عَمَلِهِمِ ٱلَّذِي عَمِلُوهُ بِوَاسِطَتِهِمْ عُنْفًا.١٤
15 ೧೫ ಇದಲ್ಲದೆ ಐಗುಪ್ತ ದೇಶದ ಅರಸನು “ಶಿಪ್ರಾ” ಮತ್ತು “ಪೂಗಾ” ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು.
وَكَلَّمَ مَلِكُ مِصْرَ قَابِلَتَيِ ٱلْعِبْرَانِيَّاتِ ٱللَّتَيْنِ ٱسْمُ إِحْدَاهُمَا شِفْرَةُ وَٱسْمُ ٱلْأُخْرَى فُوعَةُ،١٥
16 ೧೬ ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.
وَقَالَ: «حِينَمَا تُوَلِّدَانِ ٱلْعِبْرَانِيَّاتِ وَتَنْظُرَانِهِنَّ عَلَى ٱلْكَرَاسِيِّ، إِنْ كَانَ ٱبْنًا فَٱقْتُلَاهُ، وَإِنْ كَانَ بِنْتًا فَتَحْيَا».١٦
17 ೧೭ ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
وَلَكِنَّ ٱلْقَابِلَتَيْنِ خَافَتَا ٱللهَ وَلَمْ تَفْعَلَا كَمَا كَلَّمَهُمَا مَلِكُ مِصْرَ، بَلِ ٱسْتَحْيَتَا ٱلْأَوْلَادَ.١٧
18 ೧೮ ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.
فَدَعَا مَلِكُ مِصْرَ ٱلْقَابِلَتَيْنِ وَقَالَ لَهُمَا: «لِمَاذَا فَعَلْتُمَا هَذَا ٱلْأَمْرَ وَٱسْتَحْيَيْتُمَا ٱلْأَوْلَادَ؟»١٨
19 ೧೯ ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು.
فَقَالَتِ ٱلْقَابِلَتَانِ لِفِرْعَوْنَ: «إِنَّ ٱلنِّسَاءَ ٱلْعِبْرَانِيَّاتِ لَسْنَ كَٱلْمِصْرِيَّاتِ، فَإِنَّهُنَّ قَوِيَّاتٌ يَلِدْنَ قَبْلَ أَنْ تَأْتِيَهُنَّ ٱلْقَابِلَةُ».١٩
20 ೨೦ ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.
فَأَحْسَنَ ٱللهُ إِلَى ٱلْقَابِلَتَيْنِ، وَنَمَا ٱلشَّعْبُ وَكَثُرَ جِدًّا.٢٠
21 ೨೧ ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.
وَكَانَ إِذْ خَافَتِ ٱلْقَابِلَتَانِ ٱللهَ أَنَّهُ صَنَعَ لَهُمَا بُيُوتًا.٢١
22 ೨೨ ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.
ثُمَّ أَمَرَ فِرْعَوْنُ جَمِيعَ شَعْبِهِ قَائِلًا: «كُلُّ ٱبْنٍ يُولَدُ تَطْرَحُونَهُ فِي ٱلنَّهْرِ، لَكِنَّ كُلَّ بِنْتٍ تَسْتَحْيُونَهَا».٢٢

< ವಿಮೋಚನಕಾಂಡ 1 >