< ಆದಿಕಾಂಡ 41 >

1 ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
दुई वर्षको अन्त्यमा फारोले एउटा सपना देखे । तिनी नील नदीको किनारमा उभिए ।
2 ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
नील नदीबाट सातवटा सप्रेका र मोटा-मोटा गाई निस्केर आए, अनि तिनीहरू नर्कटको झाडीमा चरे ।
3 ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.
नील नदीबाट अरू सातवटा नसप्रेका र दुब्ला-दुब्ला गाई निस्केर आए । तिनीहरू नदीको किनारमा उभिरहेका पहिलेका गाईहरूसँगै उभिए ।
4 ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
त्यसपछि नसप्रेका र दुब्ला-दुब्ला गाईहरूले सातवटा सप्रेका र मोटा-मोटा गाईलाई खाइदिए । अनि फारो ब्युँझे ।
5 ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.
तिनी फेरि सुते र अर्को सपना देखे । सातवटा भरिला र असल अनाजका बाला एउटै डाँठमा उम्रे ।
6 ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
त्यसपछि सेप्रा र पूर्वीय बतासद्वारा ओइलाइएका अरू सातवटा अन्‍नका बाला तिनीहरू पछि पलाए ।
7 ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.
सेप्रा बालाहरूले ती सातवटा भरिला र असल बालालाई खाइदिए । फारो ब्युँझे, र यो त सपना पो रहेछ भनी तिनलाई थाहा भयो ।
8 ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.
बिहान तिनको आत्मा बेचैन भयो । तिनले मिश्रका सबै जादुगर र बुद्धिमान् मानिसहरूलाई बोलाउन पठाए । फारोले तिनीहरूलाई आफ्ना सपनाहरू बताए, तर फारोलाई सपनाहरूको अर्थ खोल्न सक्‍ने त्यहाँ कोही भएन ।
9 ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.
त्यसपछि मुख्य पियाउनेले फारोलाई भने, “आज म मेरो दोषको बारेमा सोच्दै छु ।
10 ೧೦ ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,
फारो आफ्ना नोकरहरूसित रिसाउनु भई मलाई र मुख्य पकाउनेलाई अङ्गरक्षकका कप्‍तानको कैदखानामा राख्‍नुभयो ।
11 ೧೧ ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
तिनी र मैले एउटै रात सपना देख्यौँ । हामीले आ-आफ्नो अर्थ भएका सपना देख्यौँ ।
12 ೧೨ ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
त्यहाँ हामीसित एक जना जवान हिब्रू मानिस थियो जो अङ्गरक्षकका कप्‍तानको नोकर थियो । हामीले त्यसलाई हाम्रा सपनाहरू बताएपछि त्यसले अर्थ खोलिदियो । त्यसले हामीलाई आ-आफ्ना सपनाअनुसार अर्थ खोलिदियो ।
13 ೧೩ ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು.
त्यसले हामीलाई अर्थ खोलिदिएअनुसार नै हुन आयो । फारोले मलाई मेरो पदमा पुनर्स्थापना गरिदिनुभयो, तर अर्को मानिसलाई झुण्ड्याइयो ।”
14 ೧೪ ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
त्यसपछि फारोले योसेफलाई डाक्‍न पठाए । तिनीहरूले तिनलाई चाँडै नै झ्यालखानाबाट निकालेर ल्याए । तिनले दारी खौरेपछि लुगाहरू बद्लेर फारोकहाँ आए ।
15 ೧೫ ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
फारोले योसेफलाई भने, “मैले एउटा सपना देखेँ, तर यसको अर्थ खोल्ने कोही भएन । तर तिमीले सपना सुन्यौ भने यसको अर्थ खोल्न सक्छौ भनी मैले तिम्रो बारेमा सुनेको छु ।”
16 ೧೬ ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.
योसेफले फारोलाई जवाफ दिए, “ममा यस्तो खुबी त छैन, तर परमेश्‍वरले फारोलाई निगाहसाथ जवाफ दिनुहुनेछ ।”
17 ೧೭ ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.”
फारोले योसेफलाई बताए, “मेरो सपनामा म नील नदीको किनारमा उभिएँ ।
18 ೧೮ ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
नील नदीबाट सातवटा सप्रेका र मोटा-मोटा गाई निस्केर आए, अनि तिनीहरू नर्कटको झाडीमा चरे ।
19 ೧೯ ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.
नील नदीबाट अरू सातवटा कमजोर, नसप्रेका र दुब्ला-दुब्ला गाई निस्केर आए । मैले पुरै मिश्रभरि तीजस्ता नसप्रेका गाईहरू कहिल्यै देखेको छैनँ ।
20 ೨೦ ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.
