< ಯೆಹೆಜ್ಕೇಲನು 46 >

1 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.
ప్రభువైన యెహోవా చెప్పేదేమిటంటే “తూర్పు వైపు తిరిగి ఉన్న లోపటి ఆవరణద్వారం ఆరు పని దినాలు మూసి ఉంచి, విశ్రాంతి రోజున, అమావాస్య రోజున తెరవాలి.
2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.
పాలకుడు బయటి వసారా గుమ్మం గుండా ప్రవేశించి, గుమ్మపు ద్వారబంధాల దగ్గర నిలబడినప్పుడు, యాజకులు దహనబలి పశువులను, సమాధానబలి పశువులను అతని కోసం సిద్ధపరచాలి. అతడు గుమ్మం దగ్గర నిలబడి ఆరాధన చేసిన తరవాత బయటికి వెళ్తాడు. అయితే సాయంకాలం కాక ముందే ఆ గుమ్మం మూయకూడదు.
3 ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.
విశ్రాంతిదినాల్లో, అమావాస్యల్లో దేశప్రజలు ఆ తలుపు దగ్గర నిలబడి యెహోవాకు ఆరాధన చేయాలి.
4 ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು.
విశ్రాంతి దినాన పాలకుడు యెహోవాకు ఏ లోపం లేని ఆరు గొర్రె పిల్లలు, ఏ లోపం లేని ఒక పొట్టేలును దహనబలిగా అర్పించాలి.
5 ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.
పొట్టేలుతో 22 లీటర్ల పిండితో నైవేద్యం చేయాలి. గొర్రెపిల్లలతో తన శక్తికొలది నైవేద్యాన్ని, ప్రతి 22 లీటర్ల పిండికి ఒక లీటర్ నూనె తేవాలి.
6 ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.
అమావాస్య రోజున ఏ లోపం లేని చిన్న కోడెను, ఏ లోపం లేని ఆరు గొర్రె పిల్లలనూ, ఏ లోపం లేని ఒక పొట్టేలును అర్పించాలి.
7 ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
నైవేద్యాన్ని సిద్ధపరచాలి, ఎద్దుతో, పొట్టేలుతో, 22 లీటర్లు, గొర్రెపిల్లలతో శక్తికొలదిగా పిండిని అర్పించాలి. ప్రతి 22 లీటర్ల పిండికి ఒక లీటర్ నూనె తేవాలి.
8 “ಅರಸನು ಪ್ರವೇಶ ಮಾಡುವಾಗ ಹೆಬ್ಬಾಗಿಲಿನ ಕೈಸಾಲೆಯ ಮಾರ್ಗವಾಗಿ ಒಳಗೆ ಬಂದು, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
పాలకుడు ప్రవేశించేటప్పుడు వసారా మార్గం గుండా ప్రవేశించి అదే మార్గంలో బయటికి వెళ్ళాలి.
9 ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.
అయితే నియమిత సమయాల్లో దేశ ప్రజలు యెహోవా సన్నిధిలో ఆరాధించడానికి వచ్చినప్పుడు ఉత్తర గుమ్మం గుండా వచ్చినవారు దక్షిణ గుమ్మం గుండా వెళ్ళాలి. దక్షిణ గుమ్మం గుండా వచ్చినవారు ఉత్తర గుమ్మం గుండా వెళ్ళాలి. ఎవరూ తాము వచ్చిన గుమ్మం గుండా తిరిగి వెళ్ళకుండా అందరూ తిన్నగా బయటికి వెళ్లిపోవాలి.
10 ೧೦ ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.
౧౦పాలకుడు వారితో కలిసి ప్రవేశించాలి, వారితో కలిసి బయటికి వెళ్ళాలి.
11 ೧೧ ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
౧౧పండగ రోజుల్లో, నియమిత సమయాల్లో ఎద్దుతో, పొట్టేలుతో అయితే 22 లీటర్లు పిండి, గొర్రెపిల్లలతో శక్తి మేరకు పిండిని, ప్రతి 22 లీటర్ల పిండితో ఒక లీటర్ నూనె, నైవేద్యంగా అర్పించాలి.
12 ೧೨ ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.
౧౨పాలకుడు యెహోవాకు స్వేచ్ఛార్పణమైన దహనబలి గాని, సమాధానబలి గాని అర్పించేటప్పుడు తూర్పు వైపు గుమ్మం తెరవాలి. విశ్రాంతి దినాన చేసినట్టే అతడు దహనబలిని సమాధానబలిని అర్పించి వెళ్లిపోవాలి. అతడు వెళ్లిన తరవాత గుమ్మం మూయాలి.
