< ಯೆಶಾಯನು 28 >
1 ೧ ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
१एफ्राइममधील मद्यप्यांनो तुमच्या गर्वाच्या मुकुटाला हायहाय! आणि धुंद झालेल्या सुपिक खोऱ्याच्या माथ्यावरील मोठी शोभा देणारे जे कोमेजणारे फुल त्यास हायहाय!
2 ೨ ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
२पाहा! परमेश्वराकडे पराक्रमी आणि बलवान असा एक आहे. तो गारपिटीप्रमाणे आहे. नष्ट करणाऱ्या वादळाप्रमाणे, आणि प्रचंड ढगफूटी प्रमाणे, तो पृथ्वीला आपल्या हाताने ताडना करेल.
3 ೩ ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.
३एफ्राइममधील मद्याप्यांचा अभिमानी मुकुट पायाखाली तुडवला जाईल.
4 ೪ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.
४त्याच्या वैभवशाली सौंदर्याचे कोमेजणारे फूल, जे खोऱ्याच्या माथ्यावर आहे, उन्हाळ्यात झाडावर प्रथम आलेल्या अंजिरांप्रमाणे त्याची स्थिती होईल, त्याकडे पाहणारा पाहतो तेव्हा तो त्याच्या हातांत असतानांच तो खाऊन टाकतो.
5 ೫ ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.
५त्या दिवशी सेनाधीश परमेश्वर आपल्या लोकांच्या उरलेल्यांना सुंदर मुकुट असा होईल.
6 ೬ ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
६आणि जो न्याय करत बसतो त्यास तो न्यायाचा आत्मा आणि जे वेशीजवळ लढाई मागे हटवतात त्यांना तो पराक्रम असा होईल.
7 ೭ ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.
७पण हे सुद्धा द्राक्षरसाने हेलकावे खात आहेत, आणि मादक मद्यानी अडखळत आहेत. याजक व संदेष्टे सर्वच जण द्राक्षरस व मद्य पिऊन धुंद झाले आहेत आणि मद्याने त्यांना गिळून घेतले आहे. ते मद्याने अडखळून पडत आहेत आणि ते दृष्टांतात भ्रमतात, ते न्याय करण्यात अडखळतात.
8 ೮ ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.
८खरोखर सर्व मेजे ओकारीने भरलेली आहेत, कोठेही स्वच्छ जागा राहिलेली नाही.
9 ೯ ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?
९तो कोणाला ज्ञान शिकवील? आणि तो कोणाला निरोप समजावेल? दुग्धापासून दूर केलेल्यांना किंवा स्तनपानापासून दूर केलेल्यांना काय?
10 ೧೦ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ.
१०कारण नियमा वर नियम, नियमावर नियम, ओळीवर ओळ, ओळीवर ओळ, इथे थोडे, तिथे थोडे, असे आहे.
11 ೧೧ ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.
११खरच, तोतऱ्या ओठांनी आणि अन्य भाषेने तो या लोकांशी बोलेल.
12 ೧೨ ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.
१२पूर्वी तो त्यांना म्हणाला, “येथे विश्रांती आहे, थकलेल्यांना येथे येऊन विश्रांती घेऊ द्या, आणि हे उत्साहवर्धक आहे.” पण ते काही ऐकेनात.
13 ೧೩ ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
१३लोकांस परमेश्वराचे बोलणे परक्या भाषेसारखे अनाकलनीय वाटले. हुकूमावर हुकूम, हुकूमावर हुकूम, नियमावर नियम, नियमावर नियम, थोडे इकडे, थोडे तिकडे, एक धडा तिकडे. लोकांनी स्वत: ला पाहिजे ते केले. म्हणून ते मागे पडून पराभूत झाले, ते सापळ्यात अडकले आणि पकडले गेले.
14 ೧೪ ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,
१४याकरिता, जे तुम्ही थट्टा करता, आणि जे तुम्ही यरूशलेमेवर राज्य करता, ते तुम्ही परमेश्वराचे वचन काय म्हणते ते ऐका.
