< ಯೆಶಾಯನು 10 >

1 ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
जे कोणी अन्यायकारक कायदे करतात आणि पक्षपाती हुकूम काढतात त्यांना धिक्कार असो.
2 ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
ते गरजूंना न्याय मिळू देत नाहीत आणि माझ्या लोकांतील गरिबांचे हक्क हिरावून घेतात, विधवांना लूटतात आणि पितृहीनांना आपले भक्ष्य करतात.
3 ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
न्यायाच्या दिवशी जेव्हा विध्वंस दुरून येईल तेव्हा तुम्ही काय कराल? मदतीकरिता कोणाकडे पळाल आणि तुमची संपत्ती कोठे ठेवाल?
4 ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
बंदिवानांमध्ये पायाशी दबून राहणे व वधलेल्यांमध्ये पडून राहण्याशिवाय काही राहणार नाही, कारण या सर्वामुळे परमेश्वराचा क्रोध कमी होणार नाही परंतु मारण्यासाठी त्याचा हात उगारलेला राहील.
5 ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
माझ्या क्रोधाचा सोटा, ज्याचा उपयोग मी काठीप्रमाणे माझा राग व्यक्त करण्यासाठी करतो, त्या अश्शूरास धिक्कार असतो.
6 ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
मी त्यास उद्धट राष्ट्राविरूद्ध पाठवत आहे. आणि ज्याच्यावर माझा क्रोध काठोकाठ भरुन वाहत आहे त्यांच्याकडे पाठवत आहे. मी त्यास लूट करण्यासाठी अपहरण करण्यासाठी आणि रस्त्यावरील चिखलाप्रमाणे तुडविण्यासाठी आज्ञा करीन.
7 ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
परंतु हा त्याचा उद्देश नाही किंवा असे त्याचे विचार नाहीत. पुष्कळ राष्ट्रांचा नाश करून त्यांना मिटवून टाकावे असे त्याच्या मनात आहे.
8 ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
तो म्हणतो, “माझे सर्व सरदार राजे नाहीत काय?
9 ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
कालनो कर्कमीशासारखे नाही काय? हमाथ अर्पदासारखे नाही काय? शोमरोन दिमिष्कासारखे नाही काय?
10 ೧೦ ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
१०मूर्तीपूजक राज्यावर माझ्या हाताने विजय मिळवला आहे, त्यांच्या कोरीव मूर्ती यरूशलेम आणि शोमरोनापेक्षा मोठ्या होत्या.
11 ೧೧ ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.
११शोमरोन व त्यातील निरुपयोगी मूर्तींचे जसे मी केले, तसे मी यरूशलेम व त्यातील मूर्तींचे करणार नाही काय?”
12 ೧೨ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
१२सीयोन डोंगर व यरूशलेम यासंबंधीचे आपले कार्य संपले तेव्हा प्रभू म्हणेल, अश्शूरच्या राजाच्या उन्मत्त हृदयाचे भाषण व त्याच्या गर्वीष्ठ दृष्टीला मी शिक्षा करीन.
13 ೧೩ ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
१३कारण तो म्हणतो, “माझ्या शक्तीने व अकलेने मी वागलो आहे. मी सुज्ञ आहे, व राष्ट्रांच्या सीमा मी काढून टाकल्या आहेत, त्यांची भांडारे मी लुटली आहेत व शूर वीराप्रमाणे जे सिहांसनावर बसतात त्यांना खाली पाडले आहे.
14 ೧೪ ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.
१४पक्षाच्या घरट्यातून मिळावे तसे राष्ट्रांचे धन माझ्या हाती लागले आहे, व पक्षांनी टाकून दिलेली अंडी कोणी गोळा करतो त्याप्रमाणे मी सर्व पृथ्वी एकवट केली आहे. कोणी त्यांच्या पंखाची फडफड केली नाही किंवा तोंड उघडले नाही की चिवचिव केली नाही.”
15 ೧೫ ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
१५कुऱ्हाड तिचा उपयोग करणाऱ्यापुढे घमेंड करील काय? करवत तिला चालवणाऱ्यापेक्षा अधीक फुशारकी मारेल काय? काठी उगारणाऱ्याला काठीने उचलावे किंवा लाकडी दांड्याने एखाद्याला उचलावे तसे हे आहे.
16 ೧೬ ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
१६म्हणून सैन्याचा परमेश्वर प्रभू त्याच्या शूर योद्ध्यांमध्ये कमजोरी पाठवील; आणि त्याच्या गौरवाच्या प्रभावाने अग्नी सारखी ज्वाला पेटेल.