त्यसपछि नसप्रेका र दुब्ला-दुब्ला गाईहरूले सातवटा मोटा-मोटा गाईलाई खाइदिए ।
21 ೨೧ ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು.
तिनीहरूले ती गाईहरूलाई खाइसकेपछि तिनीहरू खाएका जस्ता देखिँदैनथे किनकि तिनीहरू पहिलेजस्तै अझै पनि नसप्रेका देखिन्थे । त्यसपछि मेरो निद्रा खुल्यो ।
22 ೨೨ “ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು.
मेरो अर्को सपनामा मैले सातवटा भरिला र असल अनाजका बाला एउटै डाँठमा उम्रिरहेका देखेँ ।
23 ೨೩ ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
त्यसपछि सुकेका, सेप्रा र पूर्वीय बतासद्वारा ओइलाइएका अरू सातवटा अन्‍नका बाला तिनीहरू पछि पलाउन थाले ।
24 ೨೪ ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.
सेप्रा बालाहरूले ती सातवटा भरिला र असल बालालाई खाइदिए । मैले जादुगरहरूलाई यी सपनाहरू बताएँ, तर मलाई तिनको अर्थ खोलिदिने कोही भएन ।”
25 ೨೫ ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.
योसेफले फारोलाई भने, “फारोका सपनाहरू एउटै हुन् । परमेश्‍वरले गर्न लाग्‍नुभएको कुरा उहाँले फारोलाई प्रकट गराउनुभएको छ ।
26 ೨೬ ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.
सातवटा असल गाई र सातवटा असल बाला सात वर्ष हुन् । सपनाहरू एउटै हुन् ।
27 ೨೭ ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
तीपछि आएका सातवटा दुब्ला-दुब्ला र नसप्रेका गाई सात वर्ष हुन्, र पूर्वीय बतासद्वारा ओइल्याइएका सातवटा बाला अनिकालका सात वर्ष हुन् ।
28 ೨೮ ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.
मैले फारोलाई बताएको कुरा यही नै हो । परमेश्‍वरले गर्न लाग्‍नुभएको कुरा उहाँले फारोलाई प्रकट गराउनुभएको छ ।
29 ೨೯ ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು.
हेर्नुहोस्, मिश्रदेशभरि ठुलो सहकालको सात वर्ष हुनेछ ।
30 ೩೦ ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
त्यसपछि सात वर्षको अनिकाल पर्नेछ, र मिश्रभरि त्यस सात वर्षको सहकालको सम्झना हुनेछैन, अनि अनिकाले देशलाई सखाप पार्नेछ ।
31 ೩೧ ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.
देशमा पछि आउने अनिकालको कारणले गर्दा सहकाललाई सम्झनेछैन किनकि यो अति नै भयानक हुनेछ ।
32 ೩೨ ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
फारोलाई सपना दोहोर्‍याइनुको कारणचाहिँ यही हो, कि परमेश्‍वरले यो विषयलाई पक्‍का गर्नुभएको छ, र उहाँले चाँडै यसो गर्नुहुनेछ ।
33 ೩೩ “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
अब फारोले कुशल र बुद्धिमान् मानिसको खोजी गरी तिनलाई मिश्र देशको जिम्मेवारी दिनुहोस् ।
34 ೩೪ ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.
फारोले देशमाथि अधिकारीहरू नियुक्त गर्नुभएको होस् र तिनीहरूले सहकालका सात वर्षमा मिश्रका अनाजहरूको पाँचौँ हिस्सा उठाऊन् ।
35 ೩೫ ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
सहरहरूमा खानाका लागि तिनीहरूले आउँदै गरेका यी असल वर्षहरूका सबै अनाज जम्मा गरून् । तिनीहरूले यसको सञ्चय गर्नुपर्छ ।
36 ೩೬ ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು.
मिश्रमा आउने सात वर्षको अनिकालको अवधिमा यी अनाज वितरण गरिनुपर्छ । यसरी अनिकालद्वारा देश सखाप हुनेछैन ।”
37 ೩೭ ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.
फारो र तिनका सबै कामदारको दृष्‍टिमा यो सल्लाह राम्रो थियो ।
38 ೩೮ ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.
फारोले आफ्ना कामदारहरूलाई भने, “यिनीजस्तै परमेश्‍वरको आत्मा भएको अर्को कुनचाहिँ मानिस हामी पाउन सक्छौँ र?”
39 ೩೯ ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.
