< ಆದಿಕಾಂಡ 42 >

1 ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”
अब मिश्रमा अनाज पाइँदोरहेछ भनी याकूबलाई थाहा भयो । तिनले आफ्ना छोराहरूलाई भने, “तिमीहरू किन एक-अर्कालाई हेर्छौ?”
2 “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.
तिनले भने, “मिश्रमा अनाज छ भनी मैले सुनेको छु । हामी जीवित रहनको लागि तल गएर हाम्रो लागि अनाज किन ।”
3 ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.
योसेफका दस जना दाजु मिश्रमा अनाज किन्‍नका लागि गए ।
4 ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.
तर याकूबले योसेफका भाइ बेन्यामीनलाई तिनका दाजुहरूसँगै पठाएनन् किनकि तिनीमाथि कुनै हानि आइपर्ला कि भनी तिनी डराए ।
5 ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
किन्‍न आउनेहरूमध्ये इस्राएलका छोराहरू पनि थिए किनकि कनान देशमा पनि अनिकाल परेको थियो ।
6 ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
योसेफ मिश्रका अधिपति थिए । तिनले देशका सबै मानिसलाई अनाज बेच्थे । योसेफका दाजुहरू आए, र तिनीहरूले भुइँसम्मै निहुरेर तिनलाई ढोग गरे ।
7 ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.
योसेफले आफ्ना दाजुहरूलाई देखेर चिने, तर तिनले नचिनेका जस्तै गरी तिनीहरूसित कडासँग बोले । तिनले तिनीहरूलाई भने, “तिमीहरू कहाँबाट आएका हौ?” तिनीहरूले भने, “अनाज किन्‍नका लागि कनान देशबाट आएका हौँ ।”
8 ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.
योसेफले आफ्ना दाजुहरूलाई चिने, तर तिनीहरूले भने तिनलाई चिनेनन् ।
9 ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.
त्यसपछि योसेफले तिनीहरूको बारेमा आफूले देखेका सपनाहरू सम्झे र तिनीहरूलाई भने, “तिमीहरू जासुस हौ । तिमीहरू यो देशका असुरक्षित भागहरू हेर्न आएका हौ ।”
10 ೧೦ ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.
तिनीहरूले तिनलाई भने, “त्यसो होइन, हजुर । तपाईंका दासहरू अनाज किन्‍न आएका हुन् । हामी सबै एउटै मानिसका छोराहरू हौँ ।
11 ೧೧ ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.
हामी इमानदार मानिसहरू हौँ । हामी तपाईंका दासहरू जासुस होइनौँ ।”
12 ೧೨ ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.
तिनले तिनीहरूलाई भने, “तिमीहरू यो देशका असुरक्षित भागहरू हेर्न आएका हौ ।”
13 ೧೩ ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.
तिनीहरूले भने, “हामी तपाईंका दासहरू बार्‍ह जना दाजुभाइ छौँ र हामी कनान देशका एउटै मानिसका छोराहरू हौँ । हेर्नुहोस्, कान्छोचाहिँ अहिले हाम्रा पितासित छन् र एक जना भाइचाहिँ अब जिउँदो छैनन् ।”
14 ೧೪ ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ.
योसेफले तिनीहरूलाई भने, “त्यसैले मैले तिमीहरूलाई भनेँ कि तिमीहरू जासुस हौ ।
15 ೧೫ ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.
यसैद्वारा तिमीहरूको जाँच हुनेछ । फारोको शपथ खाएर म भन्दछु कि तिमीहरूका कान्छा भाइ यहाँ नआउञ्‍जेलसम्म तिमीहरू यहाँबाट जान पाउनेछैनौ ।
16 ೧೬ ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.
तिमीहरूमध्ये कोही एक जना गएर तिनलाई लिएर आऊ । तिमीहरूको वचन सत्य छ कि छैन भनेर जाँच गर्नको लागि तिमीहरू झ्यालखानामा हालिन्छौ ।”
17 ೧೭ ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.
तिनले तिनीहरू सबैलाई तिन दिनसम्म कैदखानामा राखे ।
18 ೧೮ ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
तेस्रो दिनमा याकूबले तिनीहरूलाई भने, “यसो गर, र तिमीहरू बाँच्नेछौ किनकि म परमेश्‍वरदेखि डराउँछु ।
19 ೧೯ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.
तिमीहरू इमानदार मानिस हौ भने एक जनालाई यही झ्यालखानामा छोड, र तिमीहरूचाहिँ जाओ । तिमीहरूका परिवारहरूका लागि आफूसित अनाज पनि लिएर जाओ ।
20 ೨೦ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.
तिमीहरूका कान्छा भाइ मकहाँ लिएर आओ र तिमीहरूको कुरा साँचो ठहरिनेछ अनि तिमीहरू मर्नेछैनौ ।” त्यसैले तिनीहरूले त्यसै गरे ।
21 ೨೧ ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
तिनीहरूले एक-अर्कालाई भने, “हाम्रा भाइको सम्बन्धमा हामी साँच्‍चै दोषी छौँ किनकि तिनले हामीसित बिन्ती गर्दा तिनको व्याकुलता हामीले देख्यौँ तापनि हामीले तिनको कुरा सुनेनौँ । त्यसैले यो व्याकुलता हामीमाथि आइपरेको हो ।”
22 ೨೨ ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.
