< ವಿಮೋಚನಕಾಂಡ 9 >

1 ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.
εἶπεν δὲ κύριος πρὸς Μωυσῆν εἴσελθε πρὸς Φαραω καὶ ἐρεῖς αὐτῷ τάδε λέγει κύριος ὁ θεὸς τῶν Εβραίων ἐξαπόστειλον τὸν λαόν μου ἵνα μοι λατρεύσωσιν
2 ನೀನು ಅವರಿಗೆ ಅಪ್ಪಣೆ ಕೊಡದೆ ಇನ್ನೂ ಅವರನ್ನು ತಡೆದರೆ,
εἰ μὲν οὖν μὴ βούλει ἐξαποστεῖλαι τὸν λαόν μου ἀλλ’ ἔτι ἐγκρατεῖς αὐτοῦ
3 ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.
ἰδοὺ χεὶρ κυρίου ἐπέσται ἐν τοῖς κτήνεσίν σου τοῖς ἐν τοῖς πεδίοις ἔν τε τοῖς ἵπποις καὶ ἐν τοῖς ὑποζυγίοις καὶ ταῖς καμήλοις καὶ βουσὶν καὶ προβάτοις θάνατος μέγας σφόδρα
4 ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು.
καὶ παραδοξάσω ἐγὼ ἐν τῷ καιρῷ ἐκείνῳ ἀνὰ μέσον τῶν κτηνῶν τῶν Αἰγυπτίων καὶ ἀνὰ μέσον τῶν κτηνῶν τῶν υἱῶν Ισραηλ οὐ τελευτήσει ἀπὸ πάντων τῶν τοῦ Ισραηλ υἱῶν ῥητόν
5 ಇದಲ್ಲದೆ ಯೆಹೋವನು, “ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು” ಎಂದನು.
καὶ ἔδωκεν ὁ θεὸς ὅρον λέγων ἐν τῇ αὔριον ποιήσει κύριος τὸ ῥῆμα τοῦτο ἐπὶ τῆς γῆς
6 ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.
καὶ ἐποίησεν κύριος τὸ ῥῆμα τοῦτο τῇ ἐπαύριον καὶ ἐτελεύτησεν πάντα τὰ κτήνη τῶν Αἰγυπτίων ἀπὸ δὲ τῶν κτηνῶν τῶν υἱῶν Ισραηλ οὐκ ἐτελεύτησεν οὐδέν
7 ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.
ἰδὼν δὲ Φαραω ὅτι οὐκ ἐτελεύτησεν ἀπὸ πάντων τῶν κτηνῶν τῶν υἱῶν Ισραηλ οὐδέν ἐβαρύνθη ἡ καρδία Φαραω καὶ οὐκ ἐξαπέστειλεν τὸν λαόν
8 ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬಾ ತೆಗೆದುಕೊಳ್ಳಿರಿ. ಮೋಶೆ ಅದನ್ನು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.
εἶπεν δὲ κύριος πρὸς Μωυσῆν καὶ Ααρων λέγων λάβετε ὑμεῖς πλήρεις τὰς χεῖρας αἰθάλης καμιναίας καὶ πασάτω Μωυσῆς εἰς τὸν οὐρανὸν ἐναντίον Φαραω καὶ ἐναντίον τῶν θεραπόντων αὐτοῦ
9 ಆಗ ಅದು ಐಗುಪ್ತ ದೇಶದಲ್ಲೆಲ್ಲಾ ಧೂಳಿನ ಕಣಗಳಾಗಿ ಮಾರ್ಪಟ್ಟು ಅದು ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವವು” ಎಂದು ಹೇಳಿದನು.
καὶ γενηθήτω κονιορτὸς ἐπὶ πᾶσαν τὴν γῆν Αἰγύπτου καὶ ἔσται ἐπὶ τοὺς ἀνθρώπους καὶ ἐπὶ τὰ τετράποδα ἕλκη φλυκτίδες ἀναζέουσαι ἔν τε τοῖς ἀνθρώποις καὶ ἐν τοῖς τετράποσιν καὶ ἐν πάσῃ γῇ Αἰγύπτου
10 ೧೦ ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು.
