< ವಿಮೋಚನಕಾಂಡ 23 >

1 ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
कसैको बारेमा झुटा गवाही नदेओ । बेइमानी गवाही दिने दुष्‍ट मानिससित नमिल ।
2 ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
खराबी गर्न भिडको पछि नलाग, न त न्यायलाई बङ्ग्याउन भिडको पक्ष लेओ ।
3 ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.
गरिब मानिसको मुद्दामा उसको पक्षपात नगर ।
4 ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.
आफ्नो शत्रुको गोरु वा गधा बिच्केर जाँदै गरेको देख्यौ भने त्यसलाई फर्काएर त्यसकहाँ ल्याइदेओ ।
5 ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.
तिमीहरूलाई घृणा गर्ने कुनै व्यक्तिको गधा भारीले थिचिएर भुइँमा लडेको देख्यौ भने त्यसलाई त्यत्तिकै नछोड । गधासँगै मदत गर ।
6 ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.
मुद्दा मामिलामा गरिबहरूको न्याय हरण नगर ।
7 ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
झुटा गवाही दिन अरूहरूसित नमिल, र निर्दोष वा धर्मीहरूलाई नमार किनकि म दुष्‍टहरूलाई कहिल्यै निर्दोष ठहराउनेछैनँ ।
8 ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
कहिल्यै घुस नलेओ किनकि घुसले देख्‍नेहरूलाई अन्धो तुल्याइदिन्छ र इमानदार मानिसहरूका वचनलाई बङ्ग्याइदिन्छ ।
9 ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.
परदेशीलाई थिचोमिचो नगर किनकि तिमीहरू मिश्र देशमा परदेशी भएर बाँचेकाले परदेशीको जीवन कस्तो हुन्छ भनी तिमीहरू जान्दछौ ।
10 ೧೦ ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ.
छ वर्षसम्म तिमीहरूले आ-आफ्ना जमिनमा बिउ रोपी फसल जम्मा गर ।
11 ೧೧ ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.
तर सातौँ वर्षमा चाहिँ हलो नजोती त्यसलाई बाँझै छाडिदेओ ताकि तिमीहरूका बिचमा भएका गरिब मानिसहरूले खान सकून् । तिनीहरूले छाडेका जङ्गली जनावरहरूले खानेछन् । तिमीहरूका दाखबारी र भद्राक्षबारीलाई पनि त्यसै गर ।
12 ೧೨ ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.
छ दिनसम्म आफ्नो काम गर, तर सातौँ दिनमा चाहिँ विश्राम गर । तिमीहरूका गोरु र गधाले पनि विश्राम पाउन सकून् भनेर यसो गर अनि तिमीहरूका कमारीको छोरो र परदेशीले पनि ताजा महसुस गर्न सकून् भनेर यस गर ।
13 ೧೩ ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.
मैले तिमीहरूलाई भनेका हरेक कुरामा ध्यान देओ । अरू देवी-देवताहरूको चर्चा नगर, न त तिमीहरूका मुखबाट तिनीहरूको नाउँ नै सुनियोस् ।
14 ೧೪ ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.
मेरो निम्ति चाड मान्‍न हरेक वर्ष तिन पटक यात्रा गर ।
15 ೧೫ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.
तिमीहरूले अखमिरी रोटीको चाड मान्‍नू । मैले आज्ञा गरेझैँ तिमीहरूले सात दिनसम्म अखमिरी रोटी खानू । त्यस बेला तिमीहरू आबीब महिनामा मेरो सामु देखा पर्नू जुन यही उद्देश्यको लागि तयार पारिएको हो । तिमीहरू यही महिनामा मिश्रबाट बाहिर निस्केर आयौ । तर तिमीहरू खाली हात मेरो सामु देखा नपर्नू ।
16 ೧೬ ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.
तिमीहरूले आफ्ना खेतहरूमा बिउ छर्दा तिमीहरूको परिश्रमको अगौटे फलको सम्झनामा कटनीको चाड मान्‍नू । खेतहरूबाट तिमीहरूले अन्‍न बटुल्दा वर्षको अन्त्यमा तिमीहरूले अन्‍न भित्र्याउने चाड मनाओ ।
17 ೧೭ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.
तिमीहरूका सबै पुरुष हरेक वर्ष तिन पटक परमप्रभुको सामु देखा पर्नू ।
18 ೧೮ ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.
मलाई चढाउने बलिको रगत खमिर हालेको रोटीसितै नचढाओ । मेरा चाडहरूमा चढाइने बलिदानहरूको बोसो रातभरि रहेर बिहानसम्म रहनुहुँदैन ।
19 ೧೯ ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
तिमीहरूले मेरो घर अर्थात् परमप्रभु तिमीहरूका परमेश्‍वरको घरमा अगौटे फलहरूमध्ये सबैभन्दा असलचाहिँ ल्याउनू । बाख्राको पाठो त्यसको माउको दूधमा नपकाओ ।
20 ೨೦ ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.
