< ಇಬ್ರಿಯರಿಗೆ ಬರೆದ ಪತ್ರಿಕೆ 10 >

1 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
अशाप्रकारे, पुढे होणाऱ्या चांगल्या गोष्टी आहेत त्यांची नियमशास्त्रात छाया आहे. त्या सत्याचे ते खरे स्वरूप नाही, म्हणून ते प्रतिवर्षी नित्य अर्पील्या जाणाऱ्या त्याच त्याच यज्ञांनी जवळ येणाऱ्यांना पूर्ण करण्यास केव्हाही समर्थ नाही.
2 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
जर नियमशास्त्र लोकांस परिपूर्ण करू शकले असते तर यज्ञ अर्पण करण्याचे थांबले नसते का? कारण उपासना करणारे कायमचेच शुद्ध झाले असते आणि त्यानंतर पापांची भावना नसल्याने दोषी ठरले नसते.
3 ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,
परंतु त्याऐवजी ते यज्ञ वर्षानुवर्षे पापांची आठवण करून देतात.
4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
कारण बैलांच्या किंवा बकऱ्याच्या रक्ताने पाप नाहीसे होणे अशक्य आहे.
5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ, ) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
म्हणून ख्रिस्त जेव्हा या जगात आला, तेव्हा तो देवाला म्हणाला, “तुला यज्ञ व अर्पणे याची इच्छा नव्हती, त्याऐवजी तू माझ्यासाठी शरीर तयार केले.
6 ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.
होमार्पणांनी व पापाबद्दलच्या अर्पणांनी तुला आनंद वाटला नाही.
7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
ह्यावरून मी म्हणालो, हे देवा, ग्रंथपटात माझ्याविषयी लिहून ठेवले आहे, तुझ्या इच्छेप्रमाणे करण्यासाठी मी आलो आहे.”
8 ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
वर उल्लेखल्याप्रमाणे तो म्हणाला, “यज्ञ, अन्नार्पणे, होमार्पणे व पापाबद्दलची अर्पणे, ह्यांची इच्छा तुला नव्हती व त्यामध्ये तुला संतोष नव्हता.” (जरी नियमशास्त्रानुसार ही अर्पणे करण्यात येतात.)
9 ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
मग तो म्हणाला, “हा मी आहे! तुझी इच्छा पूर्ण करण्यास मी आलो आहे.” दुसरे स्थापावे म्हणून तो पहिले काढून टाकतो.
10 ೧೦ ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
१०देवाच्या इच्छेनुसार येशू ख्रिस्ताच्या एकदाच झालेल्या देह अर्पणाद्वारे आपण पवित्र करण्यात आलो आहोत.
11 ೧೧ ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
११प्रत्येक याजक तर दररोज सेवा करत आणि ज्यामुळे पाप नाहीसे होत नाही असे यज्ञ तो वारंवार अर्पण करतो.
12 ೧೨ ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
१२परंतु आपल्या पापांबद्दल सर्वकाळासाठी एकदाच ख्रिस्ताने अर्पण केले व तो आता देवाच्या उजवीकडे बसला आहे.
13 ೧೩ ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
१३आणि तेव्हापासून आपले वैरी नमवून आपले पादासन होईपर्यंत वाट पाहत आहे.
14 ೧೪ ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
१४कारण जे पवित्र केले जात आहेत त्यांना त्याने एकाच अर्पणाने सर्वकाळासाठी पूर्ण केले.
15 ೧೫ ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,
१५पवित्र आत्माही याबाबत आपल्याला साक्ष देतो. पहिल्यांदा तो असे म्हणतो,
16 ೧೬ “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
१६परमेश्वर म्हणतो, “त्या दिवसानंतर त्यांच्याशी मी करार करीन तो हा; मी माझे नियम त्यांच्या मनात घालीन आणि ते त्यांच्या हृदयपटांवर लिहीन.”
17 ೧೭ “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
१७“आणि मी त्यांची पापे व अधर्म कृत्ये कधीही आठवणारच नाही.”
18 ೧೮ ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.
१८जेथे या पापांची क्षमा झाली आहे, तेथे पापाबद्दल अर्पण व्हायचे नाही.
19 ೧೯ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
१९म्हणून बंधूनो, येशूच्या रक्ताद्वारे आपल्याला परमपवित्रस्थानात जाण्याचे धैर्य आहे.
20 ೨೦
२०त्याने पडद्यामधून म्हणजे आपल्या स्वतःच्या देहातून, आपल्यासाठी ती नवीन व जिवंत वाट स्थापित केली आहे.
21 ೨೧ ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
२१कारण देवाच्या घरावर आपल्याला महान असा मुख्य याजक मिळाला आहे.