15 ೧೫ ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ. (Sheol )
१५तुम्ही म्हटले, “आम्ही मृत्यूबरोबर करारनामा केला आहे. अधोलोकाशी आम्ही करार केला आहे म्हणून आम्हांला शिक्षा होणार नाही, जेव्हा बुडवणारी शिक्षा पार केली जाईल तेव्हा ती आमच्यापर्यंत येऊ शकणार नाही; कारण आम्ही कपटाच्या मागे लपलो आहोत व असत्याला आपले आश्रय केले आहे.” (Sheol )
16 ೧೬ ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
१६यासाठी परमेश्वर, माझा प्रभू म्हणतो, “पाहा, मी सियोनेत आधारशिला, पारखलेला धोंडा, कोपऱ्याचा मोलवान धोंडा, स्थीर पाया म्हणून घालतो. जो कोणी त्यावर विश्वास ठेवेल, तो लाजवला जाणार नाही.
17 ೧೭ ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
१७मी न्याय मोजमापाची काठी, आणि नितीमत्ता हा ओळंबा असे करीन, तेव्हा गारपीट खोट्यांचे आश्रय झाडून टाकील, आणि पूराचे पाणी लपण्याच्या जागा झाकून टाकील.”
18 ೧೮ ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. (Sheol )
१८तुमचा मृत्यूशी असलेला करारनामा विरवला जाईल आणि अधोलोकाशी तुमचा झालेला करार रद्द केला जाईल. जेव्हा प्रकोपाचा पूर पार केला जाईल, त्या द्वारे तुम्ही झाकले जाल. (Sheol )
19 ೧೯ ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.
१९जेव्हा तो पार जाईल तेव्हा तो तुला झाकून टाकेल. आणि रोज रोज सकाळी, दिवसा आणि रात्री तो पार जाईल. आणि जेव्हा संदेश कळेल, तर ते भयच असे होईल.
20 ೨೦ ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”
२०कारण अंथरूण पाय पसरावयास खूप लहान आहे, आणि पांघरुण पांघरायला पुरत नाही एवढे ते अरुंद आहे.
21 ೨೧ ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
२१जसा परासीम डोंगरामध्ये परमेश्वर उभा राहिला होता, जसा तो गिबोन दरीत रागावला होता त्याप्रमाणे तो रागावेल. अशासाठी की त्याने आपले कार्य, त्याचे अद्भूत कृत्य आणि त्याचे विस्मयकारी कृत्य करावे.
22 ೨೨ ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
२२तर आता तुम्ही थट्टा करू नका, नाहीतर तुमची बंधणे घट्ट करण्यात येतील. कारण पृथ्वीवर नाश होण्याचा ठराव, मी सेनाधीश परमेश्वरापासून ऐकला आहे.
23 ೨೩ ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
२३मी सांगत असलेला संदेश लक्षपूर्वक ऐका, सावध असा, माझे शब्द ऐका.
24 ೨೪ ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?
२४पेरणी करण्यासाठी शेतकरी सतत शेत नांगरतो का? तो सतत मशागत करतो का?
25 ೨೫ ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?
२५त्याने जमीन तयार केल्यावरच तो काळे जिरे टाकतो व जिरे विखरतो, तो गहू रांगेत आणि जव नेमलेल्या ठिकाणी आणि त्याच्या काठाला काठ्या गहू पेरीत नाही काय?
26 ೨೬ ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.
२६कारण त्याचा देव त्यास सूचना देतो, तो त्यास सुज्ञपणे शिकवतो.
27 ೨೭ ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.
२७शिवाय, काळे जिरे घणाने मळत नाही, किंवा तिच्यावर गाडीचे चाक फिरवले जात नाही, पण काळे जिरे काठीने आणि जिरे दंडाने झोडतात.
28 ೨೮ ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.
२८भाकरीसाठी धान्य दळतात, पण ते नीट दळले जात नाही. आणि जरी त्याच्या गाडीचे चाक व त्याचे घोडे ते विखरतात तरी तो ते दळीत नाही.
29 ೨೯ ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.
२९सेनाधीश परमेश्वर, जो संकल्पात सुंदर आहे आणि ज्ञानाने श्रेष्ठ आहे. त्याच्याकडून हे आहे.