त्यसैले फारोले योसेफलाई भने, “परमेश्‍वरले तिमीलाई यी सबै देखाउनुभएकोले तिमीजस्तै कुशल र बुद्धिमान् अरू कोही छैन ।
40 ೪೦ ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
तिमी नै मेरो घरको अधिकारी हुनेछौ र तिम्रो वचनअनुसार नै मेरा सबै मानिस चल्नेछन् । सिंहासनमा मात्रै म तिमीभन्दा ठुलो हुनेछु ।”
41 ೪೧ ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,
फारोले योसेफलाई भने, “हेर, मैले तिमीलाई मिश्र देशभरिको अधिकारी तुल्याएको छु ।”
42 ೪೨ ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
फारोले आफ्नो औँलाबाट छाप-औँठी फुकाली योसेफको औँलामा लगाइदिए । तिनले योसेफलाई सुन्दर मलमलको लुगा पहिराइदिए र तिनको गलामा सुनको सिक्री लगाइदिए ।
43 ೪೩ ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
फारोले तिनलाई आफूसित भएको दोस्रो दर्जाको रथमा सवार गराए । मानिसहरू यसो भन्दै तिनको सामु चिच्‍च्याए, “घुँडा टेकेर झुक ।” फारोले तिनलाई सारा मिश्रको अधिकारी तुल्याए ।
44 ೪೪ ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.
फारोले योसेफलाई भने, “म फारो हुँ, र तिमीबाहेक अरू कसैले मिश्र देशमा आफ्नो इच्छाअनुसार कुनै काम गर्न पाउनेछैन ।”
45 ೪೫ ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
फारोले योसेफको नाउँ “सापनत-पानेह” राखिदिए । तिनले योसेफलाई पुजारी पोतीपेराकी छोरी आसनतसित विवाह गराइदिए । योसेफ मिश्र देशभरि जान्थे ।
46 ೪೬ ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
मिश्रका राष्‍ट्रप्रमुख फारोको सामु उभिँदा योसेफ तिस वर्षका थिए । योसेफ फारोको उपस्थितिबाट गई सारा मिश्र देशभरि चाहार्थे ।
47 ೪೭ ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.
सहकालका सात वर्षमा जमिनले प्रचुर मात्रामा उब्जनी गर्‍यो ।
48 ೪೮ ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.
तिनले सात वर्षमा मिश्र देशका सबै अनाज सङ्कलन गरी त्यसलाई सहरहरूमा राखे । तिनले हरेक सहरमा वरिपरिका खेतहरूबाट अनाज थन्क्याएर राखे ।
49 ೪೯ ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.
योसेफले अन्‍नको भण्डारण समुद्रको बालुवासरह गरे । अन्‍न यति धेरै थियो कि तिनले हिसाब राख्‍नै छाडिदिए ।
50 ೫೦ ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.
अनिकालका वर्षहरू सुरु हुनुभन्दा अगि योसेफले ओनका पुजारी पोतीपेराकी छोरी आसनतबाट दुई जना छोरा जन्माइसकेका थिए ।
51 ೫೧ ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.
योसेफले आफ्नो जेठो छोरोलाई मनश्शे नाउँ दिएका थिए किनकि तिनले भने, “परमेश्‍वरले मेरा र मेरा पिताका घरानाका सबै कष्‍ट बिर्सन लगाउनुभएको छ ।”
52 ೫೨ ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು.
तिनले दोस्रो छोरोको नाउँ एफ्राइम राखे किनकि तिनले भने, “परमेश्‍वरले मेरो कष्‍टलको देशमा मेरो फलिफाप गराउनुभएको छ ।”
53 ೫೩ ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ
मिश्र देशको सात वर्षको सहकालको अन्त्य भयो ।
54 ೫೪ ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
योसेफले भनेजस्तै गरी सात वर्षको अनिकालको थालनी भयो । सबै देशहरूमा अनिकाल परेको थियो तर मिश्र देशमा भने अनाज थियो ।
55 ೫೫ ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
सारा मिश्र अनिकालले तडपिँदा जनताहरूले अनाजको लागि फारोलाई पुकारे । फारोले सबै मिश्रीहरूलाई भने, “योसेफकहाँ जाओ र तिनले भनेझैँ गर ।”
56 ೫೬ ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
अनिकालले पुरै देशलाई ढाकेको थियो । योसेफले सबै भण्डारणहरू खुला गरी मिश्रीहरूलाई अनाज बेचे । मिश्र देशमा अनिकाल अति भयानक थियो ।
57 ೫೭ ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.
सारा संसारमा भयानक अनिकाल परेकोले सबै देशका मानिसहरू योसेफबाट अनाज किन्‍न मिश्रमा आउँदै थिए ।

< ಆದಿಕಾಂಡ 41 >