< ಯೆಹೆಜ್ಕೇಲನು 14 >

1 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,
इस्राएलका धर्म-गुरुमध्‍ये कोही मकहाँ आए र मेरो सामुन्‍ने बसे ।
2 ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,
तब परमप्रभुको वचन यसो भनेर मकहाँ आयो,
3 “ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
“ए मानिसको छोरो, यी मानिसहरूले आफ्‍ना मूर्तिहरूलाई आफ्‍ना हृदयमा राखेका छन्, र आफ्‍नो अधर्मका ठक्‍कर लाग्‍ने ढुङ्गा आफ्‍नै अनुहारका सामु राखेका छन्‌ । के तिनीहरूले मेरो बारेमा सोध्‍न पाउँछन् र?
4 ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.
यसकारण तिनीहरू यो कुरा घोषणा गर र तिनीहरूलाई यसो भन्, 'परमप्रभु परमेश्‍वर यसो भन्‍नुहुन्‍छः इस्राएलका घरानाका हरेक मानिस जसले आफ्‍नो हृदयमा मूर्तिहरू राख्‍छन्, र आफ्‍नो अधर्मको ठक्‍कर लाग्‍ने ढुङ्गा आफ्‍नो अनुहारको सामुन्‍ने राख्‍छन्, र पनि अगमवक्ताकहाँ जान्‍छन्, म परमप्रभुले त्‍यसका मूर्तिहरूका संख्याअनुसार त्‍यसलाई जवाफ दिनेछु ।
5 ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
आफ्‍ना मूर्तिहरूको कारण आफ्‍ना हृदयहरू मबाट टाढा भएका इस्राएलका घरानालाई मैले फर्काउन सकौं भनेर म यसो गर्नेछु ।’
6 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
यसकारण इस्राएलका घरानालाई यसो भन्, 'परमप्रभु परमेश्‍वर यसो भन्‍नुहुन्‍छः पश्‍चात्ताप गर र आफ्‍ना मूर्तिहरूदेखि फर्क । सबै घिनलाग्‍दा कुराबाट आफ्ना मुख फर्काओ ।
7 “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
किनकि इस्राएलका घरानाको हरेक व्‍यक्‍ति र इस्राएलमा बस्‍ने हरेक विदेशी व्‍यक्‍ति जसले मलाई त्‍याग्‍छ, जसले आफ्‍ना मूर्तिहरू आफ्‍ना हृदयमा राख्‍छ र आफ्‍नो अधर्मको ठक्‍कर लाग्‍ने ढुङ्गा आफ्‍नै अनुहारको सामु राख्‍छ, र त्‍यसपछि मलाई खोज्‍न कुनै अगमवक्ताकहाँ जान्‍छ, त्‍यसलाई म परमप्रभु आफैले जवाफ दिनेछु ।
8 ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
यसरी म आफ्‍नो मुख त्‍यस मानिसको विरुद्धमा लगाउनेछु, र त्‍यसलाई एउटा सङ्केत र उखानको पात्र बनाउनेछु, किनकि त्‍यसलाई म आफ्‍ना मानिसहरूका बिचदेखि बहिष्‍कार गर्नेछु र म नै परमप्रभु हुँ भनी तिमीहरूले जान्‍नेछौ ।
9 “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
कुनै एक जना अगमवक्ता छलमा पर्छ र यस्‍तो सन्देश भन्‍छ भने, म परमप्रभुले त्‍यस अगमवक्ता छलमा पार्नेछु । म आफ्‍ना हात त्‍यसको विरुद्धमा पसार्नेछु, र मेरो मानिस इस्राएलको बिचबाट त्‍यसलाई नाश गर्नेछु ।
10 ೧೦ ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.
तिनीहरूका आफ्‍ना अपराध तिनीहरूले बोक्‍नेछन् । अगमवक्ताको अपराधचाहिं र उसँग सल्‍लाह लिनेको अपराधजस्‍तै हुनेछ ।
11 ೧೧ ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.
यसकारण, इस्राएलका घरानाले मलाई पछ्‍याउनदेखि फेरि कहिल्‍यै बरालिनेछैनन्‌ न त आफ्‍ना सबै पापहरूले तिनीहरूले फेरि कहिल्‍यै आफैलाई अपवित्र पार्नेछन्‌ । तिनीहरू मेरा मानिसहरू हुनेछन्‌ र म तिनीहरूका परमेश्‍वर हुनेछु । यो परमप्रभु परमेश्‍वरको घोषणा हो ।’”
12 ೧೨ ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
तब परमप्रभुको वचन यसो भनेर मकहाँ आयो,
13 ೧೩ “ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.