καὶ ἔλαβεν τὴν αἰθάλην τῆς καμιναίας ἐναντίον Φαραω καὶ ἔπασεν αὐτὴν Μωυσῆς εἰς τὸν οὐρανόν καὶ ἐγένετο ἕλκη φλυκτίδες ἀναζέουσαι ἐν τοῖς ἀνθρώποις καὶ ἐν τοῖς τετράποσιν
11 ೧೧ ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
καὶ οὐκ ἠδύναντο οἱ φαρμακοὶ στῆναι ἐναντίον Μωυσῆ διὰ τὰ ἕλκη ἐγένετο γὰρ τὰ ἕλκη ἐν τοῖς φαρμακοῖς καὶ ἐν πάσῃ γῇ Αἰγύπτου
12 ೧೨ ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
ἐσκλήρυνεν δὲ κύριος τὴν καρδίαν Φαραω καὶ οὐκ εἰσήκουσεν αὐτῶν καθὰ συνέταξεν κύριος
13 ೧೩ ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
εἶπεν δὲ κύριος πρὸς Μωυσῆν ὄρθρισον τὸ πρωὶ καὶ στῆθι ἐναντίον Φαραω καὶ ἐρεῖς πρὸς αὐτόν τάδε λέγει κύριος ὁ θεὸς τῶν Εβραίων ἐξαπόστειλον τὸν λαόν μου ἵνα λατρεύσωσίν μοι
14 ೧೪ ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.
ἐν τῷ γὰρ νῦν καιρῷ ἐγὼ ἐξαποστέλλω πάντα τὰ συναντήματά μου εἰς τὴν καρδίαν σου καὶ τῶν θεραπόντων σου καὶ τοῦ λαοῦ σου ἵν’ εἰδῇς ὅτι οὐκ ἔστιν ὡς ἐγὼ ἄλλος ἐν πάσῃ τῇ γῇ
15 ೧೫ ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.
νῦν γὰρ ἀποστείλας τὴν χεῖρα πατάξω σε καὶ τὸν λαόν σου θανάτῳ καὶ ἐκτριβήσῃ ἀπὸ τῆς γῆς
16 ೧೬ ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.
καὶ ἕνεκεν τούτου διετηρήθης ἵνα ἐνδείξωμαι ἐν σοὶ τὴν ἰσχύν μου καὶ ὅπως διαγγελῇ τὸ ὄνομά μου ἐν πάσῃ τῇ γῇ
17 ೧೭ ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?
ἔτι οὖν σὺ ἐμποιῇ τοῦ λαοῦ μου τοῦ μὴ ἐξαποστεῖλαι αὐτούς
18 ೧೮ ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.
ἰδοὺ ἐγὼ ὕω ταύτην τὴν ὥραν αὔριον χάλαζαν πολλὴν σφόδρα ἥτις τοιαύτη οὐ γέγονεν ἐν Αἰγύπτῳ ἀφ’ ἧς ἡμέρας ἔκτισται ἕως τῆς ἡμέρας ταύτης
19 ೧೯ ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು’” ಎಂದು ಹೇಳಿದನು.
νῦν οὖν κατάσπευσον συναγαγεῖν τὰ κτήνη σου καὶ ὅσα σοί ἐστιν ἐν τῷ πεδίῳ πάντες γὰρ οἱ ἄνθρωποι καὶ τὰ κτήνη ὅσα ἂν εὑρεθῇ ἐν τῷ πεδίῳ καὶ μὴ εἰσέλθῃ εἰς οἰκίαν πέσῃ δὲ ἐπ’ αὐτὰ ἡ χάλαζα τελευτήσει
20 ೨೦ ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು.
ὁ φοβούμενος τὸ ῥῆμα κυρίου τῶν θεραπόντων Φαραω συνήγαγεν τὰ κτήνη αὐτοῦ εἰς τοὺς οἴκους
21 ೨೧ ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.
ὃς δὲ μὴ προσέσχεν τῇ διανοίᾳ εἰς τὸ ῥῆμα κυρίου ἀφῆκεν τὰ κτήνη ἐν τοῖς πεδίοις
22 ೨೨ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು.
εἶπεν δὲ κύριος πρὸς Μωυσῆν ἔκτεινον τὴν χεῖρά σου εἰς τὸν οὐρανόν καὶ ἔσται χάλαζα ἐπὶ πᾶσαν γῆν Αἰγύπτου ἐπί τε τοὺς ἀνθρώπους καὶ τὰ κτήνη καὶ ἐπὶ πᾶσαν βοτάνην τὴν ἐπὶ τῆς γῆς
23 ೨೩ ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
ἐξέτεινεν δὲ Μωυσῆς τὴν χεῖρα εἰς τὸν οὐρανόν καὶ κύριος ἔδωκεν φωνὰς καὶ χάλαζαν καὶ διέτρεχεν τὸ πῦρ ἐπὶ τῆς γῆς καὶ ἔβρεξεν κύριος χάλαζαν ἐπὶ πᾶσαν γῆν Αἰγύπτου
24 ೨೪ ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.
