< ವಿಮೋಚನಕಾಂಡ 32 >

1 ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.
మోషే కొండ దిగి రావడం ఆలస్యం కావడం చూసిన ప్రజలు అహరోను దగ్గరికి వచ్చారు. “లే, మా ముందుండి మమ్మల్ని నడిపించడానికి మా కోసం ఒక దేవుణ్ణి సిద్ధం చెయ్యి. ఐగుప్తు నుండి మమ్మల్ని బయటకు తీసుకు వచ్చిన మోషే అనే వాడు ఏమయ్యాడో మాకు తెలియడం లేదు” అన్నారు.
2 ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.
అప్పుడు అహరోను “మీ భార్యల, కొడుకుల, కూతుళ్ళ చెవులకు ఉన్న బంగారు పోగులు తీసి నా దగ్గరికి తీసుకు రండి” అని చెప్పాడు.
3 ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು.
ప్రజలంతా తమ చెవులకున్న బంగారు పోగులు తీసి అహరోను దగ్గరికి తెచ్చారు.
4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.
అతడు వాటిని తీసుకుని దూడ రూపం అచ్చుతో పోత పోసి బంగారం దూడను తయారు చేయించాడు. అప్పుడు ప్రజలు “ఓ ఇశ్రాయేలూ, ఐగుప్తు దేశం నుండి నిన్ను రప్పించిన నీ దేవుడు ఇదే” అని కేకలు వేశారు.
5 ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.
అహరోను దాన్ని చూసి దాని ఎదుట ఒక బలిపీఠం కట్టించాడు. తరువాత అహరోను “రేపు యెహోవాకు పండగ జరుగుతుంది” అని చాటింపు వేయించాడు.
6 ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.
తరువాతి రోజు ప్రజలు ఉదయాన్నే లేచి హోమబలులు, శాంతిబలులు సమర్పించారు. తరువాత ప్రజలు తినడానికి, తాగడానికి కూర్చున్నారు. నాట్యం చేయడం మొదలు పెట్టారు.
7 ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.
అప్పుడు యెహోవా మోషేతో ఇలా అన్నాడు. “కొండ దిగి వెళ్ళు. ఐగుప్తు దేశం నుండి నువ్వు తీసుకు వచ్చిన నీ ప్రజలు చెడిపోయారు.
8 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.
వాళ్ళు పాటించాలని నేను నియమించిన ఉపదేశాల నుండి అప్పుడే తప్పిపోయారు. వాళ్ళ కోసం పోత పోసిన దూడ విగ్రహం తయారు చేసుకుని దానికి సాగిలపడి బలులు అర్పించి ‘ఓ ఇశ్రాయేలూ, ఐగుప్తు దేశం నుండి నిన్ను రప్పించిన నీ దేవుడు ఇదే’ అని చెప్పుకుంటున్నారు.”
9 ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ
యెహోవా ఇంకా ఇలా అన్నాడు. “నేను ఈ ప్రజలను గమనిస్తున్నాను. వాళ్ళు కఠిన హృదయులయ్యారు.
10 ೧೦ ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
౧౦నువ్వు చూస్తూ ఉండు, నా కోపం వారి మీద రగులుకునేలా చేస్తాను. వాళ్ళను దహించివేసి నిన్ను గొప్ప జనంగా చేస్తాను.”
11 ೧೧ ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?
౧౧అందుకు మోషే తన దేవుడైన యెహోవాను బతిమిలాడాడు. “యెహోవా, నీ ప్రజల మీద నీ కోపం ఎందుకు రగులుకోవాలి? నీ బలిష్టమైన చెయ్యి చాపి ఐగుప్తు దేశం నుండి వీళ్ళను బయటకు రప్పించావు కదా.
12 ೧೨ ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.
౧౨ఐగుప్తీయులు ‘వాళ్ళ దేవుడు వాళ్ళకు కీడు కలిగించి భూమిపై లేకుండా నశింపజేసి కొండల్లో చనిపోయేలా చేయడానికి వాళ్ళను తీసుకు వెళ్ళాడు’ అని ఎందుకు చెప్పుకోవాలి? నీ కోపాగ్ని నుండి మళ్లుకుని వాళ్లకు కీడు చెయ్యకు.