“ए मानिसको छोरो, कुनै देशले पाप गरेर मेरो विरुद्धमा पाप गर्छ, ताकि त्‍यसको विरुद्धमा आफ्‍नो हात पसारें र त्‍यसको खाद्य भण्‍डार म नाश गरें, र अनिकाल ल्‍याएँ र मानिस र पशु दुवैलाई नाश गरें भने,
14 ೧೪ ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.
तब नोआ, दानिएल र अय्‍यूब, यी तिन जना मानिसहरू त्‍यहाँ भए भने पनि तिनीहरूले आफ्‍नो धार्मिकताद्वारा आफ्‍नै प्राण मात्र बचाउन सक्‍छन् । यो परमप्रभु परमेश्‍वरको घोषणा हो ।
15 ೧೫ “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,
मैले त्‍यस देशमा जङ्गली जनावरहरू पठाएँ, र तिनीहरूले त्‍यसलाई बाँझो तुल्‍याए र त्‍यो देश उजाड भयो, जहाँ जनावरहरूका कारणले कुनै मानिस गएन भने,
16 ೧೬ ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ.
तब यी तिन जना मानिस त्‍यहाँ भए भने पनि, जस्‍तो म जीवित छु, परमप्रभु परमेश्‍वर घोषणा गर्नुहुन्छ, तिनीहरूले आफ्‍नै छोराछोरीलाई पनि बचाउन सक्‍दैनन् । तिनीहरूका आफ्‍नो जीवन मात्र बाँच्‍नेछ, तर देशचाहिं उजाड हुनेथियो ।
17 ೧೭ “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
अथवा मैले त्‍यस देशको विरुद्धमा तरवार ल्‍याएँ र यसो भनें, 'ए तरवार, देशभरि जा र त्‍यहाँबाट मानिसहरू र जनावरहरू दुवैलाई काट् ।'
18 ೧೮ ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
तब यी तिन जना मानिस त्‍यो दैशको बिचमा भए भने पनि, जस्‍तो म जीवित छु, परमप्रभु परमेश्‍वर भन्‍नुहुन्‍छ, तिनीहरूले आफ्‍ना छोराछोरीलाई बचाउन सक्‍दैनन् । तिनीहरूका आफ्‍नो जीवन मात्र बाँच्‍नेछ ।
19 ೧೯ “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,
अथवा मैले यो देशको विरुद्धमा रूढी पठाएँ र रगत बगाएर त्‍यसका मानिसहरू र पशुहरूलाई मारेर मैले आफ्‍नो क्रोध पोखाएँ भने,
20 ೨೦ ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
तब नोआ, दानिएल र अय्‍यूब त्‍यो देशमा भए भने पनि, जस्‍तो म जीवित छु, परमप्रभु परमेश्‍वर भन्‍नुहुन्‍छ, तिनीहरूले आफ्‍ना छोराछोरीलाई बचाउन सक्‍दैनन् । तिनीहरूले आफ्‍नो धार्मिकताद्वारा आफ्‍नै प्राण मात्र बचाउन सक्‍छन् ।
21 ೨೧ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
किनकि परमप्रभु परमेश्‍वर यसो भन्‍नुहुन्‍छः यरूशलेमको विरुद्धा मेरा चारवटा दण्‍डहरू— तरवार, अनिकाल, जङ्गली पशुहरू र रूढी पठाएर, त्‍यहाँका मानिस र पशुहरू दुवैलाई देशबाट नाश गरेर म धैरै खराब तुल्‍याउनेछु ।
22 ೨೨ ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.
तापनि हेर्, त्‍यसमा कोही बाँकी हुनेछन्‌, र बचेकाहरू आफ्‍ना छोराहरू र छोरीहरूका साथमा बाहिर निस्‍केर जानेछन्‌ । हेर्, तिनीहरू बाहिर तिमीहरूकहाँ आउनेछन्, र तिमीहरूले तिनीहरूका चालहरू र कामहरू हेर्नेछौ, र मैले यरूशलेममा ल्‍याएका ती दण्‍ड र देशको विरुद्ध मैले ल्याएका सबै कुराबाट तिमीहरूलाई सान्‍त्‍वना हुनेछ ।
23 ೨೩ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.
बाँचेकाहरूका चाल र कामहरू देखेर तिमीहरूले सान्‍त्‍वना पाउनेछौ, यसरी मैले त्‍यसको विरुद्धमा गरेका यी सबै कुरा, र ती मैले व्‍यर्थमा गरिनँ भनी तिमीहरूले जान्‍नेछौ । यो परमप्रभु परमेश्‍वरको घोषणा हो ।

< ಯೆಹೆಜ್ಕೇಲನು 14 >