रूबेनले तिनीहरूलाई जवाफ दिए, “'त्यस केटोको विरुद्धमा पाप नगर' भनेर के मैले तिमीहरूलाई भनेको थिइनँ र? तर तिमीहरूले मेरो कुरा सुनेनौँ । अब हामीले त्यसको रगतको बदला भोग्‍नुपर्छ ।
23 ೨೩ ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.
योसेफले तिनीहरूका कुरा बुझे भनी तिनीहरूले थाहा पाएनन् किनकि तिनीहरूका बिचमा अर्थ खोल्ने व्यक्ति थियो ।
24 ೨೪ ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.
तिनी तिनीहरूबाट एकातिर गई रोए । तिनीहरूकहाँ फर्केर आई तिनले तिनीहरूसित कुराकानी गरे । तिनले तिनीहरूका बिचबाट शिमियोनलाई लिएर तिनीहरूकै आँखाका सामु तिनलाई बाँधे ।
25 ೨೫ ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.
त्यसपछि योसेफले आफ्ना दाजुहरूका झोलाहरू अनाजले भरी हरेकको रुपियाँ-पैसा उसकै बोराभित्र हाल्न र यात्राको लागि सरसामानको बन्दोवस्त गरिदिन आफ्ना नोकरहरूलाई आज्ञा गरे ।
26 ೨೬ ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.
आफ्ना गधाहरूमा अनाज लादेर तिनका दाजुहरू त्यहाँबाट प्रस्थान गरे ।
27 ೨೭ ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
विश्राम स्थलमा आफ्नो गधालाई दाना दिनलाई बोरा खोल्दा एक जनाले आफ्नो रुपियाँ-पैसा देखे । यो तिनको बोराको मुखैमा थियो ।
28 ೨೮ ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.
तिनले आफ्ना दाजुभाइहरुलाई भने, “मेरो रुपियाँ-पैसा त फिर्ता गरिएको रहेछ । हेर त, यो त मेरै बोराभित्र छ ।” तिनीहरूको हंसले ठाउँ छाड्यो । तिनीहरू डरले काम्दै यसो भने, “परमेश्‍वरले यो हामीलाई के गर्नुभएको?”
29 ೨೯ ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.
तिनीहरू कनानमा आफ्ना पिता याकूबकहाँ फर्केर तिनीहरूमाथि आइपरेका सबै कुरा बताइदिए । तिनीहरूले भने,
30 ೩೦ ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.
“त्यस देशका मालिकले हामीसित कठोरतापूर्वक बोले र हामी त्यहाँ जासुस भएर गएका थियौँ भनी ठाने ।
31 ೩೧ ನಾವು ಅವನಿಗೆ, “ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ.
हामीले तिनलाई भन्यौँ, 'हामी इमानदार मानिसहरू हौँ । हामी जासुस होइनौँ ।
32 ೩೨ ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.
हामी बार्‍ह जना दाजुभाइ छौँ, र एउटै पिताका छोराहरू हौँ । एक जना अब जीवित छैन र कान्छोचाहिँ अहिले कनानमा हाम्रा पितासितै छन् ।'
33 ೩೩ ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
त्यस देशका मालिकले हामीलाई भने, 'यसैद्वारा तिमीहरू इमानदार मानिस हौ कि होइनौ भनेर म थाहा पाउनेछु । तिमीहरूमध्ये एक जना यहीँ बस, अनिकालको कारणले गर्दा तिमीहरूका परिवारहरूका लागि अनाज लिएर आफ्नो बाटो लाग ।
34 ೩೪ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.
तिमीहरूका कान्छो भाइ मकहाँ लिएर आओ । तब तिमीहरू जासुस नभई इमानदार मानिस रहेछौ भनी मैले थाहा पाउनेछु । त्यसपछि म तिमीहरूका दाजुलाई छाडिदिनेछु र तिमीहरू यस देशमा व्यापार गरेर बस' ।”
35 ೩೫ ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
तिनीहरूले आफ्ना बोराहरू खोल्दा हरेकको बोराभित्र चाँदीको पोको रहेछ । तिनीहरू र तिनीहरूका पिताले चाँदीको पोको देखेपछि तिनीहरू डराए । तिनीहरूका पिता
36 ೩೬ ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.
याकूबले तिनीहरूलाई भने, “तिमीहरूले मबाट मेरा सन्तानहरू खोसेर मलाई शोकित तुल्याएका छौ । योसेफ अब जीवित छैन, शिमियोन पनि छैन र तिमीहरूले बेन्यामीन पनि मबाट लैजानेछौ । यी सबै कुरा मेरो विरुद्धमा छन् ।”
37 ೩೭ ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.
रूबनले आफ्ना पितालाई यसो भने, “मैले बेन्यामीन तपाईंकहाँ फर्काएर ल्याइनँ भने तपाईंले मेरा दुई छोरालाई मार्न सक्‍नुहुन्छ । तिनलाई मेरो जिम्मामा सुम्पिदिनुस्, र म तिनलाई फेरि तपाईंकहाँ ल्याउनेछु ।”
38 ೩೮ ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. (Sheol h7585)
याकूबले भने, “मेरो छोरो तिमीहरूसितै तल जानेछैन । किनकि तिनका दाजु मरिसके र तिनी एक्लै छन् । तिमीहरू जाने बाटोमा तिनीमाथि कुनै खतरा आइपर्‍यो भने तिमीहरूले मेरो फुलेको कपाललाई शोकसँगै पातालमा पुर्‍याउनेछौ ।” (Sheol h7585)

< ಆದಿಕಾಂಡ 42 >