< ವಿಮೋಚನಕಾಂಡ 19 >

1 ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.
मिसरामधून प्रवासास निघाल्यानंतर तिसऱ्या महिन्यात इस्राएल लोक सीनायच्या रानात येऊन पोहोचले.
2 ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.
ते लोक रफीदिम सोडून सीनायच्या रानात आले होते; इस्राएल लोकांनी पर्वतासमोर आपला तळ दिला.
3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.
तेव्हा मोशे पर्वत चढून देवाकडे गेला. परमेश्वराने त्यास पर्वतावरून हाक मारून सांगितले की, “तू याकोबाच्या वंशजांना हे सांग, इस्राएल लोकांस हे सांग.
4 ‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
मिसऱ्यांचे मी काय केले आणि तुम्हास गरुडाच्या पंखावर उचलून घेऊन माझ्याजवळ कसे आणले हे तुम्ही पाहिले आहे.
5 ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
म्हणून मी आता तुम्हास सांगतो की तुम्ही माझी वाणी खरोखर ऐकाल आणि माझ्या कराराचे पालन कराल, तर सर्व लोकांमध्ये माझा खास निधी व्हाल. सर्व पृथ्वी माझी आहे.
6 ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.
तुम्ही मला, याजक राज्य, पवित्र राष्ट्र व्हाल. तू इस्राएल लोकांस हेच सांग.”
7 ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
मोशेने येऊन लोकांच्या वडिलांना एकत्र बोलावले; परमेश्वराने त्यास जी वचने सांगण्याची आज्ञा केली होती ती सर्व त्याने त्यांच्यापुढे सांगितली.
8 ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.
आणि सर्व लोक मिळून म्हणाले, “परमेश्वराने सांगितलेले सर्व आम्ही करू.” मोशेने परमेश्वरास लोकांचे म्हणणे सांगितले.
9 ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
आणि परमेश्वर मोशेला म्हणाला, “मी दाट ढगात तुझ्याजवळ येऊन तुझ्याशी बोलेन आणि माझे तुझ्याबरोबरचे बोलणे सर्व लोकांस ऐकू जाईल;” त्यांचा नेहमी तुझ्यावरही विश्वास बसेल, मोशेने लोकांचे म्हणणे परमेश्वरास सांगितले.
10 ೧೦ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,
१०परमेश्वर मोशेला म्हणाला, “तू जाऊन आज आणि उद्या लोकांस पवित्र कर; त्यांनी आपले कपडे स्वच्छ धुवावेत.
11 ೧೧ ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
११तिसऱ्या दिवशी त्यांनी तयार रहावे, कारण तिसऱ्या दिवशी सर्व लोकांदेखत परमेश्वर सीनाय पर्वतावर उतरेल.
12 ೧೨ ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’
१२परंतु लोकांसाठी तेथे सीमारेषा आखून लोकांनी ती ओलांडू नये, त्यांना बजावून सांग; पर्वतावर कोणीही चढू नये जो कोणी पर्वताला स्पर्श करेल तो खास आपल्या जिवाला मुकेल.
13 ೧೩ ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.
१३कोणीही त्यास हात लावू नये. हात लावला तर त्यास दगडमार करावी किंवा बाणांनी विंधावे, तो पशू असो किंवा मनुष्य असो, त्यास जिवंत ठेवू नये. शिंगाचा दीर्घ आवाज होईल तेव्हा लोकांनी पर्वताजवळ यावे.”
14 ೧೪ ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
१४मग मोशे पर्वतावरून खाली उतरला; तो लोकांकडे गेला व देवाच्या भेटीसाठी त्याने त्यांना पवित्र केले. लोकांनी आपले कपडे धुवून स्वच्छ केले.
15 ೧೫ ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.
१५मग मोशे लोकांस म्हणाला, “तीन दिवस तुम्ही देवाची भेट घेण्यासाठी तयार राहा. तोपर्यंत स्त्रीस्पर्श करू नका.”
16 ೧೬ ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
१६तिसरा दिवस उजडताच मेघगर्जना झाली व विजा चमकू लागल्या, पर्वतावर दाट ढग आले आणि प्रचंड शिंगाचा फार आवाज होऊ लागला. तेव्हा छावणीत राहणारे सर्व लोक थरथर कापू लागले.
17 ೧೭ ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.
१७नंतर मोशेने लोकांस छावणीतून बाहेर काढून देवाच्या दर्शनाला बाहेर आणले आणि ते पर्वताच्या तळाजवळ उभे राहिले.
18 ೧೮ ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
१८परमेश्वर सीनाय पर्वतावर अग्नीतून उत्तरला म्हणून तो पर्वत धुराने झाकून गेला. भट्टीतून येणाऱ्या धुरासारखा त्याचा धूर वर आला, आणि सर्व पर्वत थरथरू लागला.
19 ೧೯ ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
१९शिंगाचा आवाज मोठमोठा होऊ लागला. तेव्हा मोशे बोलू लागला आणि देव त्यास आपल्या वाणीने उत्तर देत गेला.
20 ೨೦ ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
२०परमेश्वराने पर्वताच्या शिखरावर उतरून मोशेला सीनाय पर्वताच्या शिखरावर बोलावले. तेव्हा तो पर्वतावर गेला.
21 ೨೧ ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
२१परमेश्वर मोशेला म्हणाला, “तू खाली जा आणि लोकांस बजावून सांग की त्यांनी मर्यादा ओलांडून परमेश्वर काय आहे ते पाहण्यास तिकडे येऊ नये. जर ते तसे करतील तर बरेच जण मरतील.
22 ೨೨ ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.
२२तसेच परमेश्वराजवळ येणाऱ्या याजकांनीही पवित्र व्हावे; नाहीतर परमेश्वर त्यांना शिक्षा करील.”
23 ೨೩ ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
२३मोशेने परमेश्वरास सांगितले, “लोक सीनाय पर्वतावर येऊ शकणार नाहीत, कारण तूच स्वत: आम्हांला मर्यादा घालून दिली व सक्त ताकीद दिली व तो अधिक पवित्र करण्यास सांगितले.”
24 ೨೪ ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.
२४परमेश्वर त्यास म्हणाला, “तू खाली लोकांकडे जा व मागे येताना अहरोनाला तुझ्याबरोबर परत आण, परंतु याजक किंवा इतर लोकांस इकडे येऊ देऊ नको; ते जर माझ्याजवळ येतील तर मी त्यांना शिक्षा करीन.”
25 ೨೫ ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.
२५मग मोशेने खाली जाऊन लोकांस हे सांगितले.

< ವಿಮೋಚನಕಾಂಡ 19 >