< ಯೆಶಾಯನು 23 >

1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
सूर के बारे में नबुव्वत ऐ तरसीस के जहाज़ो, वावैला करो क्यूँकि वह उजड़ गया, वहाँ कोई घर और कोई दाख़िल होने की जगह नहीं! कित्तीम की ज़मीन से उनको ये ख़बर पहुँची है।
2 ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ, ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ!
ऐ साहिल के बाशिन्दों, जिनको सैदानी सौदागरों ने जो समन्दर के पार आते जाते हैं मालामाल कर दिया है, ख़ामोश रहो।
3 ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
समन्दर के पार से सीहोर' का ग़ल्ला और दरिया-ए-नील की फ़सल उसकी आमदनी थी, तब वह क़ौमों की तिजारत — गाह बना।
4 ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ.
ऐ सैदा, तू शरमा, क्यूँकि समन्दर ने कहा है, “समन्दर की गढ़ी ने कहा, मुझे दर्द — ए — ज़िह नहीं लगा, और मैंने बच्चे नहीं जने; मैं जवानों को नहीं पालती, और कुँवारियों की परवरिश नहीं करती हूँ।”
5 ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು.
जब अहल — ए — मिस्र को यह ख़बर पहुँचेगी, तो वह सूर की ख़बर से बहुत ग़मगीन होंगे।
6 ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!
ऐ साहिल के बाशिन्दो, तुम ज़ार — ज़ार रोते हुए तरसीस को चले जाओ।
7 ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.
क्या यह तुम्हारी शादमान बस्ती है, जिसकी हस्ती पहले से है? उसी के पाँव उसे दूर — दूर ले जाते हैं कि परदेस में रहे।
8 ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?
किसी ने यह मंसूबा सूर के ख़िलाफ़ बाँधा जो ताज बख़्श है जिसके सौदागर 'उमरा और जिसके ताजिर दुनिया भर के 'इज़्ज़तदार हैं।
9 ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.
रब्ब — उल — अफ़वाज ने ये इरादा किया है कि सारी हशमत के घमण्ड को हलाक करे और दुनिया भर के इज़्ज़तदारों को ज़लील करे।
10 ೧೦ ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.
ऐ दूख़्तर — ए — तरसीस दरिया-ए-नील की तरह अपनी सरज़मीन पर फैल जा अब कोई बन्द बाक़ी नहीं रहा।
11 ೧೧ ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.
उसने समन्दर पर अपना हाथ बढ़ाया, उसने ममलुकतों को हिला दिया; ख़ुदावन्द ने कनान के हक़ में हुक्म किया है कि उसके क़िले' मिस्मार किए जाएँ।
12 ೧೨ ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.
और उसने कहा, “ऐ मज़लूम कुँवारी, दुख़्तर — ए — सैदा, तू फिर कभी घमण्ड न करेगी; उठ क़ित्तीम में चली जा, तुझे वहाँ भी चैन न मिलेगा।”
13 ೧೩ ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.
कसदियों के मुल्क को देख! यह क़ौम मौजूद न थी; असूर ने उसे वीरान के रहनेवालों का हिस्सा ठहराया। उन्होंने अपने बुर्ज बनाए उन्होंने उसके महल ग़ारत किये और उसे वीरान किया।
14 ೧೪ ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು.
ऐ तरसीस के जहाज़ों वावैला करो क्यूँकि तुम्हारा क़िला' उजाड़ा गया।
15 ೧೫ ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.
और उस वक़्त यूँ होगा कि सूर किसी बादशाह के दिनों के मुताबिक़, सत्तर बरस तक फ़रामोश हो जाएगा; और सत्तर बरस के बाद सूर की हालत फ़ाहिशा के गीत के मुताबिक़ होगी।
16 ೧೬ ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ.
ऐ फ़ाहिशा तू जो फ़रामोश हो गई है, बर्बत उठा ले और शहर में फिरा कर राग को छेड़ और बहुत — सी ग़ज़लें गा कि लोग तुझे याद करें।
17 ೧೭ ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.
और सत्तर बरस के बाद यूँ होगा कि ख़ुदावन्द सूर की ख़बर लेगा, और वह उजरत पर जाएगी और इस ज़मीन पर की तमाम ममलुकतों से बदकारी करेगी।
18 ೧೮ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.
लेकिन उसकी तिजारत और उसकी उजरत ख़ुदावन्द के लिए मुक़द्दस होगी और उसका माल न ज़ख़ीरा किया जाएगा और न जमा' रहेगा बल्कि उसकी तिजारत का हासिल उनके लिए होगा, जो ख़ुदावन्द के सामने रहते हैं कि खाकर सेर हों और नफ़ीस पोशाक पहने।

< ಯೆಶಾಯನು 23 >