< ಯೆಹೆಜ್ಕೇಲನು 7 >

1 ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
परमेश्वर देवाचा शब्द माझ्याकडे आला व तो म्हणाला.
2 “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
“मानवाच्या मुला, परमेश्वर देव इस्राएलाच्या भूमीला म्हणतो, या देशाच्या चारही बाजुचा शेवट झाला आहे.
3 ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.
आता इस्राएल देशाचा शेवट जवळ आला आहे, यास्तव मी माझा क्रोध त्यांच्यावर प्रकट करेन, त्यांच्या अपवित्र कामा वरुन मी त्यांचा न्याय करेल. त्यानंतर त्यांच्यावर घृणा आणिन.
4 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
माझी दृष्टी तुमच्यावर दया करणार नाही, आणि मी तुमची गय करणार नाही, तुमच्या कामाचे वेतन तुम्हास देईन, तुमची घृणा मला येते, मग तुम्हास कळेल मी परमेश्वर देव आहे.
5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
परमेश्वर देव हे सांगतो, अनर्थ! अनर्था मागे अनर्थ! पाहा तो येत आहे.
6 ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
शेवट हा निश्चित जवळ आला आहे, शेवट तुमच्यासाठी जागा झाला आहे, पाहा तो येत आहे.
7 ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.
रहीवाशी असलेल्या लोकांच्या भूमीवर सत्यानाश येऊन ठेपला आहे, हानी जवळ येण्याचा समय आला आहे, आणि कुठल्याही पर्वतावर हर्षभरीत ध्वनी ऐकू येणार नाही.
8 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
आता जास्त काळ मी तुम्हाविरुध्द आपल्या त्वेषाने माझ्या रागाची ओतणी तुम्हावर करेन, जेव्हा मी तुमच्या कृत्याप्रमाणे न्यायाचा निकाल करेन तेव्हा तुमचाच सर्व प्रकारचा घृणितपणा तुमच्यावर येईल.
9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
मी तुम्हाकडे करुणेने बघणार नाही, आणि तुझी गय मी करणार नाही, तुझ्या कामाची परतफेड तुझ्यावर होईल. तुम्हामध्ये घृणा वास करेल मग तुम्हास समजेल मी परमेश्वर देव आहे. जो शिक्षा करणारा आहे.
10 ೧೦ “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
१०पहा! असे दिवस येत आहेत, जे घमंडाने भरलेल्या शिक्षेची काठी तुम्हावर येईल.
11 ೧೧ ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
११क्रुरपणाची काठी दुष्टपणावर उगवेल त्यांच्या सर्वांवर, त्यांच्यातल्या धनावर, त्यांच्या महत्वाच्या शेवटच्या इच्छा रहाणार नाहीत.
12 ೧೨ ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
१२वेळ, दिवस समीप येत आहे, हर्ष खरेदी न करो आणि दुःख विक्री न करो, तोपर्यंत माझा क्रोध सर्व बहुसंख्य लोकांवर रहाणार आहे.
13 ೧೩ ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
१३विकणारा जिवंत राहिला तरी तो विकलेल्या भूमीला परत जावयाचा नाही, कारण हे भाकीत त्या सर्व समूहाविषयी आहे, त्यातले काही ही चूकणार नाही, कोणीही आपल्या अधर्माने आपल्या जिवीतास बळकटी आणणार नाही.
14 ೧೪ ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
१४ते तुताऱ्यांचा नाद करतील आणि तयारी करतील तरी लढाई करण्यास कोणी तयार होणार नाही. तथापि माझा क्रोध पूर्ण समुदायावर आला आहे.
15 ೧೫ ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
१५इमारतीच्या आत तलवार आणि दुष्काळ, साथीचा रोग बाहेर आहे. जे शेतात आहेत ते तलवारीने मरतील, जो नगरात असेल त्यास दुष्काळ आणि साथीचा रोग त्यांचा नायनाट करेल.
16 ೧೬ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
१६त्यांच्यातील काही जण बचावले जातील आणि पर्वतावर कबूतराप्रमाणे जातील, त्यांच्या पातकामुळे ते कण्हत राहतील.
17 ೧೭ ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
१७प्रत्येक हात अडखळतील आणि प्रत्येक गुडघा पाण्याप्रमाणे कमजोर होईल.
18 ೧೮ ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
१८आणि ते अंगावर पोते गुंडळतील, त्यांच्यावर दहशतीचे सावट पसरेल; त्यांच्या चेहऱ्यावर लाज व डोक्यावर टक्कल पडेल.
19 ೧೯ ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
१९ते आपले सोने व चांदी रस्त्यावर फेकून देतील, त्याचा त्याग करतील, त्यांचे सोनेचांदीही त्यांना परमेश्वराच्या क्रोधापासून वाचवू शकणार नाही, त्यांच्या जीवाचा बचाव होणार नाही, त्यांचे पोट भरणार नाही, कारण त्यांनी त्यामुळे ठोकर खाऊन अधर्म केला आहे.
20 ೨೦ ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
२०ते त्यांच्या दागिण्यांवर घमंड करीत होते, त्यांच्या मूर्ती त्यांनी तिरस्कार आणणाऱ्या घृणा निर्माण करणाऱ्या तयार केल्या होत्या. तिरस्करणीय कार्य त्यांच्याशी केले आहे. म्हणून या सर्व गोष्टी त्यांच्यासाठी अपवित्र केल्या आहे.
21 ೨೧ ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.
२१आणि मी तिऱ्हाईतास हे सर्व लुट म्हणून वाटून देईन आणि पृथ्वी वरील वाईट लोकांस लुटून घेऊन देईन. ते ते भ्रष्ट करतील.
22 ೨೨ ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
२२मग मी माझे तोंड त्यांच्या महत्वाच्या ठिकाणापासून फिरवेन कारण त्यांनी माझे स्थान भ्रष्ट केले आहे. लुटारू येऊन आत लुटालुट करतील.
23 ೨೩ ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.
२३साखळी तयार करा, कारण भूमी रक्ताच्या न्यायाच्या निकालाने पूर्ण भरुन गेली आहे, शहर हिंसक बनले आहे.
24 ೨೪ ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
२४देशावर सर्वात दुष्ट लोक घेऊन येईन आणि ते त्यांची घरे बळकावून घेतील, आणि मी त्यांचा गर्व समाप्त करेन कारण त्यांनी पवित्र ठिकाण अमंगळ केली आहेत.
25 ೨೫ ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.
२५ते भयभीत होतील, शांततेच्या शोधात ते भटकतील पण त्यांना ती सापडणार नाहीत.
26 ೨೬ ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
२६अनर्थावर अनर्थ येईल अफवांवर अफवा पसरतील, मग ते संदेष्ट्याला संदेश पहाण्यासाठी सांगतील, दृष्टांत विद्या, सल्ला, वडीलांची बुध्दी संपून जाईल.
27 ೨೭ ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
२७राजा शोक करील, व राजकुमार निराशा परीधान करतील, तेव्हा भूमीच्या लोकांचे हात भितीने थरथरतील त्यांच्या कृत्याप्रमाणे हे त्यांच्याशी मी करेन, आणि मी त्यांच्या गुणवत्तेनुसार त्यांचा न्याय करेन, तोपर्यंत त्यांना समजणार नाही कि मी परमेश्वर देव आहे.”

< ಯೆಹೆಜ್ಕೇಲನು 7 >