13 ೧೩ “ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.
౧౩ప్రతి రోజు ఏ లోపం లేని ఒక సంవత్సరం వయసున్న మగ గొర్రెపిల్లను దహనబలిగా అర్పించాలి. ప్రతి రోజు ఉదయాన దాన్ని అర్పించి దానితో నైవేద్యం చేయాలి.
14 ೧೪ ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
౧౪అది ఎలాగంటే, 22 లీటర్ల గోదుమ పిండిలో ఆరో వంతు, దాన్ని కలపడానికి ఒక లీటరు నూనె ఉండాలి. ఇవి ఎవరూ రద్దుపరచలేని నిత్యమైన కట్టడలు.
15 ೧೫ ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.”
౧౫గొర్రెపిల్లలను, నైవేద్యాన్ని, నూనెను ప్రతి రోజు ఉదయాన్నే నిత్య దహనబలిగా అర్పించాలి.
16 ೧೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ.
౧౬ప్రభువైన యెహోవా చెప్పేదేమిటంటే, పాలకుడు తన కొడుకుల్లో ఎవరికైనా భూమిని ఇస్తే అది అతని స్వాస్థ్యం అవుతుంది. అది వారసత్వం వలన వచ్చిన స్వాస్థ్యం లాంటిది.
17 ೧೭ ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.
౧౭అయితే అతడు తన పనివారిలో ఎవరికైనా భూమి ఇస్తే అది విడుదల సంవత్సరం వరకే అది అతనికి హక్కుగా ఉంది తరువాత పాలకునికి తిరిగి వస్తుంది. అప్పుడు అతని కుమారులు అతని స్వాస్థ్యానికి హక్కుదారులవుతారు.
18 ೧೮ ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು.
౧౮ప్రజలు తమ స్వాస్థ్యాలను అనుభవించనీయకుండా పాలకుడు వారి భూమిని ఆక్రమించకూడదు. నా ప్రజలు తమ భూములను విడిచి చెదరిపోకుండేలా అతడు తన స్వంత భూమిలోనుండి తన కొడుకులకు భాగాలు ఇవ్వాలి.”
19 ೧೯ “ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.”
౧౯ఆ తరవాత ఆయన గుమ్మపు మధ్యగోడ మార్గంలో ఉత్తరం వైపుకు తిరిగి ఉన్న యాజకులకు ఏర్పాటు చేసిన పవిత్రమైన గదుల్లోకి నన్ను తీసుకువచ్చాడు. అక్కడ వెనక వైపు పశ్చిమదిక్కున ఒక స్థలం నాకు కనిపించింది.
20 ೨೦ ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.
౨౦యాజకులు అపరాధ పరిహారార్థ బలి పశుమాంసాన్ని, పాప పరిహారార్థ బలి పశుమాంసాన్ని వండి, నైవేద్యాలను కాల్చే స్థలం ఇదే. వారు ఆ పవిత్రమైన వస్తువులను బయటి ఆవరణంలోకి తెస్తే ప్రజల్లో ఎవరైనా వాటిని తాకి ప్రతిష్ఠితులవుతారు కాబట్టి వాటిని బయటికి తేకూడదు, అని ఆయన నాతో చెప్పాడు.
21 ೨೧ ತರುವಾಯ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.
౨౧అతడు బయటి ఆవరణంలోకి నన్ను తీసుకువచ్చి ఆవరణపు నాలుగు మూలలను తిప్పాడు. ఆవరణం ప్రతి మూలలో మరొక ఆవరణం ఉన్నట్టు నాకు కనబడింది.
22 ೨೨ ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.
౨౨ఆవరణం నాలుగు మూలల్లో ఒక్కొక్క ఆవరణం ఉంది. ఒక్కొక్కటి 22 మీటర్ల పొడవు, 16 మీటర్ల వెడల్పు ఉండి, నాలుగూ ఒకే పరిమాణంలో ఉన్నాయి.
23 ೨೩ ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತು ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಆ ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು.
౨౩ఆ నాలుగింటిలో చుట్టూ వరుసలో ఉన్న అటకలున్నాయి. ఆ అటకల కింద పొయ్యిలున్నాయి.
24 ೨೪ ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು.
౨౪“ఇది వంట చేసేవారి స్థలం, ఇక్కడ మందిర పరిచారకులు ప్రజలు తెచ్చే బలిపశుమాంసాన్ని వండుతారు” అని ఆయన నాతో చెప్పాడు.

< ಯೆಹೆಜ್ಕೇಲನು 46 >