< ಯೆಶಾಯನು 24 >

1 ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.
हेर्, परमप्रभुले पृथ्वीलाई रित्तो बनाउन, यसलाई विनाश पार्न, यसको सतहलाई बिगार्न र यसका बासिन्दाहरूलाई तितरबितर पार्न लाग्‍नुभएको छ ।
2 ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.
यो मानिसहरूलाई झैं पुजारीहरूलाई, नोकरलाई झैं मालिकलाई, दासीलाई झैं मलिक्‍नीलाई, किन्‍नेलाई झैं बेच्‍नेलाई, ऋण दिनेलाई झैं ऋण लिनेलाई, ब्याज लिनेलाई झैं ब्याज दिनेलाई हुनेछ ।
3 ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು, ಯೆಹೋವನೇ ಇದನ್ನು ನುಡಿದಿದ್ದಾನೆ.
पृथ्वीलाई पुर्ण रूपमा विनाश गरिनेछ र पुर्ण रूपमा नाङ्गो बनाइनेछ । किनकि परमप्रभुले यो वचन बोल्नुभएको छ ।
4 ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.
पृथ्वी सुख्‍खा हुनेछ र ओइलाउनेछ, संसार सुक्‍नेछ र ओइलाएर जानेछ। पृथ्वीका विशिष्‍ट मानिसहरू दुर्बल हुनेछन् ।
5 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
पृथ्वीलाई यसका बासिन्दाहरूले दूषित पारेका छन्, किनभने तिनीहरूले व्यवस्था भङ्ग गरेका छन्, नियमहरू तोडेका छन् र अनन्‍तको करार उलङ्घन गरेका छन् ।
6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
यसकारण सरापले पृथ्वीलाई विनाश पार्छ र यसका बासिन्दाहरू दोषी भेट्टाइएका छन् । पृथ्‍वीका बासिन्दाहरू जलाइन्‍छन् र थोरै मानिसहरू मात्र बाँकी छन् ।
7 ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.
नयाँ दाखमद्य सुक्छ, दाख ओइलिन्छ, सबै आनन्दि हृदयहरूले शोक गर्छन् ।
8 ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.
खैंजडीको सुमधुर आवाज बन्द हुन्छ र आनन्द मनाउनेहरूको आनन्‍दको सोर पनि बन्द हुन्छ । वीणाको आनन्द बन्द हुन्छ ।
9 ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು.
तिनीहरूले फेरि दाखमद्य पिउँदैनन् र गाउँदैनन्, र कडा मद्य पिउनेलाई त्‍यो तीतो हुन्छ ।
10 ೧೦ ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.
गोलमालको सहरलाई भत्काइएको छ । हरेक घर बन्द गरिएको र रित्तो छ ।
11 ೧೧ ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.
दाखमद्यको कारणले गर्दा सडकमा चिच्याहट छ । सबै आनन्द अन्धकार भएको छ, देशको खुसी लोप भएको छ ।
12 ೧೨ ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.
सहरमा उजाड छोडिएको छ र ढोका भग्‍नावशेष भएर फुटेको छ ।
13 ೧೩ ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.
किनकि जस्‍तो जैतूनको रूखलाई हल्लाउँदा, जस्‍तो अङ्गुर टिप्‍दा फाटफुट छुट्छ, सारा पृथ्वीभरि जातिहरू माझ यस्तै नै हुनेछ ।
14 ೧೪ ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.
आफ्‍नो सोरलाई तिनीहरूले उचाल्‍नेछन् र परमप्रभुको वैभवको जयजयकार गर्नेछन् र समुद्रबाट आनन्दसाथ कराउनेछन् ।
15 ೧೫ ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.
यसकारण पुर्वमा परमप्रभुको महिमा गर, समुद्रा टापुहरूमा परमप्रभु इस्राएलका परमेश्‍वरको नाउँलाई महिमा देओ ।
16 ೧೬ ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.
हामीले पृथ्वीको सुदूर भागबाट गीतहरू सुनेका छौं, “धर्मी जनको महिमा होस्!” तर मैले भनें, “म सुकेर जाँदैछु, म सुकेर जाँदैछु, मलाई धिक्‍कार! धोकेबाजले धोकापुर्ण व्यवहार गरेको छ । हो, धोकेबाजले धेरै धोकापुर्ण व्यवहार गरेको छ ।
17 ೧೭ ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.
ए पृथ्वीका बासिन्दाहरू, तिमीहरूमाथि त्रास, खाल्डो र पासो आइलागेको छ ।
18 ೧೮ ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.
त्रासको आवाजदेखि भाग्‍ने खाल्डोमा पर्नेछ, खाल्डोको बिचबाट बाहिर निस्‍कने पासोमा पर्नेछ । स्वर्गका झ्यालहरू खोलिनेछन् र पृथ्वीका जगहरू हल्लिनेछन् ।
19 ೧೯ ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ.
पृथ्वी पुर्ण रूपमा टुट्‍नेछ, पृथ्वी चिरा पर्नेछ । पृथ्वीलाई डरलाग्‍दो किसिमले हल्लाइनेछ ।
20 ೨೦ ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.
पृथ्वी मद्यले मातेको मानिसझैं लरखराउनेछ र यो झुप्रोझैं यताउता हल्‍लिनेछ । यसमाथि यसको पाप भारि हुनेछ र यो पतन हुनेछ अनि फेरि कहिल्यै उठ्नेछैन ।
21 ೨೧ ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.
त्यस दिन परमप्रभुले स्वर्गका सेनाहरूलाई आकाशमा र पृथ्वीका राजाहरूलाई पृथ्वीमा दण्ड दिनुहुनेछ ।
22 ೨೨ ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.
तिनीहरूले कैदीको रूपमा खाल्डोमा एकसाथ जम्‍मा गरिनेछ र झ्यालखानमा बन्द गरिनेछ । अनि धेरै दिनपछि तिनीहरूलाई दण्ड दिइनेछ ।
23 ೨೩ ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.
तब चन्द्रमा लज्‍जित हुनेछ र सूर्य अपमानमा पर्नेछ, किनकि सर्वशक्तिमान् परमप्रभुले सियोन पर्वतमा र यरूशलेममा अनि महिमामा आफ्‍ना धर्मगुरुहरूका सामु राज्‍य गर्नुहुनेछ ।

< ಯೆಶಾಯನು 24 >