< ಆದಿಕಾಂಡ 3 >

1 ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
परमेश्वर देवाने निर्माण केलेल्या सर्व वनपशूंमध्ये सर्प हा अतिशय धूर्त होता. तो स्त्रीला म्हणाला, “‘बागेतल्या कोणत्याही झाडाचे फळ खाऊ नका’ असे देवाने तुम्हास खरोखरच सांगितले आहे काय?”
2 ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
स्त्रीने सर्पाला उत्तर दिले, “बागेतल्या झाडांची फळे आम्ही खाऊ शकतो.
3 ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
परंतु बागेच्या मधोमध जे झाड आहे, त्याच्या फळाविषयी देवाने म्हटले, ते खाऊ नका. त्या झाडाला स्पर्शही करू नका, नाहीतर तुम्ही मराल.”
4 ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
सर्प त्या स्त्रीला म्हणाला, “तुम्ही खरोखर मरणार नाही.
5 ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
कारण देवास हे माहीत आहे की, जर तुम्ही त्या झाडाचे फळ खाल त्याच दिवशी तुमचे डोळे उघडतील, व तुम्ही देवांसारखे बरेवाईट जाणणारे व्हाल.”
6 ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
आणि स्त्रीने पाहिले की, त्या झाडाचे फळ खाण्यास चांगले व डोळ्यांना आनंद देणारे व शहाणे करण्यासाठी इष्ट आहे, तेव्हा तिने त्याचे काही फळ घेऊन खाल्ले. आणि तिने आपल्याबरोबर आपल्या पतीसही त्या फळातून थोडे दिले व त्याने ते खाल्ले.
7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
तेव्हा त्या दोघांचे डोळे उघडले व आपण नग्न आहोत असे त्यांना समजले; तेव्हा त्यांनी अंजिराची पाने एकत्र जोडून आपणाला झाकण्यासाठी वस्त्रे तयार केली.
8 ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
दिवसाचा थंड वारा सुटला असता परमेश्वर देव बागेत आला. त्या वेळी त्यांनी त्याचा आवाज ऐकला. आणि परमेश्वर देवाच्या समक्षतेपासून दृष्टीआड व्हावे म्हणून मनुष्य व त्याची पत्नी बागेच्या झाडांमध्ये लपली.
9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
तेव्हा परमेश्वर देवाने मनुष्यास हाक मारुन म्हटले, “तू कोठे आहेस?”
10 ೧೦ ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
१०मनुष्य म्हणाला, “बागेत मी तुझा आवाज ऐकला व मला भीती वाटली, कारण मी नग्न होतो. म्हणून मी लपलो.”
11 ೧೧ ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
११परमेश्वर त्यास म्हणाला, “तू नग्न आहेस हे तुला कोणी सांगितले? ज्या झाडाचे फळ तू खाऊ नकोस अशी मी तुला आज्ञा दिली होती त्या झाडाचे फळ तू खाल्लेस काय?”
12 ೧೨ ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
१२मनुष्य म्हणाला, “तू ही स्त्री माझ्या सोबतीस म्हणून दिलीस, तिने त्या झाडाचे फळ मला दिले आणि म्हणून मी ते खाल्ले.”
13 ೧೩ ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
१३मग परमेश्वर देव त्या स्त्रीस म्हणाला, “तू हे काय केलेस?” ती स्त्री म्हणाली, “सर्पाने मला फसवले व म्हणून मी ते फळ खाल्ले.”
14 ೧೪ ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
१४परमेश्वर देव सर्पास म्हणाला, “तू हे केल्यामुळे सर्व गुरेढोरांमध्ये व सर्व वन्यपशूंमध्ये तू शापित आहेस. तू पोटाने सरपटत चालशील आणि आयुष्यभर तू माती खाशील.
15 ೧೫ ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
१५तुझ्यामध्ये व स्त्रीमध्ये आणि तुझ्या बीजामध्ये व स्त्रीच्या बीजामध्ये मी शत्रूत्व ठेवीन. तो तुझे डोके ठेचील आणि तू त्याची टाच फोडशील.”
16 ೧೬ ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
१६परमेश्वर देव स्त्रीस म्हणाला, “मुलांना जन्म देते वेळी तुझ्या वेदना मी खूप वाढवीन तरी तुझी ओढ तुझ्या नवऱ्याकडे राहील; आणि तो तुझ्यावर अधिकार चालवील.”
17 ೧೭ ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
१७नंतर परमेश्वर देव आदामाला म्हणाला, तू तुझ्या पत्नीची वाणी ऐकली आहे आणि ज्या झाडाचे फळ खाऊ नकोस अशी आज्ञा दिलेली होती, त्या झाडाचे फळ तू खाल्ले आहेस. म्हणून तुझ्यामुळे भूमीला शाप आला आहे. तू तिजपासून अन्न मिळवण्यासाठी आपल्या आयुष्याचे सर्व दिवस कष्ट करशील;
18 ೧೮ ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
१८जमीन तुझ्यासाठी काटे व कुसळे उत्पन्न करील आणि शेतातील वनस्पती तुला खाव्या लागतील.
19 ೧೯ ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
१९तू माघारी जमिनीमध्ये जाशील तोपर्यंत तू आपल्या निढळाच्या घामाने भाकर खाशील, तू मरणाच्या दिवसापर्यंत अतिशय काम करशील. कारण मातीमधून तू निर्माण झालेला आहेस; आणि मातीमध्ये तू परत जाशील.
20 ೨೦ ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
२०आदामाने आपल्या पत्नीचे नाव हव्वा ठेवले, कारण सर्व जिवंत मनुष्यांची ती आई होती.
21 ೨೧ ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
२१परमेश्वर देवाने आदाम व त्याच्या पत्नीसाठी चामड्यांची वस्त्रे केली; आणि ती त्यांना घातली.
22 ೨೨ ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
२२परमेश्वर देव म्हणाला, “पाहा, मनुष्य आपल्यातल्या एका सारखा होऊन त्यास बरे व वाईट समजू लागले आहे. तर आता त्यास त्याच्या हातांनी जीवनाच्या झाडावरून ते फळ घेऊन खाऊ देऊ नये, आणि जर का तो ते फळ खाईल तर मग सदासर्वकाळ तो जिवंत राहील.”
23 ೨೩ ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
२३तेव्हा परमेश्वर देवाने मनुष्यास ज्या जमिनीतून उत्पन्न केले होते तिची मशागत करण्यासाठी एदेन बागेतून बाहेर घालवून दिले.
24 ೨೪ ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
२४देवाने मनुष्यास बागेतून घालवले, आणि जीवनाच्या झाडाचे रक्षण करण्यासाठी त्याने एदेन बागेच्या पूर्वेकडे करुब ठेवले, आणि सर्व दिशांनी गरगर फिरणारी ज्वालारूप एक तलवार ठेवली.

< ಆದಿಕಾಂಡ 3 >