< ಆದಿಕಾಂಡ 8 >

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
परमेश्‍वरले नोआ, तिनीसित जहाजमा भएका सबै जङ्गली पशुहरू र सबै पालिने पशुहरूलाई सम्झनुभयो । परमेश्‍वरले पृथ्वीमा बतास चलाइदिनुभयो, र पानी घट्न थाल्यो ।
2 ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.
अगाधका मूलहरू र स्वर्गका झ्यालहरू बन्द गरिए, अनि पानी पर्न रोकियो ।
3 ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.
जलप्रलयको पानी पृथ्वीमा बिस्तारै घट्यो, र एक सय पचास दिनपछि पानी निकै घट्यो ।
4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.
सातौँ महिनाको सत्रौँ दिनमा जहाज आरारातका पर्वतहरूमा अडियो ।
5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
दसौँ महिनासम्म पानी निरन्तर घटिरह्‍यो । त्यही महिनाको पहिलो दिनमा पर्वतहरूका टाकुराहरू देखा परे ।
6 ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.
चालिस दिनपछि नोआले आफूले बनाएको जहाजको झ्याल खोले ।
7 ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
तिनले एउटा कागलाई उडाइदिए र जमिनको पानी नसुकुञ्‍जेलसम्म त्यो यताउता उडिरह्‍यो ।
8 ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.
त्यसपछि जमिनको सतहबाट पानी घटेको छ कि छैन भनेर हेर्न तिनले एउटा ढुकुरलाई पठाए ।
9 ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
तर ढुकुरले आफ्नो खुट्टा राख्‍ने ठाउँ कतै पाएन, र त्यो जहाजमा नै तिनीकहाँ फर्क्यो किनकि पानीले अझै पनि पुरै जमिनलाई ढाकिरहेको थियो । तिनले आफ्नो हात पसारेर त्यसलाई समाती जहाजभित्र ल्याए ।
10 ೧೦ ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.
अरू सात दिन पर्खेर तिनले फेरि जहाजबाट त्यस ढुकुरलाई पठाइदिए ।
11 ೧೧ ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
साँझमा त्यो ढुकुर तिनीकहाँ फर्क्यो । हेर! त्यसको चुच्‍चोमा भर्खरै टिपिएको ताजा भद्राक्षको पात थियो । त्यसैले, पानी जमिनबाट घटेछ भनी नोआले थाहा पाए ।
12 ೧೨ ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.
अरू सात दिन पर्खेर तिनले फेरि त्यस ढुकुरलाई पठाइदिए । त्यो फेरि फर्केर तिनीकहाँ आएन ।
13 ೧೩ ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
नोआको छ सय एक वर्षको पहिलो महिनाको पहिलो दिनमा जमिनबाट पानी सुक्यो । नोआले जहाजको छत खोलेर बाहिर हेरे र तिनको सुक्खा भूमि देखे ।
14 ೧೪ ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು.
दोस्रो महिनाको सत्ताइसौँ दिनमा जमिन सुक्खा भयो ।
15 ೧೫ ಆಗ ದೇವರು ನೋಹನಿಗೆ,
परमेश्‍वरले नोआलाई भन्‍नुभयो,
16 ೧೬ “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
“तँ, तेरी पत्‍नी, तेरा छोराहरू र तेरा बुहारीहरू जहाजबाट निस्केर आओ ।
17 ೧೭ ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
तँसित भएका सबै जीवित प्राणीहरू अर्थात् पक्षीहरू, पशुहरू, पृथ्वीको सतहमा हरेक घस्रने प्राणीलाई तँसँगै बाहिर लिएर आइज ताकि तिनीहरू पृथ्वीमा पशस्त मात्रामा फल्दै-फुल्दै, वृद्धि हुँदै र भरिँदै जाऊन् ।”
18 ೧೮ ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.
त्यसैले नोआ आफ्ना छोराहरू, आफ्नी पत्‍नी र आफ्ना बुहारीहरूसँगै बाहिर निस्के ।
19 ೧೯ ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.
हरेक जीवित प्राणी, हरेक घस्रने जन्तु, हरेक पक्षी र पृथ्वीमा चलहल गर्ने हरेक प्राणी तिनीहरूका आ-आफ्ना जात-जातअनुसार जहाजबाट बाहिर निस्के ।
20 ೨೦ ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
नोआले परमप्रभुको निम्ति एउटा वेदी बनाए । तिनले शुद्ध पशुहरू र शुद्ध पक्षीहरूमध्ये केहीलाई लिई वेदीमा होमबलि चढाए ।
21 ೨೧ ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
परमप्रभुले यसको सुगन्ध लिनुभएपछि आफ्नो मनमा भन्‍नुभयो, “मानव-जातिको ह्रदयको मनसाय बाल्यावस्थादेखि नै दुष्‍ट हुने भए तापनि म उसको कारणले गर्दा फेरि भूमिलाई श्राप दिनेछैनँ, न त मैले अहिले गरेजस्तै फेरि हरेक जीवित प्राणीलाई सर्वनाश गर्नेछु ।
22 ೨೨ ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.
पृथ्वी रहुञ्‍जेलसम्म बिउ छर्ने र कटनी गर्ने समय, जाडो र गर्मी, ग्रीष्‍म र हिउँद अनि दिन र रातको अन्त्य हुनेछैन ।

< ಆದಿಕಾಂಡ 8 >

A Dove is Sent Forth from the Ark
A Dove is Sent Forth from the Ark