17 ೧೭ ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
१७इस्राएलाची ज्योती अग्नी होईल, आणि त्यांचा पवित्र प्रभू ज्वाला होईल; तो त्याचे काटेकूटे व काटेझुडपे एका दिवसात जाळून खाक करील.
18 ೧೮ ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
१८परमेश्वर त्याचे रान व सुपीक भूमी यांची शोभा त्यांच्या देह व आत्मा या दोहोसहीत फस्त करील; जेव्हा रोगी मनुष्य खंगत जातो त्याप्रमाणे हे होईल.
19 ೧೯ ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.
१९रानात इतके थोडे वृक्ष उरतील की, एखादे मुलदेखील त्यांना मोजू शकेल.
20 ೨೦ ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
२०त्या दिवशी, इस्राएलाचा अवशेष, याकोबाच्या घराण्यातील बचावलेले, ज्यांनी त्यांना पराजीत केले त्यांचा आश्रय घेणार नाहीत, तर इस्राएलाचा जो पवित्र परमेश्वर याच्याकडे खरोखर येतील.
21 ೨೧ ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.
२१याकोबाचा अवशेष समर्थ देवाकडे परत येईल.
22 ೨೨ ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
२२कारण जरी तुझे लोक इस्राएल, समुद्रतीरीच्या वाळू सारखे असले तरी त्यांच्यातले बचावलेले तेवढे परत येतील. ओतप्रत भरून वाहणाऱ्या न्यायीपणामुळे विध्वंसाचे फर्मान निघाले आहे
23 ೨೩ ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.
२३कारण सेनाधीश प्रभू परमेश्वर, सर्व भूमीवर नेमलेला विनाश आणण्याच्या तयारीत आहे.
24 ೨೪ ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
२४म्हणून सेनाधीश प्रभू परमेश्वर म्हणतो, “माझ्या सीयोननिवासी लोकांनो, अश्शूराला भिऊ नका, तो तुला छडीने मारील व मिसराने केल्याप्रमाणे तुझ्यावर काठी उगारेल.
25 ೨೫ ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
२५त्यास भिऊ नको, कारण थोड्याच वेळात तुझ्यावरचा माझा राग निघून जाईल व तो त्यांच्या विनाशासाठी पुढे जाईल.
26 ೨೬ ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.
२६मग सेनाधीश परमेश्वर त्यांच्यावर, मिद्यानाचा ओरेब खडकाजवळ पराभव आला त्याप्रमाणे, चाबूक चालवील, तो त्याची काठी समुद्रावर आणि मिसरात केल्याप्रमाणे उगारेल.
27 ೨೭ ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
२७त्या दिवशी, तुझ्या खाद्यांवरील त्याचे ओझे आणि तुझ्या मानेवरील त्याचे जूं काढण्यात येईल,” तुझ्या मानेच्या पुष्ठतेमुळे ते जू भंग पावेल.
28 ೨೮ ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
२८शत्रू अयाथास आला आहे व मिग्रोनातून पुढे गेला आहे; आणि त्याने मिखमाशात आपले अन्नधान्य साठवून ठेवले आहे.
29 ೨೯ ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.
२९त्यांनी घाट पार केला आहे व गिबा येथे मुक्काम केले आहे. रामा थरथर कापत आहे व शौलाचा गिबा पळून गेला आहे.
30 ೩೦ ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!
३०गल्लीमाच्या कन्ये, मोठ्याने शोक कर! हे लईशा, लक्ष दे! तू बिचारी अनाथोथ!
31 ೩೧ ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.
३१मदमेना पळत आहे, व गेबीमातील रहिवासी आश्रयासाठी पळत आहेत.
32 ೩೨ ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
३२आजच्या दिवशीच तो नोबास थांबेल सीयोन कन्येच्या डोंगराला, यरूशलेमेच्या टेकडीला आपल्या हाताची मूठ दाखवील.
33 ೩೩ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
३३पाहा, सेनाधीश प्रभू परमेश्वर, फांद्या भयंकर रीतीने आदळतील अशा छाटून टाकील; उंच झाडे तोडले जातील, व उन्मत आहे त्यास खाली आणण्यात येईल.
34 ೩೪ ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.
३४रानातील गर्द झाडी तो कुऱ्हाडीने छाटून टाकील, व लबानोन पराक्रमीच्या हातून पतन पावत आहे.

< ಯೆಶಾಯನು 10 >