ἦν δὲ ἡ χάλαζα καὶ τὸ πῦρ φλογίζον ἐν τῇ χαλάζῃ ἡ δὲ χάλαζα πολλὴ σφόδρα σφόδρα ἥτις τοιαύτη οὐ γέγονεν ἐν Αἰγύπτῳ ἀφ’ οὗ γεγένηται ἐπ’ αὐτῆς ἔθνος
25 ೨೫ ಆ ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು.
ἐπάταξεν δὲ ἡ χάλαζα ἐν πάσῃ γῇ Αἰγύπτου ἀπὸ ἀνθρώπου ἕως κτήνους καὶ πᾶσαν βοτάνην τὴν ἐν τῷ πεδίῳ ἐπάταξεν ἡ χάλαζα καὶ πάντα τὰ ξύλα τὰ ἐν τοῖς πεδίοις συνέτριψεν ἡ χάλαζα
26 ೨೬ ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.
πλὴν ἐν γῇ Γεσεμ οὗ ἦσαν οἱ υἱοὶ Ισραηλ οὐκ ἐγένετο ἡ χάλαζα
27 ೨೭ ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.
ἀποστείλας δὲ Φαραω ἐκάλεσεν Μωυσῆν καὶ Ααρων καὶ εἶπεν αὐτοῖς ἡμάρτηκα τὸ νῦν ὁ κύριος δίκαιος ἐγὼ δὲ καὶ ὁ λαός μου ἀσεβεῖς
28 ೨೮ ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.
εὔξασθε οὖν περὶ ἐμοῦ πρὸς κύριον καὶ παυσάσθω τοῦ γενηθῆναι φωνὰς θεοῦ καὶ χάλαζαν καὶ πῦρ καὶ ἐξαποστελῶ ὑμᾶς καὶ οὐκέτι προσθήσεσθε μένειν
29 ೨೯ ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.
εἶπεν δὲ αὐτῷ Μωυσῆς ὡς ἂν ἐξέλθω τὴν πόλιν ἐκπετάσω τὰς χεῖράς μου πρὸς κύριον καὶ αἱ φωναὶ παύσονται καὶ ἡ χάλαζα καὶ ὁ ὑετὸς οὐκ ἔσται ἔτι ἵνα γνῷς ὅτι τοῦ κυρίου ἡ γῆ
30 ೩೦ ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು” ಎಂದನು.
καὶ σὺ καὶ οἱ θεράποντές σου ἐπίσταμαι ὅτι οὐδέπω πεφόβησθε τὸν κύριον
31 ೩೧ ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.
τὸ δὲ λίνον καὶ ἡ κριθὴ ἐπλήγη ἡ γὰρ κριθὴ παρεστηκυῖα τὸ δὲ λίνον σπερματίζον
32 ೩೨ ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.
ὁ δὲ πυρὸς καὶ ἡ ὀλύρα οὐκ ἐπλήγη ὄψιμα γὰρ ἦν
33 ೩೩ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.
ἐξῆλθεν δὲ Μωυσῆς ἀπὸ Φαραω ἐκτὸς τῆς πόλεως καὶ ἐξεπέτασεν τὰς χεῖρας πρὸς κύριον καὶ αἱ φωναὶ ἐπαύσαντο καὶ ἡ χάλαζα καὶ ὁ ὑετὸς οὐκ ἔσταξεν ἔτι ἐπὶ τὴν γῆν
34 ೩೪ ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು.
ἰδὼν δὲ Φαραω ὅτι πέπαυται ὁ ὑετὸς καὶ ἡ χάλαζα καὶ αἱ φωναί προσέθετο τοῦ ἁμαρτάνειν καὶ ἐβάρυνεν αὐτοῦ τὴν καρδίαν καὶ τῶν θεραπόντων αὐτοῦ
35 ೩೫ ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ.
καὶ ἐσκληρύνθη ἡ καρδία Φαραω καὶ οὐκ ἐξαπέστειλεν τοὺς υἱοὺς Ισραηλ καθάπερ ἐλάλησεν κύριος τῷ Μωυσῇ

< ವಿಮೋಚನಕಾಂಡ 9 >