13 ೧೩ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.
౧౩నీ సేవకులైన అబ్రాహాము, ఇస్సాకు, యాకోబులను జ్ఞాపకం చేసుకో. ఆకాశంలో ఉండే నక్షత్రాలవలే మీ సంతానాన్ని అభివృద్ధి పరచి నేను చెప్పిన ఈ భూమి అంతటినీ మీ సంతానానికి ఇస్తాననీ, వాళ్ళు శాశ్వతంగా దాన్ని స్వాధీనం చేసుకుంటారనీ, దానికి నువ్వే సాక్ష్యం అనీ వాళ్ళతో ఒప్పందం చేశావు” అన్నాడు.
14 ೧೪ ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.
౧౪అప్పుడు యెహోవా పరితపించి తన ప్రజలకు చేస్తానని చెప్పిన కీడు చెయ్యలేదు.
15 ೧೫ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.
౧౫దేవుడు తన స్వహస్తాలతో రాసి ఇచ్చిన రెండు పలకలు మోషే చేతిలో ఉన్నాయి. ఆ పలకలపై రెండువైపులా దేవుడు నియమించిన ఆజ్ఞలు రాసి ఉన్నాయి.
16 ೧೬ ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು.
౧౬ఆ పలకలు దేవుడు తయారు చేశాడు. ఆ పలకలు పట్టుకుని మోషే కొండ దిగి వచ్చాడు.
17 ೧೭ ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ, “ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ” ಎಂದು ಮೋಶೆಗೆ ಹೇಳಿದನು.
౧౭శిబిరంలో ప్రజలు వేస్తున్న కేకల శబ్దం యెహోషువకు వినబడింది. “మన శిబిరంలో యుద్ధ ధ్వని వినబడుతోంది” అన్నాడు.
18 ೧೮ ಅದಕ್ಕವನು, “ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ ಸೋತು ಗೋಳಾಡುವವರ ಧ್ವನಿಯೂ ಅಲ್ಲ, ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ” ಅಂದನು.
౧౮మోషే “అది జయ ధ్వని కాదు, అపజయ ధ్వని కాదు, సంగీత వాయిద్యాల శబ్దం నాకు వినబడుతోంది” అన్నాడు.
19 ೧೯ ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
౧౯అతడు శిబిరం చేరుకున్నప్పుడు ప్రజలు చేసుకున్న ఆ దూడ, నాట్యం చేస్తున్న ప్రజలు కనిపించారు. మోషే కోపం రగులుకుంది. అతడు తన చేతుల్లో ఉన్న పలకలను కొండ కింది భాగానికి విసిరేసి వాటిని పగలగొట్టాడు.
20 ೨೦ ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.
౨౦ప్రజలు తయారు చేసుకున్న ఆ దూడను తీసుకుని అగ్నితో కాల్చి పొడి చేశాడు. ఆ పొడిని నీళ్లలో కలిపి ఇశ్రాయేలు ప్రజల చేత తాగించాడు.
21 ೨೧ ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,
౨౧అప్పుడు మోషే “ఈ ప్రజల మీదికి ఈ గొప్ప అపరాధం వచ్చేలా చేయడానికి వీళ్ళు నిన్ను ఎలా ప్రేరేపించారు?” అని అహరోనును అడిగాడు.
22 ೨೨ ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?
౨౨అహరోను “నా ప్రభూ, నీ కోపం రగులుకోనియ్యకు. ఈ ప్రజలు దుర్మార్గులు అనే విషయం నీకు తెలుసు.
23 ೨೩ ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು.
౨౩వాళ్ళు ‘మా ముందుండి మమ్మల్ని నడిపించడానికి ఒక దేవుణ్ణి సిద్ధం చెయ్యి. ఐగుప్తు దేశం నుండి మమ్మల్ని తీసుకు వచ్చిన మోషే ఏమయ్యాడో మాకు తెలియడం లేదు’ అన్నారు.
24 ೨೪ ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು.
