< ವಿಮೋಚನಕಾಂಡ 23 >

1 ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
לֹא תִשָּׂא שֵׁמַע שָׁוְא אַל־תָּשֶׁת יָֽדְךָ עִם־רָשָׁע לִהְיֹת עֵד חָמָֽס׃
2 ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
לֹֽא־תִהְיֶה אַחֲרֵֽי־רַבִּים לְרָעֹת וְלֹא־תַעֲנֶה עַל־רִב לִנְטֹת אַחֲרֵי רַבִּים לְהַטֹּֽת׃
3 ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.
וְדָל לֹא תֶהְדַּר בְּרִיבֽוֹ׃
4 ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.
כִּי תִפְגַּע שׁוֹר אֹֽיִבְךָ אוֹ חֲמֹרוֹ תֹּעֶה הָשֵׁב תְּשִׁיבֶנּוּ לֽוֹ׃
5 ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.
כִּֽי־תִרְאֶה חֲמוֹר שֹׂנַאֲךָ רֹבֵץ תַּחַת מַשָּׂאוֹ וְחָדַלְתָּ מֵעֲזֹב לוֹ עָזֹב תַּעֲזֹב עִמּֽוֹ׃
6 ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.
לֹא תַטֶּה מִשְׁפַּט אֶבְיֹנְךָ בְּרִיבֽוֹ׃
7 ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
מִדְּבַר־שֶׁקֶר תִּרְחָק וְנָקִי וְצַדִּיק אַֽל־תַּהֲרֹג כִּי לֹא־אַצְדִּיק רָשָֽׁע׃
8 ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
וְשֹׁחַד לֹא תִקָּח כִּי הַשֹּׁחַד יְעַוֵּר פִּקְחִים וִֽיסַלֵּף דִּבְרֵי צַדִּיקִֽים׃
9 ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.
וְגֵר לֹא תִלְחָץ וְאַתֶּם יְדַעְתֶּם אֶת־נֶפֶשׁ הַגֵּר כִּֽי־גֵרִים הֱיִיתֶם בְּאֶרֶץ מִצְרָֽיִם׃
10 ೧೦ ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ.
וְשֵׁשׁ שָׁנִים תִּזְרַע אֶת־אַרְצֶךָ וְאָסַפְתָּ אֶת־תְּבוּאָתָֽהּ׃
11 ೧೧ ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.
וְהַשְּׁבִיעִת תִּשְׁמְטֶנָּה וּנְטַשְׁתָּהּ וְאָֽכְלוּ אֶבְיֹנֵי עַמֶּךָ וְיִתְרָם תֹּאכַל חַיַּת הַשָּׂדֶה כֵּֽן־תַּעֲשֶׂה לְכַרְמְךָ לְזֵיתֶֽךָ׃
12 ೧೨ ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.
שֵׁשֶׁת יָמִים תַּעֲשֶׂה מַעֲשֶׂיךָ וּבַיּוֹם הַשְּׁבִיעִי תִּשְׁבֹּת לְמַעַן יָנוּחַ שֽׁוֹרְךָ וַחֲמֹרֶךָ וְיִנָּפֵשׁ בֶּן־אֲמָתְךָ וְהַגֵּֽר׃
13 ೧೩ ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.
וּבְכֹל אֲשֶׁר־אָמַרְתִּי אֲלֵיכֶם תִּשָּׁמֵרוּ וְשֵׁם אֱלֹהִים אֲחֵרִים לֹא תַזְכִּירוּ לֹא יִשָּׁמַע עַל־פִּֽיךָ׃
14 ೧೪ ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.
שָׁלֹשׁ רְגָלִים תָּחֹג לִי בַּשָּׁנָֽה׃
15 ೧೫ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.
אֶת־חַג הַמַּצּוֹת תִּשְׁמֹר שִׁבְעַת יָמִים תֹּאכַל מַצּוֹת כַּֽאֲשֶׁר צִוִּיתִךָ לְמוֹעֵד חֹדֶשׁ הָֽאָבִיב כִּי־בוֹ יָצָאתָ מִמִּצְרָיִם וְלֹא־יֵרָאוּ פָנַי רֵיקָֽם׃
16 ೧೬ ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.
וְחַג הַקָּצִיר בִּכּוּרֵי מַעֲשֶׂיךָ אֲשֶׁר תִּזְרַע בַּשָּׂדֶה וְחַג הָֽאָסִף בְּצֵאת הַשָּׁנָה בְּאׇסְפְּךָ אֶֽת־מַעֲשֶׂיךָ מִן־הַשָּׂדֶֽה׃
17 ೧೭ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.
שָׁלֹשׁ פְּעָמִים בַּשָּׁנָה יֵרָאֶה כׇּל־זְכוּרְךָ אֶל־פְּנֵי הָאָדֹן ׀ יְהֹוָֽה׃
18 ೧೮ ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.
