< ಯೆಹೆಜ್ಕೇಲನು 14 >

1 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,
इस्राएलाच्या वडीलांपैकी कित्येक माणसे माझ्याकडे आले व माझ्यापुढे बसले
2 ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,
नंतर परमेश्वर देवाचा शब्द माझ्याकडे आला की,
3 “ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
मानवाच्या मुला, या सर्व मानवांनी मूर्तींची उपासना केली व मनात त्यांना जागा दिली, त्यांनी आपल्या दृष्टी समोर पापाला अडखळण ठेवले आहे, अशा पापीष्ट लोकांस मी आपल्याला प्रश्न विचारु देईन?
4 ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.
याकरिता त्यांच्याशी बोल; त्यांना सांग की प्रभू परमेश्वर म्हणतो, इस्राएल घराण्यातील जो कोणी आपल्या हृदयात मूर्ती वागवतो, आपले पापजनक अडखळण आपल्या नेत्रांसमोर ठेवतो आणि संदेष्ट्याकडे येतो, त्यास माझे उत्तर त्याच्या मूर्तींच्या संख्येच्या मानाने मिळेल.
5 ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
मी इस्राएल घराण्याला परत माघारी आणिन, कारण त्यांच्या मूर्तीपुढे त्यांनी मला अगदी परके केले आहे, असे परमेश्वर देव म्हणतो.
6 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
तथापि इस्राएल घराण्याशी बोल, प्रभू परमेश्वर देव म्हणतो, मूर्तीपुजेपासून मागे फिरा आणि पश्चाताप करा, आपल्या अमंगळ गोष्टीपासून आपले तोंड फिरवा.
7 “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
इस्राएलाच्या घराण्यातील प्रत्येकजण आणि इस्राएलात जे मला योग्य तेच आहे आणि ज्यांनी मूर्तीपुजेत अशा पापाचा अडखळण धोंडा आपल्या मनापासून आपल्यात वागवला. आणि माझा शोध घेण्यास भविष्यवक्तांकडे येतात, मी परमेश्वर देव आहे स्वतः त्यांना उत्तर देईन.
8 ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
माझे मुख त्याच्या पासून लपवीन, त्यांना चिन्ह व लोकांसाठी निंदेचा विषय करीन आणि माझ्या लोकांमधून त्यांना हुसकावून देईन, तेव्हा त्यांन समजेल की मी परमेश्वर देव आहे.
9 “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
जर कुणी संदेष्टा भुलथापांनी बोलून संदेश देईल तर समजावे की मीच परमेश्वर देव त्यास भ्रमात पाडून संदेश देण्यास भाग पाडले आहे, त्याच्या विरोधात मी माझा हात उचलीन आणि माझ्या इस्राएलातून त्यांना हुसकून देईन
10 ೧೦ ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.
१०ते त्यांच्या घोर अन्यायाचे फळ भोगतील संदेष्ट्यांचा घोर अन्याय आणि ज्यांनी प्रश्न विचारला ते दोघेही घोर अन्यायाचे फळ भोगतील.
11 ೧೧ ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.
११यासाठी इस्राएल घराणे माझ्यापासून परागंदा होणार नाही ते आपल्या पातकामुळे स्वतःला अशुद्ध करणार नाहीत, ते माझे लोक होतील व मी त्यांचा देव होईन, असे परमेश्वर देव म्हणतो.
12 ೧೨ ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
१२नंतर परमेश्वर देवाचा शब्द माझ्याकडे आला आणि म्हणाला,
13 ೧೩ “ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.
१३मानवाच्या मुला, एखाद्या देशाने माझ्या विरोधात पाप केले, त्यांच्या विरोधात मी माझा हात उचलेन, त्यांना अन्नाचा तुटवडा पडेल त्यांच्यावर दुष्काळ आणिन त्यांच्यातून मानव व पशू ह्यांना हुसकून देईन.
14 ೧೪ ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.
१४जरी देशात नोहा दानीएल आणि ईयोब हे तिघे असेल तरी पुरे ते त्यांच्या धार्मीकतेमुळे वाचतील असे परमेश्वर प्रभू म्हणतो.
15 ೧೫ “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,
१५जर मी देशात क्रुर हिंस्र पशू पाठविले आणि जमीन नापीक झाली क्रुर पशुमुळे कोणी मनुष्य जाणारे येणार नसल्यामुळे देश निर्जन होईल.
16 ೧೬ ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ.
१६जरी त्यामध्ये ते तिघे असले तरी त्याचा मुलगा मुलगी ह्यांचा बचाव करु शकणार नाही. मात्र त्याचा स्वतःचा बचाव होईल, मात्र देश ओसाड होईल असे परमेश्वर देव म्हणतो.
17 ೧೭ “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
१७जर मी देशा विरुध्द तलवार चालवीली आणि म्हणालो, देशातील दोन्ही मनुष्य आणि पशू नष्ट करीन.
18 ೧೮ ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
१८जरी हे तीन मनुष्य देशात असतील असे परमेश्वर देव म्हणतो, तरी ते त्यांचा मुलगा मुलगी ह्यांचा बचाव करु शकणार नाही, मात्र त्यांच्या जीवाचा बचाव होईल.
19 ೧೯ “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,
१९जर मी देशावर क्रोध मरी पाठवीली, त्यांचे रक्त सांडल्यामुळे मनुष्य आणि पशू हे नष्ट करीन.
20 ೨೦ ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
२०जरी देशात नोहा, दानीएल आणि ईयोब असले प्रभू परमेश्वर देव म्हणतो, तरी ते त्यांच्या मुलगा मुलगी यांचा बचाव करु शकणार नाही पण ते त्यांच्या धार्मिकतेने स्वतःचा बचाव करतील.
21 ೨೧ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
२१कारण प्रभू परमेश्वर देव असे म्हणतो, मी निश्चित शिक्षा करण्यासाठी चार प्रकारच्या त्रासदायक गोष्टी पाठवणार आहे. दुष्काळ, तलवार, जंगली पशु, मरी ही माझी चार हत्यार यरूशलेमेच्या मनुष्य आणि प्राणी यांना नष्ट करेल, तेव्हा त्यांचा बचाव कसा होईल असे परमेश्वर देव म्हणतो.
22 ೨೨ ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.
२२त्यांच्यामध्ये तरी काही उरलेले राहतील, त्यांच्या मुला मुलींना मी बाहेर आणिन, पाहा ते तुम्हाकडे येतील; तुम्ही त्यांचे मार्ग आणि काम पाहाल; तेव्हा यरूशलेमेवर संकट आणल्याबद्दल त्यांना दिलासा देईन.
23 ೨೩ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.
२३तेव्हा त्यांचे मार्ग आणि कार्य पाहून तुम्हास दिलासा मिळेल, त्यांचे मी जे काही केले ते सगळे मी निरर्थक केले नाही. हे तुम्हास कळेल असे परमेश्वर देव म्हणतो.

< ಯೆಹೆಜ್ಕೇಲನು 14 >