౨౪అప్పుడు నేను ఎవరి దగ్గర బంగారం ఉన్నదో వాళ్ళంతా దాన్ని ఊడదీసి తీసుకు రండి అని చెప్పాను. వాళ్ళు తెచ్చిన దాన్ని అగ్నిలో వేస్తే ఈ దూడ అయ్యింది” అని చెప్పాడు.
25 ೨೫ ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,
౨౫ప్రజలు తమ శత్రువుల ఎదుట నవ్వులపాలు కావడానికి అహరోను కారకుడయ్యాడు. ప్రజలు విచ్చలవిడితనంగా తిరగడం మోషే గమనించాడు.
26 ೨೬ ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.
౨౬అప్పుడు మోషే శిబిరం ద్వారం దగ్గర నిలబడి “యెహోవా పక్షంగా ఉన్నవాళ్ళంతా నా దగ్గరికి రండి” అన్నాడు. లేవీయులంతా అతని దగ్గరికి వచ్చారు.
27 ೨೭ ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.
౨౭అతడు వాళ్ళను చూసి “మీలో ప్రతి ఒక్కరూ మీ కత్తులు నడుముకు కట్టుకోండి, శిబిరంలో గుమ్మం నుండి గుమ్మానికి వెళ్తూ ప్రతి ఒక్కరూ తమ సోదరుణ్ణి, తమ స్నేహితుణ్ణి, తమ పొరుగువాణ్ణి సంహరించండి” అన్నాడు.
28 ೨೮ ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.
౨౮లేవీయులు మోషే మాట ప్రకారం చేసారు. ఆ రోజున ప్రజల్లో సుమారు మూడు వేల మంది హతమయ్యారు.
29 ೨೯ ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು.
౨౯మోషే లేవీయులతో “మిమ్మల్ని మీరు యెహోవాకు ప్రతిష్ట చేసుకోండి. మీలో ప్రతి ఒక్కరూ మీ కొడుకులనూ, సోదరులనూ చంపి యెహోవా ఆశీర్వాదాలు పొందారు” అన్నాడు.
30 ೩೦ ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.
౩౦మరుసటి రోజు మోషే ప్రజలతో “మీరు గొప్ప పాపం చేశారు. నేను యెహోవా దగ్గరికి కొండ ఎక్కి వెళ్తాను. ఒకవేళ మీరు చేసిన పాపం కోసం ఏదైనా ప్రాయశ్చిత్తం చేయగలనేమో” అన్నాడు.
31 ೩೧ ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.
౩౧మోషే యెహోవా కొండకు మళ్ళీ వెళ్ళాడు. “అయ్యో, ఈ ప్రజలు ఎంతో పాపం చేశారు. వాళ్ళు తమ కోసం బంగారు దేవుణ్ణి చేసుకున్నారు.
32 ೩೨ ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
౩౨అయ్యో, వాళ్ళు చేసిన పాపాన్ని పరిహరించు, లేని పక్షంలో నువ్వు రాసిన నీ గ్రంథంలో నుండి నా పేరు తొలగించు” అని బతిమాలుకున్నాడు.
33 ೩೩ ಅದಕ್ಕೆ ಯೆಹೋವನು ಮೋಶೆಗೆ, “ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.
౩౩అందుకు యెహోవా “నాకు విరోధంగా ఎవరు పాపం చేస్తారో వాళ్ళ పేర్లు మాత్రమే నా గ్రంథంలో నుండి తొలగిస్తాను.
34 ೩೪ ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”
౩౪నువ్వు వెళ్లి నేను నీతో చెప్పిన చోటికి ప్రజలను నడిపించు. నా దూతను నీకు ముందుగా పంపుతున్నాను. నేను శిక్షించే రోజున వాళ్ళ పాపం విషయంలో వాళ్ళకు శిక్ష రప్పిస్తాను” అని మోషేతో చెప్పాడు.
35 ೩೫ ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.
౩౫ప్రజలు అహరోను చేత చేయించిన దూడను బట్టి యెహోవా వాళ్ళను బాధలకు గురి చేశాడు.

< ವಿಮೋಚನಕಾಂಡ 32 >