< ಯೆಹೆಜ್ಕೇಲನು 28 >

1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
అప్పుడు యెహోవా నాకు ఈ విషయం తెలియచేశాడు.
2 “ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.
నరపుత్రుడా, తూరు రాజ్యం పాలించే వాడితో ఇలా చెప్పు. “యెహోవా ప్రభువు చెప్పేదేమిటంటే, నువ్వు అహంకారంతో, ‘నేను దేవుణ్ణి. సముద్రాల మధ్యలో దేవుడు కూర్చునే చోట నేను కూర్చుంటాను’ అంటున్నావు. నువ్వు మనిషివే. దేవుడివి కావు. నీకు దేవుని మనస్సు ఉందని నువ్వనుకుంటున్నావు.
3 “ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?
నువ్వు దానియేలు కంటే తెలివి గలవాడివనీ తెలియనిదంటూ నీకేదీ లేదనీ అనుకుంటున్నావు!
4 ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ.
నీ తెలివి తేటలతో నేర్పుతో ధనవంతుడివై, నీ ఖజానాల్లో వెండి బంగారాలను పోగుచేసుకున్నావు.
5 ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.”
నీ గొప్ప తెలివితేటలతో నీ వ్యాపారంతో నీ సంపదను వృద్ధి చేసుకున్నావు. నీ సంపద బట్టి నీ హృదయం గర్వించింది.
6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ.
కాబట్టి యెహోవా ప్రభువు ఇలా అంటున్నాడు, నీకు దేవుని మనస్సు ఉందని నువ్వనుకుంటున్నావు.
7 ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
నేను విదేశీయులను, ఇతర రాజ్యాలనుంచి క్రూరులను, నీ మీదికి రప్పిస్తాను. తెలివితో నువ్వు నిర్మించుకున్న నీ అందమైన పట్టణాల మీద వాళ్ళు తమ కత్తులు ఝళిపించి నీ వైభవాన్ని ధ్వంసం చేస్తారు.
8 “ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.
వాళ్ళు నిన్ను నీ సమాధిలో పడేస్తారు. సముద్రాల్లో మునిగి చచ్చేవాళ్ళలాగా నువ్వు చస్తావు.
9 ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.
నిన్ను చంపేవాళ్ళ ఎదుట, ‘నేను దేవుణ్ణి’ అంటావా? నువ్వు మనిషివే గానీ దేవుడివి కాదు గదా! నిన్ను పొడిచేవాళ్ళ చేతుల్లో నువ్వు ఉంటావు.
10 ೧೦ ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.
౧౦నువ్వు విదేశీయుల చేతుల్లో సున్నతిలేని వాళ్ళ చావు చస్తావు. ఈ విషయం చెప్పింది నేనే. ఇదే యెహోవా ప్రభువు సందేశం.”
11 ೧೧ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
౧౧యెహోవా నాకీ విషయం మళ్ళీ తెలియచేశాడు.
12 ೧೨ “ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.
౧౨“నరపుత్రుడా, తూరు రాజును గురించి శోకగీతం ఎత్తి ఇలా చెప్పు, యెహోవా ప్రభువు చెప్పేదేమిటంటే, ఒకప్పుడు నువ్వు పరిపూర్ణంగా గొప్ప తెలివితేటలతో అందాల రాశిలా ఉండే వాడివి.
13 ೧೩ ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
౧౩దేవుని తోట, ఏదెనులో నువ్వున్నావు! అన్ని రకాల ప్రశస్త రత్నాలు నీకు అలంకాంరంగా ఉండేవి. మాణిక్యం, గోమేధికం, సూర్యకాంతమణి, కెంపు, సులిమాని రాయి, మరకతం, నీలం, పద్మరాగం, మాణిక్యం, బంగారంలో పొదిగిన ఆభరణాలు నువ్వు అలంకరించుకున్నావు. నిన్ను సృజించిన రోజే అవి నీకు తయారయ్యాయి.
14 ೧೪ “‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.
౧౪అభిషేకం పొందిన కెరూబులా నేను నిన్ను నియమించాను. దేవుని పర్వతం మీద నువ్వున్నావు. నిప్పుకణికల వంటి రాళ్ల మధ్య నువ్వు నడిచేవాడివి.
15 ೧೫ ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
౧౫నిన్ను సృష్టించిన రోజునుంచి నీలో పాపం కనిపించే వరకూ నీ ప్రవర్తన లోపం లేకుండా ఉంది.
