< ಎಜ್ರನು 4 >

1 ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.
जब यहूदा और बिन्यामीन के शत्रुओं ने यह सुना कि बँधुआई से छूटे हुए लोग इस्राएल के परमेश्वर यहोवा के लिये मन्दिर बना रहे हैं,
2 ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.
तब वे जरुब्बाबेल और पूर्वजों के घरानों के मुख्य-मुख्य पुरुषों के पास आकर उनसे कहने लगे, “हमें भी अपने संग बनाने दो; क्योंकि तुम्हारे समान हम भी तुम्हारे परमेश्वर की खोज में लगे हुए हैं, और अश्शूर का राजा एसर्हद्दोन जिसने हमें यहाँ पहुँचाया, उसके दिनों से हम उसी को बलि चढ़ाते भी हैं।”
3 ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
जरुब्बाबेल, येशुअ और इस्राएल के पितरों के घरानों के मुख्य पुरुषों ने उनसे कहा, “हमारे परमेश्वर के लिये भवन बनाने में, तुम को हम से कुछ काम नहीं; हम ही लोग एक संग मिलकर फारस के राजा कुस्रू की आज्ञा के अनुसार इस्राएल के परमेश्वर यहोवा के लिये उसे बनाएँगे।”
4 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
तब उस देश के लोग यहूदियों को निराश करने और उन्हें डराकर मन्दिर बनाने में रुकावट डालने लगे।
5 ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
और फारस के राजा कुस्रू के जीवन भर वरन् फारस के राजा दारा के राज्य के समय तक उनके मनोरथ को निष्फल करने के लिये वकीलों को रुपया देते रहे।
6 ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.
क्षयर्ष के राज्य के आरम्भिक दिनों में उन्होंने यहूदा और यरूशलेम के निवासियों का दोषपत्र उसे लिख भेजा।
7 ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.
फिर अर्तक्षत्र के दिनों में बिशलाम, मिथ्रदात और ताबेल ने और उसके सहयोगियों ने फारस के राजा अर्तक्षत्र को चिट्ठी लिखी, और चिट्ठी अरामी अक्षरों और अरामी भाषा में लिखी गई।
8 ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
अर्थात् रहूम राजमंत्री और शिमशै मंत्री ने यरूशलेम के विरुद्ध राजा अर्तक्षत्र को इस आशय की चिट्ठी लिखी।
9 ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.
उस समय रहूम राजमंत्री और शिमशै मंत्री और उनके अन्य सहयोगियों ने, अर्थात् दीनी, अपर्सतकी, तर्पली, अफ़ारसी, एरेकी, बाबेली, शूशनी, देहवी, एलामी,
10 ೧೦ ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.
१०आदि जातियों ने जिन्हें महान और प्रधान ओस्‍नप्पर ने पार ले आकर सामरिया नगर में और महानद के इस पार के शेष देश में बसाया था, एक चिट्ठी लिखी।
11 ೧೧ ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
११जो चिट्ठी उन्होंने अर्तक्षत्र राजा को लिखी, उसकी यह नकल है- “राजा अर्तक्षत्र की सेवा में तेरे दास जो महानद के पार के मनुष्य हैं, तुझे शुभकामनाएँ भेजते हैं।
12 ೧೨ ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
१२राजा को यह विदित हो, कि जो यहूदी तेरे पास से चले आए, वे हमारे पास यरूशलेम को पहुँचे हैं। वे उस दंगैत और घिनौने नगर को बसा रहे हैं; वरन् उसकी शहरपनाह को खड़ा कर चुके हैं और उसकी नींव को जोड़ चुके हैं।
13 ೧೩ ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
१३अब राजा को विदित हो कि यदि वह नगर बस गया और उसकी शहरपनाह बन गई, तब तो वे लोग कर, चुंगी और राहदारी फिर न देंगे, और अन्त में राजाओं की हानि होगी।
14 ೧೪ ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.
१४हम लोग तो राजभवन का नमक खाते हैं और उचित नहीं कि राजा का अनादर हमारे देखते हो, इस कारण हम यह चिट्ठी भेजकर राजा को चिता देते हैं।
15 ೧೫ ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.
१५तेरे पुरखाओं के इतिहास की पुस्तक में खोज की जाए; तब इतिहास की पुस्तक में तू यह पाकर जान लेगा कि वह नगर बलवा करनेवाला और राजाओं और प्रान्तों की हानि करनेवाला है, और प्राचीनकाल से उसमें बलवा मचता आया है। इसी कारण वह नगर नष्ट भी किया गया था।
16 ೧೬ ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”
१६हम राजा को निश्चय करा देते हैं कि यदि वह नगर बसाया जाए और उसकी शहरपनाह बन चुके, तब इसके कारण महानद के इस पार तेरा कोई भाग न रह जाएगा।”
17 ೧೭ ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.
१७तब राजा ने रहूम राजमंत्री और शिमशै मंत्री और सामरिया और महानद के इस पार रहनेवाले उनके अन्य सहयोगियों के पास यह उत्तर भेजा, “कुशल, हो!
18 ೧೮ ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.
१८जो चिट्ठी तुम लोगों ने हमारे पास भेजी वह मेरे सामने पढ़कर साफ-साफ सुनाई गई।
19 ೧೯ ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
१९और मेरी आज्ञा से खोज किए जाने पर जान पड़ा है, कि वह नगर प्राचीनकाल से राजाओं के विरुद्ध सिर उठाता आया है और उसमें दंगा और बलवा होता आया है।
20 ೨೦ ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
२०यरूशलेम के सामर्थी राजा भी हुए जो महानद के पार से समस्त देश पर राज्य करते थे, और कर, चुंगी और राहदारी उनको दी जाती थी।
21 ೨೧ ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
२१इसलिए अब इस आज्ञा का प्रचार कर कि वे मनुष्य रोके जाएँ और जब तक मेरी ओर से आज्ञा न मिले, तब तक वह नगर बनाया न जाए।
22 ೨೨ ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
२२और चौकस रहो, इस बात में ढीले न होना; राजाओं की हानि करनेवाली वह बुराई क्यों बढ़ने पाए?”
23 ೨೩ ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
२३जब राजा अर्तक्षत्र की यह चिट्ठी रहूम और शिमशै मंत्री और उनके सहयोगियों को पढ़कर सुनाई गई, तब वे उतावली करके यरूशलेम को यहूदियों के पास गए और बलपूर्वक उनको रोक दिया।
24 ೨೪ ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.
२४तब परमेश्वर के भवन का काम जो यरूशलेम में है, रुक गया; और फारस के राजा दारा के राज्य के दूसरे वर्ष तक रुका रहा।

< ಎಜ್ರನು 4 >