לֹֽא־תִזְבַּח עַל־חָמֵץ דַּם־זִבְחִי וְלֹֽא־יָלִין חֵֽלֶב־חַגִּי עַד־בֹּֽקֶר׃
19 ೧೯ ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
רֵאשִׁית בִּכּוּרֵי אַדְמָתְךָ תָּבִיא בֵּית יְהֹוָה אֱלֹהֶיךָ לֹֽא־תְבַשֵּׁל גְּדִי בַּחֲלֵב אִמּֽוֹ׃
20 ೨೦ ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.
הִנֵּה אָנֹכִי שֹׁלֵחַ מַלְאָךְ לְפָנֶיךָ לִשְׁמׇרְךָ בַּדָּרֶךְ וְלַהֲבִיאֲךָ אֶל־הַמָּקוֹם אֲשֶׁר הֲכִנֹֽתִי׃
21 ೨೧ ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.
הִשָּׁמֶר מִפָּנָיו וּשְׁמַע בְּקֹלוֹ אַל־תַּמֵּר בּוֹ כִּי לֹא יִשָּׂא לְפִשְׁעֲכֶם כִּי שְׁמִי בְּקִרְבּֽוֹ׃
22 ೨೨ ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
כִּי אִם־שָׁמוֹעַ תִּשְׁמַע בְּקֹלוֹ וְעָשִׂיתָ כֹּל אֲשֶׁר אֲדַבֵּר וְאָֽיַבְתִּי אֶת־אֹיְבֶיךָ וְצַרְתִּי אֶת־צֹרְרֶֽיךָ׃
23 ೨೩ ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.
כִּֽי־יֵלֵךְ מַלְאָכִי לְפָנֶיךָ וֶהֱבִֽיאֲךָ אֶל־הָֽאֱמֹרִי וְהַחִתִּי וְהַפְּרִזִּי וְהַֽכְּנַעֲנִי הַחִוִּי וְהַיְבוּסִי וְהִכְחַדְתִּֽיו׃
24 ೨೪ ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.
לֹֽא־תִשְׁתַּחֲוֶה לֵאלֹֽהֵיהֶם וְלֹא תׇֽעׇבְדֵם וְלֹא תַעֲשֶׂה כְּמַֽעֲשֵׂיהֶם כִּי הָרֵס תְּהָרְסֵם וְשַׁבֵּר תְּשַׁבֵּר מַצֵּבֹתֵיהֶֽם׃
25 ೨೫ ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
וַעֲבַדְתֶּם אֵת יְהֹוָה אֱלֹֽהֵיכֶם וּבֵרַךְ אֶֽת־לַחְמְךָ וְאֶת־מֵימֶיךָ וַהֲסִרֹתִי מַחֲלָה מִקִּרְבֶּֽךָ׃
26 ೨೬ ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.
לֹא תִהְיֶה מְשַׁכֵּלָה וַעֲקָרָה בְּאַרְצֶךָ אֶת־מִסְפַּר יָמֶיךָ אֲמַלֵּֽא׃
27 ೨೭ ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.
אֶת־אֵֽימָתִי אֲשַׁלַּח לְפָנֶיךָ וְהַמֹּתִי אֶת־כׇּל־הָעָם אֲשֶׁר תָּבֹא בָּהֶם וְנָתַתִּי אֶת־כׇּל־אֹיְבֶיךָ אֵלֶיךָ עֹֽרֶף׃
28 ೨೮ ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.
וְשָׁלַחְתִּי אֶת־הַצִּרְעָה לְפָנֶיךָ וְגֵרְשָׁה אֶת־הַחִוִּי אֶת־הַֽכְּנַעֲנִי וְאֶת־הַחִתִּי מִלְּפָנֶֽיךָ׃
29 ೨೯ ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.
לֹא אֲגָרְשֶׁנּוּ מִפָּנֶיךָ בְּשָׁנָה אֶחָת פֶּן־תִּהְיֶה הָאָרֶץ שְׁמָמָה וְרַבָּה עָלֶיךָ חַיַּת הַשָּׂדֶֽה׃
30 ೩೦ ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು.
מְעַט מְעַט אֲגָרְשֶׁנּוּ מִפָּנֶיךָ עַד אֲשֶׁר תִּפְרֶה וְנָחַלְתָּ אֶת־הָאָֽרֶץ׃
31 ೩೧ ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.
וְשַׁתִּי אֶת־גְּבֻלְךָ מִיַּם־סוּף וְעַד־יָם פְּלִשְׁתִּים וּמִמִּדְבָּר עַד־הַנָּהָר כִּי ׀ אֶתֵּן בְּיֶדְכֶם אֵת יֹשְׁבֵי הָאָרֶץ וְגֵרַשְׁתָּמוֹ מִפָּנֶֽיךָ׃
32 ೩೨ ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.
לֹֽא־תִכְרֹת לָהֶם וְלֵאלֹֽהֵיהֶם בְּרִֽית׃
33 ೩೩ ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.
לֹא יֵשְׁבוּ בְּאַרְצְךָ פֶּן־יַחֲטִיאוּ אֹתְךָ לִי כִּי תַעֲבֹד אֶת־אֱלֹהֵיהֶם כִּֽי־יִהְיֶה לְךָ לְמוֹקֵֽשׁ׃

< ವಿಮೋಚನಕಾಂಡ 23 >