22 ೨೨ ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
२२म्हणून आपली हृदये दुष्ट विवेकभावापासून मुक्त होण्यासाठी शिंपडलेली आणि आपले शरीर निर्मळ पाण्याने धुतलेले असे आपण खऱ्या अंतःकरणाने विश्वासाच्या पूर्ण खात्रीने जवळ यावे.
23 ೨೩ ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
२३आपल्याला जी आशा आहे तिला आपण घट्ट धरुन राहू कारण ज्याने आपल्याला अभिवचन दिले, तो विश्वासू आहे.
24 ೨೪ ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
२४आपण एकमेकांस समजून घेऊ व प्रीती आणि चांगली कामे करण्याकरिता एकमेकांना उत्तेजन देऊ.
25 ೨೫ ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
२५आपण कित्येकाच्या चालीप्रमाणे आपले एकत्र मिळणे न सोडता एकमेकास बोध करावा आणि देवाचा दिवस जवळ येत असताना अधीकाधीक उत्तेजन द्यावे.
26 ೨೬ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
२६सत्याचे ज्ञान प्राप्त झाल्यानंतरसुद्धा जर आपण जाणूनबुजून पाप करीत राहिलो, तर मग पापांसाठी यापुढे आणखी अर्पण करण्याचे बाकी राहिले नाही.
27 ೨೭ ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
२७पण जे देवाला विरोध करतात त्यांना भयंकर अशा न्यायनिवाड्याशिवाय व भयंकर अशा भस्म करणाऱ्या अग्नीशिवाय दुसरे काही शिल्लक राहिले नाही.
28 ೨೮ ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
२८जो कोणी मोशेचे नियमशास्त्र नाकारतो त्यास दोघा किंवा तिघांच्या साक्षीच्या आधारे कसलीही दया न दाखविता मरणदंड होतो.
29 ೨೯ ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
२९तर मग ज्याने देवाच्या पुत्राला पायाखाली तुडवले, कराराच्या ज्या रक्ताने त्यास पवित्र केले त्या रक्ताला अपवित्र ठरवले आणि ज्याने कृपेच्या आत्म्याचा अपमान केला, तो मनुष्य किती अधिक दंडास पात्र ठरेल म्हणून तुम्हास वाटते?
30 ೩೦ “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
३०कारण त्यास ओळखतो तो म्हणतो, “सूड घेणे माझ्या हाती आहे; मी परतफेड करीन.” पुन्हा तो असे म्हणतो, “प्रभू आपल्या लोकांचा न्याय करील.”
31 ೩೧ ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
३१जिवंत देवाच्या हाती सापडणे किती भयंकर गोष्ट आहे.
32 ೩೨ ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
३२ते पूर्व काळचे दिवस आठवा, जेव्हा नुकताच तुम्हास सुवार्तेचा प्रकाश प्राप्त होत असता, तेव्हा तुम्ही भयंकर दुःखे सोसली.
33 ೩೩ ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
३३काही वेळा जाहीरपणे तुमचा अपमान करण्यात आला आणि वाईट शब्द वापरण्यात आले, तर काही वेळा ज्यांना अशा रीतीने वागणूक मिळाली त्यांचे सहभागी व्हावे लागले.
34 ೩೪ ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
३४जे तुरूंगात होते त्यांना तुम्ही समदुःखी झाला आणि जे तुमच्याकडे होते ते तुमच्याकडून घेण्यात आले तरी तुम्ही आनंदी होता कारण तुमच्याजवळ अधिक चांगली व सर्वकाळ टिकणारी संपत्ती आहे, हे तुम्ही जाणून होता.
35 ೩೫ ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
३५म्हणून धैर्य सोडू नका, त्याचे प्रतिफळ मोठे आहे.
36 ೩೬ ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
३६तुम्ही धीर धरणे जरूरीचे आहे. म्हणजे जेव्हा तुम्ही देवाची इच्छा पूर्ण करून त्याने तुम्हास दिलेल्या त्याच्या वचनाप्रमाणे तुम्हास प्रतिफळ मिळावे.
37 ೩೭ “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.
३७पवित्र शास्त्र असे म्हणते; कारण अगदी थोडा वेळ राहीला आहे; “जो येणारा आहे, तो येईल, तो उशीर लावणार नाही.
38 ೩೮ ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
३८माझा नीतिमान मनुष्य विश्वासाने जगेल; आणि जर तो माघार घेईल, तर त्याच्याविषयी माझ्या जीवाला संतोष होणार नाही.”
39 ೩೯ ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.
३९परंतु ज्यांचा नाश होईल अशा माघार घेणाऱ्यापैकी आपण नाही; तर जीवाच्या तारणासाठी विश्वास ठेवणाऱ्यापैकी आहोत.

< ಇಬ್ರಿಯರಿಗೆ ಬರೆದ ಪತ್ರಿಕೆ 10 >