बाटोमा तिमीहरूको सुरक्षा दिन र मैले तिमीहरूका निम्ति तयार पारिराखेको ठाउँमा तिमीहरूलाई ल्याउन म तिमीहरूका अगिअगि एउटा दूत पठाउनेछु ।
21 ೨೧ ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.
तिनको कुरा सुनी तिनको आज्ञा पालन गर । तिनलाई नचिढ्याओ किनकि तिनले तिमीहरूका अपराधहरू क्षमा दिनेछैनन् । तिनैमा मेरो नाउँ छ ।
22 ೨೨ ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
तिमीहरूले वास्तवमै तिनका आज्ञा मान्यौ र मैले भनेका हरेक कुरा गर्‍यौ भने म तिमीहरूका शत्रुहरूका शत्रु हुनेछु र तिमीहरूका वैरीहरूका वैरी हुनेछु ।
23 ೨೩ ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.
मेरा दूत तिमीहरूका अगिअगि जानेछन् र तिनले तिमीहरूलाई एमोरी, हित्ती, परिज्‍जी, कनानी, हिव्वी र यबूसीहरूकहाँ ल्याउनेछन् । म तिनीहरूलाई नष्‍ट गर्नेछु ।
24 ೨೪ ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.
तिमीहरू तिनीहरूका देवी-देवताहरूको सामु ननिहरनू, तिनीहरूको पूजा नगर्नू न त तिनीहरूले गरेजस्तै गर्नू । बरु तिमीहरूले तिनीहरूलाई बिलकुलै नाश गरिदिनू र तिनीहरूका ढुङ्गाका मूर्तिहरूलाई टुक्राटुक्रा पारिदिनू ।
25 ೨೫ ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
तिमीहरूले परमप्रभु तिमीहरूका परमेश्‍वरको आराधना गर्नू, अनि उहाँले तिमीहरूका अन्‍न र पानीमा आशिष् दिनुहुनेछ । म तिमीहरूका बिचबाट रोग हटाइदिनेछु ।
26 ೨೬ ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.
तिमीहरूको देशमा कुनै पनि स्‍त्री बाँझी हुनेछैन न त कसैको गर्भ तुहिनेछ ।
27 ೨೭ ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.
म तिमीहरूलाई दीर्घायु दिनेछु । तिमीहरू अगाडि बढ्ने देशमा म मेरो डर अगिअगि पठाउनेछु । म तिमीहरूले भेट्ने सबै मानिसलाई मार्नेछु । म तिमीहरूका सबै शत्रुलाई तिमीहरूको डरको कारणले भगाउनेछु ।
28 ೨೮ ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.
म तिमीहरूका अगिअगि अरिङ्गालहरू पठाउनेछु जसले हिव्वी, कनानी र हित्तीहरूलाई तिमीहरूभन्दा अगाडि नै धपाउनेछन् ।
29 ೨೯ ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.
म तिनीहरूलाई एकै वर्षमा तिमीहरूको सामुन्‍नेबाट धपाउनेछैनँ, नत्रता देश उजाड हुनेछ र जङ्गली जनावरहरू तिमीहरूका निम्ति अत्यधिक हुनेछन् ।
30 ೩೦ ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು.
बरु, तिमीहरूको वृद्धि भई तिमीहरू देशमा नभरिएसम्म म तिनीहरूलाई तिमीहरूकै सामु अलिअलि गरेर धपाउनेछु ।
31 ೩೧ ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.
नर्कटहरूको समुद्रदेखि पलिश्तिहरूको समुद्रसम्म र उजाड-स्थानदेखि यूफ्रेटिस नदीसम्म म तिमीहरूका सिमाना तोकिदिनेछु । त्यस देशका बासिन्दाहरूमाथि म तिमीहरूलाई विजय दिनेछु । तिमीहरूले तिमीहरूकै सामु तिनीहरूलाई धपाउनेछौ ।
32 ೩೨ ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.
तिनीहरूसित वा तिनीहरूका देवी-देवताहरूसित करार नबाँध्‍नू ।
33 ೩೩ ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.
तिनीहरू तिमीहरूको देशमा बस्‍नुहुँदैन नत्रता तिनीहरूले तिमीहरूलाई मेरो विरुद्धमा पाप गर्न लगाउनेछन् । तिमीहरूले तिनीहरूका देवी-देवताहरूलाई पुजा गर्‍यौ भने निश्‍चय नै यो तिमीहरूका लागि पासो हुनेछ ।”

< ವಿಮೋಚನಕಾಂಡ 23 >