6೬“ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು
7೭ಅಬ್ರಹಾಮನು ಎದ್ದು, ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು.
8೮ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,
9೯ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.
10೧೦ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,
11೧೧“ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”
12೧೨ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ
13೧೩ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.