16 ೧೬ “‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
౧౬అయితే నీ వ్యాపారం ఎక్కువ కావడం వలన నువ్వు దౌర్జన్యంతో నిండిపోయి, పాపం చేశావు. కాబట్టి కావలిగా ఉన్న కెరూబూ, దేవుని పర్వతం మీద నిప్పుకణికల్లాంటి రాళ్లమధ్య నువ్వుండకుండా నేను నిన్ను తోలివేసి, నిర్మూలం చేశాను.
17 ೧೭ “‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.
౧౭నీ సౌందర్యాన్ని చూసుకుని గర్వించావు. నీ వైభవాన్ని చూసుకుని నీ తెలివి పాడు చేసుకున్నావు. అందుకే నేను నిన్ను భూమి మీద పడేశాను. రాజులు నిన్ను చూసేలా వాళ్ళ ఎదుట నిన్నుంచాను.
18 ೧೮ ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.
౧౮నీ విస్తార పాపాలను బట్టి, నీ అన్యాయ వ్యాపారాన్ని బట్టి, నీ పవిత్ర స్థలాలను నువ్వు అపవిత్రం చేశావు. కాబట్టి నీలోనుంచి అగ్ని వచ్చేలా చేశాను. అది నిన్ను కాల్చివేస్తుంది. నిన్ను చూస్తున్నవాళ్ళందరి ఎదుట నిన్ను బూడిదగా చేస్తాను.
19 ೧೯ ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’”
౧౯ప్రజల్లో నిన్ను ఎరిగిన వారంతా నిన్ను బట్టి వణికిపోతారు. నిర్ఘాంతపోతారు. నువ్విక ఉండవు.”
20 ೨೦ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
౨౦యెహోవా నాకీ విషయం తెలియచేశాడు.
21 ೨೧ “ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
౨౧“నరపుత్రుడా, నీ ముఖాన్ని సీదోను పట్టణం వైపు తిప్పి దాన్ని గురించి ప్రవచించు.
22 ೨೨ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.
౨౨యెహోవా ప్రభువు చెప్పేదేమిటంటే, సీదోను, నేను నీకు విరోధిని. నీ మధ్య నాకు ఘనత వస్తుంది. నేను నీ మధ్య తీర్పు తీరుస్తూ ఉన్నపుడు నేను యెహోవానని నీ ప్రజలు తెలుసుకుంటారు. నన్ను నేను పవిత్రునిగా మీ మధ్య కనుపరచుకుంటాను.
23 ೨೩ ‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು.
౨౩నేను ఘోరమైన అంటురోగాన్ని మీ మధ్య పంపిస్తాను. మీ వీధుల్లో రక్తపాతం జరుగుతుంది. అన్ని వైపుల నుంచి నీ మీద కత్తి దూస్తారు. అప్పుడు నేనే యెహోవానని మీరు తెలుసుకుంటారు.
24 ೨೪ “ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.
౨౪ఇశ్రాయేలీయుల చుట్టూ గుచ్చుకునే ముళ్ళ కంపల్లాగా నొప్పి కలిగించే గచ్చతీగల్లాగా వారిని తృణీకరించిన ప్రజలు ఇంక ఎవరూ ఉండరు. అప్పుడు నేనే యెహోవా ప్రభువునని వాళ్ళు తెలుసుకుంటారు.”
25 ೨೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.
౨౫యెహోవా ప్రభువు చెప్పేదేమిటంటే “ప్రజల్లో చెదిరిపోయిన ఇశ్రాయేలీయులను నేను దగ్గర చేర్చి, ప్రజల ఎదుట నన్ను నేను పరిశుద్ధ పరచుకుంటాను. అప్పుడు నా సేవకుడు యాకోబుకు నేనిచ్చిన తమ దేశంలో వాళ్ళు నివసిస్తారు.
26 ೨೬ ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”
౨౬వాళ్ళు అందులో భయం లేకుండా నివసించి ఇళ్ళు కట్టుకుని ద్రాక్షతోటలు నాటుకుంటారు. వారి చుట్టూ ఉండి వాళ్ళను తృణీకరించే వారందరికీ నేను శిక్ష విధించిన తరువాత వాళ్ళు భయం లేకుండా నివసించేటప్పుడు నేను తమ యెహోవా దేవుడినని వాళ్ళు తెలుసుకుంటారు.”

< ಯೆಹೆಜ್ಕೇಲನು 28 >